• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್

cknewsnow desk by cknewsnow desk
January 4, 2022
in NEWS IN USE, STATE
Reading Time: 1 min read
0
ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್
1k
VIEWS
FacebookTwitterWhatsuplinkedinEmail

ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ / ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3,000 ಸಾವಿರ ಕೋಟಿ ರೂ.ಮೀಸಲು

ಕಲಬುರಗಿ: ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾ ರಂಗ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಖಾಸಗೀಕರಣ,ಉದಾರೀಕರಣ,ಜಾಗತೀಕರಣದ ಮಾರುಕಟ್ಟೆ ಆಧಾರಿತ ವ್ಯವಹಾರದ ನಡುವೆ ಜನಪರ ಆದ್ಯತೆಗಳನ್ನು,ಅಂತಃಕರಣವನ್ನು ಪತ್ರಿಕೆಗಳು ಕಾಯ್ದುಕೊಳ್ಳುವುದು ಬಹಳ ಮುಖ್ಯ. ಸಮಾಜದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಸಾಧ್ಯ. ಪತ್ರಿಆರಂಗ ಸದಾ ಜಾಗೃತವಾಗಿದ್ದರೆ, ಸಮಾಜ, ಸರ್ಕಾರಗಳೂ ಜಾಗೃತವಾಗಿರುತ್ತವೆ. ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು ,ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು,ಬಸ್‌ಪಾಸ್ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‌ನಲ್ಲಿ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ.ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು.ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.

ಕಲ್ಯಾಣದ ಪುಣ್ಯಭೂಮಿ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ.ಪತ್ರಕರ್ತರಿಗೆ,ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ.ಸ್ವಾತಂತ್ರ್ಯ ಚಳುವಳಿಗೆ ಕೈಬರಹದ ಹಾಗೂ ಮೊಳೆ ಜೋಡಣೆ ಮುದ್ರಣ ಆಧಾರಿತ ಹಲವಾರು ಪತ್ರಿಕೆಗಳು ಭೂಗತವಾಗಿ ಕಾರ್ಯ ಮಾಡಿ,ದೇಶಭಕ್ತಿ,ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ.ಪಾಶ್ಚಿಮಾತ್ಯ ಪತ್ರಿಕೋದ್ಯಮ ಪ್ರಭಾವದ ನಡುವೆಯೂ ವಸಾಹತೋತ್ತರ ಕಾಲದಲ್ಲಿ ಭಾರತೀಯ ಪತ್ರಿಕೆಗಳು ಸ್ವಂತಿಕೆ ರೂಢಿಸಿಕೊಂಡಿವೆ.ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಪತ್ರಿಕೆಗಳ ಮೇಲೆ ದೊಡ್ಡ ಪ್ರಹಾರ ನಡೆಯಿತು.ಪತ್ರಕರ್ತರು ಅದನ್ನು ಗಟ್ಟಿಯಾಗಿ ಎದುರಿಸಿದರು.ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರ್ಕಾರ,ಸಮಾಜ ಎಚ್ಚರವಾಗಿರುತ್ತದೆ.ಕೋವಿಡ್ ಸಂದರ್ಭದಲ್ಲಿ ಆರೋಗ್ಯ,ಅಂಗನವಾಡಿ,ಆಶಾ,ಪೊಲೀಸ್,ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ.ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ,ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ.ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು.ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ.ಸಮಾಜದ ಒಳಿತಿಗೆ ಅದು ಬಳಕೆಯಾಗಬೇಕು.ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಪತ್ರಕರ್ತರಿಗೂ ರಾಜಕಾರಣಿಗಳಿಗೆ ಬಿಡಿಸಲಾಗದ ನಂಟಿದೆ. ಒಳ್ಳೆಯ ಉದ್ದೇಶಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಿದರೆ ಜನಕಲ್ಯಾಣ ಸಾಧ್ಯ ಎಂದರು.

ಮುಖ್ಯಮಂತ್ರಿ @BSBommai ಅವರು ಇಂದು ಕಲಬುರಗಿಯಲ್ಲಿ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. (1/2) pic.twitter.com/Xb6Xq64JTk

— CM of Karnataka (@CMofKarnataka) January 4, 2022

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‌ಸಿಂಗ್ ವಸ್ತುಪ್ರದರ್ಶನ ಉದ್ಘಾಟಿಸಿದರು.ಸಂಸದ ಡಾ.ಉಮೇಶ ಜಾಧವ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ,ಶಾಸಕ ದತ್ತಾತ್ರೇಯ ಪಾಟೀಲ ರೇವೂರ,ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ,ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕೆಯುಡಬ್ಲುಜೆ 2022 ರ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಮೊದಲ ಮಹಡಿ ಉದ್ಘಾಟನೆ, ಕೋವಿಡ್ ಕತೆಗಳು ,ಮಾಧ್ಯಮ ಅವಲೋಕನ ಹಾಗೂ ಮಾಧ್ಯಮ ಹೆಜ್ಜೆಗಳು ಕೃತಿಗಳನ್ನು
ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಮಾತನಾಡಿದರು.

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯವಹಿಸಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ ,ಶಾಸಕರಾದ ಸುಭಾಷ ಗುತ್ತೇದಾರ,ಡಾ.ಅವಿನಾಶ ಜಾಧವ,ಬಸವರಾಜ ಮತ್ತಿಮುಡ,ಶರಣು ಸಲಗರ,ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ,ಶಶಿಲ್ ನಮೋಶಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಮತ್ತಿತರರು ವೇದಿಕೆಯಲ್ಲಿದ್ದರು.ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ ಮೊದಲ ಮಾತುಗಳನ್ನಾಡಿದರು.ವಿಜಯವಾಣಿ ಸಂಪಾದಕ ಕೆ.ಎನ್.ಚನ್ನೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಹೇಶ ಬಡಿಗೇರ ಮತ್ತು ತಂಡದ ಕಲಾವಿದರು ಪ್ರಾರ್ಥಿಸಿದರು.ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಎಂ ಠಾಕೂರ ಸ್ವಾಗತಿಸಿದರು.ಕೆ.ಜಿ.ಬೋಪಯ್ಯ ಕಾರ್ಯಕ್ರಮ ನಿರೂಪಿಸಿದರು.

Tags: basavaraj bommaibus passchief ministercknewsnowhealth cardjournalistskalaburagikarnatakanewsworking journalists
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಲ್ಯಾಣ ಕರ್ನಾಟಕದಲ್ಲಿ 14,000 ಹುದ್ದೆಗಳ ನೇಮಕಾತಿ

ಕಲ್ಯಾಣ ಕರ್ನಾಟಕದಲ್ಲಿ 14,000 ಹುದ್ದೆಗಳ ನೇಮಕಾತಿ

Leave a Reply Cancel reply

Your email address will not be published. Required fields are marked *

Recommended

ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಸಿಎಂ ಆಗಿ ಇರುತ್ತಾರೆ! ಅವರ ಅಧಿಕಾರಾವಧಿ ಮುಗಿಯುವಷ್ಟರಲ್ಲಿ ನನಗೆ 90 ವರ್ಷ ಆಗುತ್ತೆ ಎಂದ ಗೌಡರು

ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಸಿಎಂ ಆಗಿ ಇರುತ್ತಾರೆ! ಅವರ ಅಧಿಕಾರಾವಧಿ ಮುಗಿಯುವಷ್ಟರಲ್ಲಿ ನನಗೆ 90 ವರ್ಷ ಆಗುತ್ತೆ ಎಂದ ಗೌಡರು

4 years ago
ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ