• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹು

cknewsnow desk by cknewsnow desk
October 21, 2021
in POLITICS, STATE
Reading Time: 1 min read
0
2023 ಚುನಾವಣೆಯಲ್ಲಿ 30-35 ಮಹಿಳೆಯರಿಗೆ ಜೆಡಿಎಸ್ ಟಿಕೆಟ್
930
VIEWS
FacebookTwitterWhatsuplinkedinEmail

ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ನೇರ ಆರೋಪ

  • ‘ಮಂತ್ಲಿʼಗಾಗಿ ಅಧಿಕಾರಿಗಳಿಂದಲೇ ಕುಮ್ಮಕ್ಕು
  • ವಿಜಯಪುರ ಜಿಲ್ಲೆಯಲ್ಲಿ ಅವ್ಯಾಹತ ದಂಧೆ
  • ಬೊಮ್ಮಾಯಿ ಎಂದೂ ಕಾಮನ್‌ಮ್ಯಾನ್ ಆಗಲು ಸಾಧ್ಯವಿಲ್ಲ



ಸಿಂಧಗಿ: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್‌ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಸಿಂಧಗಿ ಕ್ಷೇತ್ರದ ಉಪ ಚುಣಾವಣೆ ನಿಮಿತ್ತ ಪ್ರಚಾರ ಕೈಗೊಂಡಿರುವ ಅವರು ಕ್ಷೇತ್ರದ ಯಂಕಂಚಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಈ ದಂಧೆಯ ಕಬಂಧಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್‌ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ʼಮಂತ್ಲಿʼ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್‌ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್‌ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಲಾಟರಿಗಳನ್ನು ನಿಷೇಧ ಮಾಡಿದ್ದೆ. ಇಂಥ ದಂಧೆಗಳಿಗೆ ಕಠಿಣವಾಗಿ ಕಡಿವಾಣ ಹಾಕಿದ್ದೆ. ಆದರೆ, ಈಗ ಅವೆಲ್ಲ ಬೇರೆ ಬೆರೆ ರೂಪಗಳಲ್ಲಿ ಅನಧಿಕೃತವಾಗಿ ಮತ್ತೆ ಕಾಣಿಸಿಕೊಂಡಿದ್ದು, ಪೊಲೀಸ್‌ ಇಲಾಖೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ದೊಡ್ಡ ಹಂತದಲ್ಲಿ ಇದರಲ್ಲಿ ಶಾಮೀಲಾಗಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ, ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಈ ದಂಧೆಗಳು ಸ್ವೇಚ್ಛಾಚಾರದಿಂದ ನಡೆಯುತ್ತಿವೆ. ಶ್ರಮಜೀವಿಗಳ ಹಣ ಹಾಳಾಗುತ್ತಿದೆ. ಸರಕಾರ ಅವುಗಳನ್ನು ಹತ್ತಿಕ್ಕುವ ಬದಲು ಸುಮ್ಮನಿದೆ ಎಂದು ಅವರು ಟೀಕಿಸಿದರು.

ಬಿಜೆಪಿಯವರೆಂದೂ ಕಾಮನ್‌ಮ್ಯಾನ್‌ಗಳಲ್ಲ


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದೂ ಕಾಮನ್‌ಮ್ಯಾನ್‌ ಆಗಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮುಖ್ಯಮಂತ್ರಿಗಳು ಸಂಚಾರ ಮಾಡುವ ರಸ್ತೆಗಳಲ್ಲಿ ಹಂಪ್ಸ್‌ʼಗಳನ್ನು ತೆಗೆಯಲಾಗಿದೆ, ರಾತ್ರಿ ಹೊತ್ತು ಅವರಿಗೆ ಎಸ್ಕಾರ್ಟ್‌ ಕೊಡಲಾಗುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು; ಈ ಬಗ್ಗೆ ನನಗೂ ಮಾಹಿತಿ ಬಂದಿದೆ ಎಂದರು.

ಬಿಜೆಪಿ ಅವರು ಹಿಂದೆ ಐದು ವರ್ಷ ಆಡಳಿತ ನಡೆಸಿದ್ದನ್ನು ನೋಡಿದ್ದೇವೆ. ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನ ಮಾಡಿ ಸರಕಾರ ಮಾಡಿ ಈಗ ಆಡಳಿತ ನಡೆಸುತ್ತಿರುವುದನ್ನು ನೋಡಿದ್ದೇವೆ. ಅವರೆಂದು ಜನಸಾಮಾನ್ಯರ ಪರ ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತೈಲ ಬೆಲೆಗಳನ್ನು, ಅಗತ್ಯ ವಸ್ತುಗಳ ಬೆಲೆಗಳನ್ನು ಏರಲು ಬಿಟ್ಟು ಜನಸಾಮಾನ್ಯರ ಜೀವನವನ್ನು ನರಕ ಮಾಡಿರುವ ಇವರು ಕಾಮನ್‌ ಮ್ಯಾನ್‌ʼಗಳಾ ಎಂದು ಹೆಚ್‌ಡಿಕೆ ಅವರು ಕಿಡಿ ಕಾರಿದರು.

ಆರ್ಥಿಕ ತೊಂದರೆ ಇದೆ ಎನ್ನುವ ನೆಪವೊಡ್ಡಿ ಸರಕಾರ ನೀರಾವರಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ಸ್ಥಗಿತ ಮಾಡಿರುವ ಮಾಹಿತಿಯೂ ಬಂದಿದೆ. ಈ ಬಗ್ಗೆ ಪತ್ರಿಕೆಯಲ್ಲಿ ವರದಿ ಬಂದಿದೆ. ಇನ್ನೂ 6000 ಕೋಟಿ ರೂ.ಗಳಷ್ಟು ಹಣವನ್ನೂ ಬಿಡುಗಡೆ ಮಾಡಿಲ್ಲ ಅನ್ನುವ ಮಾಹಿತಿ ಇದೆ. ಇವರಿಗೆ ಭ್ರಷ್ಟಾಚಾರ ಮಾಡಲು ಹಣವಿದೆ, ಯೋಜನೆಗಳಿಗೆ ಕೊಡಲು ಇಲ್ಲ ಎಂದರೆ ಹೇಗೆ ಎಂದು ಅವರು ಪ್ರಶ್ನಿಸಿದರು.

ಸರ್ಟಿಫಿಕೇಟ್‌ ಕೊಡೋಕೆ ಸಿದ್ದರಾಮಯ್ಯ ಯಾರು?

ಜೆಡಿಎಸ್‌ ಸೆಕ್ಯೂಲರ್‌ ಪಕ್ಷ ಹೌದೋ ಅಲ್ಲವೋ ಎಂಬ ಬಗ್ಗೆ ಸರ್ಟಿಫಿಕೇಟ್‌ ಕೊಡಲು ಸಿದ್ದರಾಮಯ್ಯ ಯಾರು ಎಂದು ಮಾಜಿ ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಜೆಡಿಎಸ್‌ ಸೆಕ್ಯೂಲರ್‌ ಅಲ್ಲ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ನಮ್ಮದು ಎಲ್ಲರನ್ನೂ ಒಳಗೊಂಡ, ಎಲ್ಲರನ್ನೂ ಪ್ರತಿನಿಧಿಸುವ ಪಕ್ಷ. ಸಿದ್ದರಾಮಯ್ಯ ಅವರಿಂದ ನಾವು ಹಿತೋಪದೇಶ ಪಡೆಯುವ ಅಗತ್ಯವಿಲ್ಲ. ಸಿದ್ದರಾಮಯ್ಯ ಬಂದಿದ್ದು ಎಲ್ಲಿಂದ? ಇದೇ ಪಕ್ಷದಿಂದ. ಇವತ್ತು ಒಂಭತ್ತು ಜನ ಮೈನಾರಿಟಿ ನಾಯಕರಾಗಿ ಹೊರಹೊಮ್ಮಿದ್ದರೆ ಅದು ಪಕ್ಷ ಮತ್ತು ದೇವೇಗೌಡರ ಕೊಡುಗೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

Tags: basavaraj bommayibettingcknewsnowcrimehd kumaraswamyjdskarnatakamatkapolicevijayapura
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ನನ್ನ ವಿಷಯಕ್ಕೆ ಬಂದರೆ ಬಿಜೆಪಿ ನಾಯಕರ ಬಂಡವಾಳ ಬಿಚ್ಚಿಡುವೆ: ಹೆಚ್‌ಡಿಕೆ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ: 9,760 ಸಾಗುವಳಿ ಚೀಟಿ ಅರ್ಜಿ ಬಾಕಿ; ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದ ಜಿ.ವಿ.ಶ್ರೀರಾಮರೆಡ್ಡಿ

ಬಾಗೇಪಲ್ಲಿ: 9,760 ಸಾಗುವಳಿ ಚೀಟಿ ಅರ್ಜಿ ಬಾಕಿ; ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದ ಜಿ.ವಿ.ಶ್ರೀರಾಮರೆಡ್ಡಿ

5 years ago
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ