• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮತ್ತೊಮ್ಮೆ ಗಡಿ ತಾಲೂಕು ಗುಡಿಬಂಡೆಗೆ ಕೈ ಕೊಟ್ಟ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
December 18, 2021
in CHIKKABALLAPUR, EDITORS'S PICKS, STATE
Reading Time: 2 mins read
0
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ
1.4k
VIEWS
FacebookTwitterWhatsuplinkedinEmail

ಗುಡಿಬಂಡೆ ಕಣ್ಣಿಗೆ ಸುಣ್ಣ, ಚಿಕ್ಕಬಳ್ಳಾಪುರಕ್ಕೆ ಬೆಣ್ಣೆ!

ಆರ್.ಎಲ್.ಜಾಲಪ್ಪ ಅಂತ್ಯಕ್ರಿಯೆ ಕಾರಣ ನೀಡಿ ಗಡಿ ತಾಲೂಕು ಕಾರ್ಯಕ್ರಮ ರದ್ದು, ಚಿಕ್ಕಬಳ್ಳಾಪುರದಲ್ಲಿ ರದ್ದು ಇಲ್ಲ!!

by GS Bharath Gudibande

ಗುಡಿಬಂಡೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಮತ್ತೊಮ್ಮೆ ಗಡಿಭಾಗದ ತಾಲೂಕು ಗುಡಿಬಂಡೆಗೆ ಕೈ ಕೊಟ್ಟಿದ್ದಾರೆ.

ಕೋವಿಡ್‌ ಮೃತರ ಕುಟುಂಬದವರಿಗೆ, ಮಳೆ-ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸಲು ನಿಗದಿತ ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಸಚಿವರು, ಇನ್ನೊಂದು ನೆಪ ಹೇಳಿ ಗುಡಿಬಂಡೆ ಕಾರ್ಯಕ್ರಮವನ್ನು ತಪ್ಪಿಸಿಕೊಂಡಿದ್ದು, ಇದೇ ವೇಳೆ ಅವರು ಗೌರಿಬಿದನೂರು-ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ.

ಈ ಬಗ್ಗೆ ಸಚಿವರ ಪ್ರವಾಸದ ಬಗ್ಗೆ ಹೊರಡಿಸಲಾಗಿರುವ ಪ್ರವಾಸ ಪಟ್ಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಮತ್ತೊಮ್ಮೆ ಗುಡಿಬಂಡೆ ತಾಲೂಕು ಜನರಿಗೆ ಸಚಿವರ ದರ್ಶನ ಸಾಧ್ಯವಿಲ್ಲದಂತಾಗಿದೆ. ಇನ್ನು, ಸಂತ್ರಸ್ತರು ಸಚಿವರ ʼಅಮೃತ ಹಸ್ತʼದಿಂದ ಪರಿಹಾರವನ್ನು ಸ್ವೀಕಾರ ಮಾಡಲು ಇನ್ನಷ್ಟು ದಿನ ಕಾಯಬೇಕಿದೆ.

ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಸೋಂಕಿನಿಂದ ತತ್ತರಿಸಿದ್ದ ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಕುಟುಂಬದ ಕುಡಿಗಳು, ಯಜಮಾನರು ಸೇರಿದಂತೆ ಮುಂತಾದವರನ್ನು ಕಳೆದುಕೊಂಡ ಕುಟುಂಬಸ್ಥರು ಈಗ ಅನಾಥರಾಗಿದ್ದಾರೆ. ಅಂತು ಇಂತೂ ಪರಿಹಾರ ಬಂತು ಅಂದುಕೊಳ್ಳುತ್ತಿದಂತೆ ಗುಡಿಬಂಡೆ ಮತ್ತು ಬಾಗೇಪಲ್ಲಿಯಲ್ಲಿ ಆಯೋಜನೆಗೊಂಡಿದ್ದ ಸಚಿವರ ಪರಿಹಾರ ವಿತರಣಾ ಕಾರ್ಯಕ್ರಮ ರದ್ದಾಗಿದೆ. ಆದರೆ, ಸಚಿವರ ಸ್ವಕ್ಷೇತ್ರದಲ್ಲಿರುವ ಮಂಚೇನಹಳ್ಳಿ, ಚಿಕ್ಕಬಳ್ಳಾಪುರ ಹಾಗೂ ಪಕ್ಕದ ಗೌರಿಬಿದನೂರಿನಲ್ಲಿ ನಿಗದಿಯಾಗಿರುವ ಕಾರ್ಯಕ್ರಮಗಳು ರದ್ದಾಗಿಲ್ಲ.

ಸುಧಾಕರ್‌ ಅವರು ಸಚಿವರಾದ ಮೇಲೆ ಬಾಗೇಪಲ್ಲಿ ಕ್ಷೇತ್ರದ ಬಗ್ಗೆ ಮಲತಾಯಿ ದೋರಣೆ ತಾಳಲಾಗಿದೆ. ಅದರಲ್ಲೂ ಮುಖ್ಯವಾಗಿ ಗುಡಿಬಂಡೆ ತಾಲೂಕಿನ ಬಗ್ಗೆ ಸಚಿವರು ಅತೀವ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕು ಭಾರೀ ಮಳೆಯಿಂದ ತತ್ತರಿಸಿ ಸುಮಾರು ಐವತ್ತು ದಿನಗಳಿಗೆ ಹೆಚ್ಚು ಕಾಲ ತತ್ತರಿಸಿತ್ತು. ನಾಲ್ಕು ದಿಕ್ಕುಗಳಿಂದ ಸಂಪರ್ಕ ಕಡಿದುಹೋಗಿ ಗುಡಿಬಂಡೆ ನಡುಗಡ್ಡೆಯಾಗಿ ಬದಲಾದರೂ ಸಚಿವರು ತಾಲೂಕಿಗೆ ಭೇಟಿ ನೀಡಿರಲಿಲ್ಲ. ಅವರ ಭೇಟಿ ಕೇವಲ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸೀಮಿತಚವಾಗಿತ್ತು. ಅಲ್ಲದೆ; ಜಿಲ್ಲಾಧಿಕಾರಿಗಳು ಕೂಡ ಮಳೆ ಶುರುವಾಗಿ ನಲವತ್ತೈದು ದಿನಗಳ ನಂತರ ಗುಡುಬಂಡೆಗೆ ಕಾಟಾಚಾರಕ್ಕೆ ಭೇಟಿ ನೀಡಿದ್ದರು. ಗುಡಿಬಂಡೆಗೆ ನಿಗದಿಯಾಗಿದ್ದ ಮುಖ್ಯಮಂತ್ರಿ ಭೇಟಿಯೂ ಕೊನೆ ಕ್ಷಣದಲ್ಲಿ ರದ್ದಾಗಿತ್ತು. ಈ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಸೀಮಿತವಾದ ಸರಕಾರ

ಈ ಹಿಂದೆ ಹಲವು ಭಾರಿ ಗುಡಿಬಂಡೆ ಮತ್ತು ಬಾಗೇಪಲ್ಲಿಗೆ ಸಚಿವ ಡಾ.ಸುಧಾಕರ್ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು. ಇನ್ನೇನು ಕಾರ್ಯಕ್ರಮ ನಡೆಯುತ್ತದೆ ಎಂದು ಅಧಿಕಾರಿಗಳು ಎದ್ದೆವೋ ಬಿದ್ದೆವೋ ಅಂತ ಎಲ್ಲಾ ಸಿದ್ದತೆಗಳು ಮಾಡಿಕೊಂಡು ಗಂಟೆಗಟ್ಟಲೆ ಕಾದಿದ್ದರು. ಪೊಲೀಸರಂತೂ ಸಚಿವರ ಶಿಷ್ಠಾಚಾರದಲ್ಲೇ ಇಲ್ಲದ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಲು ಸಿದ್ಧವಾಗಿದ್ದರು. ಕೊನೆಗೆ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಬಂದ ನಂತರ ಅಧಿಕಾರಿಗಳು ಸುಸ್ತಾಗುತ್ತಿದ್ದರು. ಈಗ ಮತ್ತೆ ಅದೇ ರಾಗ ಮುಂದುವರಿದಿದ್ದು ಇಂದು ನಿಗದಿಯಾಗಿದ್ದ ಕಾರ್ಯಕ್ರಮವೂ ಮುಂದೂಡಲಾಗಿದೆ ಎಂದು ತಾಲೂಕು ಆಡಳಿತ ಮಾಹಿತಿ ನೀಡಿದೆ.

ಪರಿಹಾರಕ್ಕೆ ಇನ್ನಷ್ಟು ದಿನ ಕಾಯಬೇಕು

ಮೊದಲ ಮತ್ತು ಎರಡನೇ ಅಲೆಯಲ್ಲಿ ಕೋವಿಡ್ ಸೋಂಕಿಗೆ ಮೃತರಾದವರ ಕುಟುಂಬ ಸಂಕಷ್ಟದಲ್ಲಿದೆ. ಸರಕಾರ ಪರಿಹಾರ ಘೋಷಿಸಿತಚ್ತು. ಆದರೆ, ಈಗ ಪರಿಹಾರ ಪಡೆಯಲು ಸಚಿವರು ಬರುವವರೆಗೂ ಕಾಯಬೇಕಂತೆ ಎಂದು ಕೋವಿಡ್ ಮೃತರ ಕುಟುಂಬ ಅಳಲು ತೋಡಿಕೊಳ್ಳುತ್ತಿದ್ದಾರೆ.

ಕೆಲಸ ಇಲ್ಲ, ಮನೆ ನಡೆಯುವುದೇ ಕಷ್ಟವಾಗಿದೆ. ಈಗ ನೋಡಿದರೆ ಸಚಿವರು ಬರುತ್ತಿಲ್ಲ ಎನ್ನುವ ಸುದ್ದಿ ಬಂದಿದೆ. ನಮಗೆ ಇನ್ನು ಪರಿಹಾರ ಯಾವಾಗ ಸಿಗುತ್ತದೆಯೋ ಗೊತ್ತಿಲ್ಲ ಎಂದು ಕೋವಿಡ್‌ ಸಂತ್ರಸ್ತರೊಬ್ಬರು ಸಿಕೆನ್ಯೂಸ್‌ ನೌ ಬಳಿ ಅಳಲು ತೋಡಿಕೊಂಡರು.

ಸಿಎಂ ಪ್ರವಾಸ ಕೂಡ ರದ್ದಾಗಿತ್ತು

ಕಳೆದ ತಿಂಗಳಲ್ಲಿ ಮಳೆ ಹಾನಿ ಪ್ರದೇಶಗಳ‌ ವೀಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಭೇಟಿ ನಿಗದಿಯಾಗಿತ್ತು. ಗುಡಿಬಂಡೆ ತಾಲೂಕು ಆಡಳಿತ ಸೇರಿದಂತೆ ಎಲ್ಲಾ ಅಧಿಕಾರಿಗಳು ಸಿಎಂ ಬರುತ್ತಾರೆಂದು ಕಾದು ಕಾದು ಕಾರ್ಯಕ್ರಮ ರದ್ದಾದ ನಂತರ ನಿರಾಸೆಯಿಂದ ವಾಪಸ್ ಹೋದರು. ಬೊಮ್ಮಾಯಿ ಬರುತ್ತಾರೆಂದು ಅಮಾನಿ ಭೈರಸಾಗರ ಕೆರೆ ಏರಿ ಮೇಲೆ ತಾತ್ಕಾಲಿಕ ದೀಪಗಳ ವ್ಯವಸ್ಥೆ ಮಾಡಲಾಗಿತ್ತು. ಇದೆಲ್ಲವನ್ನು ಗಮನಿಸಿದರೆ ಸರಕಾರ ಕೇವಲ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರಕ್ಕಷ್ಟೇ ಸೀಮತವಾದಂತಿದೆ ಎಂದು ಗುಡಿಬಂಡೆ ಜನರು ಹೇಳುತ್ತಿದ್ದಾರೆ.

  • ಮೊದಲು ಹೊರಡಿಸಲಾಗಿದ್ದ ಸಚಿವ ಪ್ರವಾಸ ಕಾರ್ಯಕ್ರಮದ ಪಟ್ಟಿ.
  • ಹೊಸದಾಗಿ ಹೊರಡಿಸಲಾಗಿರುವ ಸಚಿವ ಪ್ರವಾಸ ಕಾರ್ಯಕ್ರಮದ ಪಟ್ಟಿ.

ಕೇಂದ್ರದ ಮಾಜಿ ಸಚಿವರಾದ ಆರ್.ಎಲ್.ಜಾಲಪ್ಪ ಅವರ ಅಂತ್ಯಕ್ರಿಯೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ.  ಹಾಗಾಗಿ ಗುಡಿಬಂಡೆ ಕಾರ್ಯಕ್ರಮವನ್ನು ಅವರು ರದ್ದುಗೊಳಿಸಿದ್ದಾರೆ. ಆದ್ದರಿಂದ ಇಂದು ಗುಡಿಬಂಡೆಯಲ್ಲಿ ಕೋವಿಡ್‌ ಮತ್ತು ಮಳೆ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮವನ್ನು ಮುಂದೂಡಲಾಗಿರುತ್ತದೆ. ಮುಂದಿನ ದಿನಾಂಕ ನಿಗದಿ ಮಾಡಿ ಪರಿಹಾರ ವಿತರಣಾ ಕಾರ್ಯಕ್ರಮ ನಡೆಸುತ್ತೇವೆ.

ಸಿಬ್ಗತ್ ವುಲ್ಲಾ, ತಹಸೀಲ್ದಾರ್

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಡಾ.ಸುಧಾಕರ್‌ ಏಜೆಂಟ್‌ಗಿರಿ ಮಾಡುತ್ತಿದೆಯಾ ಚಿಕ್ಕಬಳ್ಳಾಪುರ ಜಿಲ್ಲಾಡಳಿತ!

Leave a Reply Cancel reply

Your email address will not be published. Required fields are marked *

Recommended

ತಮಿಳುನಾಡು ಗೆಲ್ಲಲು ಬಿಜೆಪಿ ಗೇಮ್‌ಪ್ಲ್ಯಾನ್;‌ ವೇಲ್‌ ಹಿಡಿದ ಸೈಲಂಟ್‌ ಟ್ರಬಲ್‌ಶೂಟರ್

ತಮಿಳುನಾಡು ಗೆಲ್ಲಲು ಬಿಜೆಪಿ ಗೇಮ್‌ಪ್ಲ್ಯಾನ್;‌ ವೇಲ್‌ ಹಿಡಿದ ಸೈಲಂಟ್‌ ಟ್ರಬಲ್‌ಶೂಟರ್

4 years ago
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್‌ ರೆಮಿಡಿಸಿವರ್‌ ಹಂಚಿಕೆ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ