• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್

cknewsnow desk by cknewsnow desk
October 20, 2021
in CHIKKABALLAPUR, KOLAR, STATE
Reading Time: 1 min read
0
ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್
1.2k
VIEWS
FacebookTwitterWhatsuplinkedinEmail

ನೂರು ಜನ ಅಡ್ಡ ಬಂದರೂ ಕೋಮುಲ್ ವಿಭಜಿಸುವುದು ಖಚಿತ ಎಂದ ಸಚಿವರು

ಚಿಕ್ಕಬಳ್ಳಾಪುರ: ಶಾಸಕರಾದ ಶಿವಶಂಕರ ರೆಡ್ಡಿ, ರಮೇಶ್ ಕುಮಾರ್ ಅವರಂತಹ ನೂರು ಜನ ಅಡ್ಡ ಬಂದರೂ ಕೋಮುಲ್ ವಿಭಜಿಸುವುದಂತೂ ಖಚಿತ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ ಸಾಲ ವಿತರಣೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಬೇರ್ಪಡಿಸಲು ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಪತ್ರ ಬರೆದಿದ್ದರು. ಆದರೆ ಅವರ ಕೈಯಲ್ಲಿ ಆಗಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಮ್ಮ ಜಿಲ್ಲೆಯ ಪಾಲು ನಮಗೆ ಸಿಗಬೇಕು ಎಂದು ಕೋರಿದ್ದೇನೆ. ಪ್ರತಿ ಬಾರಿ ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟಕ್ಕೆ ಚಿಕ್ಕಬಳ್ಳಾಪುರದ ರೈತರು ಹೋಗಬೇಕೆಂದರೆ ಸಾಧ್ಯವಿಲ್ಲ. ಇದರಲ್ಲಿ ಶಿವಶಂಕರರೆಡ್ಡಿ ಅವರು ರಾಜಕೀಯ ಮಾಡಬಾರದು ಎಂದರು.

  • ರಮೇಶ್ ಕುಮಾರ್

ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಶಾಸಕ ರಮೇಶ್ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಭಜನೆಗೆ ಬಿಡುತ್ತಿಲ್ಲ. ಶ್ರೀನಿವಾಸಗೌಡರು ರಮೇಶ್ ಕುಮಾರ್ ಅವರಿಂದ ಮಕ್ಮಲ್ ಟೋಪಿ ಹಾಕಿಸಿಕೊಳ್ಳುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಬೆರೆಸಲಾಗುತ್ತಿದೆ. ಇದರಲ್ಲಿ ಪಾರದರ್ಶಕ ತನಿಖೆಯಾಗಬೇಕಿದ್ದು, ತನಿಖೆಗೆ ಒಪ್ಪದೆ ತಡೆಯಾಜ್ಞೆ ತಂದಿದ್ದಾರೆ. ಇದರಲ್ಲೇ ಕಳ್ಳರು ಯಾರು ಎಂದು ಗೊತ್ತಾಗುತ್ತದೆ. ಸಾಚ ಆಗಿದ್ದರೆ ತನಿಖೆ ಆಗಿ ಸತ್ಯ ಎಂದು ಹೇಳುತ್ತಿದ್ದರು. ಸತ್ಯ ಹೊರಗೆ ಬಂದರೆ ಜೈಲಿಗೆ ಹೋಗುತ್ತೀರಿ ಎಂದು ಗೊತ್ತಿದೆ. ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಹೊರಗೆಳೆಯದೆ ನಾನು ವಿರಮಿಸುವುದಿಲ್ಲ. ಇಂತಹ ಭ್ರಷ್ಟಾಚಾರಿಗಳಿಗೆ ಸಹಕಾರ ಇಲಾಖೆಯಲ್ಲಿ ಅವಕಾಶವಿದ್ದು, ಇದನ್ನು ಮುಖ್ಯಮಂತ್ರಿಗಳು, ಸಹಕಾರ ಸಚಿವರು ಗಮನಿಸಿದ್ದಾರೆ ಎಂದರು.

ಗೌರಿಬಿದನೂರಿಗೆ ಶಾಸಕರು ನೀರು ನೀಡಲಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಮಾಡುತ್ತೇನೆ. ಮಂಚೇನಹಳ್ಳಿಯಲ್ಲಿ ತಾಯಿ ಮತ್ತು ಶಿಶು ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಗೌರಿಬಿದನೂರಿನಲ್ಲೂ ತಾಲೂಕು ಆಸ್ಪತ್ರೆ ನಿರ್ಮಿಸಲಾಗುವುದು. ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಮುಂದಿನ ಮೂರು ತಿಂಗಳೊಳಗೆ ಜಮೀನು ನೀಡಲಾಗುವುದು. ಎತ್ತಿನಹೊಳೆ ಯೋಜನೆಯಡಿ ಹೆಚ್ಚು ಅನುದಾನ ನೀಡಿದ್ದು, ಶೀಘ್ರದಲ್ಲೇ ನೀರು ನೀಡಲಾಗುವುದು. ಕೃಷ್ಣಾ ನದಿ ನೀರಿನ ಪಾಲನ್ನು ಈ ಭಾಗದ ರೈತರಿಗೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ. ಆಂಧ್ರಪ್ರದೇಶದಿಂದಲೂ ನೀರು ಹಂಚಿಕೆ ಮಾಡಲು ಚರ್ಚಿಸಲಾಗಿದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಹೈನುಗಾರಿಕೆ ಉಪಕಸುಬಾಗಿದ್ದು, ಇದಕ್ಕಾಗಿ ಕೋಮುಲ್ ವಿಭಜಿಸಬೇಕಿದೆ. ಇದಕ್ಕೆ ಯಾವ ದೊಣ್ಣೆನಾಯಕರ ಅಪ್ಪಣೆ ಬೇಕಿಲ್ಲ. ಆದರೆ ಇಂದು ಕೆಲ ಸ್ವಾರ್ಥಿಗಳು ಅವರ ಕಪಿಮುಷ್ಠಿಯಲ್ಲಿ ಡಿಸಿಸಿ ಬ್ಯಾಂಕ್, ಕೋಮುಲ್ ಅನ್ನು ಇಟ್ಟುಕೊಂಡು ಅದರಿಂದ ರಾಜಕೀಯ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ.

ಡಾ.ಕೆ.ಸುಧಾಕರ್‌, ಆರೋಗ್ಯ ಸಚಿವ & ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ

ಜಿಲ್ಲೆಗೆ ನ್ಯಾಯ ತಂದುಕೊಡುತ್ತೇನೆ

ಡಿಸಿಸಿ ಬ್ಯಾಂಕ್ ನಡಿ ಎರಡೂವರೆ ಸಾವಿರ ಸಂಘಗಳನ್ನು ರಚಿಸಲಾಗಿದೆ. ಇದಕ್ಕೆ ಎಷ್ಟು ಸಾಲ ನೀಡಲಾಗಿದೆ ಎಂದು ಕೇಳಬೇಕಿದೆ. ಕೆಜಿಎಫ್ ಹಾಗೂ ಶ್ರೀನಿವಾಸಪುರಕ್ಕೆ 300-400 ಕೋಟಿ ರೂ. ನೀಡಲಾಗುತ್ತಿದೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣವಾಗಿದೆ. ಡಿಸಿಸಿ ಬ್ಯಾಂಕ್ ಯಾರಪ್ಪನ ಆಸ್ತಿಯೂ ಅಲ್ಲ. ಡಿಸಿಸಿ ಬ್ಯಾಂಕ್ ಗೋವಿಂದೇಗೌಡರದ್ದೂ ಅಲ್ಲ, ರಮೇಶ್ ಕುಮಾರ್ ಅವರದ್ದೂ ಅಲ್ಲ. ಜಿಲ್ಲೆಗೆ ಸಿಗಬೇಕಾದ ಪಾಲನ್ನು ನ್ಯಾಯಯುತವಾಗಿ ತಂದುಕೊಡುತ್ತೇನೆ. ಇಲ್ಲದಿದ್ದರೆ ಸಚಿವನಾಗಿ ಮುಂದುವರಿಯುವುದಿಲ್ಲ ಎಂದರು.

ಬ್ಯಾಂಕ್‍ನ ತನಿಖೆಗೂ ಅಡ್ಡಿಪಡಿಸಿದ್ದಾರೆ. ಇದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದು, ಅವರಂತಹ ಡಂಭಾಚಾರದ ವ್ಯಕ್ತಿಯನ್ನು ಜೀವನದಲ್ಲೇ ನೋಡಿಲ್ಲ. ಶ್ರೀನಿವಾಸಪುರದ ಜನರು ಅಮಾಯಕರಾಗಿ ಅವರನ್ನು ನಂಬುತ್ತಿದ್ದಾರೆ ಎಂದರು.

Tags: chikkaballapuradcc bankkarnatakakolarkr ramesh kumarminsiter dr k sudhakarPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಾಲ್ಮೀಕಿ ನಿಜವಾದ ಜಗದ್ಗುರು

ವಾಲ್ಮೀಕಿ ನಿಜವಾದ ಜಗದ್ಗುರು

Leave a Reply Cancel reply

Your email address will not be published. Required fields are marked *

Recommended

ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

5 years ago
ಕಹಿ ಮರೆಯೋಣ..

ಕಹಿ ಮರೆಯೋಣ..

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ