• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

cknewsnow desk by cknewsnow desk
September 20, 2021
in POLITICS, STATE
Reading Time: 2 mins read
0
ಒಬ್ಬ ಯಡಿಯೂರಪ್ಪ ಅಲ್ಲ, ನೂರು ಜನ ಯಡಿಯೂರಪ್ಪ ಬಂದರೂ ಬಿಜೆಪಿ ಉಳಿಸಲು ಸಾಧ್ಯವಿಲ್ಲ: ಟಗರು ಗುಟುರು

ವಿಧಾನಸಭೆ ಕಲಾಪಕ್ಕೆ ಸೈಕಲ್‌ʼನಲ್ಲಿ ಬಂದ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ.

985
VIEWS
FacebookTwitterWhatsuplinkedinEmail

ಬೆಲೆ ಏರಿಕೆಯ ಬಿಜೆಪಿ ಮೇಲೆ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆಯಿಂದ ಜನರ ಆಕ್ರೋಶ ಒಳಗೊಳಗೆ ಕುದಿಯುತ್ತಿದೆ. ಈ ಸರ್ಕಾರ ತೊಲಗಿದರೆ ಸಾಕು, ಮತ್ತೆ ಚುನಾವಣೆ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ. ಒಬ್ಬ ಯಡಿಯೂರಪ್ಪ ಅಲ್ಲ, ಯಡಿಯೂರಪ್ಪ ಅವರಂತಹ ನೂರು ಜನ ಬಂದರೂ ಬಿಜೆಪಿಯನ್ನು ಉಳಿಸಲಿಕ್ಕೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸರ್ಕಾರ ಕೇಸ್ ಹಾಕುತ್ತದೆ ಎಂಬ ಕಾರಣಕ್ಕೆ ಇದನ್ನೆಲ್ಲ ಸಹಿಸಿಕೊಂಡು ಜನ ಸುಮ್ಮನಿದ್ದಾರೆ.  ನರೇಂದ್ರ ಮೋದಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯಾರಿಂದಲೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಮನೆಗೆ ಕಳಿಸಿ, ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ನಡೆದ ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅವರು ಹೇಳಿದ್ದಿಷ್ಟು;

  • ಸರ್ಕಾರ ಕೇಸ್ ಹಾಕುತ್ತೆ ಎಂಬ ಕಾರಣಕ್ಕೆ ಬೆಲೆಯೇರಿಕೆ ವಿರುದ್ಧ ಮಾತನಾಡದೆ ಜನ ಸುಮ್ಮನಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
  • ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನರ ಜೇಬಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಹಾಕಿವೆ.
  • ಈ ಹಿಂದೆ ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್  ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47 ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. ಪೆಟ್ರೋಲ್ ಬೆಲೆ ಕೂಡ ರೂ. 75ರ ಗಡಿಯೊಳಗೆ ಇತ್ತು.
  • ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಕಚ್ಚಾತೈಲ ದರ ಇಳಿಮುಖವಾದರೆ, ಸರ್ಕಾರ ವಿಧಿಸುತ್ತಿದ್ದ ಅಬಕಾರಿ ಸುಂಕ ಏರಿಕೆಯಾಯಿತು.
  • 2014 ರಿಂದ ಈ ವರೆಗೆ ಕಚ್ಚಾತೈಲ ದರ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರು ಕೂಡ ಅದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ 3 ರೂಪಾಯಿ 45 ಪೈಸೆ ಹಾಗೂ ಪೆಟ್ರೋಲ್ ಮೇಲೆ 9ರೂಪಾಯಿ 20 ಪೈಸೆ ಅಬಕಾರಿ ಸುಂಕ ಇತ್ತು, ನರೇಂದ್ರ ಮೋದಿ ಅವರ ಏಳು ವರ್ಷಗಳ ಆಡಳಿತದಲ್ಲಿ ಅಬಕಾರಿ ಸುಂಕ ಡೀಸೆಲ್ ಮೇಲೆ 31 ರೂಪಾಯಿ 84 ಪೈಸೆ, ಪೆಟ್ರೋಲ್ ಮೇಲೆ 32 ರೂಪಾಯಿ 98 ಪೈಸೆಗೆ ಏರಿಕೆಯಾಗಿದೆ. ಇದರಲ್ಲಿ ಶೇ.50 ಕಡಿಮೆ ಮಾಡಲಿ.
  • ನರೇಂದ್ರ ಮೋದಿ ಅವರ ಸರ್ಕಾರ ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಮೇಲಿನ ಅಬಕಾರಿ ಸುಂಕದ ಮೂಲಕ ಒಟ್ಟು ರೂ. 23 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡಿದೆ.
  • 2020-21 ರ ಸಾಲಿನಲ್ಲಿ ರೂ. 3 ಲಕ್ಷ 35 ಸಾವಿರ ಕೋಟಿ ಅಬಕಾರಿ ಸುಂಕ ಸಂಗ್ರಹಿಸಲಾಗಿದೆ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕ ರಾಜ್ಯವೊಂದರಿಂದಲೇ 1 ಲಕ್ಷದ 20 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ.
  • ಮುಖ್ಯಮಂತ್ರಿಗಳು ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ತೈಲ ಬಾಂಡ್ ಕಾರಣ ಎಂಬ ಉತ್ತರ ನೀಡಬಹುದು ಆದರೆ 2006 ರಿಂದ 2010 ರವರೆಗೆ ಒಟ್ಟು ರೂ. 1 ಲಕ್ಷದ 40 ಸಾವಿರ ಕೋಟಿ ತೈಲ ಬಾಂಡ್ ಖರೀದಿ ಮಾಡಲಾಗಿದೆ. ಆಮೇಲೆ ತೈಲ ಬಾಂಡ್ ತೆಗೆದುಕೊಳ್ಳುವುದನ್ನು ನಿಲ್ಲಿಸಲಾಯಿತು.
  • ಈ ಸರ್ಕಾರ ತೈಲ ಬಾಂಡ್ ಗೆ ಕಟ್ಟಿರುವ ಹಣ ಕೇವಲ ರೂ. 3,500 ಕೋಟಿ. ಪ್ರತೀ ವರ್ಷದ ಬಡ್ಡಿಯಂತೆ ಕಳೆದ ಏಳು ವರ್ಷಗಳಲ್ಲಿ ರೂ.70,000 ಕೋಟಿ ಕೊಟ್ಟಿದ್ದಾರೆ.
  • ಈ ಸರ್ಕಾರ ತೀರಿಸಬೇಕಾದ ಬಾಂಡ್ ಹಣ ರೂ. 1,30,923 ಕೋಟಿ. ರೂ. 5,762 ಕೋಟಿ ತೈಲಬಾಂಡ್ ಮೇಲಿನ ಸಾಲವನ್ನು ಮನಮೋಹನ್ ಸಿಂಗ್ ಅವರ ಸರ್ಕಾರವೇ ತೀರಿಸಿದೆ.
  • ನರೇಂದ್ರ ಮೋದಿ ಅವರ‌ ಸರ್ಕಾರ ಒಂದೇ ವರ್ಷದಲ್ಲಿ ಸಂಗ್ರಹಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದಲ್ಲಿ ಒಟ್ಟು ಸಾಲವೇ ತೀರಿಹೋಗುತ್ತದೆ. ಹಾಗಾಗಿ ತೆರಿಗೆಯನ್ನು ಶೇ. 50 ಕಡಿತಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ.
  • ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ ರೂ. 3 ಕಡಿಮೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರ ಯಾಕೆ ಈ ರೀತಿ ತೆರಿಗೆ ಕಡಿತಗೊಳಿಸಬಾರದು?
  • ಈ ರೀತಿ ತೆರಿಗೆ ಕಡಿತ ಮಾಡಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಜೊತೆಗೆ ಕಬ್ಬಿಣ, ಸಿಮೆಂಟ್, ಬಸ್ ಪ್ರಯಾಣದರ, ಅಗತ್ಯ ವಸ್ತುಗಳ ಬೆಲೆ, ಹೋಟೆಲ್ ಬಿಲ್ ಎಲ್ಲವೂ ಕಡಿಮೆಯಾಗುತ್ತದೆ.
  • ಬೆಲೆಯೇರಿಕೆ ಇಂದ ಜನರ ಜೇಬು ತೂತಾಗಿದೆ. ಮನೆಯಲ್ಲಿದ್ದ ಬಂಗಾರವನ್ನು ಅಡ ಇಟ್ಟು ಜೀವನ ಸಾಗಿಸಬೇಕಾದ ಪರಿಸ್ಥಿತಿ ಇದೆ.
  • ಜಿ.ಎಸ್.ಟಿ ಬಂದಮೇಲೆ ರಾಜ್ಯಗಳಿಗಿದ್ದ ತೆರಿಗೆ ಸಂಗ್ರಹದ ಹಕ್ಕು ಈಗ ಇಲ್ಲವಾಗಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರವನ್ನು ಸರಿಯಾಗಿ ಕೊಡದೆ, ಸಾಲ ತಗೊಳ್ಳಿ ಎನ್ನುತ್ತಿದೆ.
  • 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ, ರಾಜ್ಯದ ಪಾಲನ್ನು 4.71% ಇಂದ 3.64% ಗೆ ಇಳಿಸಲಾಗಿದೆ. ಹಿಂದೆ ರಾಜ್ಯದ ಪಾಲು, ವಿಶೇಷ ಅನುದಾನ ಸೇರಿ ಒಟ್ಟು ರೂ. 80,000 ಕೋಟಿ ರಾಜ್ಯಕ್ಕೆ ಬರುತ್ತಿತ್ತು, ಆದರೆ ಈಗ ಅದು ರೂ. 38,000 ಮಾತ್ರ ಬರುತ್ತಿದೆ. ಇದಕ್ಕೆ ಯಾರು ಹೊಣೆ?
  • 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ್ದ ರೂ. 5,495 ವಿಶೇಷ ಅನುದಾನವನ್ನು ಕೂಡ ರದ್ದು ಮಾಡಿದರು, ಅದನ್ನು ಕೇಳುವ ಧೈರ್ಯವಿಲ್ಲದ ಭಂಡ ಸರ್ಕಾರ ಬಿಜೆಪಿಯದು.
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ. ಭಂಡ ಸರ್ಕಾರ ಇದು. ಇವತ್ತು ಆಟೋ ಚಾಲಕರು, ಕ್ಯಾಬ್ ಚಾಲಕರು, ಟ್ರ್ಯಾಕ್ಟರ್ ಇರುವ ರೈತರು, ಬಸ್ ಮಾಲೀಕರು, ಲಾರಿ ಮಾಲೀಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.
  • ಈ ಬಗ್ಗೆ ಮಾಧ್ಯಮಗಳು ಹೆಚ್ಚಿನ ಒತ್ತು ಕೊಟ್ಟು, ಸುದ್ದಿ ಪ್ರಸಾರ ಮಾಡಬೇಕು‌ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಸೈಕಲ್‌ ಏರಿದ ಕಾಂಗ್ರೆಸ್‌ ನಾಯಕರ ಚಿತ್ರಗಳ ಸ್ಲೈಡ್‌ ಶೋ..
Tags: bjpCongressDK Shivakumarindiaindia under price attackkarnatakalpgpetrol. dieselprice hikesiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜ್ಯದಲ್ಲಿ ಬರಲಿದೆ ಮತಾಂತರ ನಿಷೇಧ ಕಾಯಿದೆ

ರಾಜ್ಯದಲ್ಲಿ ಬರಲಿದೆ ಮತಾಂತರ ನಿಷೇಧ ಕಾಯಿದೆ

Leave a Reply Cancel reply

Your email address will not be published. Required fields are marked *

Recommended

ಪುನೀತ್ ಅವರಿಗೆ ಮರಣೋತ್ತರ ಸಹಕಾರ ರತ್ನ

ಪುನೀತ್ ಅವರಿಗೆ ಮರಣೋತ್ತರ ಸಹಕಾರ ರತ್ನ

3 years ago
ಪಂಚಾಯಿತಿ ಆವರಣದಲ್ಲಿ ಗಿಡಗಳನ್ನು ನೆಡದೆಯೇ ಬಿಲ್‌ ಪಾಸ್‌; ಪಿಡಿಒ ವಿರುದ್ಧ ದೂರು, ನೊಟೀಸ್‌ ಜಾರಿ

ಪಂಚಾಯಿತಿ ಆವರಣದಲ್ಲಿ ಗಿಡಗಳನ್ನು ನೆಡದೆಯೇ ಬಿಲ್‌ ಪಾಸ್‌; ಪಿಡಿಒ ವಿರುದ್ಧ ದೂರು, ನೊಟೀಸ್‌ ಜಾರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ