• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆಂದು ಎಲ್ಲೂ ಹೇಳಿಲ್ಲ

cknewsnow desk by cknewsnow desk
October 21, 2021
in POLITICS, STATE
Reading Time: 1 min read
0
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ
1k
VIEWS
FacebookTwitterWhatsuplinkedinEmail

ಅಧಿಕಾರ ದುರ್ಬಳಕೆ ಬಗ್ಗೆ ಮಾತ್ರ ಹೇಳಿದ್ದೇನೆ ಎಂದ ಸಚಿವ ಡಾ.ಕೆ.ಸುಧಾಕರ್

ಹಾನಗಲ್: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಏನು ಹೇಳಿದ್ದೇನೆ ಎಂದು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಹಕಾರ ಕ್ಷೇತ್ರದಲ್ಲಿ ‘ಸರ್ವರಿಗೂ ಸಮಬಾಳು’ ಎಂಬ ಪರಿಕಲ್ಪನೆಯಿದೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೋಮುಲ್ ಹಾಗೂ ಡಿಸಿಸಿ ಬ್ಯಾಂಕ್ ಅನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಡಿಸಿಸಿ ಬ್ಯಾಂಕ್’ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರೇ ಆದ ಕೆ.ಎಚ್.ಮುನಿಯಪ್ಪ ಹೇಳಿದ್ದರು. ಆಗಿನ ಸಿಎಂ ಸಿದ್ದರಾಮಯ್ಯನವರಿಗೆ ಅವರೇ ಈ ಬಗ್ಗೆ ಪತ್ರ ನೀಡಿದ್ದರು. ಆಗ ಮುಖ್ಯಮಂತ್ರಿಗಳಾಗಿದ್ದವರು ತನಿಖೆಗೆ ಆದೇಶ ನೀಡಬಹುದಿತ್ತು ಎಂದರು.

  • ರಮೇಶ್ ಕುಮಾರ್

ಸಹಕಾರ ಸಚಿವ ಎಸ್.ಟಿ.ಸೋಮೇಶೇಖರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ತನಿಖೆಗೆ ಆದೇಶಿಸಿದ್ದಾರೆ. ಆದ್ದರಿಂದ ತಪ್ಪಿತಸ್ಥರು ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದ್ದೇನೆ. ಆದರೆ ರಮೇಶ್ ಕುಮಾರ್ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅವರೇ ರಿಂಗ್ ಮಾಸ್ಟರ್ ಆಗಿದ್ದು, ರಾಜಕೀಯ ಲಾಭಕ್ಕಾಗಿ ಎರಡೂ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಅನೈತಿಕ ಮಾರ್ಗ, ಹಣದ ಹೊಳೆ ಹರಿಸುವ ಆಲೋಚನೆ ಇಲ್ಲ

ಅನೇಕ ಹಿರಿಯರಿಗೆ ಮುಖ್ಯಮಂತ್ರಿಗಳು ಚುನಾವಣೆಯ ಪ್ರಮುಖ ಜವಾಬ್ದಾರಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಶೇ.2ರಷ್ಟು ಬಿಜೆಪಿಗೆ ಮತಬ್ಯಾಂಕ್ ಇದ್ದು, ಅದನ್ನು ಶೇ.50ಕ್ಕೆ ಏರಿಸಲಾಗಿದೆ. ಎಂಟಿಬಿ ನಾಗರಾಜ್ ಕೂಡ ಅನುಭವಿಗಳಾಗಿದ್ದಾರೆ. ಸಚಿವ ಸಂಪುಟದ ಸದಸ್ಯರಿಗೆ ಚುನಾವಣೆಯ ಹೊಣೆ ನೀಡಲಾಗಿದೆ. ಜನರ ಮನಸ್ಸು ಗೆಲ್ಲುವ ಕೆಲಸ, ಹಾನಗಲ್ ನ ಜನರಿಗೆ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅನೈತಿಕ ಮಾರ್ಗ, ಹಣದ ಹೊಳೆ ಹರಿಸುವ ಆಲೋಚನೆ ನಮಗಿಲ್ಲ. ಕಾಂಗ್ರೆಸ್ ಆಡಳಿತವಿದ್ದಾಗ ಆ ರೀತಿ ಮಾಡಿದ್ದು, ಅವರ ಅನುಭವವನ್ನು ಅವರೇ ಹಂಚಿಕೊಳ್ಳುತ್ತಿದ್ದಾರೆ ಎಂದರು.

ಹಾನಗಲ್ ನ ಜನರು ಪ್ರತಿ ನಾಯಕರ ಮಾತು ಗಮನಿಸುತ್ತಿದ್ದಾರೆ. ವೈಯಕ್ತಿಕ ನಿಂದನೆ, ಏಕವಚನ ಪ್ರಯೋಗವನ್ನು ನೋಡುತ್ತಿದ್ದಾರೆ. ಪ್ರಧಾನಿಗಳನ್ನು ಕೂಡ ಏಕವಚನದಲ್ಲಿ ಕರೆಯಲಾಗುತ್ತಿದೆ. ಗ್ರಾಮೀಣ ಜನರು ಸ್ವಾಭಿಮಾನಿಗಳಾಗಿದ್ದು, ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಮಾಜಿ ಶಾಸಕರ ಬಳಗಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಭಾವನಾತ್ಮಕ ಸಂಬಂಧವಾಗಿದೆ. ಬಿಜೆಪಿ ಸುಲಭವಾಗಿ ಗೆಲ್ಲಲಿದೆ ಎಂದರು.

ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೋವಿಡ್ ಚರ್ಚೆಗೆ ಉತ್ತರ ಕೇಳದೆ ಪಲಾಯನ ಮಾಡಿದರು. ಅವರೆಲ್ಲ ಸುಳ್ಳು ಆಪಾದನೆ ಮಾಡುತ್ತಿರುವುದನ್ನು ನಾನು ಕಡತಕ್ಕೆ ಕಳುಹಿಸಿಕೊಟ್ಟಿದ್ದೇನೆ. ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ. ಅತ್ಯಂತ ಪಾರದರ್ಶಕ, ಪ್ರಾಮಾಣಿಕತೆಯಿಂದ ಕೋವಿಡ್ ನಿರ್ವಹಣೆಯನ್ನು ಸರ್ಕಾರ ಮಾಡಿದೆ. ಈ ವಿಚಾರದಲ್ಲಿ ಕಾಂಗ್ರೆಸ್ಸಿಗರು ಕೆಸರೆರೆಚಾಟ ಮಾಡಬಾರದು ಎಂದರು.

ದಾಖಲೆಯ ಲಸಿಕೆ ಅಭಿಯಾನ

6.20 ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಇಂದು ಬೆಳಗ್ಗೆ ಭಾರತದಲ್ಲಿ 100 ಕೋಟಿ ಲಸಿಕೆ ನೀಡಲಾಗಿದೆ. ಇದು ಇಡೀ ಜಗತ್ತಿನಲ್ಲೇ ಪ್ರಥಮ ದಾಖಲೆಯಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿರುವುದರಿಂದ ಸೋಂಕು ಹರಡುವಿಕೆ ಕಡಿಮೆಯಾಗಲಿದೆ. ಎರಡನೇ ಡೋಸ್ ಕೂಡ ಶೀಘ್ರ ನೀಡಲಾಗುವುದು. ಲಸಿಕೆ ಅಭಿಯಾನಕ್ಕೆ ಸಹಕರಿಸಿದ ಎಲ್ಲ ಆರೋಗ್ಯ ಸಿಬ್ಬಂದಿ, ನಾಗರಿಕರು ಹಾಗೂ ಆವಿಷ್ಕಾರ ಮಾಡಿದ ವಿಜ್ಞಾನಿಗಳಿಗೆ ಧನ್ಯವಾದಗಳು ಎಂದು ಹೇಳಿದರು.

Tags: chikkaballapuracknewsnowdcc bank controversydr k sudhakarkarnatakakolarkr ramesh kumarminister vs former speakerPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪೊಲೀಸರ ಕ್ವಾಟ್ರಸುಗಳ ಕುಸಿತಕ್ಕೆ ಕೊನೆಯೇ ಇಲ್ಲ!

ಪೊಲೀಸರ ಕ್ವಾಟ್ರಸುಗಳ ಕುಸಿತಕ್ಕೆ ಕೊನೆಯೇ ಇಲ್ಲ!

Leave a Reply Cancel reply

Your email address will not be published. Required fields are marked *

Recommended

ತಮಿಳುನಾಡು ಮೇಕೆದಾಟು ನಿರ್ಣಯಕ್ಕೆ ಬೆಲೆ ಇಲ್ಲ; ನಾಳೆ ಖಂಡನಾ ನಿರ್ಣಯ

ತಮಿಳುನಾಡು ಮೇಕೆದಾಟು ನಿರ್ಣಯಕ್ಕೆ ಬೆಲೆ ಇಲ್ಲ; ನಾಳೆ ಖಂಡನಾ ನಿರ್ಣಯ

3 years ago
2022ಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಇಂಟರ್ʼನ್ಯಾಷನಲ್ ಇನ್ಸಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್ ಸಂಸ್ಥೆ ಲೋಕಾರ್ಪಣೆ

2022ಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಇಂಟರ್ʼನ್ಯಾಷನಲ್ ಇನ್ಸಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್ ಸಂಸ್ಥೆ ಲೋಕಾರ್ಪಣೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ