• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

10 ತಿಂಗಳಲ್ಲಿ ಸೃಷ್ಟಿಯಾದ ಕೋವ್ಯಾಕ್ಸಿನ್ ಅಭಿವೃದ್ಧಿಯ ಯಶೋಗಾಥೆ

cknewsnow desk by cknewsnow desk
November 18, 2021
in COVID-19, STATE, TECH
Reading Time: 1 min read
0
10 ತಿಂಗಳಲ್ಲಿ ಸೃಷ್ಟಿಯಾದ ಕೋವ್ಯಾಕ್ಸಿನ್ ಅಭಿವೃದ್ಧಿಯ ಯಶೋಗಾಥೆ

covaxin / photo courtesy: Bharat Biotech

933
VIEWS
FacebookTwitterWhatsuplinkedinEmail

ಅನನ್ಯ ಪಯಣದ ನೆನಪಿನ ಸುರುಳಿ ಬಿಚ್ಚಿಟ್ಟ ಭಾರತ್ ಬಯೋಟೆಕ್ ನಿರ್ದೇಶಕ ಡಾ.ಕೃಷ್ಣಮೋಹನ್

ಬೆಂಗಳೂರು: `ಕೋವಿಡ್ ಪಿಡುಗು ದೇಶದ ಮೇಲೆರಗಿದಾಗ ಯಾವುದೇ ಲಸಿಕೆ ಇರಲಿಲ್ಲ. ಇದೊಂದು ಕಂಡು ಕೇಳರಿಯದಂತಹ ಸವಾಲಾಗಿತ್ತು. ಏಕೆಂದರೆ, ಕೇವಲ 10 ತಿಂಗಳಷ್ಟೇ ನಮಗೆ ಕಾಲಾವಕಾಶವಿತ್ತು. ಆದರೆ ಮಿಂಚಿನ ವೇಗದಲ್ಲಿ ಕೆಲಸ ಮಾಡಿದ ನಾವು ಕೋವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆವು. ಇದು ನಿಜಕ್ಕೂ ಸವಾಲಿನಿಂದ ಕೂಡಿದ್ದ ಮತ್ತು ಅನನ್ಯ ಅನುಭವ.’

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಗುರುವಾರ ನಡೆದ `ಕೋವಿಡ್ ಲಸಿಕೆಯಲ್ಲಿ ಭಾರತದ ನಾಯಕತ್ವ ಗುಣದ ಪ್ರದರ್ಶನ’ ಗೋಷ್ಠಿಯಲ್ಲಿ, ಭಾರತ್ ಬಯೋಟೆಕ್ ಕಂಪನಿಯ ನಿರ್ದೇಶಕ ಡಾ.ವಿ.ಕೃಷ್ಣಮೋಹನ್ ಆಡಿದ ಮಾತುಗಳಿವು.

ಡಾ.ಕೃಷ್ಣಮೋಹನ್

ಸಂವಾದಕ್ಕೆ ಚಾಲನೆ ನೀಡಿದ ಡಾ.ಮಹೇಶ್ ಬಾಲಘಾಟ್ ಅವರು `ಕೋವ್ಯಾಕ್ಸಿನ್ ಅಭಿವೃದ್ಧಿಯ ಪಯಣದ ಏಳುಬೀಳುಗಳ ಬಗ್ಗೆ’ ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ ಅವರು, “ಕೇಂದ್ರ ಸರಕಾರ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸರಿಯಾದ ಹೆಜ್ಜೆಗಳನ್ನಿಟ್ಟಿತು; ಜೈವಿಕ ತಂತ್ರಜ್ಞಾನ ಇಲಾಖೆಯು ಮೈ ಕೊಡವಿಕೊಂಡು ಎದ್ದಿತು. ಕೆಲವು ವರ್ಷಗಳ ಹಿಂದೆ ಇಂತಹುದನ್ನು ನಾವು ಕಂಡುಕೇಳರಿಯುವುದು ಸಾಧ್ಯವಿರಲಿಲ್ಲ,’’ ಎಂದರು.

“ಭಾರತ್ ಬಯೋಟೆಕ್ ಕಂಪನಿಯ ಮುಂದೆ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತದಲ್ಲೇ ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ, ಉತ್ಪಾದಿಸುವ ಗುರಿ ಇತ್ತು. ಇದಕ್ಕಾಗಿ ಪಟ್ಟಿರುವ ಪರಿಶ್ರಮಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ. ಆದರೆ, ಲಸಿಕೆ ಉತ್ಪಾದನೆಯಲ್ಲಿ ಗುಣಮಟ್ಟದೊಂದಿಗೆ ಯಾವುದೇ ರಾಜಿ ಮಾಡಿಕೊಂಡಿಲ್ಲ. ಒಟ್ಟಿನಲ್ಲಿ ದಾಖಲೆ ಸಮಯದಲ್ಲಿ ನಾವು ಕೋಟ್ಯಂತರ ಜನರ ಜೀವವನ್ನು ಉಳಿಸಬಲ್ಲ ಕೋವ್ಯಾಕ್ಸಿನ್ ಲಸಿಕೆಯು ಸುಲಭವಾಗಿ ಸಿಗುವಂತೆ ಮಾಡಿದೆವು” ಎಂದು ಅವರು ನೆನಪಿನ ಸುರುಳಿ ಬಿಚ್ಚಿದರು.

ಭಾರತದ ವೈದ್ಯಕೀಯ ನಿಯಂತ್ರಣ ವ್ಯವಸ್ಥೆ ಕಳೆದ 10 ವರ್ಷಗಳಲ್ಲಿ ಸಕಾರಾತ್ಮಕವಾಗಿ ಬದಲಾಗಿದೆ. ಕೇಂದ್ರ ಸರಕಾರವು ಈಗ ಲಸಿಕೆ ಅಭಿವೃದ್ಧಿ ಯೋಜನೆಗಳಿಗೆ ಕನಿಷ್ಠ 50 ಲಕ್ಷ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ಗಳವರೆಗೂ ನೆರವು ನೀಡುತ್ತಿದೆ. ಆದ್ದರಿಂದ ಈಗ ಔಷಧ ತಯಾರಿಕೆ ಕಂಪನಿಗಳು ಸರಿಯಾದ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಕೃಷ್ಣ ಮೋಹನ್ ಪ್ರತಿಪಾದಿಸಿದರು.

ಸಂವಾದದಲ್ಲಿ ಪಾಲ್ಗೊಂಡಿದ್ದ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ ಸಿಇಒ ಡಾ.ದೀಪಕ್ ಸಕ್ರಾ, “ಕೋವಿಡ್ ಸಂದರ್ಭವು ನಮ್ಮೆಲ್ಲರಿಗೂ ಒಳ್ಳೆಯ ಪಾಠ ಕಲಿಸಿತು. ರಷ್ಯಾದ ಕಂಪನಿಗಳಿಂದ ಸಿಕ್ಕಿದ ಸಹಭಾಗಿತ್ವದಿಂದಾಗಿ ನಾವು ಸ್ಪುಟ್ನಿಕ್ ಲಸಿಕೆಯನ್ನು ಅಭಿವೃದ್ಧಿ ಪಡಿಸುವುದು ಸಾಧ್ಯವಾಯಿತು. ಇದರಿಂದ ಭಾರತದ ಜೊತೆಗೆ ಇತರ ಅಭಿವೃದ್ಧಿಶೀಲ ದೇಶಗಳಿಗೂ ನೆರವಾಯಿತು. ಆದರೆ, ಸಂಶೋಧನೆ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಭಾರತ ಕ್ರಮಿಸಬೇಕಾದ ಹಾದಿ ಬಹಳಷ್ಟಿದೆ,’ ಎಂದರು.

ಅರಬಿಂದೋ ಫಾರ್ಮಾದ ಹಿರಿಯ ಉಪಾಧ್ಯಕ್ಷೆ ಡಾ.ದಿವ್ಯಾ ಬಿಜಲ್ವಾನ್ ಅವರು, `ದೇಶದಲ್ಲಿ ವಿಜ್ಞಾನ ಪ್ರತಿಭೆಗಳಿಗೇನೂ ಕೊರತೆ ಇಲ್ಲ. ಆದರೆ ಅದನ್ನು ಗುರುತಿಸಿ, ಸೂಕ್ತ ಸ್ಥಾನಮಾನಗಳನ್ನು ಕೊಡುವ ವಾತಾವರಣ ನಮ್ಮಲ್ಲಿಲ್ಲ. ಇದರ ಬಗ್ಗೆ ಲಸಿಕೆ ಮತ್ತು ಔಷಧ ಕಂಪನಿಗಳು ಅವಲೋಕನ ಮಾಡಿಕೊಂಡು, ತಮ್ಮ ಸಂಕುಚಿತ ಧೋರಣೆಯಿಂದ ಹೊರಬರಬೇಕು’ ಎಂದರು.

ಸಂವಾದದಲ್ಲಿ ಯಾಪನ್ ಬಯೋಪ್ರೈವೇಟ್ ಲಿಮಿಟೆಡ್ ಸಹಸಂಸ್ಥಾಪಕ ಅತಿನ್ ತೋಮರ್ ಭಾಗವಹಿಸಿದ್ದರು.

ನಾವು ಎಲ್ಲದಕ್ಕೂ ಪಾಶ್ಚಾತ್ಯ ಜಗತ್ತಿನ ಕಡೆಗೆ ನೋಡಬಾರದು. ಭಾರತದಲ್ಲೇ ಎಲ್ಲವನ್ನೂ ಸಾಧಿಸಿ ತೋರಿಸಬಹುದು. ಕೊರೋನಾ ಲಸಿಕೆಯ ಯಶೋಗಾಥೆಯು ಇಡೀ ಜಗತ್ತಿಗೆ ನಮ್ಮ ಶಕ್ತಿ-ಸಾಮರ್ಥ್ಯಗಳನ್ನು ತೋರಿಸಿ ಕೊಟ್ಟಿದೆ.

-ಅತಿನ್ ತೋಮರ್, ಸಿಇಒ, ಯಾಪನ್ ಬಯೋಪ್ರೈವೇಟ್ ಲಿ.

ಭಾರತವನ್ನು ಇಡೀ ಜಗತ್ತಿನ ಲಸಿಕೆ ವಲಯವನ್ನಾಗಿಸುವ ಉಜ್ವಲ ಅವಕಾಶ ಈಗ ನಮ್ಮ ಮುಂದಿದೆ. ಭಾರತ್ ಬಯೋಟೆಕ್ ಕಂಪನಿಯು ಈ ಸಾಧ್ಯತೆಯನ್ನು ನಮಗೆ ತೋರಿಸಿಕೊಟ್ಟಿದೆ.

ಡಾ.ದೀಪಕ್ ಸಪ್ರಾ, ಸಿಇಒ, ಡಾ.ರೆಡ್ಡೀಸ್ ಲ್ಯಾಬ್ಸ್
Tags: Bengalurubengaluru tech summitbharat biotechblr tech summitBTS2021chetan bhagathcovaxindr cn ashwath narayandriving the nextkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

Leave a Reply Cancel reply

Your email address will not be published. Required fields are marked *

Recommended

ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಇನ್ನೆರಡು ವರ್ಷ ಕರ್ನಾಟಕಕ್ಕೆ ನಾನೇ ಸಿಎಂ ಎಂದು ಘೋಷಿಸಿಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

4 years ago
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ