• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮೈಸೂರು ದಸರಾ ಟೂರಿಸಂ ಪ್ಯಾಕೇಜ್; ಸರಕಾರಕ್ಕೆ ಒಳ್ಳೇ ಸಲಹೆ ಕೊಟ್ಟ ಎಸ್.ಎಂ.ಕೃಷ್ಣ

cknewsnow desk by cknewsnow desk
October 7, 2021
in STATE
Reading Time: 1 min read
0
ಮೈಸೂರು ದಸರಾ ಟೂರಿಸಂ ಪ್ಯಾಕೇಜ್; ಸರಕಾರಕ್ಕೆ ಒಳ್ಳೇ ಸಲಹೆ ಕೊಟ್ಟ ಎಸ್.ಎಂ.ಕೃಷ್ಣ
952
VIEWS
FacebookTwitterWhatsuplinkedinEmail

ನಾಡಹಬ್ಬದ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟ ಹಿರಿಯ ಮುತ್ಸದ್ಧಿ

ಮೈಸೂರು: ಮೈಸೂರು ದಸರಾವನ್ನು ಪ್ಯಾಕೇಜ್ ಟೂರಿಸಂಗೋಸ್ಕರ ಸಿದ್ಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ರಾಜ್ಯ ಸರಕಾರಕ್ಕೆ ಮಾಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ  ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ  ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಗೈದು, ದೀಪಬೆಳಗಿಸುವ ಮೂಲಕ ವಿಶ್ವವಿಖ್ಯಾತ 411ನೇ ಮೈಸೂರು ದಸರಾಕ್ಕೆ ಎಸ್.ಎಂ.ಕೃಷ್ಣ ಅವರು ಗುರುವಾರ ವಿಧ್ಯುಕ್ತ ಚಾಲನೆ ನೀಡಿ, ಅವರು ಮಾತನಾಡಿದರು.

ಮುಂದಿನ ವರ್ಷಕ್ಕೆ ಒಂದು ಪ್ಯಾಕೇಜ್ ಟೂರ್ಸ್ ಮಾಡುವ ಮೂಲಕ ರೂಪುರೇಷೆಗಳು ಹೇಗಿರಬೇಕೆಂಬುದನ್ನು ಸಿದ್ಧಗೊಳಿಸಿ ನಿರ್ಮಿಸಿದರೆ ಬಹುಶಃ ದಸರಾದಿಂದ ರಾಜ್ಯದ ಅಭಿವೃದ್ಧಿ ಕೂಡ ಸಾಧ್ಯವಿದೆ ಎಂದವರು ಹೇಳಿದರು.

ಕರ್ನಾಟಕ ರಾಜ್ಯಕ್ಕೆ ಸಹಸ್ರಾರು ಮಂದಿ ಬರುತ್ತಾರೆ. ವಿಜಯಪುರ, ಐಹೊಳೆ ಪಟ್ಟದಕಲ್ಲು ಹಂಪಿ ಇವುಗಳನ್ನು ನೋಡಿ ಹೋಗಲು ಅವಕಾಶ ಮಾಡಿದಲ್ಲಿ ಪ್ರವಾಸೋದ್ಯಕ್ಕೆ ಸಂಪನ್ಮೂಲ ಕ್ಷೇತ್ರವನ್ನಾಗಿ ಮಾಡಿಕೊಳ್ಳಬಹುದು. ಉದಾಹರಣೆಗೆ ಸಿಂಗಾಪುರ ಮೈಸೂರಿಗಿಂತ ಸಣ್ಣದು ಮೂಲಭೂತವಾದ ಬಂಡವಾಳದಿಂದಲೇ ಲಕ್ಷಾಂತರ ಜನ ನೋಡಲು ಬರುತ್ತಾರೆ. ಸ್ವಚ್ಛವಾಗಿ ಆ ಪಟ್ಟಣವನ್ನು ರಕ್ಷಣೆ ಮಾಡಿದ್ದಾರೆ ಎಂದರು.

ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ ಮನುಕುಲಕ್ಕೆ ಬಂದಿರತಕ್ಕಂತಹ ಬಹಳ ದೊಡ್ಡ ಗಂಡಾಂತರ ಈ ಕೊರೊನಾ ಪಿಡುಗಿನಿಂದ ಮನುಕುಲವನ್ನು ರಕ್ಷಣೆ ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.

ನನ್ನ ತಂದೆ ಹತ್ತು ಹನ್ನೆರಡು ವರ್ಷಗಳ ಪ್ರಾಯದಲ್ಲಿ ಮೈಸೂರಿಗೆ ಓದಲು ಕಳಿಸಿದರು. ಒಂಟಿಕೊಪ್ಪಲ್ ಮಿಡ್ಲ್ ಸ್ಕೂಲ್ ನಲ್ಲಿ ಕಲಿತೆ, ಆ ನಂತರ ಮಹಾರಾಜ ಹೈಸ್ಕೂಲ್ʼನಲ್ಲಿ ಮೂರು ವರ್ಷ ಕಳೆದೆ. ಆ ನಂತರ ಯುವರಾಜ ಕಾಲೇಜು, ಆ ನಂತರ ಮಹಾರಾಜ ಕಾಲೇಜಿನಲ್ಲಿ ಅಭ್ಯಾಸ ನಡೆಯಿತು.  ನನ್ನ ವ್ಯಕ್ತಿತ್ವ ವಿಕಸನ ಮೈಸೂರಿಗೆ ಹೊಂದಿಕೊಂಡಂತೆ ನಡೆದಿದೆ. ಪ್ರತಿದಿನ ಚಾಮುಂಡಿಬೆಟ್ಟ ನೋಡುವುದು, ಕೈಮುಗಿದು ಹೋಗುವುದು, ಪ್ರಜಾಪ್ರತಿನಿಧಿ ಸಭೆಯ ಸದಸ್ಯರಾಗಿದ್ದರು. ದಸರಾ ಮಹಾ ಸಡಗರದಿಂದ ನಡೆಯುತ್ತದ್ದ ಕಾಲ, ಆಗ ಈ ರೀತಿಯ ಪಿಡುಗಿರಲಿಲ್ಲ.  ವಿಜಯದಶಮಿಯ ದಿನ ರಾಜ್ಯದ, ದೇಶದ ವಿದೇಶಗಳಿಂದ ಸಹಸ್ರಾರು ಮಂದಿ ಮೈಸೂರಿಗೆ ಬಂದು ಈ ದಸರಾ ಹಬ್ಬದ ಸೊಗಡನ್ನು ಅನುಭವಿಸಿದ್ದಾರೆ ಎಂದು ಎಸ್. ಎಂ. ಕೃಷ್ಣ ತಿಳಿಸಿದರು.

ಪ್ರಜಾಪ್ರತಿನಿಧಿ ಸಭೆ ಜಗನ್ ಮೋಹನ ಅರಮನೆಯಲ್ಲಿ  ನಡೆಯುತ್ತಿತ್ತು. ಮರಿಮಲ್ಲಪ್ಪದಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿದ್ದರು. ಪ್ರಾತಃ ಸ್ಮರಣಿಯ ಪಿಟೀಲು ಚೌಡಯ್ಯ ಸೇರಿದಂತೆ ಹಲವರು ಪ್ರತಿರಾತ್ರಿ ಸಂಗೀತ ಕಛೇರಿ ಏರ್ಪಾಡು  ಮಾಡುತ್ತಿದ್ದರು. ಮೈಸೂರು ಕುಸ್ತಿಗೆ ಹೆಸರಾಂತ ಪಟ್ಟಣವಾಗಿತ್ತು. ಸಾಹುಕಾರ್ ಚನ್ನಯ್ಯನಂತವರು ಕುಸ್ತಿಗೆ ವಿಶೇಷ ಸೌಲತ್ತು ಒದಗಿಸುತ್ತಿದ್ದರು. ದಸರಾದಷ್ಟೇ  ಖ್ಯಾತವಾಗಿದ್ದ ವಸ್ತುಪ್ರದರ್ಶನ ನೋಡಲು ಸಹಸ್ರಾರು ಮಂದಿ ಬರುತ್ತಿದ್ದರು. ಅದನ್ನು ಅನುಭವಿಸುತ್ತಿದ್ದರು. ಇಂತಹ ಅತ್ಯಂತ ರೋಚಕವಾದಂತಹ ಮತ್ತು ನಮ್ಮನ್ನು ಪುಳಕಿತಗೊಳಿಸತಕ್ಕಂತಹ ಹಲವಾರು ಘಟನೆಗಳು ನಡೆಯುತ್ತಿತ್ತು ಎಂದು ಎಸ್. ಎಂ.ಕೃಷ್ಣ ಅವರು ಗತ ವೈಭವದ ಮೆಲುಕು ಹಾಕಿದರು.

ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ, ವಿಧ್ಯುಕ್ತ ಚಾಲನೆ ನೀಡಲಾಯಿತು.

ರಾಜ್ಯದ ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ಧಿ ಶ್ರೀ ಎಸ್. ಎಮ್‌. ಕೃಷ್ಣ ಅವರು ನಾಡ ಹಬ್ಬ ದಸರಾ-2021 ಉದ್ಘಾಟಿಸಿದರು.#Dasara2021 pic.twitter.com/DVHrLvYexb

— Basavaraj S Bommai (Modi Ka Parivar) (@BSBommai) October 7, 2021

ಯದುಕುಲದ ಅರಸರು ದಸರಾವನ್ನು ನಾಡಹಬ್ಬವನ್ನಾಗಿ ಪರಿವರ್ತಿಸಲು ಶ್ರಮಪಟ್ಟಿದ್ದಾರೆ. ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್, ಆ ನಂತರ ಬಂದಂತಹ ಅನುವಂಶಿಕರು ದಸರಾ ಉತ್ಸವಕ್ಕೆ ಸಾಕಷ್ಟು ಮೆರಗನ್ನು ತಂದುಕೊಟ್ಟಿದ್ದಾರೆಂದು ಸ್ಮರಿಸಿದರು.

ಸರ್ ಎಂ ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ದಸರಾ ಮಹೋತ್ಸವಕ್ಕೆ ವಿಶೇಷ ಅರ್ಥ ಕಲ್ಪಿಸಿಕೊಟ್ಟವರು. ರಾಮಕೃಷ್ಣಾಶ್ರಮದಿಂದ ಪ್ರತಿ ತಿಂಗಳು ಬೆಟ್ಟಕ್ಕೆ ನಡೆದುಕೊಂಡು ಹೋಗುತ್ತಿದ್ದೆವು ಅಲ್ಲಿ ತಾಯಿಗೆ ನಮಸ್ಕಾರ ಸಲ್ಲಿಸುತ್ತಿದ್ದೆವು. ಇವೆಲ್ಲವನ್ನು ಸ್ಮರಿಸಿದಾಗ ಓ ದೇವರೇ! ಮತ್ತೆ ಆ ಗಳಿಗೆ ಬಂದೀತೆ ಎಂಬ ಉದ್ಘಾರ ಹೊರಡುತ್ತೆ ಎಂದು ಎಸ್. ಎಂ. ಕೃಷ್ಣ ಉದ್ಘರಿಸಿದರು.

ದಸರಾ ಉತ್ಸವಕ್ಕೆ 800 ವರ್ಷಗಳ ಇತಿಹಾಸವಿದೆ. ವಿಜಯನಗರ ಅರಸರು ಶಕ್ತಿ ಪ್ರದರ್ಶನಕ್ಕೆ ದಿಗ್ವಿಜಯಕ್ಕೆ ಹೋಗಲು ಉಪಯೋಗಿಸಿಕೊಳ್ಳುತ್ತಿದ್ದರು. ವಿಜಯನಗರ ಅರಸ ಕೃಷ್ಣದೇವರಾಯನ ಕಾಲದಲ್ಲಿ ಹಂಪಿಯಲ್ಲಿ ಮಹಾನವಿಮ ದಿಬ್ಬ ನಿರ್ಮಿಸಲಾಗಿತ್ತು. ಕ್ರೀಡೆ, ಸಾಹಸಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಜರುಗುತ್ತಿತ್ತು. ವಿಜಯ ನಗರ ಸಾಮ್ರಾಜ್ಯದ ದಸರಾ ಪ್ರದರ್ಶನವನ್ನು ಮುಂದುವರಿಸಿಕೊಂಡು ಬಂದವರು ಮೈಸೂರು ಒಡೆಯರ ಸಂತತಿಯವರು. 1610 ಮೈಸೂರು ಒಡೆಯರ್  ಶ್ರೀರಂಗಪಟ್ಟಣದಲ್ಲಿ ದಸರಾ ಪ್ರಾರಂಭಿಸಿದರು. ಅಂಬಾರಿ ಕೂಡ ವಿಜಯ ನಗರದವರಿಂದಲೇ ಪಡೆದಿದ್ದರು. ಮಹಾರಾಷ್ಟ್ರದ ದೇವಿಗಿರಿಯಿಂದ ವಿಜಯನಗರದವರೆಗೂ ಬಂದಿತ್ತು. ಅಂಬಾರಿಗೆ 8 ಶತಮಾನಗಳ ಇತಿಹಾಸವಿದೆ. 750 ಕೆಜಿ ತೂಕವಿರುವ ಸ್ವರ್ಣ ಅಂಬಾರಿಯಲ್ಲೇ ವಿಜಯ ದಸರಾ ಮೆರವಣಿಗೆ ಹೋಗುತ್ತಿದೆ ಎಂದು ಸ್ಮರಿಸಿದರು.

ಕೆಆರ್ ಎಸ್ ಆಣೆಕಟ್ಟಿನಿಂದ ಮಂಡ್ಯ ಅಭಿವೃದ್ಧಿ ಜಿಲ್ಲೆಯಾಗಿದೆ.  ಅಣೆಕಟ್ಟು ಕಟ್ಟಲು ಮೈಸೂರು ರಾಜರ ಕೊಡುಗೆಯನ್ನು ಸ್ಮರಿಸಿದರು. ಹಿಂದಿನದನ್ನು ನೆನೆಯದೇ ಮುಂದೆ ನಡೆಯಲು ಸಾಧ್ಯವಿಲ್ಲ, ಹಿಂದಿನದನ್ನು ನೆನೆದಾಗ ಮುಂದಿನ ಭವಿಷ್ಯ ಸ್ಪಷ್ಟವಾಗಿ ಕಾಣಿಸುತ್ತದೆ. ದಸರಾ ಪ್ರೇರಕ ಶಕ್ತಿಯಾಗಿದೆ ಎಂದು ತಿಳಿಸಿದರು.

ಭಾರತ ಅಭಿವೃದ್ಧಿ ಶೀಲ ರಾಷ್ಟ್ರವಾಗಿದೆ. ಚೀನಾ, ಭಾರತದ ಜೊತೆ ಅಭಿವೃದ್ಧಿಯಲ್ಲಿ ಪೈಪೋಟಿ ನಡೆಯುತ್ತಿದೆ. ಮತ್ಸರ ಇಲ್ಲದಿದ್ದಲ್ಲಿ ಸ್ವಾಗತಿಸುವ ಬೆಳವಣಿಗೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಮ್ಮ ದೇಶ ಅಭಿವೃದ್ಧಿಪಥದಲ್ಲಿ ಸಾಗುತ್ತಿದ್ದು,  ಬಹಳ ದೊಡ್ಡ ದೊಡ್ಡ ಕನಸುಗಳನ್ನ ಪ್ರಧಾನ ಮಂತ್ರಿ ಕಂಡಿದ್ದು ಅದನ್ನು ನನಸಾಗಿಸಲು ಶ್ರಮಿಸುತ್ತಿದ್ದಾರೆ. ಅವರ ಕನಸು ನನಸಾಗಲಿ. ತಾಯಿ ಚಾಮುಂಡೇಶ್ವರಿ ಆ ಶಕ್ತಿಯನ್ನು ಅವರಿಗೆ ನೀಡಲಿ.  ಸ್ಮೃತಿಪಟದಲ್ಲಿ ಇಷ್ಟು ಕಟ್ಟಪಟ್ಟು ದೇಶದ ಬಗ್ಗೆ ಇಷ್ಟು ಚಿಂತನೆಗಳನ್ನು ಕೈಗೊಂಡು ರೂಪಿಸಲು ಶ್ರಮಿಸಿದವರನ್ನು ನೋಡಿಲ್ಲ, ಅವರಿಗೆ ನಮ್ಮ ಬೆಂಬಲವಿದೆ. ಯುವ ಜನಾಂಗ ದೇಶದ ಆಸ್ತಿ, ಒಂದು ನಿರ್ದಿಷ್ಟವಾದ ದಿಕ್ಕಿನತ್ತ ಕೊಂಡು ಹೋಗಬೇಕು. ಅವರ ಮುಂದೆ ನಾವು ಗುರಿ ಯನ್ನು ಸ್ಥಾಪನೆ ಮಾಡುವ ಅವಶ್ಯಕತೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಕೃತಿದತ್ತವಾಗಿರುವ ಅವಕಾಶವಿರುವಾಗ ಅದನ್ನು ಸದುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ. ದಸರಾ ಸುಲಲಿತವಾಗಿ ನಡೆಯಲಿ. ಈ ಸುಂದರ ದಸರಾವನ್ನು ಉಲ್ಲಾಸ ಶ್ರದ್ಧೆ ಭಕ್ತಿಯಿಂದ ಆಚರಿಸೋಣ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಮಾಜಿ ಸಿಎಂ ಎಸ್.ಎಂ ಕೃಷ್ಣ, ಸಿಎಂ ಬಸವರಾಜ ಬೊಮ್ಮಾಯಿ ಮತ್ತವರ ಪತ್ನಿ ಚನ್ನಮ್ಮ  ಅವರಿಗೆ ಪುಸ್ತಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ. ಟಿ. ದೇವೇಗೌಡ ವಹಿಸಿದ್ದರು.

Tags: cknewsnowgoddess chamundeshvariMysurumysuru dasara 2021nada habbanewssm krishna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ

ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ

Leave a Reply Cancel reply

Your email address will not be published. Required fields are marked *

Recommended

ಗ್ರೆಟಾ ಥನ್​ಬರ್ಗ್ʼಗೆ ತಪ್ಪಿದ ಶಾಂತಿ ನೊಬೆಲ್ 2020;‌ ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಪಾಲಾಯಿತು ಪ್ರಶಸ್ತಿ

ಗ್ರೆಟಾ ಥನ್​ಬರ್ಗ್ʼಗೆ ತಪ್ಪಿದ ಶಾಂತಿ ನೊಬೆಲ್ 2020;‌ ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಪಾಲಾಯಿತು ಪ್ರಶಸ್ತಿ

5 years ago
ಹೊಸ ವರ್ಷದ ಮೊದಲ ದಿನ ಗುವಾಹಟಿ ಶಕ್ತಿ ಪೀಠದ ಕಾಮಾಕ್ಯ ಅಮ್ಮನವರಿಗೆ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

ಹೊಸ ವರ್ಷದ ಮೊದಲ ದಿನ ಗುವಾಹಟಿ ಶಕ್ತಿ ಪೀಠದ ಕಾಮಾಕ್ಯ ಅಮ್ಮನವರಿಗೆ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ