• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಜಕಾಲುವೆಗಳ ಒತ್ತುವರಿ ತೆರವು ಆರಂಭ; ಅಡ್ಡಿಪಡಿಸಿದರೆ ಕಠಿಣ ಕ್ರಮ

cknewsnow desk by cknewsnow desk
October 26, 2021
in STATE
Reading Time: 1 min read
0
ರಾಜಕಾಲುವೆಗಳ ಒತ್ತುವರಿ ತೆರವು ಆರಂಭ; ಅಡ್ಡಿಪಡಿಸಿದರೆ ಕಠಿಣ ಕ್ರಮ
1.3k
VIEWS
FacebookTwitterWhatsuplinkedinEmail

ಮಳೆ ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ

by M Krishnappa Chikkaballapura

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ರಾಜಕಾಲುವೆಗಳ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಹಾಗೂ ಕೆರೆಯಿಂದ ಕೆರೆಯನ್ನು ಸಂಪರ್ಕಿಸುವ ಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಅವರು ಮಂಗಳವಾರ ತಾಲೂಕಿನ ಕಂದವಾರ ಕೆರೆಗೆ ಮುಂಜಾನೆ ಭೇಟಿ ನೀಡಿ ಕೆರೆ ಕೋಡಿಯಲ್ಲಿನ ನೀರಿನ ಹೊರ ಹರಿವನ್ನು ಪರಿಶೀಲಿಸಿದರು.

ಕಂದವಾರ ಕೆರೆ ತುಂಬಿದಾಗ ಹೊರ ಹರಿವಿನ ನೀರು ಸರಾಗವಾಗಿ ಸಾಗಿ ಅಮಾನಿ ಗೋಪಾಲಕೃಷ್ಣ ಕೆರೆಗೆ ತಲುಪಲು 4 ರಾಜಕಾಲುವೆಗಳಿವೆ. ಈ ಪೈಕಿ ಪ್ರಸ್ತುತ ಎರಡು ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಇನ್ನೆರಡು ರಾಜಕಾಲುವೆಗಳು ಮುಚ್ಚಿ ಹೋಗಿವೆ. ಅಲ್ಲಲ್ಲಿ ಒತ್ತುವರಿಯೂ ಆಗಿದೆ. ಒಂದು ರಾಜಕಾಲುವೆಯ ಮೇಲೆ ವಸತಿ ಕಟ್ಟಡಗಳು ಸಹ ನಿರ್ಮಾಣವಾಗಿವೆ. ಒತ್ತುವರಿ ಹಾಗೂ ಮಣ್ಣಿನಿಂದ ಮುಚ್ಚಿಹೋಗಿರುವ ಒಂದು ಕಾಲುವೆಯೊಂದರ  ಮಣ್ಣನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಒಂದು ತಂಡ ಕಂದವಾರ ಕೆರೆಯ ಕಡೆಯಿಂದ, ಮತ್ತೊಂದು ತಂಡ ಅಮಾನಿ ಗೋಪಾಲಕೃಷ್ಣ ಕೆರೆಯ ಕಡೆಯಿಂದ, ಇನ್ನೊಂದು ತಂಡ ರಾಜಕಾಲುವೆಯ ಮಧ್ಯಭಾಗದಿಂದ ಒತ್ತುವರಿ ತೆರವು ಹಾಗೂ  ಕಾಲುವೆ ನಿರ್ಮಾಣ  ಕಾರ್ಯವನ್ನು ಆರಂಭಿಸಿದೆ. ಸುಮಾರು 2.5 ಕಿ.ಮೀ ದೂರದ ತೆರವು ಕಾರ್ಯವನ್ನು ಪೂರ್ಣಗೊಳಿಸಿ ಕಂದವಾರ ಕೆರೆಯ ಹೊರ ಹರಿವಿನ ನೀರನ್ನು ಮತ್ತೊಂದು ರಾಜಕಾಲುವೆಯಲ್ಲಿ ಹರಿಯಲು ಇಂದೇ ವ್ಯವಸ್ಥೆ ಮಾಡಲಾಗುವುದು ಎಂದರು ಅವರು.

ಇದಲ್ಲದೆ ಒತ್ತುವರಿಯಾಗಿ ಕಟ್ಟಡ ನಿರ್ಮಾಣವಾಗಿರುವ ಮತ್ತೊಂದು ರಾಜಕಾಲುವೆಯ ಬಗ್ಗೆ ಶೀಘ್ರವೇ ಸಂಪೂರ್ಣ ಮಾಹಿತಿ ಪಡೆದು ರಾಜಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಈ ಕಾರ್ಯಕ್ಕಾಗಿ ಸಣ್ಣ ನೀರಾವರಿ ಇಲಾಖೆ, ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯ ಪ್ರವೃತ್ತರಾಗಲು ಸೂಚನೆ ನೀಡಿದ್ದೇನೆ. ಅದರಂತೆ ಕಾಮಗಾರಿ ಭರದಿಂದ ನಡೆಯುತ್ತಿದ್ದು, ತ್ವರಿತವಾಗಿ ಮುಗಿಯುತ್ತದೆ. ಕಂದವಾರ ಕೆರೆಯ ಹೊರಹರಿವಿನ ನೀರಿನಿಂದ ಚಿಕ್ಕಬಳ್ಳಾಪುರ ನಗರಕ್ಕೆ ಯಾವುದೇ ರೀತಿಯ ಅಪಾಯ ಎದುರಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡಬೇಕಾಗಿಲ್ಲ ಎಂದು ಅವರು ತಿಳಿಸಿದರು.

ರಾಜಕಾಲುವೆಗಳ ಒತ್ತುವರಿಯ ತೆರವನ್ನು ಯಾರಾದರೂ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಿ ಹಾಗೂ ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆದುಕೊಂಡು ಒತ್ತುವರಿ ತೆರವುಗೊಳಿಸಬೇಕು. ಒಟ್ಟಾರೆ ಇಂದು ಒಂದು ರಾಜಕಾಲುವೆಯ ತೆರವು ಕಾರ್ಯವನ್ನು ಪೂರ್ಣಗೊಳಿಸಿ ನೀರು ಸರಾಗವಾಗಿ ಹರಿಯಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡೀಸಿ ಸೂಚನೆ ನೀಡಿದರು.

ಕಂದವಾರ ಕೆರೆಯಿಂದ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಸಂಪರ್ಕಿಸುವ 4 ರಾಜ ಕಾಲುವೆಗಳಲ್ಲಿನ ಮಣ್ಣನ್ನು ಹಾಗೂ ಒತ್ತುವರಿಯನ್ನು ತೆರವುಗೊಳಿಸಿ ಮುಂದಿನ ದಿನಗಳಲ್ಲಿಯೂ ಮಳೆ ನೀರಿನಿಂದ ತೊಂದರೆಯಾಗದಂತೆ ಶಾಶ್ವತ ಪರಿಹಾರ ಕ್ರಮ ಕೈಗೊಂಡು ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಈ ವೇಳೆ ಸ್ಪಷ್ಟಪಡಿಸಿದರು.

ಇಂದು ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಗೆ ತಹಶೀಲ್ದಾರ್, ನಗರಸಭೆಯ ಪೌರಾಯುಕ್ತರು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕೆರೆಯ ಕೋಡಿಯಲ್ಲಿನ ನೀರಿನ ಹೊರಹರಿವನ್ನು ಪರಿಶೀಲಿಸಲಾಯಿತು. pic.twitter.com/xhEPLFqXkR

— DeputyCommissionerChikkaballapur (@dc_ckbpur) October 26, 2021

ಸಹಾಯವಾಣಿ

ಜಿಲ್ಲೆಯಲ್ಲಿ ಮಳೆಯಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು 08156-277071 ಹಾಗೂ 08156-277077 ಸಹಾಯವಾಣಿಗಳು ಈಗಾಗಲೇ ಸ್ಥಾಪಿಸಲಾಗಿದ್ದು, ಈ ಸಹಾಯವಾಣಿಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಈ ದೂರವಾಣಿಗಳಿಗೆ ಕರೆ ಮಾಡಿದರೆ ನಮ್ಮ ಅಧಿಕಾರಿಗಳು ಕೂಡಲೇ  ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು ಡೀಸಿ.

ಕೆರೆಗಳೆಲ್ಲ ಭರ್ತಿ

ಎಚ್.ಎನ್.ವ್ಯಾಲಿ ಯೋಜನೆಯ ವ್ಯಾಪ್ತಿಗೆ ಒಳಪಡುವ 44 ಕೆರೆಗಳಲ್ಲಿ 43 ಕೆರೆಗಳು ಭರ್ತಿಯಾಗಿವೆ. ಇನ್ನುಳಿದ ಭದ್ರಕೆರೆ ಶೇ.50ರಷ್ಟು ತುಂಬಿದೆ. ಇನ್ನುಳಿದಂತೆ ಜಿಲ್ಲಾ ಪಂಚಾಯತ್ ಮತ್ತು ಸಣ್ಣ ನೀರಾವರಿ ಇಲಾಖೆಯಡಿ ಬರುವ ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು ಕೆಲವು ದಿನಗಳಿಂದ ಸುರಿಯುತ್ತಿರುವ ವರ್ಷಧಾರೆಗೆ ತುಂಬಿವೆ ಎಂದರು ಅವರು.

ಕೆರೆಗಳ ಸರ್ವೇ ಕಾರ್ಯ ಪೂರ್ಣ

ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆಯನ್ನು ಕಳೆದ ವರ್ಷವೇ ಮಾಡಲಾಗಿದೆ. ಕೆರೆಯ ಒತ್ತುವರಿಯನ್ನು ಸಹ ತೆರವುಗೊಳಿಸಲಾಗಿದೆ. ಕೆರೆಯಿಂದ ಕೆರೆಗೆ ಸಂಪರ್ಕಿಸುವ ಕಾಲುವೆಗಳು ಮಳೆಯಿಂದ ಮುಚ್ಚಿಹೋಗಿದ್ದರೆ ಅಥವಾ ಒತ್ತುವರಿ ಆಗಿದ್ದರೆ ಯಾವುದೇ ಮುಲ್ಲಾಜಿಲ್ಲದೆ ತೆರವುಗೊಳಿಸಿ, ಮುಕ್ತವಾಗಿ ನೀರು ಹರಿಯಲು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಈಗಾಗಲೇ ಈ ನಿಟ್ಟಿನಲ್ಲಿ ಆದ್ಯತೆಯ ಮೇಲೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.

ಕಂದವಾರ ಕೆರೆಯ ವೀಕ್ಷಣೆಯ ಬಳಿಕ ನಗರದ ಬಿ.ಬಿ.ರಸ್ತೆ, ವಿನಾಯಕ ಬಡಾವಣೆಗಳ ಮೂಲಕ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಸಂಪರ್ಕಿಸುವ ವಿವಿಧ ಸ್ಥಳಗಳಲ್ಲಿ ರಾಜಕಾಲುವೆಗಳ ಸ್ಥಿತಿಗತಿಗಳನ್ನು ಜಿಲ್ಲಾಧಿಕಾರಿಗಳು ಖುದ್ದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಪೌರಾಯುಕ್ತರಾದ ಮಹಂತೇಶ್, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸರೆಡ್ಡಿ, ಎಚ್.ಎನ್. ವ್ಯಾಲಿ ಅಭಿಯಂತರ ರವೀಂದ್ರನಾಥ್, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

Tags: Chikkaballapura rainscknewsnowheavy rainskarnatakanewsrain disasterrajakaluve
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಾಗೇಪಲ್ಲಿ ಗಡಿಯಲ್ಲಿ ಕಮ್ಯುನಿಸ್ಟ್‌ ಕಲರವ

ಬಾಗೇಪಲ್ಲಿ ಗಡಿಯಲ್ಲಿ ಕಮ್ಯುನಿಸ್ಟ್‌ ಕಲರವ

Leave a Reply Cancel reply

Your email address will not be published. Required fields are marked *

Recommended

ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

ಕೊಲೆಯಾದ ಕೂಡಲೇ ಕಾಲ್ಕಿತ್ತ ಸಿಎಂ!!

3 years ago
ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

ಚಿಕ್ಕಬಳ್ಳಾಪುರಕ್ಕೆ ಡಾ.ಕೆ.ಸುಧಾಕರ್, ಕೋಲಾರಕ್ಕೆ ಮುನಿರತ್ನ ಉಸ್ತುವಾರಿ & ಅಶೋಕ್‌ಗೆ ಬೆಂಗಳೂರು ನಗರ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ