• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೆರೆಗೆ ವಿಷಪ್ರಾಷಣ: ವಿಷಾನಿಲದ ಭೀತಿಯಲ್ಲಿ ಸ್ಥಳೀಯ ಹಳ್ಳಿಗರು

cknewsnow desk by cknewsnow desk
September 11, 2021
in STATE
Reading Time: 2 mins read
0
ಅರಣ್ಯದಲ್ಲಿ ತಪ್ಪಿದ ಮಹಾ ದುರಂತ!!
1.5k
VIEWS
FacebookTwitterWhatsuplinkedinEmail

ಕೊಂಚ ಎಚ್ಚರ ತಪ್ಪಿದ್ದರೆ ಇನ್ನೊಂದು ವಿಶಾಖಪಟ್ಟಣ ಆಗುತ್ತಿತ್ತು ಗುಡಿಬಂಡೆ!

by GS Bharath Gudibande

ಗುಡಿಬಂಡೆ: ತಾಲೂಕಿನ ಮೀಸಲು ಅರಣ್ಯ ಪ್ರದೇಶ ಹಾಗೂ ವಾಟದಹೊಸಳ್ಳಿ ಕೆರೆ, ಕಣಿವೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಲವು ದಿನಗಳಿಂದ ಕೆಮಿಕಲ್ ದುರ್ವಾಸನೆಯಿಂದ ತತ್ತರಿಸಿದ್ದಾರೆ.

ಅನೇಕ ದಿನಗಳಿಂದ ಬರುತ್ತಿದ್ದ ವಿಷವಾಯುವನ್ನು ದುರ್ವಾಸನೆ ಎಂದೇ ನಂಬಿಕೊಂಡಿದ್ದ ಮುಗ್ಧ ಹಳ್ಳಿಗರಿಗೆ, ಅದು ಕೈಗಾರಿಕೆಗಳು ಕಕ್ಕುತ್ತಿರುವ ವಿನಾಶಕಾರಿ ಜಲವಿಷ ಅಥವಾ ರಾಸಾಯನಿಕ ತ್ಯಾಜ್ಯ ಎಂಬ ಅರಿವೇ ಇರಲಿಲ್ಲ. ಆದರೂ ಅದೇ ರಸ್ತೆಯಲ್ಲಿ ಓಡಾಡುತ್ತಲೇ ಇದ್ದರು. ಜಾನುವಾರುಗಳನ್ನು ಮೇಯಿಸುತ್ತಾ ಇದ್ದುಬಿಟ್ಟಿದ್ದರು.

ಆದರೆ, ಅಗಸ್ಟ್‌ 29ರಂದು ಇಂಥದ್ದೇ ವಿಷತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿದ್ದ ಬೃಹತ್‌ ಟ್ಯಾಂಕರ್‌ ಚಿಮುಕಲಹಳ್ಳಿಯವರ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಕೂಡಲೇ ತಮ್ಮ ಹಳ್ಳಿಯ ಪಕ್ಕದಲ್ಲಿ ನಡೆಯುತ್ತಿದ್ದ ಕೈಗಾರಿಕೆಗಳ ದುಷ್ಕೃತ್ಯದ ಬಗ್ಗೆ ಜನರು ಬೆಚ್ಚಿಬಿದ್ದಿದ್ದಾರೆ.

ಅಗಸ್ಟ್‌ 29ರಂದು ಅಷ್ಟೇ ಅಲ್ಲ, ಅದಕ್ಕೂ ಹಿಂದಿನಿಂದ ಮೀಸಲು ಅರಣ್ಯ ಪ್ರದೇಶದ ನಿರ್ಜನ ಪ್ರದೇಶಗಳಲ್ಲಿ, ವಾಟದಹೊಸಹಳ್ಳಿ ಕೆರೆಯ ಆಸುಪಾಸಿನಲ್ಲಿ ಅದೇ ಗೌರಿಬಿದನೂರು ಕೈಗಾರಿಕೆ ಪ್ರದೇಶದ ವಿಷ ತ್ಯಾಜ್ಯವನ್ನು ಅವ್ಯಾಹತವಾಗಿ ವಿವೇವಾರಿ ಮಾಡುತ್ತಿರುವುದು ಕೂಡ ಬೆಳಕಿಗೆ ಬಂದಿದೆ.

ಗುಡಿಬಂಡೆ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಕಣಿವೆ, ಚಿಮುಕಲಹಳ್ಳಿ, ಕೃಷ್ಣರಾಜಪುರ, ವಾಟದಹೊಸಳ್ಳಿ ಕೆರೆ, ಹೀಗೆ ಸುತ್ತಮುತ್ತಲಿನ ಹಳ್ಳಿಗಳ ಜನರು ಈ ವಿಷಗಾಳಿ ಸಮಸ್ಯೆ ಎದುರಿಸುತ್ತಿದ್ದರು. ಇನ್ನು ಟ್ಯಾಂಕರ್‌ ವಿಷತ್ಯಾಜ್ಯ ವಿಲೇವಾರಿ ಮಾಡಿರುವ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದರೆ, ಇನ್ನೂ ಕೆಲ ಪ್ರದೇಶಗಳಲ್ಲಿ ದುಷ್ಕರ್ಮಿಗಳು ಇಂಥದ್ದೇ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆಂಬ ಆತಂಕದ ವಿಷಯವನ್ನು ಹಳ್ಳಿಯ ಜನ ಹೊರಗೆಡವಿದ್ದಾರೆ.

ಅಗಸ್ಟ್‌ 29ರಂದು ವಿಷತ್ಯಾಜ್ಯ ವಿಲೇವಾರಿ ಮಾಡಿದ್ದರಿಂದ ಸುಟ್ಟುಹೋಗಿರುವ ಗಿಡಮರಗಳು.

ಆ ಭಾಗಗಳಿಂದ ಇನ್ನೂ ದುರ್ವಾಸನೆ ಬರುತ್ತಲೇ ಇದ್ದು, ಆ ಪ್ರದೇಶದಲ್ಲಿ ಸಂಚರಿಸಲು ಜನ ಭಯಪಡುತ್ತಿದ್ದಾರೆ. ಏಕೆಂದರೆ, ನೀರಿನ ರೂಪದ ವಿಷತ್ಯಾಜ್ಯ ಸುರಿದ ಕೂಡಲೇ ಭೂಮಿ ಸುಟ್ಟುಹೋಗಿದೆ. ಅಕ್ಕಪಕ್ಕದ ಗಿಡಮರಗಳು ಸುಟ್ಟಿವೆ. ಅದೇ ಜನರ ಮೈಮೇಲೆ ಬಿದ್ದರೆ, ಅಥವಾ ಅದನ್ನು ತುಳಿದತೆ ಜೀವದ ಕಥೆ ಏನು? ಅಲ್ಲಿ ಕೆಟ್ಟ ವಾಸನೆಗೆ ನಿಲ್ಲಲೇ ಆಗುತ್ತಿರಲಿಲ್ಲ ಎಂದು ಹೇಳುತ್ತಾರೆ ಚಿಮುಕಲಹಳ್ಳಿ ಗ್ರಾಮದ ಯುವಕ ಧನಂಜಯ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಅರಣ್ಯದಲ್ಲಿ ತಪ್ಪಿದ ಮಹಾ ದುರಂತ!!

ವಿಶಾಖಪಟ್ಟಣ ದುರಂತದ ಕರಾಳತೆ

ಕೊಂಚ ಯಾಮಾರಿದ್ದರೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಅನಿಲ ದುರಂತವನ್ನು ಮೀರಿಸುವಂಥ ದೊಡ್ಡ ದುರಂತವಾಗಿಬಿಡುತ್ತಿತ್ತು. ಕಳೆದ ಹಲವು ದಿನಗಳಿಂದ ಮನೆ ಮುಂದೆ ಕೂತಿದ್ದಾಗ, ರಸ್ತೆಯಲ್ಲಿ ಓಡಾಡುವಾಗ ಏನೋ ಒಂಥರಾ ವಾಸನೆ ಬರುತ್ತಿತ್ತು. ನಾವು ಅಷ್ಟು ಗಮನ ಹರಿಸಿರಲಿಲ್ಲ. ಕಳೆದ ತಿಂಗಳು 29ರಂದು ರೆಡ್ ಹ್ಯಾಂಡ್ ಆಗಿ ಕೆಮಿಕಲ್ ಲಾರಿ ಸಿಕ್ಕಿಬಿದ್ದಾಗ ಭಯಾನಕ ಸತ್ಯ ಹೊರಬಂತು ಎಂದು ಗ್ರಾಮಸ್ಥರು ಹೇಳಿದ್ದಾರೆ.

ವಿಶಾಖಪಟ್ಟಣದ ಹೊರವಲಯದಲ್ಲಿರುವ ಗೋಪಾಲಪಟ್ಟಣಂ ಬಳಿಯ ಆರ್.ಆರ್.ವೆಂಕಟಪುರಂ ಗ್ರಾಮದ ಎಲ್.ಜಿ. ಪಾಲಿಮರ್ಸ್ ರಾಸಾಯನಿಕ ಸ್ಥಾವರದಲ್ಲಿ ೨೦೨೦ ಮೇ ೭ರ ಮುಂಜಾನೆ ಸಂಭವಿಸಿದ ಅನಿಲ ದುರಂತದಲ್ಲಿ 13 ಜನ ಧಾರುಣವಾಗಿ ಮೃತಪಟ್ಟಿದ್ದರು. ಸುಮಾರು 1000ಕ್ಕೂ ಹೆಚ್ಚು ಜನ ಅನಿಲ ಸುಳಿಗೆ ಸಿಕ್ಕಿ ವಿವಿಧ ಸಮಸ್ಯೆಗಳಿಗೆ ಒಳಗಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಆಂಧ್ರ & ಗೌರಿಬಿದನೂರು ಕೈಗಾರಿಕೆಗಳ ಮೇಲೆ ಕಣ್ಣಿಡಿ

ಗುಡಿಬಂಡೆ ಮೀಸಲು ಅರಣ್ಯಕ್ಕೆ ಹತ್ತಿರದಲ್ಲಿ ಕೆಲ ಕೈಗಾರಿಕೆಗಳಿವೆ. ಪಕ್ಕದ ಆಂಧ್ರ ಪ್ರದೇಶ ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ಹೆಚ್ಚು ಕೈಗಾರಿಕೆಗಳಿವೆ. ಕರ್ನಾಟಕ ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ನೀಡಿ ಈ ಎಲ್ಲ ಕೈಗಾರಿಕೆಗಳನ್ನು ಪರಿಶೀಲಿಸಬೇಕು ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸರಕಾರಿ ಕೈಗೊಳ್ಳಬೇಕು ಎಂದು ಚಿಮುಕಲಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.

ಮುಂದೆ ಯಾರಾದರೂ ಹೀಗೆ ವಿಷತ್ಯಾಜ್ಯವನ್ನು ವಿಲೇವಾರಿ ಮಾಡಿದರೆ, ವಾತಾವರಣವನ್ನು ಕಲುಷಿತಗೊಳಿಸಿ ಆರೋಗ್ಯಕ್ಕೆ ಹಾನಿ ಮಾಡಿದ್ದು,
ವಿಷಕಾರಿ ವಸ್ತುಗಳ ಬಗ್ಗೆ ನಿರ್ಲಕ್ಷ್ಯ, ಬೆಂಕಿ ಮತ್ತು ಬೆಂಕಿ ಹರಡುವ ವಸ್ತುವಿನ ಬಗ್ಗೆ ನಿರ್ಲಕ್ಷ್ಯ, ಉದಾಸೀನತೆಯಿಂದ ಸಾರ್ವಜನಿಕರ ಜೀವಕ್ಕೆ ಹಾನಿ, ನಿರ್ಲಕ್ಷ್ಯದಿಂದ ನರಹತ್ಯೆ ಇತ್ಯಾದಿ ಪ್ರಕರಣಳಡಿ ಕೇಸು ದಾಖಲಿಸಬೇಕು ಎಂದು ತಜ್ಞರು ಒತ್ತಾಯ ಮಾಡಿದ್ದಾರೆ.

ಯಾರು ಏನೆಂದರು?

  • ಆರ್.‌ ಆಂಜನೇಯ ರೆಡ್ಡಿ

ವಿಷಕಾರಿ ತ್ಯಾಜ್ಯವನ್ನು ತಂದು ಅರಣ್ಯ ಪ್ರದೇಶಗಳಲ್ಲಿ, ನಿರ್ಜನ ಪ್ರದೇಶಗಳಲ್ಲಿ, ಜಲಮೂಲಗಳ ಅಕ್ಕಪಕ್ಕ ಅಥವಾ ಕೆರೆ, ಹಳ್ಳಕೊಳ್ಳಗಳಲ್ಲಿ ತಂದು ವಿಲೇವಾರಿ ಮಾಡುತ್ತಿರುವುದು ನಿಜಕ್ಕೂ ಆತಂಕಕಾರಿ. ಸಕಾಲಕ್ಕೆ ಅಧಿಕಾರಿಗಳು ಟ್ಯಾಂಕರ್‌ ಹಿಡಿದು ಪ್ರಕರಣ ದಾಖಲು ಮಾಡಿರುವುದು ಒಳ್ಳೆಯ ಕ್ರಮ. ಚೆಂಡು ಈಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಂಗಳದಲ್ಲಿದೆ. ಕೂಡಲೇ ಈ ವಿಷತ್ಯಾಜ್ಯ ಎಲ್ಲಿಂದ ಬಂದಿದೆ? ಅದರಲ್ಲಿ ಏನೇನಿದೆ? ಯಾವ ಕೈಗಾರಿಕೆ ಇದನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದೆ? ಇದರ ಹಿಂದೆ ಯಾರು ಯಾರು ಇದ್ದಾರೆ ಎಂಬ ಅಂಶವನ್ನು ಮಂಡಳಿ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಗುಡಿಬಂಡೆ ಅರಣ್ಯ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಬೇಕು ಹಾಗೂ ಮುಂದೆ ಕೈಗಾರಿಕೆಗಳು ಇಂಥ ದುಸ್ಸಾಹಸ ಮಾಡದಂತೆ ಕಟ್ಟೆಚ್ಚರ ವಹಿಸಬೇಕು. ಮುಖ್ಯವಾಗಿ ಚಿಮುಕಲಹಳ್ಳಿ ಗ್ರಾಮಸ್ಥರ ಧೈರ್ಯಕ್ಕೆ ನಾವೆಲ್ಲರೂ ಮೆಚ್ಚಿಕೊಳ್ಳಲೇಬೇಕಿದೆ.

ಆರ್.‌ಆಂಜನೇಯ ರೆಡ್ಡಿ, ಶಾಶ್ವತ ನೀರಾವರಿ ಸಮಿತಿ ಅಧ್ಯಕ್ಷ

ಕರೆ ಸ್ವೀಕರಿಸದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ

ಚಿಕ್ಕಬಳ್ಳಾಪುರದಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇಒ ವಿಜಯಲಕ್ಷ್ಮೀ ಅವರ ನೇತೃತ್ವದಲ್ಲಿ ಅಧಿಕಾರಿಗಳು ಗುಡಿಬಂಡೆಗೆ ಭೇಟಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲು ವಿಜಯಲಕ್ಷ್ಮೀ ಅವರಿಗೇ ಸಿಕೆನ್ಯೂಸ್‌ ನೌ ಕರೆ ಮಾಡಿದರೆ, ಅವರು ಕಾಲ್‌ ಪಿಕ್‌ ಮಾಡಲಿಲ್ಲ. ಹಲವು ಸಲ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ.


 ಈ ಸುದ್ದಿಗಳನ್ನು ಓದಲು ಕೆಳಗಿನ ಲಿಂಕ್‌ʼಗಳನ್ನು ಕ್ಲಿಕ್‌ ಮಾಡಿ.. 
ಕೆರೆಗೆ ವಿಷಪ್ರಾಷಣ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

Tags: Chemical wastechikkaballapuragudibandekarnatakapoisoningto the lakestate pollution control boradvatadahosahalli lakeVisakhapatnam gas leakWater pollution
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವರಲಕೊಂಡ ಶಾಲೆ ಕಟ್ಟಡಕ್ಕೆ ಫಿನಿಶಿಂಗ್ ಟಚ್

ವರಲಕೊಂಡ ಶಾಲೆ ಕಟ್ಟಡಕ್ಕೆ ಫಿನಿಶಿಂಗ್ ಟಚ್

Leave a Reply Cancel reply

Your email address will not be published. Required fields are marked *

Recommended

ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

4 years ago
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ