• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ತುಂಡಾದ ಕೆರೆಕಟ್ಟೆಗಳಲ್ಲಿ ಹರಿದ ರೈತರ ಕಣ್ಣೀರು!

cknewsnow desk by cknewsnow desk
October 17, 2021
in STATE
Reading Time: 2 mins read
0
ತುಂಡಾದ ಕೆರೆಕಟ್ಟೆಗಳಲ್ಲಿ ಹರಿದ ರೈತರ ಕಣ್ಣೀರು!
989
VIEWS
FacebookTwitterWhatsuplinkedinEmail

ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಉಪೇಕ್ಷೆ, ಕಳಪೆ ನಿರ್ವಹಣೆ; ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಕಟ್ಟೆ ಒಡೆದ ಕೆರೆಗಳ ವೀಕ್ಷಣೆ

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗೂ ಯುವಶಕ್ತಿ ತಂಡದಿಂದ ಇಂದು ಶಿಡ್ಲಘಟ್ಟ ತಾಲೂಕಿನ ಕೆರೆಕಟ್ಟೆ ಒಡೆದ ತಿಮ್ಮನಾಯಕನಹಳ್ಳಿ ಪಂಚಾಯತಿ ವ್ಯಾಪ್ತಿಯ ನಲ್ಲೊಜನಹಳ್ಳಿ ಅಗ್ರಹಾರ ಕೆರೆ, ಚೊಕ್ಕನಹಳ್ಳಿ ನಾರಾಯಣರೆಡ್ಡಿ ಕೆರೆ ಮತ್ತು ಬಂದರಘಟ್ಟ ಕೆರೆಗಳನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಕೆರೆ ಅಚ್ಚುಕಟ್ಟು ಮತ್ತು ಸುತ್ತಲಿನ ಹಳ್ಳಿಗಳಾದ ನಲ್ಲೋಜನಹಳ್ಳಿ, ಆನೆಮಡಗು, ಪಿಲ್ಲಗುಂಡ್ಲಹಳ್ಳಿ, ನಾಚಗಾನಹಳ್ಳಿ, ಎರ್ರಹಳ್ಳಿ, ಕುದುಪುಕುಂಟೆ, ತಿಮ್ಮನಾಯಕನಹಳ್ಳಿ, ಗೊರ್ಲಗುಮ್ಮನಹಳ್ಳಿ, ದಡಮಘಟ್ಟ ಹಾಗೂ ರಾಯಪ್ಪನಹಳ್ಳಿ ಗ್ರಾಮಗಳ ಐವತ್ತಕ್ಕೂ ಹೆಚ್ಚು ರೈತರು ತಮ್ಮ ನೋವನ್ನು ತಂಡದ ಮುಂದೆ ತೋಡಿಕೊಂಡರು.

ಪ್ರಮುಖವಾಗಿ ನಲ್ಲೋಜನಹಳ್ಳಿಯ ರೈತ ಮಹಿಳೆ ಅನಿತಾ ಅವರು, “ಕಳೆದ 10 ವರ್ಷಗಳಲ್ಲಿ ತೀವ್ರ ಬರಗಾಲದಿಂದ ಕೃಷಿಗೆ ನೀರಿಲ್ಲದೆ ತಮ್ಮ ಊರಿನ ಪುರುಷರು ಅಡುಗೆ ಕೆಲಸಕ್ಕಾಗಿ ನೂರಾರು ಕಿ.ಮೀ ದೂರದ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಊರುಗಳಿಗೆ ಸುತ್ತಿ ಜೀವನ ಸಾಗಿಸುತ್ತಿದ್ದಾರೆ. ರೈತ ಮಹಿಳೆಯರು ಹಸುಗಳನ್ನು ಸಾಕಿ ಹೈನುಗಾರಿಕೆಯಿಂದ ತಮ್ಮ ಮಕ್ಕಳ ಭವಿಷ್ಯವನ್ನು ಕಟ್ಟುತ್ತಿದ್ದೇವೆ. ಈಗ ಕೆರೆ ತುಂಬಿದ್ದರಿಂದ ಇನ್ನು ತಮ್ಮ ಜಮೀನಿನಲ್ಲಿ ಹೆಚ್ಚಿನ ಕೃಷಿ ಮಾಡಬಹುದೆಂಬ ನೀರೀಕ್ಷೆಯಿತ್ತು. ಆದರೆ, ಈಗ ನಮ್ಮಗಳ ಜೀವನ ಯಥಾಸ್ಥಿತಿ ಕೆಲಸಕ್ಕಾಗಿ ಅಲೆದಾಡುವಂತಾಗಿದೆ” ಎಂದು ಕಣ್ಣೀರಿಟ್ಟರು.

ಪ್ರಗತಿಪರ ರೈತ ಆನೆಮಡಗು ಶಿವಣ್ಣ ಅವರು ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದ್ದು ಹೀಗೆ; “ಕಳೆದ 10 ವರ್ಷಗಳಲ್ಲಿ 4 ಸಲ ಕೆರೆ ಕಟ್ಟೆ ಒಡೆದರೂ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ  ಸ್ಥಳೀಯ ಗುತ್ತಿಗೆದಾರರ ಕುಮ್ಮಕ್ಕಿನಿಂದ ಅವೈಜ್ಞಾನಿಕವಾದ ದುರಸ್ತಿಯಾಗಿ ಈ ಸ್ಥಿತಿ ಬಂದಿದೆ. ಈ ಬಗ್ಗೆ ತನಿಖೆಯಾಗಬೇಕು” ಎಂದು ಒತ್ತಾಯಿಸಿದರು.

ಕೆರೆ ಕಟ್ಟೆ ಮೇಲೆ ಮರ ಗಿಡಗಳು ಬೆಳೆದಿರುವುದರಿಂದ ಬೇರುಗಳು ಒಣಗಿ, ರಂಧ್ರಗಳು ಏರ್ಪಟ್ಟು ನಂತರ ನೀರು ಜಿನುಗುವುದರಿಂದ ಕಟ್ಟೆ ಒಡೆಯುವ ಸಾಧ್ಯತೆ ಇದ್ದು, ಅಧಿಕಾರಿಗಳು ಕೆರೆ ಕಟ್ಟೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಅವರು ದೂರಿದರು.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆರ್.ಆಂಜನೇಯರೆಡ್ಡಿ ಮಾತನಾಡಿ, “1997ರಲ್ಲಿ ಅವಿಭಜಿತ ಕೋಲಾರ ಜಿಲ್ಲಾಧಿಕಾರಿ ಸಂಜಯ್ ದಾಸ್ ಗುಪ್ತ ಅವರು ISRO  ವಿಜ್ಞಾನಿಗಳಿಂದ ಜಿಲ್ಲೆಯ ಸುಮಾರು 4 ಸಾವಿರ ಕೆರೆಗಳ ಪುನಶ್ಚೇತನ ಹಾಗೂ ಸಮರ್ಪಕ ನಿರ್ವಹಣೆಗಾಗಿ ಮಾಡಿಸಿದ್ದ ವೈಜ್ಞಾನಿಕ ವರದಿ ಆಧರಿಸಿ ಈ ಕೆರೆಯನ್ನು ಪುನಶ್ಚೇತನಗೊಳಿಸಬೇಕು. ನಮ್ಮ ಗ್ರಾಮೀಣ ಪರಿಸರದಲ್ಲಿರುವ ಕೆರೆ, ಕುಂಟೆ, ಸರಕಾರಿ  ಜಮೀನುಗಳು, ಬೆಟ್ಟಗಳು ಯಾವುದೇ ರಾಜಕಾರಣಿಗಳು, ಅಧಿಕಾರಿಗಳು ಅಥವಾ ಗುತ್ತಿಗೆದಾರರ ಆಸ್ತಿಯಲ್ಲ. ಅದೆಲ್ಲವೂ ಸಮುದಾಯದ ಆಸ್ತಿಯಾಗಿದ್ದು, ಅದನ್ನು ಉಳಿಸುವ ಜವಾಬ್ದಾರಿಯನ್ನು ರೈತರು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕೆರೆ ವೀಕ್ಷಣೆ ಬಳಿಕ, ಎಲ್ಲಾ ರೈತರು, ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗೂ ಯುವಶಕ್ತಿ ವತಿಯಿಂದ ಕೆಲ ಮಹತ್ವದ ನಿರರ್ಣಯಗಳನ್ನು ಕೈಗೊಳ್ಳಲಾಗಿದ್ದು, ಅವು ಹೀಗಿವೆ;

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ವಿಪತ್ತಿನಿಂದ ನಷ್ಟಕ್ಕೊಳಗಾದ ಎಲ್ಲಾ ರೈತರ ಬೆಳೆ ಹಾಗು ಆಸ್ತಿ ನಷ್ಟಗಳ ಅಧ್ಯಯನ ನಡೆಸಿ ಎಕೆರೆಗೆ 2 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು.

ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರವು ಅಗ್ರಹಾರ ಕೆರೆಯನ್ನು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಯನ ಮಾಡಿಸಿ DPR ತಯಾರಿಸಿ, ಕಟ್ಟೆಯನ್ನು ವೈಜಾನಿಕವಾಗಿ ಸಂಪೂರ್ಣ ಮರು ನಿರ್ಮಾಣ ಮಾಡಬೇಕು.

ಕೆರೆ ಒತ್ತುವರಿ ತೆರವು, ಕಟ್ಟೆ ನಿರ್ವಹಣೆ ಕಾವಲು ಹಾಗೂ ಕೆರೆಯ ಸಂಪೂರ್ಣ ಅಭಿವೃದ್ಧಿಗೆ ಶಾಶ್ವತ ಪರಿಹಾರ ರೂಪಿಸುವುದರ ಜತೆಗೆ; ಸಾರ್ವಜನಿಕ ಸಹಭಾಗಿತ್ವಕ್ಕಾಗಿ ಅಚ್ಚುಕಟ್ಟು ಪ್ರದೇಶದ ರೈತರನ್ನೊಳಗೊಂಡ ಅಗ್ರಹಾರ ಕೆರೆ ಸಂರಕ್ಷಣೆ ಸಮಿತಿ ರಚನೆ ಮಾಡುವುದು.

ಆನೆಮಡಗು-ದಡಮಘಟ್ಟ ಮಧ್ಯೆ ಅಗ್ರಹಾರ ಕೆರೆ ಹಾಗೂ ಗೊರ್ಲಗುಮ್ಮನಹಳ್ಳಿ ಕೆರೆ ಕಟ್ಟೆಗಳ ಮೇಲೆ ರಸ್ತೆ ಮಾಡುವುದರಿಂದ ಈ ಹಳ್ಳಿಗಳ ಸಂಪರ್ಕವು ಈಗಿನ 10 ಕಿ.ಮೀ ಅಂತರದ ಬದಲು 3 ಕಿ.ಮೀ ಆಗುವುದರಿಂದ ಈ ಭಾಗದ ರೈತರಿಗೆ ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವ, ಇತರೆ ಕೃಷಿ ಅವಲಂಭಿತ ಸಾಗಣೆ ವೆಚ್ಚ ಕಡಿಮೆಯಾಗುವುದು. ಆದ್ದರಿಂದ ಈ ರಸ್ತೆ ಅಭಿವೃದ್ಧಿಪಡಿಸಬೇಕು. 

ಈ ಸಂದರ್ಭದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳಾದ ನಾಗದೇನಹಳ್ಳಿ ನಾರಾಯಣಸ್ವಾಮಿ, ಆನೂರು ದೇವರಾಜ್, ಅಬ್ಲೂಡು ದೇವರಾಜ್, ಸ್ಥಳೀಯ ಮುಖಂಡರಾದ ಎರಹಳ್ಳಿ ವೈ.ಕೆ.ಮಂಜುನಾಥ್, ರಾಯಪ್ಪನಹಳ್ಳಿ ನಾಗರಾಜರೆಡ್ಡಿ, ನಾಚಗಾನಹಳ್ಳಿ ನಾರಾಯಣಸ್ವಾಮಿ, ಆನೆಮಡಗು ಶಿವಣ್ಣ,  ಎನ್.ನಾರಾಯಣಸ್ವಾಮಿ, ಮಂಜುನಾಥ್, ಗಂಗಾಧರ್ ತಿಮ್ಮನಾಯಕನಹಳ್ಳಿ ಟಿ.ಎನ್.ಬಚ್ಚರೆಡ್ಡಿ, ಕುರುಬರಹಳ್ಳಿ ಕೆ.ವಿ.ಬೈರಾರೆಡ್ಡಿ ಗೋಣಿಮರದಹಳ್ಳಿ ಎಂ.ವೆಂಕಟರೆಡ್ಡಿ, ಭೈರೇಗೌಡ, ಕುದುಪಕುಂಟೆ ಶ್ರೀನಿವಾಸ್, ದಡಮಘಟ್ಟ ಗೊರ್ಲಪ್ಪ, ಚೊಕ್ಕನಹಳ್ಳಿ ರಮೇಶ್, ಬಂಧರಘಟ್ಟ ಭೈರಾರೆಡ್ಡಿ, ಕೋನಪ್ಪರೆಡ್ಡಿ ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.

Tags: chikkaballapuracknewsnowkarnatakalakesnewsrains
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆಯಲ್ಲಿ ಶ್ರೀ ತ್ರಿಮತಾಚಾರ್ಯ ಗಾಯತ್ರಿ ಮಂದಿರ 33ನೇ ವರ್ಷದ ವಾರ್ಷಿಕೋತ್ಸವ

ಗುಡಿಬಂಡೆಯಲ್ಲಿ ಶ್ರೀ ತ್ರಿಮತಾಚಾರ್ಯ ಗಾಯತ್ರಿ ಮಂದಿರ 33ನೇ ವರ್ಷದ ವಾರ್ಷಿಕೋತ್ಸವ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಜವಳಿ & ಫಾರ್ಮಾ ಉದ್ಯಮಗಳ ಸ್ಥಾಪನೆ

ಚಿಕ್ಕಬಳ್ಳಾಪುರದಲ್ಲಿ ಜವಳಿ & ಫಾರ್ಮಾ ಉದ್ಯಮಗಳ ಸ್ಥಾಪನೆ

4 years ago
ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ; ಆಸ್ಪತ್ರೆಗೆ ದೇಹದಾನ

ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ; ಆಸ್ಪತ್ರೆಗೆ ದೇಹದಾನ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ