• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ನವರಾತ್ರಿಯಲ್ಲಿ ದುರ್ಗಾ ದೇವಿ ಆರಾಧನೆ

cknewsnow desk by cknewsnow desk
October 8, 2021
in GUEST COLUMN
Reading Time: 2 mins read
0
ನವರಾತ್ರಿಯಲ್ಲಿ ದುರ್ಗಾ ದೇವಿ ಆರಾಧನೆ
981
VIEWS
FacebookTwitterWhatsuplinkedinEmail

ನವರಾತ್ರಿ ಸಂಭ್ರಮ ಶುರುವಾಗಿದೆ. ನಾಡಿನೆಲ್ಲಡೆ ತಾಯಿ ದುರ್ಗೆಯ ಆರಾಧನೆ ನಡೆಯುತ್ತಿದೆ. ದುರ್ಗೆಯ ಪೂಜೆ ಹೇಗೆ? ಮಾಡುವ ವಿಧಾನ ಇತ್ಯಾದಿಗಳ ಬಗ್ಗೆ ಮಾಹಿತಿಪೂರ್ಣ ಲೇಖನ ಬರೆದಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.

ಈ ವರ್ಷದ ನವರಾತ್ರಿ ಅಕ್ಟೋಬರ್ 7 ರಿಂದ ಶುರುವಾಗಲಿದೆ.

ಈ ಸಂದರ್ಭದಲ್ಲಿ, ದುರ್ಗಾ ದೇವಿಯನ್ನು ಪೂಜಿಸಲಾಗುತ್ತದೆ; ಅವಳು ಶಕ್ತಿಯ ಸಂಕೇತ. ನವರಾತ್ರಿ ಎಂದರೆ “ಒಂಬತ್ತು ರಾತ್ರಿಗಳು.ಅಕ್ಟೋಬರ್ 15 ರವರೆಗೆ ನಡೆಯಲಿದೆ.

ನವರಾತ್ರಿ : ಶ್ರೀರಾಮನು ರಾಕ್ಷಸ ರಾಜ ರಾವಣನೊಡನೆ ಯುದ್ಧ ಮಾಡಲು ಹೊರಡುವ ಮೊದಲು ದುರ್ಗಾ ಪೂಜೆಯನ್ನು ಪ್ರಾರಂಭಿಸಿದನು.

ದುರ್ಗಾ ಮಾತೆಯ ಅವತಾರದ ಹಿಂದಿರುವ ಕುತೂಹಲಕಾರಿ ಕಥೆ ಶ್ರೀರಾಮನು ಲಂಕೆಯ ಮೇಲೆ ಯುದ್ಧ ಮಾಡಲು ಹೊರಡುವ ಮುನ್ನ ದೇವಿಯ ಆಶೀರ್ವಾದ ಪಡೆಯಲು ಇಚ್ಛಿಸಿದನು. ಅದಕ್ಕಾಗಿ ಅವನು ಆರು ತಿಂಗಳು ಕಾಯುವುದಕ್ಕೆ ಇಷ್ಟಪಡಲಿಲ್ಲ. ಆದ್ದರಿಂದ ಅವನು ತಪ್ಪಾದ ಮಾಸದಲ್ಲಿ ದುರ್ಗಾ ದೇವಿ ಪೂಜೆ ಕೈಕೊಂಡನು. ಆದ್ದರಿಂದಲೇ ಅವನು ದುರ್ಗಾಪೂಜೆಯನ್ನು ಮಾಡಿದ ಮಾಸವನ್ನು ‘ಅಕಾಲ್ ಬೋಧಾನ್’ ಅಥವಾ ತಪ್ಪು ಮಾಸದಲ್ಲಿ ಮಾಡಿದ ಪೂಜೆ ಎಂದು ಹೇಳಲಾಗುತ್ತದೆ.

ಅವನು ಪೂಜೆಯನ್ನು ಆಚರಿಸಲು ದುರ್ಗಾದೇವಿಗೆ 108 ಕಮಲ ಹೂವುಗಳನ್ನು ಅರ್ಪಿಸಿ 108 ದೀಪಗಳನ್ನು ಹಚ್ಚಿದನು. ಶ್ರೀರಾಮನು ಪೂಜೆ ಮಾಡುವ ಸಮಯದಲ್ಲಿ ರಾಕ್ಷಸನೊಬ್ಬನು ಒಂದು ಕಮಲವನ್ನು ಕದ್ದುಬಿಟ್ಟನು. ಆದ್ದರಿಂದ ಪೂಜೆಯನ್ನು ಸಂಪೂರ್ಣಗೊಳಿಸಲು ಶ್ರೀರಾಮನು ಕಮಲದ ಬದಲಿಗೆ ತನ್ನ ಎರಡು ಕಣ್ಣುಗಳಲ್ಲಿ ಒಂದು ಕಣ್ಣನ್ನು ಅರ್ಪಿಸಲು ಸಿದ್ಧನಾದನು. ಆದರೆ ಅವನು ಹಾಗೆ ಮಾಡುವ ಮೊದಲೇ ದೇವಿಯು ಶ್ರೀರಾಮನ ಮುಂದೆ ಪ್ರತ್ಯಕ್ಷ್ಯಳಾಗಿ ಅವನು ಯುದ್ಧದಲ್ಲಿ ವಿಜಯಶಾಲಿಯಾಗಲೆಂದು ಹರಸಿದಳು.

ದುರ್ಗಾ ಪೂಜೆಯ ಮಹತ್ವವನ್ನು ಸಾರುವ 9 ಆಚರಣೆಗಳು ನವರಾತ್ರಿಯ ಹತ್ತನೇ ದಿವಸ ಶ್ರೀರಾಮನು ರಾವಣನನ್ನು ಸಂಹರಿಸಿದನು. ಈಗಲೂ ಕೂಡ ದಸರಾ ಹಬ್ಬದ ಹತ್ತನೆಯ ದಿವಸ ಶ್ರೀರಾಮನ ಐತಿಹಾಸಿಕ ವಿಜಯವನ್ನು ಆಚರಿಸಲು ರಾವಣನ ವಿಗ್ರಹವನ್ನು ಸೃಷ್ಟಿಸಿ ಸುಡುತ್ತಾರೆ.

ನವರಾತ್ರಿ ಹಿನ್ನೆಲೆ: ನವರಾತ್ರಿಯ ಬಗ್ಗೆ ಹಲವಾರು ಪುರಾಣ ಕಥೆಗಳಿವೆ. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪುರಾಣಗಳ ಪ್ರಕಾರ, ಬ್ರಹ್ಮದೇವನು ರಾಕ್ಷಸ ರಾಜ ಮಹಿಷಾಸುರನಿಗೆ ಅಮರತ್ವವನ್ನು ವಾಗ್ದಾನ ಮಾಡಿದನು. ಅಂದರೆ ಕೇವಲ ಒಬ್ಬ ಮಹಿಳೆಯಿಂದ ಮಾತ್ರ ಅವನನ್ನು ಸೋಲಿಸಲು ಅಥವಾ ಸಂಹಾರ ಮಾಡಲು ಸಾಧ್ಯ ಎಂದು ವರ ನೀಡಲಾಗಿತ್ತು.

ಯಾವ ಹೆಣ್ಣು ತನ್ನನ್ನು ಕೊಲ್ಲಲು ಸಾಧ್ಯವೇ ಇಲ್ಲ ಎಂಬ ಭ್ರಮೆಯಲ್ಲಿದ್ದ ಮಹಿಷಾಸುರನು ತ್ರಿಲೋಕಗಳ ಮೇಲೆ ದಾಳಿ ಮಾಡುವುದನ್ನು ತಡೆಯಲು ಯಾರಿಗೂ ಸಾಧ್ಯವಾಗಲಿಲ್ಲ, ಅವುಗಳೆಂದರೆ ಭೂಮಿ, ಸ್ವರ್ಗ ಮತ್ತು ನರಕ.

ಆಗ ಭಗವಾನ್ ಬ್ರಹ್ಮ, ಭಗವಾನ್ ವಿಷ್ಣು ಮತ್ತು ಶಿವನ ಶಕ್ತಿಗಳು ಸೇರಿ ದುರ್ಗಾ ದೇವಿಯಾಗಿ ಅವತರಿಸದರು ಎನ್ನಲಾಗಿದೆ.

ಇದರ ಪರಿಣಾಮವಾಗಿ ಮಹಿಷಾಸುರ ಮತ್ತು ದೇವಿ ದುರ್ಗಾ ನಡುವೆ 15 ದಿನಗಳ ಕಾಲ ನಡೆದ ಯುದ್ಧದ ಸಮಯದಲ್ಲಿ ರಾಕ್ಷಸ ರಾಜನು ದೇವಿಯನ್ನು ದಾರಿ ತಪ್ಪಿಸಲು ತನ್ನ ಆಕಾರವನ್ನು ಬದಲಾಯಿಸಿದನು. ಆತ ಮಹಿಷನಾಗಿ ಬದಲಾದನು ಎನ್ನಲಾಗಿದೆ. ಯುದ್ದದಲ್ಲಿ ದುರ್ಗಾ ದೇವಿಯು ತನ್ನ ತ್ರಿಶೂಲದಿಂದ ಅವನನ್ನು ಕೊಲ್ಲುತ್ತಾಳೆ. ಮಹಾಲಯದ ದಿನ ಮಹಿಷಾಸುರನನ್ನು ಕೊಲ್ಲಲಾಯಿತು.

ನವರಾತ್ರಿ ರಾಮಾಯಣಕ್ಕೂ ಒಂದು ಸಂಬಂಧವಿದೆ ಎಂದು ಪುರಾಣಗಳು ಹೇಳುತ್ತವೆ. ರಾವಣನೆಂಬ ಬಲಶಾಲಿ ರಾಕ್ಷಸನನ್ನು ವಧೆ ಮಾಡಲು ರಾಮನು ಒಂಬತ್ತು ದಿನಗಳ ಕಾಲ ದುರ್ಗೆಯ ಪೂಜೆ ಮಾಡಿ ಆಕೆಯಿಂದ ಶಕ್ತಿ ಹಾಗೂ ಬಲ ಪಡೆದ ಎನ್ನಲಾಗುತ್ತದೆ.

ಸೀತೆಯನ್ನು ಅಪಹರಿಸಿದ್ದ ರಾವಣನನ್ನು ಇದರ ಬಳಿಕ ರಾಮ ವಧಿಸಿದ. ಒಂಬತ್ತು ದಿನ ಕಾಲ ನವರಾತ್ರಿ ಎಂದು ಕರೆಯಲಾಗುವುದು ಮತ್ತು ರಾಮನು ರಾವಣನನ್ನು ಅಂತಿಮ ದಿನ ವಧಿಸಿದ. ಈ ದಿನವನ್ನು ದಸರಾ ಅಥವಾ ವಿಜಯದಶಮಿ ಎಂದು ಕರೆಯಲಾಗುತ್ತದೆ. ಇದು ರಾವಣನಂತಹ ದುಷ್ಟ ರಾಕ್ಷಸನ ಮೇಲೆ ರಾಮನ ಗೆಲುವನ್ನು ತೋರಿಸುತ್ತದೆ ಎಂದು ಸಹ ಹೇಳಲಾಗುತ್ತದೆ.

ನವರಾತ್ರಿ ಒಂದು ಹಿಂದೂ ಹಬ್ಬವಾಗಿದ್ದು, ರಾಕ್ಷಸ ರಾಜ ಮಹಿಷಾಸುರನನ್ನು ಗೆದ್ದ ದುರ್ಗಾ ದೇವಿಯನ್ನು ಈ ಹಬ್ಬದಲ್ಲಿ ಸ್ಮರಿಸಲಾಗುತ್ತದೆ.

ಈ ಬಾರಿ ನವರಾತ್ರಿಯು ಅ. 7 ರಂದು ಗುರುವಾರದಿಂದ ಆರಂಭವಾಗುತ್ತಿದೆ. ಶ್ರಾದ್ಧವು ಅ. 6ರಂದು ಸರ್ವಪಿತ್ರಿ ಅಮಾವಾಸ್ಯೆಯೊಂದಿಗೆ ಕೊನೆಗೊಳ್ಳುತ್ತದೆ.

ಮರುದಿನ ಅಂದರೆ 2021ರ 7ನೇ ಅಕ್ಟೋಬರ್ ನಲ್ಲಿ ಗುರುವಾರದಿಂದ ನವರಾತ್ರಿ ಆರಂಭವಾಗುತ್ತದೆ. ಒಂದೇ ದಿನ ಎರಡು ದಿನಾಂಕಗಳು ಬೀಳುವುದರಿಂದ ಶಾರದಿಯಾ ನವರಾತ್ರಿ 8 ದಿನಗಳವರೆಗೆ ಇರುತ್ತದೆ ಎಂದು ಹೇಳಲಾಗುತ್ತಿದೆ.

ಅ. 9ರ ಶನಿವಾರ, ತೃತೀಯಾ ಬೆಳಿಗ್ಗೆ 7.48 ರವರೆಗೆ ಇರುತ್ತದೆ, ಚತುರ್ಥಿ ಆರಂಭವಾಗುತ್ತದೆ, ಇದು ಮರುದಿನ ಅಕ್ಟೋಬರ್ 10, ಭಾನುವಾರ ಬೆಳಿಗ್ಗೆ 5 ರವರೆಗೆ ಇರುತ್ತದೆ.

ಈ ಬಾರಿ ಮಾತೃ ದೇವಿಯ ಆರಾಧನೆಯು ಗುರುವಾರದಿಂದ ಆರಂಭವಾಗುತ್ತಿದೆ, ಇದು ಪೂಜೆ ಮತ್ತು ಆಧ್ಯಾತ್ಮಿಕ ಪ್ರಗತಿಗೆ ಮಂಗಳಕರವಾಗಿದೆ ಎನ್ನುವ ನಂಬಿಕೆಯಿದೆ. ಚಿತ್ರ ನಕ್ಷತ್ರದಲ್ಲಿ ನವರಾತ್ರಿ ಆರಂಭವಾಗುತ್ತಿದೆ, ಇದರಿಂದ ಸಾಧನಾ, ಧೈರ್ಯ ಮತ್ತು ನೆಮ್ಮದಿ ಸಿಗುತ್ತದೆ ಎಂದು ಹೇಳಲಾಗುತ್ತದೆ.

ನವರಾತ್ರಿ ದಿನಾಂಕಗಳು:

ಮೊದಲ ದಿನ 2021ರ ಅಕ್ಟೋಬರ್ 7: ಮಾ ಶೈಲಪುತ್ರಿಯ ಆರಾಧನೆ
ಎರಡನೇ ದಿನ 2021ರ ಅಕ್ಟೋಬರ್ 8: ತಾಯಿ ಬ್ರಹ್ಮಚಾರಿಣಿಯ ಆರಾಧನೆ
ಮೂರನೇ ದಿನ 2021ರ ಅಕ್ಟೋಬರ್ 9: ತಾಯಿ ಚಂದ್ರಘಂಟ ಮತ್ತು ತಾಯಿ ಕೂಷ್ಮಾಂಡರ ಪೂಜೆ
ನಾಲ್ಕನೇ ದಿನ 2021ರ ಅಕ್ಟೋಬರ್ 10: ತಾಯಿ ಸ್ಕಂದಮಾತೆಯ ಆರಾಧನೆ
ಐದನೇ ದಿನ 2021ರ ಅಕ್ಟೋಬರ್ 11: ತಾಯಿ ಕಾತ್ಯಾಯನಿಯ ಆರಾಧನೆ
ಆರನೇ ದಿನ 2021ರ ಅಕ್ಟೋಬರ್ 12: ತಾಯಿ ಕಾಳರಾತ್ರಿಯ ಪೂಜೆ
ಏಳನೇ ದಿನ 2021ರ ಅಕ್ಟೋಬರ್ 13: ತಾಯಿ ಮಹಾಗೌರಿಯ ಆರಾಧನೆ
ಎಂಟನೇ ದಿನ 2021ರ ಅಕ್ಟೋಬರ್ 14: ತಾಯಿ ಸಿದ್ಧಿದಾತ್ರಿಯ ಆರಾಧನೆ
2021ರ ಅಕ್ಟೋಬರ್ 15: ವಿಜಯದಶಮಿ (ದಸರಾ)
ಘಟಸ್ಥಾಪನಕ್ಕಾಗಿ ಶುಭ ಮುಹೂರ್ತ (ಶಾರದಿಯಾ ನವರಾತ್ರಿ 2021 ಘಟಸ್ಥಾಪನ ಶುಭ ಮುಹೂರ್ತ)
ನವರಾತ್ರಿಯ ಮೊದಲ ದಿನ, ಮಾತೃ ದೇವಿಯ ಆರಾಧನೆಯನ್ನು ಘಟಸ್ಥಾಪನದೊಂದಿಗೆ ಆರಂಭಿಸಲಾಗುತ್ತದೆ. ಘಟಸ್ಥಾಪನಕ್ಕೆ ಶುಭ ಸಮಯವನ್ನು ವಿಶೇಷವಾಗಿ ನೋಡಿ ಘಟಸ್ಥಾಪನ ಮಾಡುವುದರಿಂದ ನವರಾತ್ರಿ ಫಲಪ್ರದವಾಗುತ್ತದೆ.

ಈ ಬಾರಿ ನವರಾತ್ರಿಯನ್ನು ಕೇವಲ 8 ದಿನಗಳ ಕಾಲ ಮಾತ್ರ ಆಚರಿಸುವುದೇ ವಿಶೇಷವಾಗಿದೆ. ಸಾಮಾನ್ಯವಾಗಿ ಪ್ರತೀ ವರ್ಷ 9 ದಿನಗಳ ಕಾಲ ನವರಾತ್ರಿಯನ್ನು ಆಚರಿಸಲಾಗುತ್ತಿತ್ತು. ಹಾಗೂ ಈ ಬಾರಿ ದೇವಿಯ ಘಟಸ್ಥಾಪನೆಯ ಮುಹೂರ್ತವು ಶುಭದಾಯಕವಾಗಿದೆ.‌


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: cknewsnowdurga poojekarnatakamysoremysuru dasaranada habbanavaratri festivalnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

Leave a Reply Cancel reply

Your email address will not be published. Required fields are marked *

Recommended

ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಬೆಮೆಲ್ ಕಾಂತರಾಜು ಕಾಂಗ್ರೆಸ್‌ ಸೇರ್ತಿದ್ದಾರೆ, ಕೆಪಿಸಿ ಕಚೇರಿಗೆ ಯಾರೂ ತಲೆ ಹಾಕಬೇಡಿ ಎಂದ ಡಿಕೆಶಿ

3 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ