• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎತ್ತಿನಹೊಳೆ ಹಣ ಲೂಟಿ ಹೊಡೆಯುವ ಯೋಜನೆ: ಹೆಚ್‌.ಡಿ.ಕುಮಾರಸ್ವಾಮಿ

cknewsnow desk by cknewsnow desk
November 28, 2021
in STATE
Reading Time: 2 mins read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
1.1k
VIEWS
FacebookTwitterWhatsuplinkedinEmail

2010ರಲ್ಲಿ ಯೋಜನಾ ಗಾತ್ರ 8,000 ಕೋಟಿ ರೂ., 2016ರಲ್ಲಿ 16,000 ಕೋಟಿ ರೂ., 2021ರಲ್ಲಿ 24,000 ಕೋಟಿ ರೂ.ಗಳಿಗೆ ಜಿಗಿತ

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಹಣ ಮಾಡುವ ಯೋಜನೆಯಾಗಿದೆಯೇ ವಿನಾ ನೀರು ಕೊಡುವ ಯೋಜನೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎತ್ತಿನಹೊಳೆ ಯೋಜನೆಯೂ ಈವರೆಗೆ ಡಿಪಿಆರ್ ಆಗದೆ ಕೇವಲ ಲೇನ್‌ ಎಸ್ಟಿಮೇಟ್ ಆಧಾರದಲ್ಲಿ ಕಾಮಗಾರಿ ಸಾಗಿರುವ ಅವೆಜ್ಞಾನಿಕ ಯೋಜನೆಯಾಗಿದೆ ಎಂದರು.

ಚಿಕ್ಕಬಳ್ಳಾಪುರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಅಂತರ್ಜಲಕ್ಕೆ ವಿಷಪ್ರಾಷಣ

ಯಾರು ಈ ಭಾಗಕ್ಕೆ ನೀರು ತರುತ್ತೇನೆಂದು ಹಠಕ್ಕೆ ಬಿದ್ದವರಂತೆ ಯೋಜನೆ ರೂಪಿಸಿದರೋ ಅವರೇ ಪೂರ್ಣಗೊಳಿಸಲಿ. ಕುಡಿಯುವ ನೀರನ್ನು ಕೊಡುವ ಬದಲು ಕೊಳಚೆ ನೀರನ್ನು ನೀಡಿರುವ ಆಧುನಿಕ ‘ಭಗೀರಥ ಡಾ.ಕೆ.ಸುಧಾಕರ್ ಅವರೇ ಇದರ ಅನಾಹುತಗಳಿಗೆ ನೇರ ಹೊಣೆಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ 3ನೇ ಹಂತದ ಶುದ್ದೀಕರಣ ಇಲ್ಲದೆ ನೀರನ್ನು ಚಿಕ್ಕಬಳ್ಳಾಪುರ-ಕೋಲಾರಕ್ಕೆ ಹರಿಸಬಾರದು ಎಂದು ಅಕಾರಿಗಳಿಗೆ ತಾಕೀತು ಮಾಡಿದ್ದೆ. ಬದಲಾದ ಕಾಲಘಟ್ಟದಲ್ಲಿ ಬಿಜೆಪಿ ಸರಕಾರ ಎರಡು ಹಂತದಲ್ಲಿ ಶುದ್ಧೀಕರಿಸಿ ಹರಿಸುತ್ತಿರುವುದರಿಂದ ಅಂತರ್ಜಲಕ್ಕೆ ವಿಷ ಮರುಪೂರಣ ಆಗುತ್ತಿದೆ. ಮುಂದಿನ ದಿನಗಳಲ್ಲಿ ಜನತೆ ಆರೋಗ್ಯದ ಸಮಸ್ಯೆ ಎದುರಿಸಬೇಕಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮೇಲ್ಮನೆ ಚುನಾವಣೆಗೆ ಒಮ್ಮತ ಅಭ್ಯರ್ಥಿ

ಜಿಲ್ಲೆಯ ಬೆಳವಣಿಗೆಯಲ್ಲಿ ನನ್ನದೂ ಪಾಲಿದೆ. ಜಿಲ್ಲೆಯನ್ನು ಘೋಷಣೆ ಮಾಡಿ ಇದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಿದ್ದೇನೆ. ಕುಡಿಯುವ ನೀರಿಗೆ ಆಸರೆಯಾಗಿ ಜಕ್ಕಲಮಡಗು ಜಲಾಶಯ, ಜಿಲ್ಲಾಡಳಿತ ಭವನ, ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯ ಅನುದಾನ ನೀಡಿದ್ದೇನೆ. ನನಗೆ ರಾಮನಗರ ಹೇಗೋ ಚಿಕ್ಕಬಳ್ಳಾಪುರವೂ ಹಾಗೆಯೇ. ಅವಳಿ ಜಿಲ್ಲೆಯಾಗಿದ್ದ ಕಾಲದಲ್ಲಿ ಇಲ್ಲಿಂದ 10 ಜನ ಶಾಸಕರನ್ನು ಪಕ್ಷಕ್ಕೆ ನೀಡಿದ್ದ ಕೀರ್ತಿ 11 ತಾಲೂಕುಗಳಿಗೆ ಇದೆ. ಅಂತಹ ಇತಿಹಾಸವನ್ನು 2023ರಲ್ಲಿ ಪುನಾ ಮರುಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, ಅವಳಿ ಜಿಲ್ಲೆಯ ಒಮ್ಮತದ ಅಭ್ಯರ್ಥಿಯಾಗಿ ರಾಮು ಅವರನ್ನು ವಿಧಾನ ಪರಿಷತ್‌ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿದ್ದು, ಗೆಲುವು ಖಚಿತ ಎಂದರು ಮಾಜಿ ಮುಖ್ಯಮಂತ್ರಿ.

ಯಡಿಯೂರಪ್ಪ ಮಾದರಿ

ರಾಜಕಾರಣದಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಯಡಿಯೂರಪ್ಪ ಅವರು ಮಾನವ ಸಂಬಂಧಗಳಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುತ್ತಾರೆ. ಪಕ್ಷವು ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೂ, ಮಾನಸಿಕವಾಗಿ ನೊಂದಿದ್ದರೂ ಪಕ್ಷದ ನಿಷ್ಠೆಯಲ್ಲಿ ಅವರಿಗೆ ಅವರೇ ಸಾಟಿಯಾಗಿದ್ದಾರೆ. ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದ ಕಡೆ ಬಿಜೆಪಿಗೆ ಮತ ನೀಡಬೇಕು ಎಂದು ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಇದಾವುದನ್ನೂ ಮಾಡದೆ ಸುಮ್ಮನೆ ಆರೋಪ ಮಾಡುತ್ತಿದೆ. ಸಮಯ ಬಂದಾಗ ನಾವು ಯಾರ ಪರ ಕೆಲಸ ಮಾಡುತ್ತೇವೆ ಎಂದು ತಿಳಿಸುತ್ತೇನೆ ಎಂದರು ಅವರು.

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ನಮ್ಮನ್ನು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರುತ್ತಿದ್ದಾರೆ. ಇವರಿಗೆ ನಮ್ಮ ಪಕ್ಷವನ್ನು ದೂರಿದರೆ ಮಾತ್ರವೇ ತಿಂದ ಅನ್ನ ಅರಗಲು ಸಾಧ್ಯವಿದ್ದಂತಿದೆ. ಹಾಗಾದರೆ  ಇವೆರಡೂ ಪಕ್ಷದ ಅಭ್ಯರ್ಥಿಗಳು ಕಣದಲ್ಲಿರುವ ಆರು ಕಡೆ ನಾವು ಅಭ್ಯರ್ಥಿಯನ್ನು ಹಾಕಿದ್ದೇವೆ. ಇಲ್ಲಿ ಕಾಂಗ್ರೆಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆಯಾ? ಎಂದು ಅವರು ಪ್ರಶ್ನಿಸಿದರು.

ಜೆಡಿಎಸ್ ಕಿಂಗ್ ಮೇಕರ್

ರಾಜ್ಯದ 6 ಕ್ಷೇತ್ರಗಳನ್ನು ಬಿಟ್ಟರೆ ಉಳಿದ ಕಡೆ ಜೆಡಿಎಸ್ ಪಕ್ಷದ ಬೆಂಬಲವಿಲ್ಲದೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿಲ್ಲ. ಇದನ್ನು ಮನಗಂಡು ಎರಡು ಪಕ್ಷಗಳ ಮುಖಂಡರು ಜೆಡಿಎಸ್ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿದರೆ ಅವರಿಗೇ ಉತ್ತಮ ಎಂದು ಕುಮಾರಸ್ವಾಮಿ ಹೇಳಿದರು.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಗೀಡಾದ ಬೆಳೆ ನಷ್ಟದ ಬಗ್ಗೆ ತುರ್ತಾಗಿ ಸಮೀಕ್ಷೆ ನಡೆಸಿ ಎನ್‌ಡಿಆರ್‌ಎಫ್,ಎಸ್‌ಡಿಆರ್‌ಎಫ್  ಎನ್ನದೆ ಮಾನವೀಯತೆಯೆ ಆಧಾರದಲ್ಲಿ ಅವರ ಖರ್ಚನ್ನು ಪರಿಗಣಿಸಿ ಶೇ.75ರಷ್ಟು ಪರಿಹಾರ ನೀಡಬೇಕು. ಬೆಳೆ ಹಾನಿಯ ಬಗ್ಗೆ ಮುಖ್ಯಮಂತ್ರಿ 5 ಲಕ್ಷ ಹೆಕ್ಟೇರ್ ಹಾನಿಯಾಗಿದೆ ಎಂದರೆ,  ಕೃಷಿ ಸಚಿವರು 10 ಲಕ್ಷ ಹೆಕ್ಟೇರ್ ಎನ್ನುತ್ತಾರೆ. ಈ ಸರಕಾರದಲ್ಲಿ ಮುಖ್ಯಮಂತ್ರಿಗಳು ಮತ್ತವರ ಸಚಿವರ ನಡುವೆಯೇ ಹೊಂದಾಣಿಕೆ ಇಲ್ಲ ಎಂಬುದು ಇದರಿಂದ ತಿಳಿಯುತ್ತದೆ. ಹಾಗಾದರೆ ಇವರಿಬ್ಬರೂ ಮಾಹಿತಿ ನೀಡಿದವರು ಯಾರು ? ಎಂದು ಮಾಜಿ ಸಿಎಂ ಅಚ್ಚರಿ  ವ್ಯಕ್ತಪಡಿಸಿದರು.

ಹೂವಿನ ಮಾರುಕಟ್ಟೆ

ಜಿಲ್ಲೆಯ ರೈತರ ಅನುಕೂಲವನ್ನು ಪರಿಗಣಿಸಿ 25 ಎಕರೆ ಇರುವ ಎಪಿಎಂಸಿ ಆವರಣದಲ್ಲಿಯೇ ಹೂವಿನ ಮಾರುಕಟ್ಟೆ ಇರಲಿ. ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಲ್ಲಿಯೇ ವ್ಯಾಪಾರ ವಹಿವಾಟು ನಡೆಸಲು ಸರಕಾರ ಅವಕಾಶ ಮಾಡಲಿ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡುತ್ತೇನೆ. ವಿಧಾನ ಸಭೆಯಲ್ಲೂ ವಿಷಯ ಪ್ರಸ್ತಾಪಿಸಿ ಸರಕಾರದ ಮೇಲೆ ಒತ್ತಡ ಹೇರುತ್ತೇನೆ ಎಂದು ಅವರು ತಿಳಿಸಿದರು.

2023ಕ್ಕೆ ಸ್ವತಂತ್ರ ಸರಕಾರ

2023ರಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಪಂಚರತ್ನ ಯೋಜನೆಯಂತೆ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಪ್ರತಿಯೊಬ್ಬ ಮತದಾರರನ್ನು ಮುಟ್ಟುವ ಕೆಲಸ ಮಾಡಲಿದ್ದೇವೆ. ಹೊಂದಾಣಿಕೆ ರಾಜಕಾರಣ ಸಾಕಾಗಿ ಹೋಗಿದ್ದು, ಇದರಿಂದಾಗಿಯೇ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ದಿಸೆಯಲ್ಲಿ ಬಿಜೆಪಿ ಕಾರ್ಯತಂತ್ರವನ್ನು ನಾವು ಅಳವಡಿಸಿಕೊಳ್ಳುವ ಅಗತ್ಯವಿದೆ. 123 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪ್ರಬಲ ಹೋರಾಟ  ಮಾಡಲಾಗುವುದು. ಏನೇ ಆಗಲಿ ಎರಡೂ ಪಕ್ಷಗಳು ನಮ್ಮ ಬೆಂಬಲ ಇಲ್ಲದೆ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳುವ ಕಾಲ ಬರಲಿದೆ ಎಂದು ಅವರು ಭವಿಷ್ಯ ನುಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜೆಡಿಎಸ್ ವಿಧಾನ ಪರಿಷತ್ತಿನ ಅಭ್ಯರ್ಥಿ ವಕ್ಕಲೇರಿ ರಾಮು, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು,‌ ಮಾಲೂರಿನ ರಾಮೇಗೌಡ, ಮೇಲೂರು  ರವಿಕುಮಾರ್, ಮಲ್ಲೇಶ್, ನರಸಿಂಹಮೂರ್ತಿ, ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ, ನಗರಸಭೆ ಸದಸ್ಯ ಮಟಮಪ್ಪ ಮತ್ತಿತರರು ಇದ್ದರು.

ಈ ಸುದ್ದಿ ಓದಲು ಕೆಳಗಿಬ ಲಿಂಕ್‌ ಕ್ಲಿಕ್‌ ಮಾಡಿ…
ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ!
Tags: cknewsnowcorruptiondprdr k sudhakardrinking water projecthd kumaraswamyhn valleyjdsmoney lootnewsyettinahole
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಗರಸಭೆ ಸದಸ್ಯರ ಅನರ್ಹತೆ ಪ್ರಕರಣ: 4 ವಾರಗಳಲ್ಲಿ ಇತ್ಯರ್ಥ ಮಾಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶ

ನಗರಸಭೆ ಸದಸ್ಯರ ಅನರ್ಹತೆ ಪ್ರಕರಣ: 4 ವಾರಗಳಲ್ಲಿ ಇತ್ಯರ್ಥ ಮಾಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶ

Leave a Reply Cancel reply

Your email address will not be published. Required fields are marked *

Recommended

ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

4 years ago
ಸ್ಕೂಟರ್ ಪೆಟ್ರೋಲ್’ಗೆ ಕಾಸಿಲ್ಲದಿದ್ದವರೂ ಈಗ ಹೇಗಿದ್ದಾರೆ ಎನ್ನುವುದು ಗೊತ್ತಿದೆ!

ಸ್ಕೂಟರ್ ಪೆಟ್ರೋಲ್’ಗೆ ಕಾಸಿಲ್ಲದಿದ್ದವರೂ ಈಗ ಹೇಗಿದ್ದಾರೆ ಎನ್ನುವುದು ಗೊತ್ತಿದೆ!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ