• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಂಡಿ ಗೂಂಡಾಗಳ ಜತೆ ರಾಜಿ; ರೈತನಿಗೆ ಲಕ್ಷ-ಲಕ್ಷ ರೇಟ್‌ ಫಿಕ್ಸ್ ಮಾಡಿಸಿದ್ದ ರಾಜಕಾರಣಿ ಸಂಬಂಧಿ!!

cknewsnow desk by cknewsnow desk
December 6, 2021
in CHIKKABALLAPUR, EDITORS'S PICKS, STATE
Reading Time: 1 min read
0
ಮಂಡಿ ಗೂಂಡಾಗಳ ಜತೆ ರಾಜಿ; ರೈತನಿಗೆ ಲಕ್ಷ-ಲಕ್ಷ ರೇಟ್‌ ಫಿಕ್ಸ್ ಮಾಡಿಸಿದ್ದ ರಾಜಕಾರಣಿ ಸಂಬಂಧಿ!!

ಮಂಡಿ ಗೂಂಡಾಗಳಿಂದ ದಾಳಿಗೊಳಗಾದ ರೈತ ಶ್ರೀನಿವಾಸಯ್ಯ.

2.1k
VIEWS
FacebookTwitterWhatsuplinkedinEmail

ರೈತರನ್ನು ಕಡೆಗಣಿಸಿ ಮಂಡಿ ಗೂಂಡಾಗಳ ಪರ ನಿಂತ ಬಾಗೇಪಲ್ಲಿ ರಾಜಕಾರಣಿಗಳು; ರೈತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು, ಜಾಮೀನು

ಬಾಗೇಪಲ್ಲಿ/ಬೆಂಗಳೂರು: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಟೊಮೆಟೋ ಬೆಳೆಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಮಂಡಿ ಗೂಂಡಾಗಳು ಸಿಕ್ಕಿದ್ದು, ಸೋಮವಾರ ಅವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಅವರಿಗೆ ಕೋರ್ಟ್‌ ಜಾಮೀನು ನೀಡಿದೆ.

ಶನಿವಾರದಂದು ಗುಡಿಬಂಡೆ ತಾಲೂಕಿನ ಬೆಣ್ಣೆಪರ್ತಿಯ ರೈತ ಶ್ರೀನಿವಾಸಯ್ಯ ಮೇಲೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿ ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗಳು, ಭಾನುವಾರ ಬಾಗೇಪಲ್ಲಿ ಠಾಣೆಯಲ್ಲಿ ಪ್ರತ್ಯಕ್ಷರಾದರು. ಪೊಲೀಸರು ಬಂಧಿಸಿದ್ದೇವೆ ಎಂದು ಹೇಳುತ್ತಿದ್ದಾರಾದರೂ, ಆರೋಪಿಗಳು ಶರಣಾದರು ಎಂದು ಕೆಲ ಮೂಲಗಳು ಹೇಳುತ್ತಿವೆ.

ಮಂಡಿ ವರ್ತಕರಾದ ನಾಗೇಶ್‌, ಕೃಷ್ಣಪ್ಪ, ಪ್ರತಾಪ್‌, ಕಿಟ್ಟಿ, ನಾರಾಯಣಸ್ವಾಮಿ, ಪ್ರಸಾದ್‌ ಎಂಬುವವರನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದರ ಜತೆಗೆ ರೈತ ಶ್ರೀನಿವಾಸಯ್ಯನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಮುಚ್ಚಿಹಾಕುವ ಅಥವಾ ಅದಕ್ಕೆ ತಿಪ್ಪೆ ಸಾರಿಸುವ ಪ್ರಯತ್ನಗಳನ್ನು ಪ್ರಭಾವೀ ರಾಜಕೀಯ ಶಕ್ತಿಗಳು ನಡೆಸಿದ್ದು, ಪ್ರಕರಣ ದಾಖಲಾಗದೇ ಹೊರಗೆಯೇ ರಾಜಿ ಪಂಚಾಯಿತಿ ನಡೆಸಿ ಮಂಡಿ ಗೂಂಡಾಗಳನ್ನು ರಕ್ಷಿಸಿಕೊಳ್ಳುವ ವ್ಯರ್ಥ ಪ್ತಯತ್ನಕ್ಕೆ ಕೆಲ ರಾಜಕಾರಣಿಗಳು ಯತ್ನಸಿರುವ ನಾಚಿಕೆಗೇಡಿನ ಬೆಳವಣಿಗೆಯೂ ನಡೆದಿದೆ.

ಮತ್ತೊಂದೆಡೆ ಬಾಗೇಪಲ್ಲಿ ಕ್ಷೇತ್ರದ ಪ್ರಭಾವೀ ರಾಜಕಾರಣಿ ಕಂ ಜನಪ್ರತಿನಿಧಿ ಸೇರಿ, ಅವರ ಸಂಬಂಧಿಕರೊಬ್ಬರು ಪೊಲೀಸ್‌ ಠಾಣೆ ಬಳಿಯೇ ಶ್ರೀನಿವಾಸಯ್ಯ ಮೇಲೆ ಒತ್ತಡ ಹೇರಿ ಕೆಲ ಲಕ್ಷ ರೂ.ಗಳಿಗೆ ರಾಜಿ ವ್ಯವಹಾರ ಕುದುರಿಸಲು ಯತ್ನಸಿದ ಹೇಯ ಕೃತ್ಯವೂ ಬೆಳಕಿಗೆ ಬಂದಿದೆ. ಹಣ ಪಡೆದು ರಾಜಿ ಮಾಡಿಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದ ಶ್ರೀನಿವಾಸಯ್ಯ ಆರೋಪಿಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಖಡಕ್‌ ಆಗಿ ಹೇಳಿದ್ದಾರೆ.

ಅಲ್ಲದೆ; ತಾಲೂಕು ಮತ್ತು ಜಿಲ್ಲಾ ಮಟ್ಟದ ರೈತ ಮುಖಂಡರು ಸಂತ್ರಸ್ತ ರೈತನ ನೆರವಿಗೆ ಧಾವಿಸಿದ್ದಾರಲ್ಲದೆ, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿಲ್ಲವಾದರೆ ಉಗ್ರ ಪ್ರತಿಭಟನೆ ನಟಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಪರಿಣಾಮವಾಗಿ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತೊಂದೆಡೆ, ರಾಜಿ ಮಾಡಿಕೊಳ್ಳುವಂತೆ ರೈತ ಶ್ರೀನಿವಾಸಯ್ಯ ಮೇಲೆ ರಾಜಕೀಯ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರು, ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ. ಅವರ ಮೊಬೈಲ್‌ ಗೆ ಕರೆ ಮಾಡಿದರೆ ನಾಟ್‌ ರೀಚಬಲ್‌ ಮೋಡ್‌ ನಲ್ಲಿತ್ತು. ಬೇರೆ ಬೇರೆ ರೀತಿಯಲ್ಲಿ ಅವರ ಮೇಲೆ ಒತ್ತಡ ಹೇರುವ, ಬೆದರಿಕೆ ಹಾಕುವ ತಂತ್ರಗಳನ್ನು ಅನುಸರಿಸಲಾಗುತ್ತಿದೆ ಎಂದು ಅವರ ಸಂಬಂಧಿಕರೊಬ್ಬರು ತಿಳಿಸಿದ್ದು, ಪೊಲೀಸರು ಶ್ರೀನಿವಾಸಯ್ಯ ಅವರಿಗೆ ರಕ್ಷಣೆ ನೀಡಬೇಕು ಎನ್ನುತ್ತಾರೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ನ್ಯಾಯಯುತ ಬೆಲೆ ಕೇಳಿದ ರೈತನನ್ನು ಅಟ್ಟಾಡಿಸಿ ಹೊಡೆದ ಮಂಡಿ ಗೂಂಡಾಗಳು

ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ರೈತನ ವಿರುದ್ಧ ನಡೆದ ಹಲ್ಲೆ ಪ್ರಕರಣವನ್ನು ಮುಚ್ಚಿಹಾಕಿಸಿ ಇಡೀ ಪ್ರಕರಣವನ್ನು ರಾಜಿ ಹೆಸರಿನಲ್ಲಿ ಹಳ್ಳ ಹಿಡಿಸಲು ಪ್ರಯತ್ನಪಟ್ಟ ಜನಪ್ರತಿನಿಧಿ ಹಾಗೂ ಅವರ ಭಾವಮೈಧುನನ ಕಥೆ ಇದೀಗ ಇಡೀ ಬಾಗೇಪಲ್ಲಿ ಕ್ಷೇತ್ರದಲ್ಲಿ ರೈತರು ಆಕ್ರೋಶದಿಂದ ಮಾತನಾಡಿಕೊಳ್ಳುತ್ತಿದ್ದಾರೆ. ಮತಕ್ಕಾಗಿ ರೈತರ ಮನೆ ಬಾಗಿಲಿಗೆ ಬಂದು ʼಸೇವೆʼಯ ಪೋಸು ಕೊಡುವ ಆ ಜನಪ್ರತಿನಿಧಿಯು ಮಂಡಿ ಮಾಲೀಕರ ಪರವಾಗಿ ನಿಂತ ಬಗ್ಗೆ ಇಡೀ ರೈತ ಸಮೂಹದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಾಗೇಪಲ್ಲಿ ಮಾರುಕಟ್ಟೆಯಲ್ಲಿ ಕಮೀಷನ್ ಮತ್ತು ತೂಕದಲ್ಲಿ ಮೋಸ ಮಾಡುವುದು ಅವ್ಯಾಹತವಾಗಿ ನಡೆದುಕೊಂಡು ಬರುತ್ತಿದ್ದರೂ ಕ್ಷೇತ್ರದ ಶಾಸಕ ಎಸ್.‌ಎನ್.ಸುಬ್ಬಾರೆಡ್ಡಿ ಚಕಾರ ಎತ್ತದಿರುವುದು ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರೈತನ ಮೇಲೆ ಸಾಯುವ ರೀತಿಯಲ್ಲಿ ಮಂಡಿ ಗೂಂಡಾಗಳು ದಾಳಿ ನಡೆಸಿದರೂ ಆ ಬಗ್ಗೆ ಇನ್ನು ಒಂದು ಹೇಳಿಕೆಯನ್ನೂ ನೀಡದ ಶಾಸಕರ ಬಗ್ಗೆ ಜನರ ತಾಳ್ಮೆ ಕಟ್ಟೆಯೊಡೆಯುತ್ತಿದೆ.  

ಡಿಸೆಂಬರ್‌ 16ಕ್ಕೆ ಪ್ರತಿಭಟನೆ

ಬಾಗೇಪಲ್ಲಿ ಎಪಿಎಂಸಿ ಮಾರುಕಟ್ಟೆಯಲ್ಲಿ10 ರೂ. ಕಮೀಷನ್ ಹಾಗೂ ಬಾಕ್ಸ್ ಗೆ 2 ರೂ. ಬಾಡಿಗೆ ಪಡೆಯುತ್ತಿರುವುದರ ವಿರುದ್ಧ ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳ ಸಾವಿರಾರು ರೈತರು ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಎಪಿಎಂಸಿ ಕಾಯ್ದೆಗಳನ್ನು ಉಲಂಘನೆ ಮಾಡಿ, ರೈತರಿಗೆ ಮೋಸ ಮಾಡುತ್ತಿರುವ ಎಪಿಎಂಸಿ ವರ್ತಕರ ವಿರುದ್ಧ ರೈತಸಂಘ ಹಾಗೂ ಮತ್ತಿತರೆ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.

ರಾಜಕೀಯ ಒತ್ತಡಕ್ಕೆ ಮಣಿಯದ ಪೊಲೀಸರು

ಮಂಡಿ ವರ್ತಕರ ವಿರುದ್ಧ ಪೊಲೀಸರು ಎಫ್.ಐ.ಆರ್ ದಾಖಲಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರೆ ಹಾಗೂ ಅವರನ್ನು ಬಂಧಿಸದಂತೆ ಪೊಲೀಸರ ಮೇಲೆ ಒತ್ತಡವನ್ನು ಹೇರಲಾಗಿತ್ತು ಎನ್ನುವ ಅಂಶ ಬೆಳಕಿಗೆ ಬಂದಿದೆ. ಇಂಥ ಯಾವ ಒತ್ತಡಕ್ಕೂ ಕೇರ್ ಮಾಡದ ಪೊಲೀಸರು ಅಪರಾಧಿಗಳನ್ನು ಬಂಧಿಸಿದ್ದಾರೆಂದು ಕೆಲ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ. ಅಲ್ಲದೆ, ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದರು.

ರಾಜ್ಯವ್ಯಾಪಿ ಖಂಡನೆ

ಬಾಗೇಪಲ್ಲಿ ಎಪಿಎಂಸಿ ಮಾರುಕಟ್ಟೆ ರೈತರ ಮೇಲೆ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಮಂಡಿ ವರ್ತಕರ ಕಮೀಷನ್ ದಂಧೆ ವಿರುದ್ಧ ರಾಜ್ಯ ರೈತ ಸಂಘದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಇದರ ಬೆನ್ನೆಲ್ಲೆ ಡಿ.16ರಂದು ಬೆಣ್ಣೆಪರ್ತಿ ರೈತ ಶ್ರೀನಿವಾಸಯ್ಯ ಪರವಾಗಿ ಪ್ರತಿಭಟನೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ರೈತ ಮೂಲಗಳಿಂದ ಸಿಕೆನ್ಯೂಸ್‌ ನೌ ಗೆ ಲಭ್ಯವಾಗಿದೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ನಾಚಿಕೆಗೇಡು!! ; ಬಾಗೇಪಲ್ಲಿಯಲ್ಲಿ ರೈತರ ಮೇಲೆ ಮಂಡಿ ಮಾಫಿಯಾ ಗೂಂಡಾಗಿರಿ

Tags: apmc marketbagepallichikkaballapuracknewsnowfarmers under attackkarnatakanewstomato
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪ್ರಧಾನಿ ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ

ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 500 ಮತ ಇದೆ, 2.500 ವೋಟು ಎಲ್ಲಿಂದ ಬರುತ್ತದೆ?

Leave a Reply Cancel reply

Your email address will not be published. Required fields are marked *

Recommended

5 ಗ್ಯಾರಂಟಿ ಜಾರಿಗೆ 5 ಇಲಾಖೆಗಳ ಅಧಿಕಾರಿಗಳ ಜತೆ ಸಮಾಲೋಚನೆ

5 ಗ್ಯಾರಂಟಿ ಜಾರಿಗೆ 5 ಇಲಾಖೆಗಳ ಅಧಿಕಾರಿಗಳ ಜತೆ ಸಮಾಲೋಚನೆ

2 years ago
ಕೋವಿಡ್‌ ಸಂಕಷ್ಟ ಕಾಲದಲ್ಲೂ ಸಮತೋಲಿತ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿಗಳನ್ನು ಶ್ಲಾಘಿಸಬೇಕೆ ಹೊರತು ಟೀಕಿಸಬಾರದು ಎಂದ ರಾಮಲಿಂಗಪ್ಪ

ಕೋವಿಡ್‌ ಸಂಕಷ್ಟ ಕಾಲದಲ್ಲೂ ಸಮತೋಲಿತ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿಗಳನ್ನು ಶ್ಲಾಘಿಸಬೇಕೆ ಹೊರತು ಟೀಕಿಸಬಾರದು ಎಂದ ರಾಮಲಿಂಗಪ್ಪ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ