• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಿಕ್ಕಬಳ್ಳಾಪುರ-ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು?

P K Channakrishna by P K Channakrishna
October 9, 2021
in STATE
Reading Time: 1 min read
0
ಚಿಕ್ಕಬಳ್ಳಾಪುರ-ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು?
1.1k
VIEWS
FacebookTwitterWhatsuplinkedinEmail

ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಮುಖ್ಯಮಂತ್ರಿಗಳು
ಗುತ್ತಿಗೆದಾರರ ಕಣ್ಣಿಗೆ ಬೆಣ್ಣೆ, ರೈತರ ಕಣ್ಣಿಗೆ ಸುಣ್ಣ: ಸರಕಾರದ ವಿರುದ್ಧ ಕಿಡಿ

ಸಕಲೇಶಪುರ: ಸಾವಿರಾರು ಕೋಟಿ ರೂ.ಗಳ ವೆಚ್ಚದ ಎತ್ತಿನಹೊಳೆ ಯೋಜನೆ ತೆವಳುತ್ತಿದ್ದು, ಕಾಮಗಾರಿ ಮುಗಿದು ಬರಪೀಡಿತ ಚಿಕ್ಕಬಳ್ಳಾಪುರ ಮತ್ತುಕೋಲಾರ ಜಿಲ್ಲೆಗಳಿಗೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಖಾರವಾಗಿ ಪ್ರಶ್ನಿಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿಗಳನ್ನು ವೀಕ್ಷಿಸುವ ಮುನ್ನ ಸಕಲೇಶಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “2014ರಲ್ಲಿ ಆರಂಭವಾದ ಯೋಜನೆಯನ್ನು ಮೂರೇ ವರ್ಷದಲ್ಲಿ ಮುಗಿಸಿ ಎರಡೂ ಜಿಲ್ಲೆಗಳಿಗೆ ನೀರು ಹರಿಸುವುದಾಗಿ ಹೇಳಿದ್ದ ಅಂದಿನ ಮುಖ್ಯಮಂತ್ರಿಗಳು ಈಗ ಎಲ್ಲಿದ್ದಾರೆ” ಎಂದು ಕೇಳಿದರು.

ಇಡೀ ಯೋಜನೆ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಹಲವಾರು ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ವಿವರವಾಗಿ ಹೇಳಿದ್ದಿಷ್ಟು ಇಷ್ಟು;

“ಯೋಜನೆ ಕುಂಟುತ್ತಾ ಸಾಗುತ್ತಿದೆ. ಕಳೆದ ಎರಡು ವರ್ಷಗಳ ಮಳೆಗಾಲದಲ್ಲಿ ಆಗಿರುವ ಉತ್ತಮ ಮಳೆಯನ್ನು ನಿಖರವಾಗಿ ಡಿ.4ನೇ ಪಾಯಂಟ್’ಗೆ ತಂದು ಮಾಪನ ಮಾಡಬೇಕಿತ್ತು. ಎಷ್ಟು ಮಳೆ ಸುರಿಯಿತು? ಎಷ್ಟು ಪ್ರಮಾಣದ ನೀರು ಸಮುದ್ರಕ್ಕೆ ಹರಿದುಹೋಯಿತು ಎಂಬ ಬಗ್ಗೆ ಮಾಹಿತಿ ಕಲೆ ಹಾಕುವಲ್ಲಿ ಸರಕಾರ ಕೈಚೆಲ್ಲಿದೆ.

“2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಈ ಯೋಜನೆಗೆ ಅಡಿಗಲ್ಲು ಹಾಕಲಾಯಿತು. ಈಗ 2021. ಯೋಜನೆ ಮುಗಿಸಿ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು? ಮೊದಲು 8,000 ಕೋಟಿ, ನಂತರ 13,000 ಕೋಟಿಯಿಂದ ಶುರುವಾದ ಈ ಯೋಜನಾ ವೆಚ್ಚ ಈಗ 23,000 ಕೋಟಿಗೆ ಬಂದು ಮುಟ್ಟಿದ್ದು, ಅದಕ್ಕೆ ಸರಕಾರದಿಂದ ಕ್ಲಿಯೆರೆನ್ಸ್ ಪಡೆದುಕೊಳ್ಳಲು ವಿಶ್ವೇಶ್ವರಯ್ಯ ಜಲ ನಿಗಮದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.”

“ಭೂಸ್ವಾಧೀನ ಪ್ರಕಿಯೆ ವಿವಾದದಲ್ಲಿದೆ. ಈಗಾಗಲೇ ಭೂಮಿ ಕಳೆದುಕೊಂಡ ರೈತರಿಗೆ ವರ್ಷಗಳೇ ಉರುಳಿದರೂ ಪರಿಹಾರ ನೀಡಿಲ್ಲ. ಗುತ್ತಿಗೆದಾರರಿಗೆ ಹಣ ನೀಡಲು ಇರುವ ಆತುರ ರೈತರಿಗೆ ನೀಡಲು ಇಲ್ಲ. ಅದಕ್ಕೆ ದುಡ್ಡಿಲ್ಲ ಅನ್ನುತ್ತಿದೆ ಸರಕಾರ. ಆದರೆ, ಗುತ್ತಿಗೆದಾರರಿಗೆ ಪ್ಯಾಕೇಜುಗಳ ಲೆಕ್ಕದಂತೆ ಮೊದಲ ಹಂತದಲ್ಲಿ 4,115 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ 12,000 ಕೋಟಿ ರೂ. ಕೊಡಲು ಪ್ಯಾಕೇಜ್ ಮಾಡಿಕೊಂಡಿದೆ.”

“ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜನರ ಹೆಸರಿನಲ್ಲಿ ಯಥೇಚ್ಛವಾಗಿ ಹಣ ಖರ್ಚು ಮಾಡಲಾಗುತ್ತಿದೆ. ನನಗೆ ಅಧಿಕಾರಿಗಳಿಂದ ಸಿಕ್ಕಿದ ಮಾಹಿತಿ ಪ್ರಕಾರ ಈಗಾಗಲೇ ಏಳು ಅಡ್ಡಕಟ್ಟೆ (ವೈಯರ್) ಗಳನ್ನು ನಿರ್ಮಾಣ ಮಾಡಲಾಗಿದ್ದು, ಎಂಟನೇ ಅಡ್ಡಕಟ್ಟೆಯ ಕಾಮಗಾರಿ 70% ಮುಗಿದೆಯಂತೆ. ಇಷ್ಟು ಹೊತ್ತಿಗೆ ಎಂಟೂ ಅಡ್ಡಕಟ್ಟೆಗಳನ್ನು ಪೂರ್ಣ ಮಾಡಿ ನೀರನ್ನು ಪಂಪ್ ಮಾಡಬೇಕಿತ್ತು. ಏಳು ಅಡ್ಡಕಟ್ಟೆಗಳು ಸಿದ್ಧವಿದ್ದು, ಹರವನಹಳ್ಳಿ ಬಳಿ ನಾಲ್ಕು ನೀರಿನ ಸಂಗ್ರಹಗಾರಗಳು ಸಿದ್ಧ ಇವೆ. ಈ ಮಳೆಗಾಲದಲ್ಲೇ ನೀರು ಪಂಪ್ ಮಾಡಿದ್ದಿದ್ದರೆ ನೀರಿನ ಲಭ್ಯತೆಯ ಪ್ರಮಾಣ ತಿಳಿಯುತ್ತಿತ್ತು. ಅದನ್ನು ಸರಕಾರ ಮಾಡಿಲ್ಲ.

“ಎತ್ತಿನಹೊಳೆ ಅಡ್ಡಕಟ್ಟೆಗಳಿಂದ ಹರವನಹಳ್ಳಿಗೆ ನೀರು ಸಾಗಣೆ ಮಾಡುವ ಮಾರ್ಗದಲ್ಲಿನ 9 ಕಿ.ಮೀ. ಉದ್ದದ ಲೈನ್ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಭೂಸ್ವಾಧೀನ ಸಮಸ್ಯೆಯಿಂದ ಅದು ವಿಳಂಬವಾಗಿದ್ದು, ಅದನ್ನು ಕ್ಲಿಯರ್ ಮಾಡುವ ಕೆಲಸವನ್ನು ಸರಕಾರ ಮಾಡಿಲ್ಲ.

ಕೇವಲ ಲೈನ್ ಅಂದಾಜು ಮಾಡಿ ಕಾಮಗಾರಿ

“ಯಾವುದೇ ಯೋಜನೆ ಕಾರ್ಯಗತ ಮಾಡಬೇಕಾದರೆ, DPR (ಸಮಗ್ರ ಯೋಜನಾ ವರದಿ) ತಯಾರಿಸಿಯೇ ಮಾಡಬೇಕು. ಆದರೆ, ಎತ್ತಿನಹೊಳೆ ಬಗ್ಗೆ ಹಾಗೆ ಮಾಡದೇ ಕೇವಲ ಲೈನ್ ಅಂದಾಜು ಮಾಡಿ ಕಾಮಗಾರಿ ಮಾಡಲಾಗುತ್ತಿದೆ. ನಿರಂತರವಾಗಿ ಯೋಜನಾ ವೆಚ್ಚವನ್ನು ಮನಸೋಇಚ್ಛೆ ಹಿಗ್ಗಿಸಲಾಗುತ್ತಿದೆ. ಮುಂದೊಂದು ದಿನ ಇದೇ ದೊಡ್ಡ ಕರ್ಮಕಾಂಡ ಆಗುವ ಸಾಧ್ಯತೆ ಇದೆ.”

“ಈಗಾಗಲೇ 9,000 ಕೋಟಿಗೂ ಹೆಚ್ಚು ಹಣ ವೆಚ್ಚವಾಗಿದೆ ಎಂದು ಸರಕಾರವೇ ಹೇಳಿಕೊಂಡಿದೆ. ಆದರೆ, ಭೂಮಿ ಕಳೆದುಕೊಂಡವರ ಬಗ್ಗೆ ಈ ನಿರ್ಲಕ್ಯ ಏಕೆ? ಗುತ್ತಿಗೆದಾರರ ಮೇಲೆ ಇರುವಷ್ಟು ಪ್ರೀತಿ ರೈತರ ಮೇಲೆ ಏಕಿಲ್ಲ? ಗುತ್ತಿಗೆದಾರರ ಕಣ್ಣಿಗೆ ಬೆಣ್ಣೆ, ರೈತರ ಕಣ್ಣಿಗೆ ಸುಣ್ಣ ಏಕೆ?”

“ಕೊನೆಪಕ್ಷ ಮುಂದಿನ ಮುಂಗಾರಿನ ಹೊತ್ತಿಗಾದರೂ ನೆನೆಗುದಿಗೆ ಬಿದ್ದಿರುವ 9 ಕಿ.ಮೀ. ದೂರದ ಲೈನ್ ಕಾಮಗಾರಿ ಮುಗಿಸಿ ಹರವನಹಳ್ಳಿ ಜಲ ಸಂಗ್ರಹಗಾರಗಳಿಗೆ ನೀರು ಹರಿಸಲೇಬೇಕು. ಇದು ನನ್ನ ಆಗ್ರಹ. ಕೇವಲ 2-3 ತಿಂಗಳಲ್ಲಿ ಮಾತ್ರ ಸುರಿಯುವ ಮಳೆಯನ್ನೇ ಹಿಡಿದಿಟ್ಟುಕೊಳ್ಳದಿದ್ದರೆ ಈ ಯೋಜನೆಯ ಉದ್ದೇಶವೇ ಬುಡಮೇಲಾಗುತ್ತದೆ.”

“ಭೂ ಪರಿಹಾರ ವಿಳಂಬವಾದರೂ ಸಕಲೇಶಪುರ ಜನರು ಹೃದಯ ವೈಶಾಲ್ಯತೆ ತೋರಿದ್ದಾರೆ. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳ ಜನರೂ ತಮ್ಮ ಅಣ್ಣ ತಮ್ಮಂದಿರೆಂದು ಭಾವಿಸಿ ಯೋಜನೆ ಕಾಮಗಾರಿ ನಡೆಯಲು ಬಿಟ್ಟಿದ್ದಾರೆ. ಅದಕ್ಕಾಗಿ ಇಲ್ಲಿನ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.”

ವಿರೋಧವಿಲ್ಲ, ಆದರೆ ನೀರು ಹರಿಯಲೇಬೇಕು

“ಯೋಜನೆಯನ್ನು ಆರಂಭ ಮಾಡಿದಾಗ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ತಲಾ 5 ಟಿಎಂಸಿ ನೀರು ಹರಿಸುವುದಾಗಿ ಅಂದಿನ ಕಾಂಗ್ರೆಸ್ ಸರಕಾರ ಹೇಳಿತ್ತು. ಅದರಂತೆ ನೀರು ಹರಿಸಲೇಬೇಕು. ನೀರಾವರಿ ಯೋಜನೆಗಳಿಗೆ ನಮ್ಮ ವಿರೋಧವಿಲ್ಲ. ಆದರೆ, ಕೋಲಾರ ಜಿಲ್ಲೆಯ ಕಟ್ಟಕಡೆಯ ಜಾಗಕ್ಕೂ ನೀರು ಹರಿಯಬೇಕು. ಇಲ್ಲವಾದರೆ, ನಾವು ಸುಮ್ಮನಿರುವುದಿಲ್ಲ.”

“ತುಮಕೂರಿನಿಂದ ಕೋಲಾರದವರೆಗೆ ಯೋಜನೆ ವ್ಯಾಪ್ತಿಗೆ ತಂದಿರುವ ಜಿಲ್ಲೆಗಳ ಒಟ್ಟು 170 ಕೆರೆಗಳನ್ನು ತುಂಬಿಸುವುದು ಸೇರಿ ಎಲ್ಲ ಭಾಗಗಳಿಗೆ ಕುಡಿಯುವ ನೀರೊದಗಿಸುವ ವಿಚಾರದಲ್ಲಿ ನಾವು ರಾಜಿ ಆಗುವುದಿಲ್ಲ.

ದೇವರಾಯನದುರ್ಗದ ಬಳಿ 10 ಟಿಎಂಸಿ ಸಾಮರ್ಥ್ಯದ ಜಲ ಸಂಗ್ರಹಗಾರ ಮಾಡುತ್ತೇವೆ ಎಂದರು. ಅಲ್ಲಿ ಅರಣ್ಯ ಮುಳುಗಡೆ ಆಗುತ್ತದೆ ಎಂದ್ಹೇಳಿ ಭೈರಗೊಂಡ್ಲು ಸಮೀಪ 5 ಟಿಎಂಸಿ ಸಂಗ್ರಹಕಾರ ನಿರ್ಮಿಸುವುದಾಗಿ ಸರಕಾರ ಹೇಳಿತು. ಆದರೆ, ಈಗ ಅದೇ ಸರಕಾರವು ಭೈರಗೊಂಡ್ಲುವಿನಲ್ಲಿ 1.5-2 ಟಿಎಂಸಿ ಸಾಮರ್ಥ್ಯದ ಸಂಗ್ರಹಗಾರ ನಿರ್ಮಿಸಲು ತೀರ್ಮಾನ ಮಾಡಿಕೊಂಡಿದೆ. ಇದಕ್ಕೆ ನಮ್ಮ ಪಕ್ಷದ ವಿರೋಧವಿದೆ ಹಾಗೂ ನೀರಿನ ಕಡಿಮೆ ಸಂಗ್ರಹ ಕಡಿಮೆ ಮಾಡಿದರೆ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ಸಿಗುವುದಿಲ್ಲ. ಅಂಥ ಅನ್ಯಾಯ ಮಾಡಿದರೆ ಜೆಡಿಎಸ್ ಸುಮ್ಮನಿರುವುದಿಲ್ಲ.

ನೋಡೆಲ್ ಅಧಿಕಾರಿ ನೇಮಿಸಿ

ಎತ್ತಿನಹೊಳೆ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಮರ್ಥ ಆಧಿಕಾರಿಯೊಬ್ಬರನ್ನು ನೋಡೆಲ್ ಆಫಿಸರ್ ಆಗಿ ನೇಮಕ ಮಾಡುವಂತೆ ಮಾಜಿ ಮುಖ್ಯಮಂತ್ರಿಗಳು ಸರಕಾರಕ್ಕೆ ಸಲಹೆ ಮಾಡಿದರು.

ದೇವೇಗೌಡರು ಕೃಷ್ಣ ಮೇಲ್ದಂಡೆ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಐಎಎಸ್ ಅಧಿಕಾರಿ ಜಾಮ್ದಾರ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿದ್ದರು. ಅವರಿಗೆ ಪೂರ್ಣ ಅಧಿಕಾರ ನೀಡಿ ಯೋಜನೆ ಶೀಘ್ರವಾಗಿ ಕಾರ್ಯಗತ ಆಗುವಂತೆ ನೋಡಿಕೊಂಡಿದ್ದರು ಎಂದು ಅವರು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮುಂತಾದವರಿದ್ದರು.

Tags: chikkaballapurahd kumaraswamyirrigation projectjdskarnatakakolarsakleshpuryettinahole
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶಾಸಕ ಶ್ರೀನಿವಾಸ ಗೌಡರ ಮನೆಗೆ ಕೆಸಿ ವ್ಯಾಲಿ ನೀರು

ಶಾಸಕ ಶ್ರೀನಿವಾಸ ಗೌಡರ ಮನೆಗೆ ಕೆಸಿ ವ್ಯಾಲಿ ನೀರು

Leave a Reply Cancel reply

Your email address will not be published. Required fields are marked *

Recommended

ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

3 years ago
2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ