• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಚಿಕ್ಕಬಳ್ಳಾಪುರದಲ್ಲಿ ಭೂಕಂಪ, ಎರಡು ಸಲ ಕಂಪಿಸಿದ ಭೂಮಿ

cknewsnow desk by cknewsnow desk
January 1, 2022
in NATION, STATE
Reading Time: 2 mins read
1
ಚಿಕ್ಕಬಳ್ಳಾಪುರದಲ್ಲಿ ಭೂಕಂಪ, ಎರಡು ಸಲ ಕಂಪಿಸಿದ ಭೂಮಿ
1.9k
VIEWS
FacebookTwitterWhatsuplinkedinEmail

ಮಂಡಿಕಲ್ಲು, ಭೋಗಪರ್ತಿ ಗ್ರಾಮಗಳ ಸುತ್ತಮುತ್ತ ಗ್ರಾಮಗಳಲ್ಲಿ ನಡುಗಿದ ಮನೆಗಳು

ಕಲ್ಲುಕ್ವಾರಿಗಳಿಂದ ಕಾದಿದೆಯಾ ಆಪತ್ತು; ಕಲ್ಲು ಕಿರಾತಕರಿಗೆ ತಟ್ಟಲಿದೆಯಾ ಬಾಲನಾಗಮ್ಮನ ಶಾಪ

by GS Bharath Gudibande

ಚಿಕ್ಕಬಳ್ಳಾಪುರ: ಕಳೆದ ತಿಂಗಳು ಮಳೆಯಿಂದ ತತ್ತರಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಭೂಕಂಪನದಿಂದ ಬೆಚ್ಚಿಬಿದ್ದಿದೆ.

ಬೆಳ್ಳಂಬೆಳಿಗ್ಗೆ ಎರಡು ಬಾರಿ ಭೂಮಿ ನಡುಗಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಗುರಿಯಾಗಿದ್ದಾರೆ. ಭೂಮಿ ನಡುಗಿದ ಅನುಭವ ಆಗುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಭೋಗಪರ್ತಿ ಗ್ರಾಮಗಳ ಸುತ್ತಮುತ್ತ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 2.9ರಿಂದ 3ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ.

ಎರಡು ಸಲ ಕಂಪಿಸಿದ ಭೂಮಿ

ತಾಲೂಕಿನ ಮಂಡಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೋಗೇನಹಳ್ಳಿ, ಭೋಗಪರ್ತಿ, ಹೊಸಹಳ್ಳಿ, ದೊಡ್ಡಹಳ್ಳಿ ಮುಂತಾದ ಕಡೆ ಎರಡು ಬಾರಿ ಲಘು ಭೂಕಂಪನ ಉಂಟಾಗಿದೆ ಎಂದು ವರದಿಯಾಗಿದೆ. ಈ  ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಆತಂಕದಲ್ಲಿ ಸಾರ್ವಜನಿಕರು

ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವು ಸಲ ಭೂಮಿ ಕಂಪಿಸಿದ ಅನುಭವ ಆಗುತ್ತಿದೆ. ಇದಕ್ಕೆಲ್ಲ ಎಗ್ಗಿಲ್ಲದೆ ನಡಯುತ್ತಿರುವ ಕಲ್ಲು ಗಣಿಗಾರಿಕೆ, ಭಾರೀ ಪ್ರಮಾಣದ ಬಾಂಬ್ ಬ್ಲಾಸ್ಟಿಂಗ್ ಮಾಡುವುದು ಸಮಸ್ಯೆ ಆಗಿರಬಹುದೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹರದಾಡುತ್ತಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತವಾಗಿ ಪರಿಶೀಲಿಸಿ ಕ್ರಮ ವಹಿಸಬೇಕಾಗಿದೆ.

ಮಂಡಿಕಲ್‌ ಸುತ್ತಮುತ್ತ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಮುಖ್ಯವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದಲ್ಲೇ ಕಲ್ಲು ಗಣಿಗಾರಿಕೆ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಕೆಲ ತಿಂಗಳ ಹಿಂದೆ ಸಮೀಪದ ಹಿರೇನಾಗವೇಲಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮ ಸ್ಫೋಟಕಗಳು ಸಿಡಿದು ಆರು ಜನರ ದೇಹಗಳು ಛಿದ್ರವಾಗಿದ್ದವು. ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

ಈ ನಡುವೆ; ಭೂ ಕಂಪದ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಜನರಿಗೆ ಧೈರ್ಯ ತುಂಬಿದ್ದಾರೆ.

Earthquake of Magnitude:3.3, Occurred on 22-12-2021, 07:14:32 IST, Lat: 13.55 & Long: 77.76, Depth: 23 Km ,Location: 66km NNE of Bengaluru, Karnataka, India for more information download the BhooKamp App https://t.co/iax6vbE3wO pic.twitter.com/irvoaQmaMF

— National Center for Seismology (@NCS_Earthquake) December 22, 2021

ಚಿಕ್ಕಬಳ್ಳಾಪುರಕ್ಕೆ ಕಂಟಕವಾಗುವರೇ ಬಾಲನಾಗಮ್ಮ!?

ಚಿಕ್ಕಬಳ್ಳಾಪುರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಜನರ ಪ್ರಾಣಕ್ಕೆ ಕುತ್ತಾಗುತ್ತಾ ಎನ್ನುವ ಆತಂಕ ಎದುರಾಗಿದೆ. ತಾಲೂಕಿನ ಹಿರೇನಾಗವೇಲಿಯ ಬಾಲನಾಗಮ್ಮ ಬೆಟ್ಟದಲ್ಲಿನ ಕಲ್ಲು ಗಣಿಗಾರಿಕೆ ಶಾಪವಾಗಿ ಪರಿಣಮಿಸುತ್ತಾ ಎನ್ನುವ ಭೀತಿ ಜನರಿಗೆ ಕಾಡುತ್ತಿದೆ.

ಬಾಲನಾಗಮ್ಮ ಬೆಟ್ಟ ಮುಟ್ಟಿದವರಿಗೆ ಹಲವು ರೀತಿಯಲ್ಲಿ ಅಪಾಯವಾಗಿದೆ ಎನ್ನುವುದು ಸ್ಥಳೀಯರು ಹೇಳುವ ಮಾತು. ಈ ಬೆಟ್ಟ ಮುಟ್ಟಿದವರಿಗೆ ಕಂಠಕ ತಪ್ಪಿಲ್ಲ. ಅಂಥ ದುಪ್ಷ್ರಯತ್ನ ಮಾಡಿರುವ ಅನೇಕ ಶಾಸ್ತಿ ಆಗಿದೆ. ಈಗಾಗಲೇ ಹಲವರು ಪ್ರಾಣ ಕಳೆದುಕೊಂಡು, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಬಾಲನಾಗಮ್ಮ ಬೆಟ್ಟ ಈಗ ಹಾಳು ಮಾಡಿರುವ ಪ್ರತಿಯೊಬ್ಬರಿಗೂ ಮುಂದೆ ಕಾದಿದೆ ಎನ್ನುವ ಮಾತನ್ನೂ ಸ್ಥಳೀಯರು ಹೇಳುತ್ತಾರೆ.

  • ಬಾಲನಾಗಮ್ಮ ಬೆಟ್ಟ

ಇನ್ನೊಂದೆಡೆ, ಹಿರೇನಾಗವೇಲಿ ಈ ಬೆಟ್ಟದ ಮೇಲೆ ಪುರಾಣ ಪ್ರಸಿದ್ಧ ಬಾಲನಾಗಮ್ಮ ದೇವಾಲಯ ಇದೆ. ಕಲ್ಲು ರಕ್ಕಸರು ಇನ್ನೇನು ದೇಗುಲದ ಹತ್ತಿರದವರೆಗೂ ಕಲ್ಲು ಗಣಿಗಾರಿಕೆ ಮಾಡಿದ್ದಾರೆ. ಸುಂಕಲಮ್ಮ ಗುಡಿಯನ್ನು ನೆಲಸಮ ಮಾಡಿದ ಮಾಡಿದ ಬಳ್ಳಾರಿ ಧಣಿಗಳು ಎದುರಿಸಿದ ಸಂಕಷ್ಟವನ್ನೇ ಬಾಲನಾಗಮ್ಮ ಬೆಟ್ಟವನ್ನು ನುಂಗಿದವರು ಅನುಭವಿಸಲಿದ್ದಾರೆ ಎಂದು ಸ್ಥಳೀಯರು ಹಿಡಿ ಶಾಪ ಹಾಕುತ್ತಿದ್ದಾರೆ.

1959ರಲ್ಲಿ ತೆಲುಗಿನಲ್ಲಿ ಬಂದ ʼಬಾಲನಾಗಮ್ಮʼ ಸಿನಿಮಾವನ್ನು ಈ ಬೆಟ್ಟದ ಮೇಲೆಯೇ ಚಿತ್ರೀಕರಿಸಲಾಗಿತ್ತಲ್ಲದೆ, ಅಂದಿನಿಂದ ಈ ಬೆಟ್ಟವನ್ನು ಬಾಲನಾಗಮ್ಮ ಬೆಟ್ಟ ಎಂದು ಕರೆಯಲಾಗುತ್ತದೆ. ಸುತ್ತಮುತ್ತಲಿನ ಗ್ರಾಮದವರ ಪಾಲಿಗೆ ಈ ಬೆಟ್ಟ ದೈವಕ್ಷೇತ್ರವಾಗಿತ್ತು. ಆದರೆ, ಸರಕಾರ ಮತ್ತು ಜಿಲ್ಲಾಡಳಿತ, ಕಲ್ಲುಕ್ವಾರಿ ಮಾಫಿಯಾ ಇಡೀ ಬೆಟ್ಟವನ್ನು ನುಂಗಿ ನೀರು ಕುಡಿದೆ.

ಬಾಲನಾಗಮ್ಮ ಬೆಟ್ಟವನ್ನು ಕಲ್ಲು ಕ್ವಾರಿಗಳು ನಾಶ ಮಾಡಿದ್ದಕ್ಕೆ ಬಾಲನಾಗಮ್ಮ ತಕ್ಕಶಾಸ್ತಿ ಮಾಡುತ್ತಿದ್ದಾರೆ ಎನ್ನುವ ಅನುಮಾನ ನಮ್ಮದು. ಈ ಬೆಟ್ಟದ ತಂಟೆಗೆ ಹೋದವರು ಅನೇಕರು ತೊಂದರೆ ಅನುಭವಿಸಿದ್ದಾರೆ. ಕೆಲ ತಿಂಗಳ ಹಿಂದೆ ಇಲ್ಲಿ ಜಿಲೆಟಿನ್‌ ಕಡ್ಡಿಗಳ ಸ್ಫೋಟಕ್ಕೆ ಆರು ಜನ ಬಲಿಯಾದರು. ಈಗ ಈ ಭಾಗದ ಸುತ್ತಮುತ್ತಲಿನ ಹತ್ತು-ಹದಿನೈದು ಹಳ್ಳಿಗಳಲ್ಲಿ ಭೂಕಂಪನವಾಗಿದೆ. ಇದಕ್ಕೆಲ್ಲ ಬಾಲನಾಗಮ್ಮನಿಗೆ ಅಪಚಾರ ಆಗಿದ್ದೇ ಕಾರಣವಾ ಎಂಬ ಭಯ ನಮಗೆ ಶುರುವಾಗಿದೆ.

ನವೀನ್‌, ಸ್ಥಳೀಯ ನಿವಾಸಿ

Tags: balanagammachikkaballapuracknewsnowearthquakehirenagaveliindiakarnatakanewsstone quarry
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

Comments 1

  1. Pingback: ಚಿಕ್ಕಬಳ್ಳಾಪುರ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ - cknewsnow

Leave a Reply Cancel reply

Your email address will not be published. Required fields are marked *

Recommended

ಕೇಳಿದ್ದು ಪಡಿತರ, ಸಿಕ್ಕಿದ್ದು ಜಾತಿ ನಿಂದನೆ

ಕೇಳಿದ್ದು ಪಡಿತರ, ಸಿಕ್ಕಿದ್ದು ಜಾತಿ ನಿಂದನೆ

4 years ago
ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯ,  ಬೇಡಿಕೆಗಳನ್ನು ವೈಜ್ಞಾನಿಕವಾಗಿ ಪರಾಮರ್ಶಿಸಿ ಮೀಸಲಾತಿಗೆ ಅಂತಿಮ ರೂಪ: ಸಚಿವ ಡಾ.ಕೆ.ಸುಧಾಕರ್

ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯ, ಬೇಡಿಕೆಗಳನ್ನು ವೈಜ್ಞಾನಿಕವಾಗಿ ಪರಾಮರ್ಶಿಸಿ ಮೀಸಲಾತಿಗೆ ಅಂತಿಮ ರೂಪ: ಸಚಿವ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ