• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೇ ಅಡ್ಡಿ

cknewsnow desk by cknewsnow desk
November 10, 2021
in STATE
Reading Time: 1 min read
0
ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೇ ಅಡ್ಡಿ
953
VIEWS
FacebookTwitterWhatsuplinkedinEmail

ಅಕ್ಕಪಕ್ಕದ ರಾಜ್ಯಗಳಿಗೆ ಹೃದಯ ವೈಶಾಲ್ಯತೆಯ ಪಾಠ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

  • ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೆ ಅಡ್ಡಿ ಮಾಡುವುದು ಬೇಡ
  • ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರಕ್ಕೆ ಹೆಚ್ ಡಿಕೆ ಕಿವಿಮಾತು
  • ಜೆಡಿಎಸ್ ಜಲಧಾರೆ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ
  • ಪಕ್ಷದ ಕೋರ್ ಕಮಿಟಿ ಶೀಘ್ರ ರಚನೆ

ಬೆಂಗಳೂರು: ನೀರಾವರಿ ವಿಷಯಗಳಲ್ಲಿ ಅಕ್ಕಪಕ್ಕದ ರಾಜ್ಯಗಳು ಕರ್ನಾಟಕದ ಬಗ್ಗೆ ಹೃದಯ ವೈಶಾಲ್ಯತೆ ಮೆರೆಯಬೇಕು ಹಾಗೂ ನೀರಾವರಿ ಬಿಕ್ಕಟ್ಟುಗಳನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ಮಾಡಿದರು.

ಅಲ್ಲದೆ, ನಾಡಿನ ನದಿ ನೀರು ಬಳಕೆ ಹಾಗೂ ಜನರಿಗೆ ಜಲ ಭದ್ರತೆ ನೀಡುವ ಉದ್ದೇಶದಿಂದ ದೀರ್ಘಕಾಲೀನ ಅನುಕೂಲತೆಯ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತಿರುವ ಎರಡನೇ ದಿನದ ಜನತಾ ಸಂಗಮ ಕಾರ್ಯಾಗಾರಕ್ಕೆ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಕಾವೇರಿ, ಮೇಕೆದಾಟು ವಿಷಯದಲ್ಲಿ ತಮಿಳುನಾಡು ತಗಾದೆ ತೆಗೆಯುತ್ತದೆ. ಕೃಷ್ಣಾ ವಿಷಯದಲ್ಲಿ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳು ವಿವಾದ ಹುಟ್ಟು ಹಾಕುತ್ತಿದೆ. ಆದರೆ, ಆ ರಾಜ್ಯಗಳ ಅಸಂಖ್ಯಾತ ಜನರು ಕೆಂಪೇಗೌಡರು ಕಟ್ಟಿದ ಈ ಬೆಂಗಳೂರು ಮಹಾನಗರದಲ್ಲಿ ವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಕಾವೇರಿ ನೀರು ಕುಡಿಯುತ್ತಾ ಬದುಕುತ್ತಿದ್ದಾರೆ. ಇಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಇದನ್ನು ಆಯಾ ರಾಜ್ಯಗಳ ಸರಕಾರಗಳು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಕೆಂಪೇಗೌಡರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೆರೆಯ ಆಂಧ್ರ ಪ್ರದೇಶದ ಹಲವಾರು ಜಿಲ್ಲೆಗಳಿಗೆ ಅನುಕೂಲವಾಗಿದೆ. ನಮಗಿಂತ ಅವರಿಗೆ ಹೆಚ್ಚು ಉಪಯೋಗ ಆಗುತ್ತಿದೆ. ಅದೇ ರೀತಿ ಎಲೆಕ್ಟ್ರಾನಿಕ್ಸ್ ಸಿಟಿ ನಿರ್ಮಾಣದಿಂದ ತಮಿಳುನಾಡಿನ ಹೊಸೂರು ಸೇರಿ ಹಲವಾರು ಜಿಲ್ಲೆಗಳ ಜಾರಿಗೆ ಜೀವನಕ್ಕೆ ದಾರಿಯಾಗಿದೆ. ಇದನ್ನು ನಮ್ಮ ಜತೆ ಜಲ ತಗಾದೆ ತೆಗೆಯುವ ರಾಜ್ಯಗಳ ಸರಕಾರಗಳು ಅರ್ಥ ಮಾಡಿಕೊಳ್ಳಬೇಕು. ಆ ರಾಜ್ಯಗಳ ಜನಪ್ರತಿನಿಧಿಗಳು ಕೂಡ ಅರ್ಥ ಮಾಡಿಕೊಳ್ಳಬೇಕು ಎಂದು ಹೆಚ್ ಡಿಕೆ ಅವರು ಪ್ರತಿಪಾದಿಸಿದರು.

ಬೆಂಗಳೂರಿನಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರಾಗುತ್ತಿದ್ದಾರೆ. ಕನ್ನಡಿಗರಿಗಷ್ಟೆ ಅಲ್ಲ ಎಲ್ಲರಿಗೂ ಜೀವ ಜೀವನ ನೀಡಿದೆ. ಎಲ್ಲರಿಗೂ ನಾವು ಗೌರವ, ರಕ್ಷಣೆ ನೀಡಿದ್ದೇವೆ. ಮುಖ್ಯವಾಗಿ ಜಲ ರಕ್ಷಣೆ ಕೊಟ್ಟಿದ್ದೇವೆ. ಆದರೆ ನಾವು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಾಗ ಆ ರಾಜ್ಯಗಳು ಅನಗತ್ಯ ಕಿರಿಕಿರಿ ಮಾಡುವುದನ್ನು ನಿಲ್ಲಿಸಬೇಕು. ನೀರಾವರಿ ವಿವಾದಗಳನ್ನು ನ್ಯಾಯಾಲಯಕ್ಕೆ ಒಯ್ಯುವುದು ಸರಿಯಲ್ಲ. ಸಂಬಂಧಪಟ್ಟ ರಾಜ್ಯಗಳು ಪರಸ್ಪರ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ನಾವು ಒಕ್ಕೂಟದ ವ್ಯವಸ್ಥೆಯಲ್ಲಿ ಕೆಲಸ ಮಾಡಬೇಕು. ಇದು ನಮ್ಮ ಜವಾಬ್ದಾರಿ ಕೂಡ ಹೌದು. ಆದರೆ ನೆಲ, ಜಲದ ಬಗ್ಗೆ ಆಗುವ ದ್ರೋಹವನ್ನು ತಡೆಯಬೇಕು. ಕೇಂದ್ರ ಸರಕಾರಗಳು, ರಾಷ್ಟ್ರೀಯ ಪಕ್ಷಗಳು ನಮ್ಮ ರಕ್ಷಣೆಗೆ ಅವರು ಬಂದಿಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

ಏನಿದು ಜನತಾ ಜಲಧಾರೆ?

ರಾಜ್ಯದಲ್ಲಿ ನದಿ ಉಪನದಿಗಳು ಸೇರಿ 38 ಜೀವ ನದಿಗಳು ಇದ್ದು, ಅವುಗಳ ಜಲ ಸಂಗ್ರಹ ಮಾಡಿ ನೀರಿನ ಬಳಕೆಯ ಬಗ್ಗೆ ನಾಡಿನ ಜನರಿಗೆ ಅರಿವು ಮೂಡಿಸುವ ಹಾಗೂ ರಾಜ್ಯದ ನೀರಾವರಿ ಹಿತಾಸಕ್ತಿಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ನೀಡುವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಷ್ಟ್ರೀಯ ಪಕ್ಷಗಳು ರಾಜ್ಯದ ನೀರಾವರಿ ಹಿತರಕ್ಷಣೆ ಮಾಡುವುದಿಲ್ಲ. ಈ ಸತ್ಯ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಕೇಂದ್ರದ ಮುಂದೆ ನಮ್ಮ ಸರ್ಕಾರದಿಂದ ಮನವಿ ಕಳುಹಿಸಲಾಗಿದೆ. ಅದಕ್ಕೆ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ. ಇವೆಲ್ಲ ಕಾರಣಕ್ಕೆ ಜಲಧಾರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಜನತೆಯ ಮುಂದೆ ಈ ಕಾರ್ಯಕ್ರಮ ಇಡುತ್ತೇವೆ. ಈಗಾಗಲೇ ಎಲ್ಲ ರೂಪರೇಷೆಗಳನ್ನು ರೂಪಿಸಿದ್ದೇವೆ ಎಂದು ಅವರು ತಿಳಿಸಿದರು.

ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಬಗ್ಗೆ ಟೀಕೆ ಮಾಡಲ್ಲ. ಅವರ ಸಂಘಟನೆ ದೃಷ್ಟಿಯಿಂದ ಈ ಕಾರ್ಯಕ್ರಮ ಮಾಡಿದ್ದಾರೋ ಗೊತ್ತಿಲ್ಲ. ಆದರೆ, ನಮ್ಮ ರಾಜ್ಯದ 38 ನದಿಗಳ ನೀರು ಬಳಕೆ ಮಾಡಬೇಕು. ಹೀಗಾಗಿ ನಾವು ಹೋರಾಟ ಮಾಡುತೇವೆ. ಯಾವುದೇ ಗಿಮಿಕ್ ಮಾಡುತ್ತಿಲ್ಲ ನಾವು. ಸಾಲ ಮನ್ನಾ ಯೋಜನೆ ಬಗ್ಗೆ ಹೇಳಿದಾಗಲೂ ಇವರು ಅಧಿಕಾರಕ್ಕೆ ಬರಲ್ಲ ಹೇಗೆ ಮಾಡ್ತಾರೆ ಎಂದು ಹೇಳಿದ್ದರು ಎಂದು ಹೆಚ್.ಡಿಕೆ ಟಾಂಗ್ ನೀಡಿದರು.

ಕಾಂಗ್ರೆಸ್ ವೇಗ ನಮಗೆ ಬೇಡ. ನಾವು ಬದ್ಧತೆ ಇಟ್ಟುಕೊಂಡು ಹೋಗುವವರು. ನಮ್ಮ ಕಾರ್ಯಕ್ರಮ ರೂಪರೇಷ ವಿಭಿನ್ನವಾಗಿರುತ್ತದೆ. ನೀರಾವರಿ ವಿಚಾರವಾಗಿ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಮೊದಲಿಗರು ಎಂದು ಅವರು ಹೇಳಿದರು.

ಕೋರ್ ಕಮಿಟಿ ರಚನೆ ಶೀಘ್ರ

ಶೀಘ್ರದಲ್ಲೇ ಜೆಡಿಎಸ್ ಕೋರ್ ಕಮಿಟಿ ರಚನೆ ಮಾಡಲಾಗುವುದು. ಕಮಿಟಿಯಲ್ಲಿ ಯಾರು ಯಾರು ಇರುತ್ತಾರೆ ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಯಾರು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೋ ಅಂತವರನ್ನು ನೇಮಕ ಮಾಡುತ್ತೇವೆ. 2023ರ ಗುರಿ ಏನಿದೆ, ಅದನ್ನು ಸಾಧಸಲು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹೆಸರು ಇಟ್ಟರೆ ಸಾಕೇ?

ಮುಂಬಯಿ ಕರ್ನಾಟಕ ಹೆಸರನ್ನು ಈಗ ಕಿತ್ತೂರು ಕರ್ನಾಟಕ ಅಂತ ಹೆಸರು ಬದಲಾಯಿಸಿದ್ದಾರೆ. ಅದನ್ನೇ ಸಿಹಿ ಹಂಚಿ ಸಂಭ್ರಮಿಸುವ ಅಗತ್ಯ ಇಲ್ಲ. ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದ್ದಾರೆ. ಆದರೆ, ಅಲ್ಲಿನ ಜನರ ಬದುಕು ಬದಲಾಗಿದೆಯಾ? ಈಗಲೂ ಅಲ್ಲಿನ ಜನ ಕಷ್ಟದಲ್ಲಿ ಬದುಕುತ್ತಿದ್ದಾರೆ. ಇದು ರಾಷ್ಟ್ರೀಯ ಪಕ್ಷಗಳ ನಡವಳಿಕೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಧ್ಯಮ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸರವಣ ಅವರು ಹಾಜರಿದ್ದರು

Tags: andra pradeshhd kumaraswamyinter state water disputesirrigation projectskarnatakatamilnaduTelangana
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನ.17ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗ

ನ.17ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗ

Leave a Reply Cancel reply

Your email address will not be published. Required fields are marked *

Recommended

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

3 years ago
ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ