• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶ್ರೀರಾಮ ಪಾದ ಸೇರಿದ ರಾಮಾಯಣಾಚಾರ್ಯರು

cknewsnow desk by cknewsnow desk
November 26, 2021
in STATE
Reading Time: 1 min read
0
ಶ್ರೀರಾಮ ಪಾದ ಸೇರಿದ ರಾಮಾಯಣಾಚಾರ್ಯರು
976
VIEWS
FacebookTwitterWhatsuplinkedinEmail

ಪ್ರೊ.ಕೆ.ಎಸ್.ನಾರಾಯಣಚಾರ್ಯರು ಇನ್ನಿಲ್ಲ

by Dr.Guruprasad Rao Hawaldar

ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯ ಲೋಕದಲ್ಲಿ ಪೌರಾಣಿಕ, ಐತಿಹಾಸಿಕ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಧಿಕಾರಯುತವಾಗಿ ಬರೆಯಬಲ್ಲ ಮತ್ತು ಮಾತನಾಡಬಲ್ಲಂತಹವರು ಸಾಹಿತ್ಯಾಸಕ್ತರಿಂದ “ರಾಮಾಯಣಾಚಾರ್ಯರು” ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದವರು, ಕೇವಲ ಕನ್ನಡಕ್ಕೆ ಸೀಮಿತವಾಗದೇ ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ವಿದ್ವತ್ಪೂರ್ಣ ವಿಚಾರಗಳ ಮೂಲಕ  ಉಪನ್ಯಾಸವನ್ನು ನೀಡಿದಂತವರು, ಹಿರಿಯ ವಿದ್ವಾಂಸರು, ಲೇಖಕರು, ಧರ್ಮ ಪ್ರಚಾರಕರು ಮತ್ತು ಹೆಮ್ಮೆಯ ಪ್ರವಚನಕಾರರೂ  ಆದ ಪ್ರೊ.ಕೆ.ಎಸ್.ನಾರಾಯಣಚಾರ್ಯ ಅವರು ತಮ್ಮ 88ನೇ ವಯಸ್ಸಿನಲ್ಲಿ ಹರಿಪಾದ ಸೇರಿದರು.

ಪ್ರೊ. ಡಾ. ಕೆ.ಎಸ್ ನಾರಾಯಣಾಚಾರ್ಯ (88) ಅವರು ನ.26 ರಂದು ಮಧ್ಯರಾತ್ರಿ ಮೈಸೂರಿನ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರು ಜಿಲ್ಲೆಯ ಕಾನಕನಹಳ್ಳಿ ಅಂದರೆ ಈಗಿನ ಕನಕಪುರದ ಶ್ರೀ ಕೆ.ಎನ್.ಶ್ರೀನಿವಾಸ ದೇಶಿಕಾಚಾರ್ ಮತ್ತು ರಂಗನಾಯಕಮ್ಮ ದಂಪತಿಗಳಿಗೆ 1933ರ ಅಕ್ಟೋಬರ್ 30ರಂದು ಜನಿಸಿದರು. ಅವರದ್ದು ವೈಷ್ಣವ ಸಂಪ್ರದಾಯದ ವೈದಿಕ ವಿದ್ವಾಂಸರ ಕುಟುಂಬ. ಮನೆಯ ಮಾತೃಭಾಷೆ ತಮಿಳಾದರೂ ಸ್ಥಳೀಯ ಭಾಷೆ ಕನ್ನಡ ಮತ್ತು ಸಂಸ್ಕೃತವನ್ನು ಬಾಲ್ಯದಿಂದಲೇ ತಮ್ಮ ಮನೆಯಲ್ಲಿಯೇ ಕರಗತಮಾಡಿಕೊಂಡಿದ್ದಲ್ಲದೇ, ತಮ್ಮ ಸ್ವಹಿತಾಸಕ್ತಿಯಿಂದ ಇಂಗ್ಲೀಷ್ ಭಾಷೆಯಲ್ಲಿ ಪಾಂಡಿತ್ಯವನ್ನು ಸಂಪಾದಿಸಿಕೊಂಡರು.

ತಮ್ಮ ಬಾಲ್ಯದ ವಿದ್ಯಾಭ್ಯಾಸವನ್ನು ಕನಕಪುರದಲ್ಲಿಯೇ ಮುಗಿಸಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ತಮ್ಮ ಬಿ.ಎಸ್ಸಿ. ಪದವಿಯ ನಂತರ ಬಿ.ಎ. ಆನರ್ಸ್ ಕೂಡಾ ಪಡೆದದ್ದಲ್ಲದೇ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಪ್ರಭಾವದ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದು ಅಧಿಕಾರಯುತವಾಗಿ ಡಾ. ಕೆ.ಎಸ್.ನಾರಾಯಣಚಾರ್ಯರೆನಿಸಿದರು.

ನಂತರ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿ ಆದೇ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದ ಆಚಾರ್ಯರು, ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು. ಬಹುತೇಕ ಸಾಹಿತಿಗಳ ಜತೆ ನಿಕಟ ಸಂಬಂಧ ಹೊಂದಿದ್ದ ಆಚಾರ್ಯರು, ವರಕವಿ ದ.ರಾ.ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಅದುವರೆವಿಗೂ ಪ್ರವಚನದಲ್ಲೇ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಲ್ಲದೇ ಅಲ್ಲಿಂದ ಮುಂದೆ ಲೇಖನಗಳನ್ನು ಬರೆಯುತ್ತಾ  ಸಾಹಿತಿಗಳೆನಿಸಿದರು.

ಬೇಂದ್ರೆ ಮತ್ತು ಕೌಟಿಲ್ಯನ ಅರ್ಥಶಾಸ್ತ್ರದ ಬಗ್ಗೆ ಕೃತಿ ರಚಿಸಿದರಲ್ಲದೆ, ಸಂಸ್ಕೃತ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತಿ ಗಳಸಿ  ಸುಮಾರು 180ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿ ಸುಮಾರು 200ಕ್ಕೂ ಅಧಿಕ ಉಪನ್ಯಾಸಗಳನ್ನು ನೀಡಿದ್ದಾರೆ . ಸಂಸ್ಕೃತ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪಾಂಡಿತ್ಯ ಪಡೆದಿರುವ ಆಚಾರ್‍ಯರು 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದಾರೆ.

ವೇದ ಸಂಸ್ಕೃತಿಯ ಪರಿಚಯ, ರಾಮಾಯಣಸಹಶ್ರೀ, ಗೀತಾರತ್ನನಿಧಿ, ವೇದ ಸಂಸ್ಕೃತಿಯ ಪರಿಚಯ, ರಾಮಾಯಣ ಸಹಶ್ರೀ, ಗೀತಾರತ್ನ ನಿಧಿ, ರಾಮಾಯಣ ಪಾತ್ರ ಪ್ರಪಂಚ,ಅಗಸ್ತ್ಯ, ಶ್ರೀಮಾತೇ ಕುನ್ತಿ ಕಂದೆರೆದಾಗ, ಚಾಣಕ್ಯ ನೀತಿ ಸೂತ್ರಗಳು ರಾಮಾಯಣ ಪಾತ್ರ ಪ್ರಪಂಚ, ಅಗಸ್ತ್ಯ, ಆಚಾರ್ಯ ಚಾಣಕ್ಯ, ತಿರುಪ್ಪಾವೈ, ತಿರುಮಲೈ, ಸ್ತೋತ್ರರತ್ನಂ, ವಿಶಿಷ್ಟಾದ್ವೈತ ಮೂಲ ಪರಿಕಲ್ಪನೆಗಳು, ಮಹಾತ್ಮಗಾಂಧಿಯನ್ನು ಕೊಂದಿದ್ದು ಯಾರು? ಸುಭಾಷರ ಕಣ್ಮರೆ, ವಾಲ್ಮೀಕಿ ಯಾರು?, ಮತಾಂತರ, ಶ್ರೀ ರಾಮಜನ್ಮಭೂಮಿ ತೀರ್ಪು, ಮಹಾಮಾತೆ ಕುಂತಿ ಕಣ್ತೆರೆದಾಗ, ದೇವಕಿಯ ಚಿಂತನೆಗಳು, ಮಹಾ ಪ್ರಸ್ಥಾನ, ಕೃಷ್ಣಾವತಾರದ ಕೊನೆಯ ಗಳಿಗೆಗಳು-ಈ ಕೃತಿಯು ಅಪಾರ ಸಂಖ್ಯೆಯಲ್ಲಿ ಓದುಗರನ್ನು ಸೆಳೆದಿದ್ದು, ಸುಮಾರು 20000ಕ್ಕೂ ಅಧಿಕ ಕೃತಿಗಳು ಮಾರಾಟವಾಗಿವೆ.

‘ಶ್ರೀ ರಾಮಾವತಾರ ಸಂಪೂರ್ಣವಾದಾಗ’ ಕೃತಿಯು ಸಹ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ. ಶ್ರೀರಾಮಾಯಾಣದ ಮಹಾಪ್ರಸಂಗಗಳು, ಶ್ರೀಮದ್ ರಾಮಾಯಣದ ಮಹಾಪ್ರಸಂಗಗಳು, ವೇದ ಸಂಸ್ಕೃತಿಯನ್ನು 10 ಕೃತಿಗಳಲ್ಲಿ ಪರಿಚಯಿಸಿದ್ದಾರೆ. ರಾಮಾಯಣ, ರಾಮಕಥಾ ಸಾರ, ರಾಮಾಯಣ ಪಾತ್ರ ಪರಿಚಯ, ರಾಮಾಯಣ ಸಾಹಶ್ರೀ, ಮಹಾಭಾರತ ಪಾತ್ರ ಪರಿಚಯ, ವನದಲ್ಲಿ ಪಾಂಡವರು, ರಾಜಸೂಯದ ರಾಜಕೀಯ, ಶ್ರೀಕೃಷ್ಣ ಮತ್ತು ಮಹಾಭಾರತ ಯುದ್ಧ, ಆ ಹದಿನೆಂಟು ದಿನಗಳು (2 ಬೃಹತ್ ಸಂಪುಟಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಕಟಗೊಂಡಿವೆ) ಗುರುದೇವ ರಾನಡೆ ಅವರ ಉಪನ್ಯಾಸ ಸರಣಿ ಮಾಲಿಕೆಯ ಮಹಾಭಾರತದಲ್ಲಿ ಶ್ರೀಕೃಷ್ಣನ ಪಾತ್ರ, ವನಪರ್ವ, ವಿರಾಟಪರ್ವ ಸೇರಿದಂತೆ ಮಹಾಭಾರತ, ರಾಮಾಯಣ, ವೇದ ಸಂಸ್ಕೃತಿ, ಸನಾತನ ಪರಂಪರೆಯ ಹತ್ತು ಹಲವು ಕೃತಿಗಳನ್ನು ರಚಿಸಿದ್ದಾರೆ.

ಸಮಾಕಾಲೀನ ವಿಷಯಗಳಿಗೂ ಅವರು ಸ್ಪಂದಿಸಿ ಬರೆದ ಹಲವಾರು ಲೇಖನಗಳು ಕನ್ನಡ ಹಾಗೂ ಇಂಗ್ಲಿಷ್ ಪತ್ರಿಕೆ, ಪಾಕ್ಷಿಕ, ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.  ಇನ್ನು ಹಲವಾರು ಕೃತಿಗಳನ್ನು  ರಚಿಸಿರುವುದಲ್ಲದೇ ವಿವಿಧ ಪತ್ರಿಕೆ ಮತ್ತು ವಾರಪತ್ರಿಕೆಗಳಲ್ಲಿನ ಅಂಕಣ, ಬರಹಗಳು, ಪ್ರವಚನಗಳು ಮತ್ತು ವಿವಿಧ ಮಾಧ್ಯಮಗಳ ಚರ್ಚೆಯಗಳಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರಗಳ ಬಗ್ಗೆ ಆಧಿಕಾರಯುತವಾಗಿ ಆರ್ಥಪೂರ್ಣ ವಿಷಯಗಳನ್ನು ಪ್ರತಿಪಾದಿಸುವ ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದರು ಡಾ. ಕೆ.ಎಸ್. ನಾರಾಯಣಾಚಾರ್ಯರು ಆಚಾರ್ಯರ ಪಾಂಡಿತ್ಯಕ್ಕೆ ಹಲವಾರು ಪ್ರಶಸ್ತಿಗಳು ದೊರಕಿವೆ ಅದರಲ್ಲಿ ರಾಮಾಯಣ, ಭಾಗವತ, ಮಹಾಭಾರತ, ವೇದಗಳು, ಭಗವದ್ಗೀತೆ, ಹರಿದಾಸ ಸಾಹಿತ್ಯ ಪ್ರಸಾರಕ್ಕಾಗಿ ಪ್ರೊ.,ಕೆ.ಎಸ್. ನಾರಾಯಣಾಚಾರ್ಯ ಅವರಿಗೆ  ಬೆಂಗಳೂರಿನಲ್ಲಿ ಜರುಗಿದ ( 2016), ವಿಶ್ವ ರಾಮಾಯಣ ಸಮ್ಮೇಳನದಲ್ಲಿ ಇವರಿಗೆ ‘ವಾಲ್ಮೀಕಿ ಪ್ರಶಸ್ತಿ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವು ಡಿ.ಲಿಟ್ ನೀಡಿ ಗೌರವಿಸಿದೆ.  ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ವಿದ್ವನ್ಮಣಿ, ವೇದಭೂಷಣ, ಗಮಕ ರತ್ನಾಕರ, ಕರ್ನಾಟಕ ಕಲಾಶ್ರೀ, ಉಪನ್ಯಾಸ ಕೇಸರಿ ಬಿರುದು ಸಂದಿವೆ. ಕನ್ನಡ, ಇಂಗ್ಲಿಷ್ ಹಾಗೂ ತಮಿಳು ಭಾಷೆಯಲ್ಲಿ ರಾಮಾಯಣವನ್ನು ಆಧಿಕೃತವಾಗಿ ಉಪನ್ಯಾಸ ನೀಡುವ ವಿದ್ವತ್ ಗಾಗಿ ಸಾಹಿತ್ಯಾಸಕ್ತರು ಅವರಿಗೆ ‘ರಾಮಾಯಣಾಚಾರ್ಯರು’ ಎಂದೇ ಕರೆಯುತ್ತಿದ್ದರು. ಆಚಾರ್ಯರು 88 ವರ್ಷಗಳ ಜೀವನ ಯಾತ್ರೆಯನ್ನು  ಮುಗಿಸಿ ಬಾರದ ಲೋಕಕ್ಕೆ ತೆರಳಿದ್ದಾರೆ.

ಹೋಗಿ ಬನ್ನಿ ಆಚಾರ್ಯರೇ, ನಿಮಗೆ ನಮ್ಮೆಲ್ಲರ ನಮಸ್ಕಾರಳು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: cknewsnowkarnatakaks narayanacharyaMysurunewspassesawayramayanawriter
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಳೆಗೆ ಕುಸಿದ ರಾಷ್ಟ್ರೀಯ ಹೆದ್ದಾರಿ

ಮಳೆಗೆ ಕುಸಿದ ರಾಷ್ಟ್ರೀಯ ಹೆದ್ದಾರಿ

Leave a Reply Cancel reply

Your email address will not be published. Required fields are marked *

Recommended

ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಂದ ಚಾಲನೆ

ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಂದ ಚಾಲನೆ

4 years ago
ಮುಳಬಾಗಿಲಿನಿಂದ ನ.18 ಅಥವಾ 20ಕ್ಕೆ ಪಂಚರತ್ನ ರಥಯಾತ್ರೆ ಪುನಾರಂಭ

ಮುಳಬಾಗಿಲಿನಿಂದ ನ.18 ಅಥವಾ 20ಕ್ಕೆ ಪಂಚರತ್ನ ರಥಯಾತ್ರೆ ಪುನಾರಂಭ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ