• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

Cknewsnow impact | ಚಿಕ್ಕಬಳ್ಳಾಪುರ ಮೇಲೆ ವಿಷದಾಳಿ; ಆರೋಪಿಗಳಿಗೆ ತೀವ್ರ ಶೋಧ, ಲ್ಯಾಬ್‌ಗೆ ವಿಷನೀರು

cknewsnow desk by cknewsnow desk
December 16, 2021
in EDITORS'S PICKS, STATE
Reading Time: 2 mins read
0
Cknewsnow impact | ಚಿಕ್ಕಬಳ್ಳಾಪುರ ಮೇಲೆ ವಿಷದಾಳಿ; ಆರೋಪಿಗಳಿಗೆ ತೀವ್ರ ಶೋಧ, ಲ್ಯಾಬ್‌ಗೆ ವಿಷನೀರು

ವಿಷ ನೀರು ವಿಲೇವಾರಿ ಮಾಡಿದ ಜಾಗದಲ್ಲಿ ಸ್ಯಾಂಪಲ್‌ ಸಂಗ್ರಹ ಮಾಡಿದ ತಜ್ಞರು.

1.3k
VIEWS
FacebookTwitterWhatsuplinkedinEmail

ಕೈಗಾರಿಕೆಗಳ ರಾಸಾಯನಿಕ ತ್ಯಾಜ್ಯ ವಿಲೇವಾರಿ; ವಿವಿಧ ಇಲಾಖೆಗಳಿಂದ ಜಂಟಿ ಸಮೀಕ್ಷೆ; ಶ್ರೀನಿವಾಸ ಸಾಗರ ಸುತ್ತಮುತ್ತ ಗ್ರಾಮದ ಜನರು ಕೆರೆ ನೀರು ಬಳಸದಂತೆ ಎಚ್ಚರಿಕೆ; HN ವ್ಯಾಲಿ ಅಧಿಕಾರಿಗಳಿಂದ ತಪಾಸಣೆ

by GS Bharath Gudibande

ಚಿಕ್ಕಬಳ್ಳಾಪುರ: ಬಯಲುಸೀಮೆ ಪ್ರದೇಶದಲ್ಲಿ ಯಾರು ಹೇಳುವವರು, ಕೇಳುವವರು ಇಲ್ಲದಿರುವುದರಿಂದ ಪ್ರತಿದಿನವೂ ಒಂದಲ್ಲ ಒಂದು ಅಪಾಯಕಾರಿ ಸಂಗತಿಗಳು ಹೊರಗೆ ಬರುತ್ತಿವೆ. ಜಿಲ್ಲಾಡಳಿತ, ಪೊಲೀಸ್‌ ವ್ಯವಸ್ಥೆ ಬಗ್ಗೆ ಸಾರ್ವಜನಿಕರ ತಾಳ್ಮೆ ಕಟ್ಟೆಯೊಡೆಯುತ್ತಿದೆ.

ಭಯಂಕರ ಸಮಸ್ಯೆಗಳ ನಡುವೆ ಜಿಲ್ಲೆಯ ಅಮಾಯಕ ಜನರು ಒದ್ದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ ಈಗ. ರಾತ್ರೋರಾತ್ರಿ ರಾತ್ರಿ ಕೈಗಾರಿಕೆಗಳ ಕಿರಾತಕರು ಇಂತಹ ಹೀನಕೃತ್ಯಗಳನ್ನು ಎಸಗುತ್ತಿದ್ದು, ಈ ಧಾರುಣ ಕೆಲಸ ಗಸ್ತು ಪೊಲೀಸರು ಕಣ್ಣಿಗೆ ಬೀಳಲಿಲ್ಲವೇ ಎಂಬ ಹಲವು ಪ್ರಶ್ನೆಗಳನ್ನು ಸಾರ್ವಜನಿಕರು ಕೇಳುತ್ತಿದ್ದಾರೆ.

ಗುಡಿಬಂಡೆಯಲ್ಲಿ ನಡೆದ ಇಂಥದ್ದೇ ಕೃತ್ಯವನ್ನು ಬಯಲಿಗೆಳೆದಿದ್ದ ಸಿಕೆನ್ಯೂಸ್ ನೌ ಎಲ್ಲರಿಗಿಂತ ಮೊದಲೇ ವಿಷದಾಳಿಯ ಬಗ್ಗೆ ಸಮಗ್ರ ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡ ಬೆಳಗ್ಗೆಯೇ ಶ್ರೀನಿವಾಸ ಸಾಗರ ಹಾಗೂ ಸುತ್ತಮುತ್ತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮಾರ್ಗ ಮಧ್ಯೆ ಇರುವ ಜಕ್ಕಲಮಡಗು ಕ್ರಾಸ್ʼನ ಸೇತುವೆ ಬಳಿ ಯಾರೋ ಕಿಡಿಗೇಡಿಗಳು ಟ್ಯಾಂಕರ್ʼನಲ್ಲಿ ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವ ಮೂಲಕ ಶ್ರೀನಿವಾಸ ಸಾಗರ ಜಲಾಶಯದ ನೀರಿಗೆ ಮಿಶ್ರಣ ಮಾಡಿದ್ದಾರೆ. ಜಿಲ್ಲೆಯ ಜಿಲ್ಲಾ ಮಾಲಿನ್ಯ ಹಾಗೂ ಪರಿಸರ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಮೀನುಗಾರಿಕೆ, ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ, ಕೈಗಾರಿಕೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವ ಮೂಲಕ ಮಾಹಿತಿಯನ್ನು ಕಲೆ ಹಾಕಿದರು.

ಸ್ಯಾಂಪಲ್ ಸಂಗ್ರಹ, ಲ್ಯಾಬ್‌ʼಗೆ ರವಾನೆ

ಜಕ್ಕಲಮಡುಗು ಕ್ರಾಸ್ ಹಾಗೂ ಶ್ರೀನಿವಾಸ ಸಾಗರದ ಬಳಿ ವಿಸರ್ಜಿಸಲಾಗಿರುವ ರಾಸಾಯನಿಕ ತ್ಯಾಜ್ಯ ನೀರು (ಜನರಲ್ ಪ್ಯಾರಾಮೀಟರ್, ಆಯಿಲ್ ಅಂಡ್ ಗ್ರೀಸ್, ಹೆವಿ ಮೆಟಲ್ ಮತ್ತು ಸೈನೈಡ್) ಮತ್ತು ಮಣ್ಣಿನ ಮಾದರಿ ಹಾಗೂ ಶ್ರೀನಿವಾಸ ಸಾಗರ ಜಲಾಶಯದ ನೀರನ್ನು ಸಂಗ್ರಹಿಸಿ ಬೆಂಗಳೂರಿನ ಕೇಂದ್ರ ಪರಿಸರ ಪ್ರಯೋಗಾಲಯಕ್ಕೆ ಕಳುಹಿಸಿಲಾಗಿದೆ. ಕೇಂದ್ರ ಪರಿಸರ ಪ್ರಯೋಗಾಲಯದ ಅಧಿಕಾರಿಗಳಿಗೆ ಶೀಘ್ರದಲ್ಲಿ ವಿಶ್ಲೇಷಣಾ ವರದಿಯನ್ನು ನೀಡುವಂತೆ ಕೋರಿದ್ದು. ಆ ವರದಿ ಬಂದ ನಂತರ ಜಿಲ್ಲಾಧಿಕಾರಿ ಹಾಗೂ ಕೇಂದ್ರ ಕಚೇರಿಗೆ ವರದಿಯನ್ನು ಸಲ್ಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಪರಿಸರ ಅಧಿಕಾರಿ ಸಿದ್ಧೇಶ್ವರ ಬಾಬು ತಿಳಿಸಿದರು.

ಕಿರಾತಕರಿಗಾಗಿ ತೀವ್ರ ಶೋಧ

ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು ವಿಲೇವಾರಿ ಮಾಡಿ, ಪರಿಸರ ಹಾನಿ, ನೀರು ಮಿಶ್ರಣ ಮಾಡಿರುವ ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಈ ದುರಂತಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಉಪಾಧೀಕ್ಷಕ ವಾಸುದೇವ್ ಮಾಹಿತಿ ನೀಡಿದರು.

ಮೀನು ಹಿಡಿಯಬೇಡಿ, ನೀರು ಬಳಸಬೇಡಿ

ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮೀನು ಹಿಡಿಯದಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಜೆತೆಗೆ ಈ ಕೆರೆಯ ನೀರು ಮತ್ತು ಮೀನನ್ನು ಪರೀಕ್ಷೆಗಾಗಿ
ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಸಂಶೋಧನಾ ಕೇಂದ್ರದ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಾಧುರಿ ಹೇಳಿದರು.

ವರದಿ ಬರುವವರೆಗೂ ಕೆರೆ ನೀರು ಬಳಸಬೇಡಿ

ಪ್ರಯೋಗಾಲಯದ ವರದಿ ಬರುವವರೆಗೆ ಸುತ್ತಮುತ್ತಲ ಗ್ರಾಮಗಳ ಜನರು ತಮ್ಮ ಜಾನುವಾರುಗಳಿಗೆ ಕೆರೆಯ ನೀರನ್ನು ಕುಡಿಸದಂತೆ ಡಂಗೂರ ಸಾರಿ ಅರಿವು ಮೂಡಿಸುತ್ತಿದ್ದಾರೆ ಜನರು ಸ್ವಲ್ಪ ದಿನ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸದಂತೆ ಚಿಕ್ಕಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಜಂಟಿ ಸಮೀಕ್ಷೆಯಲ್ಲಿ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಶರೀಫ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ (ಎಚ್.ಎನ್ ವ್ಯಾಲಿ ಯೋಜನೆ)ಯ ಸಹಾಯಕ ಕಾರ್ಯಪಾಲಕ ಅಭಿಯಂತರ ರವೀಂದ್ರನಾಥ್, ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

ಚಿಕ್ಕಬಳ್ಳಾಪುರದ ಮೇಲೆ ವಿಷದಾಳಿ!!

Tags: Chemical wastechikkaballapuracknewsnowcriminal casehazardous waste disposal in waterindustrial wastekarnatakakolarnewspollution
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಾಗೇಪಲ್ಲಿಯಲ್ಲೇ ಬ್ಯುಸಿಯಾದರಾ ಶಾಸಕರು!!

ಬಾಗೇಪಲ್ಲಿಯಲ್ಲೇ ಬ್ಯುಸಿಯಾದರಾ ಶಾಸಕರು!!

Leave a Reply Cancel reply

Your email address will not be published. Required fields are marked *

Recommended

ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ

ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ

3 years ago
ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು  ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ

ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ