• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌

cknewsnow desk by cknewsnow desk
November 2, 2021
in EDITORS'S PICKS, STATE
Reading Time: 2 mins read
2
ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌
5.1k
VIEWS
FacebookTwitterWhatsuplinkedinEmail

ಶಾಸಕ ಎಸ್.‌ಎನ್.ಸುಬ್ಬಾರೆಡ್ಡಿ ಕೊರಳಪಟ್ಟಿ ಹಿಡಿದ ಪೊಲೀಸ್‌ ಇನಸ್ಪೆಕ್ಟರ್‌!

ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುಣಾವಣೆಯಲ್ಲಿ ಹೈಡ್ರಾಮ

ಉಸ್ತುವಾರಿ ಸಚಿವರ ಬೆಂಬಲಕ್ಕೆ ನಿಂತರಾ ಡೀಸಿ, ಎಸ್‌ಪಿ?

By GS Bharath Gudibande

ಗುಡಿಬಂಡೆ: ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಗುಡಿಬಂಡೆಯಲ್ಲಿ ಬೆಳಗ್ಗೆಯಿಂದ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ.

ಕಾಂಗ್ರೆಸ್‌ ಸದಸ್ಯರನ್ನು ಕಿಡ್ನಾಪ್‌ ಮಾಡಲಾಗಿದೆ ಎಂದು ಶಾಸಕ ಎಸ್.ಎನ್.‌ಸುಬ್ಬಾರೆಡ್ಡಿ ನೇರ ಆರೋಪ ಮಾಡಿ ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆಗೆ ಮುಂದಾದರೆ, ಇದೇ ಸಂದರ್ಭದಲ್ಲಿ ಪೊಲೀಸ್‌ ಇನಸ್ಪೆಕ್ಟರ್‌ ಒಬ್ಬರು ಶಾಸಕರ ಕೊರಳಪಟ್ಟಿಗೆ ಕೈಹಾಕಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಲ್ಲಿ ಓರ್ವ ಪೊಲೀಸ್‌ ಪೇದೆಗೆ ಗಾಯವಾಗಿದೆ.

ಕಾಂಗ್ರೆಸ್ ಸದಸ್ಯರನ್ನು ಬಿಜೆಪಿ ಹೈಜಾಕ್ ಮಾಡಿ ಅಧಿಕಾರ ಹಿಡಿಯಲು ಯತ್ನ ನಡೆಸುತ್ತಿದೆ ಎಂದು ದೂರಿ ಶಾಸಕರು, ಮತ್ತವರ ಬೆಂಬಲಿಗರು ಪೊಲೀಸ್‌ ಠಾಣೆಯ ಮುಂದೆ ಧರಣಿ-ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ಸಂಬಂಧಿಕರು ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಅಪಹರಣ ಮಾಡಿದ್ದಾರೆಂದು ದೂರಿ ಮತದಾನ ಕೇಂದ್ರಕ್ಕೆ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಹಾಗೂ ಶಾಸಕರು ಮತ್ತವರ ಬೆಂಬಲಿಗರ ನಡುವೆ ನೂಕು ನುಗ್ಗಲು ಮತ್ತು ತೀವ್ರ ವಾಗ್ವಾದ ನಡೆಯಿತು. ಪರಸ್ಪರ ಕೂಗಾಟ, ತಳ್ಳಾಟದಿಂದ ಪರಿಸ್ಥಿತಿ ಕೈಮೀರತಲ್ಲದೆ, ಈ ಸಂದರ್ಭದಲ್ಲಿ ಪೊಲೀಸ್ ಪೇದೆಗೆ ಗಾಯವಾಯಿತು.

ಇದೇ ವೇಳೆ ಹೆಚ್ಚುವರಿ ಭದ್ರತೆಗಾಗಿ ಬಂದಿದ್ದ ಚಿಕ್ಕಬಳ್ಳಾಪುರದ ಇನಸ್ಪೆಕ್ಟರ್‌ ಪ್ರಶಾಂತ್ ಅವರು ಶಾಸಕ ಸುಬ್ಬಾರೆಡ್ಡಿ ಅವರ ಕೊರಳು ಪಟ್ಟಿಗೆ ಕೈಹಾಕಿದ ಪ್ರಸಂಗವೂ ನಡೆಯಿತು. ಕೂಡಲೇ ಶಾಸಕರು ಹಾಗೂ ಅವರ ಬೆಂಬಲಿಗರು ಇನಸ್ಪೆಕ್ಟರ್‌ ವಿರುದ್ಧ ರೊಚ್ಚಿಗೆದ್ದರಲ್ಲದೆ ಸ್ಥಳದಲ್ಲಿಯೇ ಕೂತು ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು; “ಇನಸ್ಪೆಕ್ಟರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಅಧಿಕಾರಿಗಳ ಮೂಲಕ ಸಚಿವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಹೊರಟಿದ್ದಾರೆ. ಸಚಿವರ ತಾಳಕ್ಕೆ ತಕ್ಕಂತೆ ಅಧಿಕಾರಿಗಳು ಕುಣಿಯುತ್ತಿದ್ದಾರೆ ಎಂದು ಆರೋಪ ಮಾಡಿದರು.

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಯತ್ನ

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸಂಬಂಧಿಕರು ಕಾಂಗ್ರೆಸ್‌ ಸದಸ್ಯರನ್ನು ಕಿಡ್ನಾಪ್‌ ಮಾಡಿದ್ದಾರೆಂದು ಎಸ್.ಎನ್. ಸುಬ್ಬಾರೆಡ್ಡಿ ನೇರ ಆರೋಪ ಮಾಡಿದರು.

ಬೆಂಗಳೂರಿನಿಂದ ಸದಸ್ಯರನ್ನು ನಾನು ಕರೆದುಕೊಂಡರು ಬರುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ  ಕಾರನ್ನು ಸುಧಾಕರ್‌ ಬೆಂಬಲಿಗರು, ಸಂಬಂಧಿಕರು ಅಡ್ಡಗಟ್ಟಿ ನಮ್ಮ ಪಕ್ಷದ ಸದಸ್ಯರನ್ನು ಅಪಹರಣ ಮಾಡಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ಪಕ್ಷದಿಂದ ಗೆದ್ದ ಸದಸ್ಯರನ್ನು ಅಪಹರಿಸಿ, ಪೆರೇಸಂದ್ರದ ಚನ್ನಕೃಷ್ಣಾ ರೆಡ್ಡಿ ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ಲ.  ಬಲವಂತವಾಗಿ ಅಪಹರಿಸಿದ್ದರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದೇನೆ, ಕೂಡಲೇ ಅವರನ್ನು ಬಂಧಿಸುವಂತೆ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಗ್ರಹಿಸಿದರು.

ಚುನಾವಣೆ ಕೂಡಲೇ ಮುಂದೂಡಬೇಕು

ನಮ್ಮ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಅಪಹರಿಸಿದ್ದಾರೆ. ಅವರನ್ನು ರಕ್ಷಿಸಿ ನಮ್ಮ ಮುಂದೆ ಕರೆದುಕೊಂಡು ಬರಬೇಕು. ನಮ್ಮ ಸದಸ್ಯರು ಬಂದು ಹೇಳಿಕೆ ಕೊಡಬೇಕು. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು ಎಂದು ಅವರು ಆಗ್ರಹಿಸಿದರು.

ಸಚಿವರ ಕೈಗೊಂಬೆಗಳಾದ ಡಿಸಿ. ಎಸ್ಪಿ

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಚಿವ ಸುಧಾಕರ್ ಕೈಗೊಂಬೆಗಳಾಗಿದ್ದಾರೆ. ಪೊಲೀಸ್ ಬೆಂಗಾವಲಿನಲ್ಲಿ ಪೆರೇಸಂದ್ರದ ಚನ್ನಕೃಷ್ಣಾ ರೆಡ್ಡಿ ಮನೆಯಲ್ಲಿ ಕಾಂಗ್ರೆಸ್‌ ಸದಸ್ಯರನ್ನು ಇಟ್ಟುಕೊಂಡಿದ್ದಾರೆ. ಪೊಲೀಸ್ ಇಲಾಖೆಯ ಸಹಕಾರ ಸಚಿವರ ಪರ ಕೆಲಸ ಮಾಡುತ್ತಿದೆ. 15 ದಿನಗಳಾದರೂ ನಾವು ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತೇವೆ ಎಂದು ಎಸ್.ಎನ್ ಸುಬ್ಬಾರೆಡ್ಡಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ, ಪಪಂ ಮಾಜಿ ಅಧ್ಯಕ್ಷ ದ್ವಾರಕಾನಾಥ್ ನಾಯ್ಡು, ಕಾಂಗ್ರೆಸ್ ಮುಖಂಡ ಆದಿರೆಡ್ಡಿ, ಪ್ರಕಾಶ್, ಬಾಲೇನಹಳ್ಳಿ ರಮೇಶ್ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೊಲೀಸರಿಗೆ ಶಾಸಕರ ದೂರು

ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರನ್ನು ಕಿಡ್ನಾಡ್‌ ಮಾಡಲಾಗಿದೆ. ಒಂದನೇ ವಾರ್ಡಿನ ರಾಜೇಶ್ ಮತ್ತು ಐದನೇ ವಾರ್ಡಿನ ಗಂಗರಾಜು ಕಿಡ್ನಾಪ್ ಆದ ಸದಸ್ಯರು. ರಾಷ್ಟ್ರೀಯ ಹೆದ್ದಾರಿ 7ರ ಕಾಮತ್ ಹೋಟೆಲ್ ಬಳಿ ಈ ಇಬ್ಬರನ್ನು ಅಪಹರಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈಗ ಗುಡಿಬಂಡೆಯಲ್ಲಿ ಬಿಗಿ ಪೊಲೀಸ್‌ ಭದ್ರತೆ ಮಾಡಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ನಾಲ್ವರು ಇನಸ್ಪೆಕ್ಟರ್‌ʼಗಳು, 10ಕ್ಕೂ ಹೆಚ್ಚು ಸಬ್ ಇನಸ್ಪೆಕ್ಟರ್‌ʼಗಳು ಹಾಗೂ  ನೂರಕ್ಕೂ ಹೆಚ್ಚು ಪೊಲೀಸ್ ಪೇದೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

Tags: bjpchikkaballapuraCongressgudibandeminister dr k sudhakarmla sn subbareddypattana panchayatipresident vice president election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

Comments 2

  1. Parimala Reddy says:
    4 years ago

    ನಮ್ಮ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುವ ವರೆಗೂ ಹೀಗೆ ಮೋಸ ವಂಚನೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಖಂಡಿತ. ಇದಕ್ಕೆಲ್ಲ ಒಂದೇ ಸಮಂಜಸ ಉತ್ತರ ನಮ್ಮ ನೇರ ನಿಲುವಿನ ಕಡೆ ಹೋರಾಟ. ಹೀಗೆ ಬಿಟ್ಟರೆ ಖಂಡಿತ ಮುಂದಿನ ದಿನಗಳಲ್ಲಿ ಗುಡಿಬಂಡೆ ತಾಲ್ಲೂಕು ಅಲ್ಲ ಹೋಬಳಿ ಆಗಿ ಸಹ ಇರುವುದು ಅಸಾಧ್ಯದ ವಿಷಯ. ಅನ್ಯ ಅಜಾಗರೂಕತೆ ನಮ್ಮ ಕೇಡು ಅಷ್ಟೇ

    Reply
  2. Pingback: ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ - cknewsnow

Leave a Reply Cancel reply

Your email address will not be published. Required fields are marked *

Recommended

ಜೂನ್ 13ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ

ಜೂನ್ 13ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ

3 years ago
ಹೊಸ ಸಂಸತ್ ಭವನ ರಾಷ್ಟ್ರಕ್ಕೆ ಸಮರ್ಪಣೆ

ಹೊಸ ಸಂಸತ್ ಭವನ ರಾಷ್ಟ್ರಕ್ಕೆ ಸಮರ್ಪಣೆ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ