• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಾನವೀಯ ಮೌಲ್ಯ ಉಳಿಸಲು 10 ಸಾವಿರ ಕಿ.ಮೀ. ಪಾದಯಾತ್ರೆ

cknewsnow desk by cknewsnow desk
October 8, 2021
in CHIKKABALLAPUR, STATE
Reading Time: 1 min read
0
ಮಾನವೀಯ ಮೌಲ್ಯ ಉಳಿಸಲು 10 ಸಾವಿರ ಕಿ.ಮೀ. ಪಾದಯಾತ್ರೆ
968
VIEWS
FacebookTwitterWhatsuplinkedinEmail

ಉತ್ತಮ ಜೀವನಕ್ಕೆ, ಉತ್ತಮ ದೇಶ ನಿರ್ಮಾಣಕ್ಕಾಗಿ ಕಾಲ್ನಡಿಗೆ

By Gs Bharath Gudibande

ಗುಡಿಬಂಡೆ: ನಾವು ಕುಡಿಯುವ ನೀರು, ಸೇವಿಸುವ ಆಹಾರ ಎಲ್ಲವೂ ಕಲುಷಿತ. ವಿಷಮಯ ಜೀವನ ನಡೆಸುತ್ತಿದ್ದೇವೆ. ಹಾಗಾಗಿ ಜನರು ತಮ್ಮ ಜೀವನದ ಅಭ್ಯಾಸವನ್ನು ಬದಲಿಸಿಕೊಳ್ಳಬೇಕು. ಬದಲಾವಣೆಗಾಗಿ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಚಿಂತಕ ಬೆಂಗಳೂರಿನ ಹೆಚ್.ಕೆ.ವಿವೇಕಾನಂದ ತಿಳಿಸಿದರು.

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬುದ್ಧ ಸಮಾಜ ನಿರ್ಮಾಣದ ಜ್ಞಾನಭಿಕ್ಷಾ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾವಿ ಪ್ರಜೆಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಂದಿನ 15 ವರ್ಷಗಳಲ್ಲಿ ಸಮಾಜದ ಸ್ಥಿತಿ ಸಂಪೂರ್ಣ ಬದಲಾಗಿ ಜನರ ಜೀವನಮಟ್ಟ ಕನಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ನಾವು ಎಚ್ಚೆತುಕೊಂಡು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ದಿಗ್ಗಜ ಕ್ರಿಕೆಟಿಗರ ಜಾಹಿರಾತಿನಿಂದ ಯುವಜನರು ಹಾಳು

ಭಾರತರತ್ನ ಪಡೆದ ಸಚಿನ್ ತೆಂಡುಲ್ಕರ್, ಮಹೇಂದ್ರ ಸಿಂಗ್ ಧೋನಿ ಹಣಕ್ಕಾಗಿ ಜನರ ಜೀವನ ಹಾಳು ಮಾಡುವ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ನಟ-ನಟಿಯರು ಸಮಾಜಕ್ಕೆ ಆದರ್ಶರಾಗಬೇಕು. ಸಮಾಜ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡದೇ ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ನೋವು ವ್ಯಕ್ತಪಡಿಸಿದರು.

ಸ್ವದೇಶಿ ವಸ್ತು ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

ಮುಂದಿನ 15 ವರ್ಷಗಳಲ್ಲಿ ಈಗಿನ ವಿದ್ಯಾರ್ಥಿಗಳೇ ಮುಖ್ಯವಾಹಿನಿಯಲ್ಲಿ ಇರುತ್ತಾರೆ. ಆದ್ದರಿಂದ ಮಕ್ಕಳು ವಿಷ ಇರುವ ತಂಪು ಪಾನೀಯಗಳ ಬದಲಿಗೆ ರೈತ ಬೆಳೆದ ಎಳನೀರು ಕುಡಿಯಬೇಕು. ಅದರಿಂದ ಇಲ್ಲಿನ ರೈತ ಉತ್ತಮ ಬದುಕು ಕಟ್ಟಿಕೊಳ್ಳುತ್ತಾನೆ. ಜತೆಗೆ ಜನರ ಆರೋಗ್ಯ ಸುಧಾರಿಸುತ್ತದೆ. ನಮ್ಮ ಮನೆಯನ್ನು ಮೊದಲು ದೇವಸ್ಥಾನ, ಬಸ್ ನಿಲ್ದಾಣ ಇತ್ಯಾದಿಗಳಿಂದ ಗುರುತಿಸುತ್ತಿದ್ದೆವು. ಈಗ ಬಾರ್ ಡಾಬಾಗಳಿಂದ ಗುರುತಿಸುವಷ್ಟು ಕೆಳಹಂತಕ್ಕೆ ಹೋಗುತ್ತಿದ್ದೇವೆ ಎಂದು ವಿವೇಕಾನಂದ ಅವರು ಬೇಸರ ವ್ಯಕ್ತಪಡಿಸಿದರು.

ಸಮಾಜದ ಸುಧಾರಣೆಗೆ ಸಹಕರಿಸಿ

ಪ್ರತಿ ಕ್ಷೇತ್ರದಲ್ಲೂ ಯಂತ್ರ ಮತ್ತು ತಂತ್ರಜ್ಞಾನ ಸುಧಾರಣೆ ಆಗುತ್ತಿದೆ. ಆದರೆ ನಮ್ಮ ಮಾನವೀಯ ಗುಣ, ಕರ್ತವ್ಯ, ವ್ಯಕ್ತಿತ್ವ ಕೆಳಗೆ ಬರುತ್ತಿದೆ. ಅದು ದೊಡ್ಡ ಆತಂಕಕಾರಿ. ಜ್ವಾನವನ್ನು ಬೆಳೆಸುವ ಗ್ರಂಥಾಲಯಗಳನ್ನು ಜನ ಮರೆಯುತ್ತಿದ್ದಾರೆ. ಮಾನಹಾನಿ ಮಾಡುವ ಬಾರ್ʼಗಳ ಕಡೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಇದು ಬದಲಾವಣೆ ಯಾಗಬೇಕು. ಇದಕ್ಕೆ ಇಂದಿನ ಮಕ್ಕಳಾದ ನಿಮ್ಮಿಂದ ಮಾತ್ರ ಸಾಧ್ಯ. ಇಂದಿನಿಂದಲೇ ಎಲ್ಲರೂ ಪ್ರಮಾಣ ಮಾಡಬೇಕು ಕೆಟ್ಟ ಅಭ್ಯಾಸಗಳನ್ನು, ದುಷ್ಚಟಗಳನ್ನು ಬಿಟ್ಟು ಮಾನವೀಯ ಮೌಲ್ಯಗಳಿಗೆ ಹೆಚ್ಚು ಮಹತ್ವ ನೀಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಯಾರು ಎಚ್.ಕೆ.ವಿವೇಕಾನಂದ?

ರಾಜ್ಯ ಕಂಡ ವಿಶಿಷ್ಟ ಶೈಲಿಯ ಬರಹಗಾರ, ಚಿಂತಕ. ಬೀದರ್ ಜಿಲ್ಲೆಯಿಂದ ಅವರ ಪಾದಯಾತ್ರೆ ಆರಂಭವಾಗಿದ್ದು, ಕಳೆದ 340 ದಿನಗಳಿಂದ ನಿರಂತರವಾಗಿ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡು ಗುರುವಾರದಂದು ಗುಡಿಬಂಡೆಗೆ ಬಂದಿದ್ದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಂತರ ಬಾಗೇಪಲ್ಲಿ ಕಡೆಗೆ ಹೊರಟರು.

ಈ ಸಂದರ್ಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್, ಉಪನ್ಯಾಸಕರಾದ ಮಂಜು ಭಾರ್ಗವಿ, ಬಿ.ಜೆ.ರಾಮಣ್ಣ, ಮೋಹನ್ ಕುಮಾರ್, ನಾಗರತ್ನ, ಚಂದುಶ್ರೀ, ಶಿಕ್ಷಕ ರಾಜಶೇಖರ್, ಮನೋಹರ್, ಹಿರಿಯ ಕವಿ ಪ್ರೆಸ್ ಸುಬ್ಬರಾಯಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಮಂಜುನಾಥ, ಪರಿಸರ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಭರತ್, ಮುಖಂಡ ಎಂಟಿಎಸ್ ಶ್ರೀನಾಥ್ ಕಾಲೇಜಿನ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

ಇಂದಿನ ಸಮಯದಲ್ಲಿ ಕುಸಿಯುತ್ತಿರುವ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಆರೋಗ್ಯ ಸಮಾಜ ನಿರ್ಮಾಣ ಮಾಡಲು ಯುವಕರ ಪಾತ್ರದ ಬಗ್ಗೆ 24 ಜಿಲ್ಲೆಗಳಲ್ಲಿ ಕಾಲ್ನಡಿಗೆ ಮೂಲಕ 10 ಸಾವಿರ ಕಿಮೀ ದೂರ ಕ್ರಮಿಸಿ ಪ್ರತಿ ಸ್ಥಳದಲ್ಲಿ ಅರಿವು ಮೂಡಿಸುತ್ತಿರುವ ವಿವೇಕಾನಂದ ಅವರ ಕಾರ್ಯ ಶ್ಲಾಘನೀಯ.

ಕಾರ್ಗಿಲ್ ವಿ.ಲಕ್ಷ್ಮೀನಾರಾಯಣ, ಜಿಂಟಿ ಕಾರ್ಯದರ್ಶಿ, ಮಾಜಿ ಸೈನಿಕರ ಸಂಘ, ಚಿಕ್ಕಬಳ್ಳಾಪುರ ಜಿಲ್ಲೆ

Tags: chikkaballapuracknewsnowgudibandekarnatakanewspadayatrewalk for good life
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
“ಒತ್ತೆ ಇಟ್ಟುಕೊಳ್ಳೋಕೆ ಕರ್ನಾಟಕವೇನು ಅವರಪ್ಪಂದಾ?” ಎಂದು ಕೋಲಾರದಲ್ಲಿ ಕಾಮ್ರೇಡ್‌ ಮೇಲೆ ಗುಡುಗಿದ್ದರು ಸಿಎಂ ಎಚ್.ಡಿ.ದೇವೇಗೌಡರು!!

ಖರ್ಗೆಗೆ ಮುಖ್ಯಮಂತ್ರಿ ಪಟ್ಟ ತಪ್ಪದ್ಹೇಗೆ?

Leave a Reply Cancel reply

Your email address will not be published. Required fields are marked *

Recommended

ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

ಯಲಹಂಕದಲ್ಲಿ ಸೈಟು ಕೊಳ್ಳುವ ಮುನ್ನ ಯೋಚಿಸಿ!!

3 years ago
ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ