• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ಎರಡು ಒಮಿಕ್ರಾನ್ ಕೇಸ್

cknewsnow desk by cknewsnow desk
December 6, 2021
in COVID-19
Reading Time: 1 min read
0
ಕೋರೊನಾ ನಿಯಂತ್ರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಡೀ ರಾಜ್ಯಕ್ಕೆ ಮಾದರಿ ಎಂದು ಹೇಳಿಕೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
925
VIEWS
FacebookTwitterWhatsuplinkedinEmail

ಸಂಪರ್ಕಿತರಿಗೆ ಸೋಂಕು ಕಂಡುಬಂದಿಲ್ಲ‌; ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದರೆ ಒಮಿಕ್ರಾನ್ ತೀವ್ರತೆ ಕಡಿಮೆ ಎಂದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಸೋಂಕಿತರ ಸಂಪರ್ಕದಲ್ಲಿದ್ದವರ ಜಿನೊಮಿಕ್ಸ್ ಸೀಕ್ವೆನ್ಸ್ ವರದಿ ಇನ್ನೂ ಬಂದಿಲ್ಲ. ಬೇರೆ ರಾಜ್ಯಗಳಲ್ಲಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಮ್ಮ ರಾಜ್ಯದಲ್ಲಿ ಇಲ್ಲಿ ತನಕ ಎರಡು ಕೇಸ್ ಮಾತ್ರ ಇದೆ. ಅವರ ಸಂಪರ್ಕಿತರಿಗೆ ಯಾವುದೇ ಸಮಸ್ಯೆಗಳು, ಲಕ್ಷಣಗಳು ಕಂಡುಬಂದಿಲ್ಲ. ಬೌರಿಂಗ್ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆ ನಿರ್ದೇಶಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಒಮಿಕ್ರಾನ್ ಸೋಂಕಿತರ ಸಂಪರ್ಕ ಹೊಂದಿದ್ದವರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದರು.

ಎರಡು ಡೋಸ್ ಲಸಿಕೆ ತೆಗೆದುಕೊಂಡವರಲ್ಲಿ ಒಮಿಕ್ರಾನ್ ಸೋಂಕು ತೀವ್ರತೆ ಇರುವುದಿಲ್ಲ. ಇದಕ್ಕೆ ಸೋಂಕಿತರ ಸಂಪರ್ಕದಲ್ಲಿರುವ ಲಕ್ಷಣಗಳೇ ಉದಾಹರಣೆಯಾಗಿದೆ. ಒಂದು ಡೋಸ್ ನಿಂದ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುವುದಿಲ್ಲ. ಎರಡೂ ಡೋಸ್ ತೆಗೆದುಕೊಂಡಾಗ ಮಾತ್ರ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುತ್ತದೆ. ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.

ಒಮಿಕ್ರಾನ್ ವಿಚಾರದಲ್ಲಿ ದೊಡ್ಡ ವ್ಯಾಖ್ಯಾನ ಮತ್ತು ಆತಂಕ ಪಡುವಂತಹದ್ದು ಏನೂ ಇಲ್ಲ. ಇದಕ್ಕಿಂತ ಹೆಚ್ಚು ಆತಂಕಕಾರಿಯಾಗಿದ್ದ ಡೆಲ್ಟಾ ರೂಪಾಂತರಿಯನ್ನೇ ನಾವು ಎದುರಿಸಿದ್ದೇವೆ. ಡೆಲ್ಟಾಕ್ಕೆ ಹೋಲಿಕೆ ಮಾಡಿದರೆ, ಓಮಿಕ್ರಾನ್ ಹರಡುವಿಕೆಯಲ್ಲಿ ಮಾತ್ರ ಆತಂಕ ಸೃಷ್ಟಿಸಿದೆ. ಇದರ ತೀವ್ರತೆ ವಿಶ್ವದಲ್ಲಿ ಎಲ್ಲೂ ನೋಡಿಲ್ಲ. ಬೋಟ್ಸ್ ವಾನಾ, ಸೌತ್ ಅಫ್ರಿಕಾ ಸೇರಿದಂತೆ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಿರುವ ದೇಶಗಳಲ್ಲಿ ತೀವ್ರತೆ ಕಾಣುತ್ತಿಲ್ಲ. ಈ ವೈರಸ್ ಲಕ್ಷಣಗಳು ಮೃದುವಾಗಿವೆ. ಹೀಗಾಗಿ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದು ಬಹಳ ಬೇಗ ಹರಡುವುದರಿಂದ ಮುನ್ನಚ್ಚರಿಕೆ ಅವಶ್ಯಕವಾಗಿದೆ. ಇದು ಹರಡಬಾರದು ಅಂದರೆ ಲಸಿಕಾ ಕಾರ್ಯಕ್ರಮ ವೇಗವಾಗಿ ನಡೆಯಬೇಕು ಎಂದರು.

ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಪಡೆದವರ ಪ್ರಮಾಣ 93% ಕ್ಕೂ ಹೆಚ್ಚಾಗಿದೆ. 2ನೇ ಡೋಸ್ ಪಡೆದವರ ಪ್ರಮಾಣ 64% ಇದೆ. ಲಸಿಕೆ ನೀಡಿದ ವಿಚಾರದಲ್ಲಿ ದೊಡ್ಡ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ಡಿಸೆಂಬರ್ ಅಂತ್ಯದ ಒಳಗೆ ಲಸಿಕಾ ಕಾರ್ಯಕ್ರಮ ಮುಗಿಸುವ ಉದ್ದೇಶವಿದೆ. ಅದಕ್ಕಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನೂ ಕೂಡ ಸುಮಾರು 70 ಲಕ್ಷ ಲಸಿಕೆ ದಾಸ್ತಾನು ಇದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.

ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ. ಕೇಂದ್ರ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಅಂತ ಅಧ್ಯಯನ ಮಾಡುತ್ತಿದೆ. ಬೇರೆ ಬೇರೆ ದೇಶಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೂಡ ಅಧ್ಯಯನ ಮಾಡುತ್ತಿದೆ. ಸಮಗ್ರ ವರದಿ ಬಂದ ಮೇಲೆ. ಏನು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಿರ್ಧರಿಸಲಿದೆ ಎಂದರು.

ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ 2ನೇ ಅಲೆಯೇ ದೊಡ್ಡ ಪ್ರಮಾಣದ್ದಾಗಿದೆ. 3ನೇ ಅಲೆ ಕಡಿಮೆ ಪ್ರಭಾವ ಬೀರಿದೆ. ಇದಕ್ಕೆ ಐತಿಹಾಸಿಕ ಸಾಕ್ಷಿ ಕೂಡ ಇದೆ. ಹಿಂದೆ ಬಂದಿರುವ ಸಾಂಕ್ರಾಮಿಕ ರೋಗಗಳನ್ನು ನೋಡಿದಾಗ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿತ್ತು. 3 ಮತ್ತು 4ನೇ ಅಲೆ ಬಂದರೂ ಅದರ ತೀವ್ರತೆ ಕಡಿಮೆ ಇತ್ತು ಎಂದು ಹೇಳಿದರು.

ಮಕ್ಕಳ ಮೇಲೆ ಡೆಲ್ಟಾ ಪರಿಣಾಮ ಬೀರಿಲ್ಲ. ಡೆಲ್ಟಾಗೆ ಹೋಲಿಕೆ ಮಾಡಿದರೆ ಇದರ ತೀವ್ರತೆ ಕಡಿಮೆ. ಇದು ಮಕ್ಕಳಿಗೆ ಬಂದರೂ ಕೂಡ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ವಿಜ್ಞಾನಿಗಳು ಮತ್ತು ತಜ್ಞರು ಹೇಳಿದ್ದಾರೆ ಎಂದರು.

Tags: cknewsnowcovid16dr k sudhakarkarnatakanewsomicronomicron variant
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

by cknewsnow desk
December 20, 2023
0

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

by cknewsnow desk
December 20, 2023
0

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

by cknewsnow desk
December 19, 2023
0

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

by cknewsnow desk
December 17, 2023
0

ಕೇರಳದಲ್ಲಿ 1,324 ಜನರಿಗೆ ಕೋವಿಡ್; ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರಕಾರ ಸೂಚನೆ

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

by cknewsnow desk
October 3, 2023
0

ಅಮೆರಿಕದ ವಿಜ್ಞಾನಿಗಳಿಗೆ ಪ್ರತಿಷ್ಠಿತ ಗೌರವ

Next Post
ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೇ ಅಡ್ಡಿ

ಬಿಜೆಪಿ ಸೇರಿ ಯಾವ ಪಕ್ಷದ ಜತೆಯೂ ಜೆಡಿಎಸ್ ಮೈತ್ರಿ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ