• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

cknewsnow desk by cknewsnow desk
November 3, 2021
in EDITORS'S PICKS, STATE
Reading Time: 2 mins read
0
ಆಪರೇಷನ್ ಕಮಲ: ಗುಡಿಬಂಡೆಯಲ್ಲಿ ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ
2.3k
VIEWS
FacebookTwitterWhatsuplinkedinEmail

ಗುಡಿಬಂಡೆ ಪಟ್ಟಣ ಪಂಚಾಯತಿ: ಬಷಿರಾ ರಿಜ್ವಾನ್ ಅಧ್ಯಕ್ಷೆ & ಅನೀಲ್ ಕುಮಾರ್ ಉಪಾಧ್ಯಕ್ಷ

  • ಸಚಿವ ಡಾ.ಕೆ.ಸುಧಾಕರ್ ಕಮಾಲ್; ಕೊನೆ ಕ್ಷಣದಲ್ಲಿ ಬಿಜೆಪಿಗೆ ಕಾಂಗ್ರೆಸ್‌ ಸದಸ್ಯರ ಜಂಪ್‌
  • ಸಂಸದರ ಕಾರು ತಡೆದು ಬಾಯಿ ಬಡಿದುಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
  • ಶಾಸಕರು ಪೊಲೀಸರ ಮಧ್ಯ ವಾಗ್ವಾದ, ಧರಣಿ ಪ್ರತಿಭಟನೆ
ಅಧಿಕಾರ ಸ್ವೀಕಾರ ಮಾಡಿದ ನೂತನ ಅಧ್ಯಕ್ಷೆ, ಉಪಾಧ್ಯಕ್ಷ ಹಾಗೂ ಸದಸ್ಯರು.

By GS Bharath Gudibande

ಗುಡಿಬಂಡೆ: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಶೂನ್ಯದಿಂದ ಅಧಿಕಾರಕ್ಕೇರಿದೆ! ಕನಿಷ್ಠ ಒಂದೇ ಒಂದು ಸ್ಥಾನ ಗೆಲ್ಲದಿದ್ದರೂ ಇಲ್ಲಿನ ಅಧಿಕಾರವನ್ನು ವಶಪಡಿಸಿಕೊಂಡಿದೆ.

ಈ ಮೂಲಕ ಅಧ್ಯಕ್ಷರಾಗಿ ಬಷಿರಾ ರಿಜ್ವಾನ್ ಹಾಗೂ ಉಪಾಧ್ಯಕ್ಷರಾಗಿ ಅನೀಲ್ ಕುಮಾರ್ ಆಯ್ಕೆಯಾದರು.

ರಾಜ್ಯದ ಆಪರೇಷನ್‌ ʼಕಮಲದ ಪಿತಾಮಹʼರೂ ಆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೇರಲು ಅನುಸರಿಸಿದ ಮಾರ್ಗವನ್ನೇ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ನಾಯಕರು ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಕಸಿಯಲು ಅನುಸರಿಸಿದರು.  

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮತ್ತವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಮುಖಂಡರ ತೀವ್ರ ಪ್ರತಿಭಟನೆ, ಧರಣಿ ನಡುವೆಯೂ ಬಿಜೆಪಿಯೂ ಆಪರೇಷನ್‌ ಕಮಲದ ಮೂಲಕ ಅಧಿಕಾರವನ್ನು ಗಿಟ್ಟಿಸಿಕೊಂಡಿತು. ಇದೇ ಮೊದಲ ಬಾರಿಗೆ ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಗೆಲುವಿನ ಬಾವುಟ ಹಾರಿತು.

ಕಳೆದ ಕೆಲ ದಿನಗಳಿಂದ ಹೂಡಿದ್ದ ವ್ಯೂಹದಂತೆ ಬಿಜೆಪಿ ತನ್ನ ಆಕ್ರಮಣಶೀಲ ರಾಜಕೀಯ ತಂತ್ರಗಾರಿಕೆಯಿಂದ ಎಚ್ಚರ ತಪ್ಪಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಸಿಗದಂತೆ ನೋಡಿಕೊಂಡಿತು. ಕೊನೆಪಕ್ಷ ಚುನಾವಣೆಯಲ್ಲಿ ಖಾತೆಯನ್ನೇ ತೆರೆಯದ ಬಿಜೆಪಿ ತನ್ನ ಒಳ ರಾಜಕೀಯ ಚದುರಂಗದಾಟದ ರಣವ್ಯೂಹಕ್ಕೆ ಗುಡಿಬಂಡೆ ಇಂದು ಸಾಕ್ಷಿಯಾಯಿತು.

ಬಿಜೆಪಿ ತಂತ್ರಗಾರಿಕೆಯಿಂದ ಕಾಂಗ್ರೆಸ್‌ ನಾಯಕರು ಮತ್ತು ಶಾಸಕರು ಧರಣಿ ಪ್ರತಿಭಟನೆ ನಡೆಸಿದರಾದರೂ ಪೊಲೀಸರ ಸರ್ಪಗಾವಲಿನಲ್ಲಿ ಏನೂ ಮಾಡಲಾಗಲಿಲ್ಲ. ಸರಕಾರ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಸಿಡಿದೆದ್ದು ಸ್ವತಃ ಶಾಸಕರೇ ರಸ್ತೆಯಲ್ಲಿ ಕೂತರೂ ಕವಡೆ ಕಾಸಿನ ಕಿಮ್ಮತ್ತು ಸಿಗಲಿಲ್ಲ. ಇಡೀ ಗುಡಿಬಂಡೆ ಪಟ್ಟಣವೇ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ರಣಾಂಗಣದಲ್ಲಿ ನಲುಗಿಹೋಯಿತು.

ಧರಣಿ ನಡೆಸಿದ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿ.

ಪೊಲೀಸರು-ಶಾಸಕರ ನಡುವೆ ವಾಗ್ವಾದ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಾಗೂ ಅವರ ಬೆಂಬಲಿಗರು ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದು, ಬ್ಯಾರಿಕೇಡ್ʼಗಳನ್ನು ತಳ್ಳಿಹಾಕಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿದರು.

ಆದರೆ, ಇವರ ಒತ್ತಾಯ ಆಕ್ರೋಶಗಳೆಲ್ಲವೂ ಪೊಲೀಸರ ಮುಂದೆ ಬರೀ ಅರಣ್ಯರೋಧನವಾಯಿತಷ್ಟೇ. ಮೊದಲೇ ಪ್ಲ್ಯಾನ್‌ ಮಾಡಿದಂತೆ ಯಾರೂ ಶಾಸಕರಿಗೆ ಕಿಮ್ಮತ್ತೇ ನೀಡಲಿಲ್ಲ. ಇಡೀ ಬೆಳವಣಿಗೆಗಳನ್ನು ಬಿಜೆಪಿ ನಾಯಕರು ವ್ಯವಸ್ಥಿತವಾಗಿ ನಿರ್ದೇಶನ ಮಾಡಿದಂತಿತ್ತು. ಅದರಲ್ಲಿ ಅಧಿಕಾರಿಗಳೆಲ್ಲರೂ ಪಾತ್ರಧಾರಿಗಳಂತೆ ಆಗಿದ್ದರು ಎನ್ನುವ ಹಾಗಿತ್ತು.

ಬಹುಮತವಿದ್ದರೂ ಎಡವಿದ ಕಾಂಗ್ರಸ್

ಅಧ್ಯಕ್ಷ ಪದವಿ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ಸಿನ ಬಷಿರಾ ರಿಜ್ವಾನ್ ಹಾಗೂ ಉಪಾಧ್ಯಕ್ಷ ಪದವಿ ಆಕಾಂಕ್ಷಿಯಾಗಿದ್ದ ಪಕ್ಷೇತರ ಸದಸ್ಯ ಅನೀಲ್ ಕುಮಾರ್ ಇಬ್ಬರೂ ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದರು. ಇಬ್ಬರ ಪರವಾಗಿ ಜೆಡಿಎಸ್ ಪಕ್ಷದ ಇಬ್ಬರು, ಮೂವರು ಪಕ್ಷೇತರರು ಹಾಗೂ ಸಂಸದ ಬಿ‌.ಎನ್. ಬಚ್ಚೇಗೌಡ ಮತ ಚಲಾಯಿಸಿದರು.

ಈ ಕಾರಣಕ್ಕೆ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತವಿದ್ದರೂ ಸೋಲಬೇಕಾಯಿತು. ಇದರಿಂದ ಆಕ್ರೋಶಗೊಂಡ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಬೆಂಬಲಿಗರು ಸಂಸದ ಬಿ.ಎನ್ ಬಚ್ಚೇಗೌಡರ ಕಾರನ್ನು ತಡೆದು ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.

ಸಂಸದ ಬಚ್ಚೇಗೌಡ ಕಾರಿನ ಮುಂದೆ ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ.

ಶೂನ್ಯದಿಂದ ಅಧಿಕಾರಕ್ಕೇರಿದ ಬಿಜೆಪಿ

ಪಟ್ಟಣ ಪಂಚಾಯಿತಿಯಲ್ಲಿ ಜೆಡಿಎಸ್-2 ಕಾಂಗ್ರೆಸ್-06, ಪಕ್ಷೇತರರು -3 ಸ್ಥಾನಗಳು ಸೇರಿ 11 ಸದಸ್ಯರು ಚುನಾವಣೆಯಲ್ಲಿ ಗೆದ್ದಿದ್ದರು. ಬಿಜೆಪಿಯಿಂದ ಒಬ್ಬ ಸದಸ್ಯನೂ ಆಯ್ಕೆಯಾಗಿರಲಿಲ್ಲ! ಆದರೂ ಅಪರೇಶನ್ ಕಮಲ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಾಮಮಾರ್ಗದ ಮೂಲಕ ಬಿಜೆಪಿ ಬೆಂಬಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನ ಗೆಲ್ಲಿಸಿಕೊಂಡರು ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ʼಗೆ ಗುನ್ನ ಇಟ್ಟ ಬಿಜೆಪಿ

ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಶೂನ್ಯ ಸಂಪಾದನೆ ಮಾಡಿದ್ದ ಬಿಜೆಪಿ, ಬಹುಮತವಿದ್ದ ಕಾಂಗ್ರೆಸ್‌ ಪಕ್ಷದ ಬುಟ್ಟಿಗೆ ಕೈ ಹಾಕಿದೆ. ಈ ಮೂಲಕ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಗುಡಿಬಂಡೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಿರುವ ಕಮಲ ಪಾಳೆಯ, ಮುಂದಿನ ಚುನಾವಣೆಗೆ ಹೊಸ ವರಸೆ ಶುರು ಮಾಡಿದೆ.

ಇದು ಹೀಗಿದ್ದರೆ, ಆಪರೇಶನ್ ಕಮಲದ ಹಿಂದೆ ಸಚಿವ ಸುಧಾಕರ್ ಹಾಗೂ ಅವರ ಸಂಬಂಧಿಕರ ನೇರ ಕೈವಾಡವಿದೆ. ಯೋಗ್ಯತೆ ಇದ್ದರೆ ಜನ ಬೆಂಬಲ ಪಡೆದು ಅಧಿಕಾರಕ್ಕೆ ಬರಲಿ ಎಂದು ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು.

ನೂಕು ನುಗ್ಗಲು; ಪೊಲೀಸ್ ಪೇದೆಗೆ ಗಾಯ

ಶಾಸಕರ ಬೆಂಬಲಿಗರು ಹಾಗೂ ಪೊಲೀಸರ ಮಧ್ಯೆ ನಡೆದ ನೂಕಾಟ, ತಳ್ಳಾಟದಲ್ಲಿ ಚಿಕ್ಕಬಳ್ಳಾಪುರ ಪೊಲೀಸ್ ಇನಸ್ಪೆಕ್ಟರ್‌ ಪ್ರಶಾಂತ್ ಅವರು ಶಾಸಕ ಸುಬ್ಬಾರೆಡ್ಡಿ ಅವರನ್ನು ತಳ್ಳಿದರು. ಮತ್ತೊಂದೆಡೆ ಶಾಸಕರ ಬೆಂಬಲಿಗರು ಪೊಲೀಸರನ್ನು ತಳ್ಳಿದ್ದಕ್ಕೆ ಓರ್ವ ಪೊಲೀಸ್ ಪೇದೆಗೆ ಗಾಯವಾಗಿದೆ. ಶಾಸಕರ ಕೊರಳಪಟ್ಟಿ ಹಿಡಿದರೆನ್ನಲಾದ ಇನಸ್ಪೆಕ್ಟರ್‌ ಪ್ರಶಾಂತ್ ಅವರನ್ನು ಅಮಾನತು ಮಾಡುವಂತೆ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಿದರು.

ಸಂಸದರು ಹೇಳಿದ್ದೇನು?

ನಾವು ಯಾರನ್ನೂ ಕಿಡ್ನಾಪ್ ಮಾಡಿಲ್ಲ. ಯಾರಿಂದಲೂ ಬಲವಂತವಾಗಿ ಮತ ಹಾಕಿಸಿಕೊಂಡಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಕೆಲ ಸದಸ್ಯರು ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ. ಹೀಗಾಗಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಬಿ.ಎನ್.ಬಚ್ಚೇಗೌಡ, ಸಂಸದ

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..

ಶಾಸಕರ ಕಾರು ಅಡ್ಡಗಟ್ಟಿ ಸಚಿವ ಡಾ.ಕೆ.ಸುಧಾಕರ್‌ ಸಂಬಂಧಿಕರಿಂದ ಕಾಂಗ್ರೆಸ್‌ ಸದಸ್ಯರ ಕಿಡ್ನಾಪ್‌
Tags: bjpchikkaballapuraCongressdr k sudhakargudibande pattana panchayatikarnatakaoperation kamalaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಐವರು ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ ಡಾ.ಅಶ್ವತ್ಥನಾರಾಯಣ

ಐವರು ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ ಡಾ.ಅಶ್ವತ್ಥನಾರಾಯಣ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

4 years ago
ಸ್ವರ ದಾಸೋಹಿ ಪುರಂದರ ದಾಸರು

ಸ್ವರ ದಾಸೋಹಿ ಪುರಂದರ ದಾಸರು

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ