• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬೆಳಗ್ಗೆ 8.30ಕ್ಕೆ ಮೇಕೆದಾಟು ಪಾದಯಾತ್ರೆ ಆರಂಭ

P K Channakrishna by P K Channakrishna
January 8, 2022
in STATE
Reading Time: 1 min read
0
ಬೆಳಗ್ಗೆ 8.30ಕ್ಕೆ ಮೇಕೆದಾಟು ಪಾದಯಾತ್ರೆ ಆರಂಭ
967
VIEWS
FacebookTwitterWhatsuplinkedinEmail

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ; ಮಲ್ಲಿಕಾರ್ಜುನ ಖರ್ಗೆ ಅವರಿಂದ ಉದ್ಘಾಟನೆ

ಬೆಂಗಳೂರು: ನೀರಿಗಾಗಿ ನಡಿಗೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ರಾಜ್ಯ ಸರ್ಕಾರ ಏನೇಲ್ಲಾ ಷಡ್ಯಂತ್ರ ನಡೆಸಿದರೂ ಅದು ಫಲಿಸುವುದಿಲ್ಲ. ನಾಳೆ ಬೆಳಗ್ಗೆ 8.30ರ ಸಮಯಕ್ಕೆ ಪಾದಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟ ಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಕಪುರ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಹಾಗೂ ಹಿರಿಯ ನಾಯಕರ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷದ ನಾಯಕ‌ ಸಿದ್ದರಾಮಯ್ಯ ಅವರು, ಇವತ್ತು ಎರಡು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟವಾಗಿದೆ. ಜಾಹಿರಾತು ಕೊಟ್ಟವರು ಯಾರು ಎಂಬ ಹೆಸರಿಲ್ಲ. ಕಾಂಗ್ರಸ್ ಪಕ್ಷ ರಾಜಕೀಯಕ್ಕಾಗಿ ಪಾದಯಾತ್ರೆ ಆಯೋಜನೆ ಮಾಡಿಲ್ಲ. ಮೂರು‌ ತಿಂಗಳ ಹಿಂದೆಯೇ ಹಿರಿಯ ನಾಯಕರ ಜೊತೆ ಚರ್ಚಿಸಿ ನಿರ್ಧಾರ‌ ಮಾಡಲಾಗಿತ್ತು ಎಂದು ಹೇಳಿದರು.

ಯೋಜನೆ ಆರಂಭಿಸಲು ರಾಜ್ಯ ಸರ್ಕಾರ ವಿಳಂಬ‌ ದ್ರೋಹ ಮಾಡುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದು ಎರಡುವರೆ ವರ್ಷವಾಗಿದೆ. ಆದರೂ ಯೋಜನೆ ಜಾರಿ ಮಾಡಿಲ್ಲ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಕೇಂದ್ರ ಅರಣ್ಯ ಇಲಾಖೆ ಅನುಮತಿ‌ ಮಾತ್ರ ಬಾಕಿ ಇದೆ. ಅದನ್ನು ಒಂದು‌ ವಾರದಲ್ಲಿ ಪಡೆದುಕೊಳ್ಳಬಹುದು, ಆದರೆ ರಾಜ್ಯ ಸರ್ಕಾರ ಯಾವ ಪ್ರಯತ್ನವನ್ನು ಮಾಡಿಲ್ಲ ಎಂದು ಆರೋಪಿಸಿದರು.

ಶಾಸಕಾಂಗ ಪಕ್ಷದ ಸಭೆಯ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದೆ. ನಮ್ಮ ಅಭಿಯಾನವು ಐತಿಹಾಸಿಕ ಯಶಸ್ವಿಯಾಗುವುದರಲ್ಲಿ ಸಂದೇಹವೇ ಇಲ್ಲ. ಕೋವಿಡ್‌ ಮಾರ್ಗಸೂಚಿಗಳೊಂದಿಗೆ ನಮ್ಮ ಯಾತ್ರೆಯು ನಡೆಯಲಿದೆ. ಹಾಗೂ ರಾಜ್ಯದ ಜನತೆಗೆ ಸಮೃದ್ಧ ಫಲ ನೀಡಲಿದೆ.#NammaNeeruNammaHakku pic.twitter.com/m6TKT4FoEI

— DK Shivakumar (@DKShivakumar) January 8, 2022

ನಾನು‌ ಮುಖ್ಯಮಂತ್ರಿಯಾಗಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದಾಗ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಯೋಜನೆ ರೂಪಗೊಂಡಿತ್ತು. ಯಾವ ನ್ಯಾಯಾಲಯದಲ್ಲೂ ಯೋಜನೆಗೆ ತಡೆಯಾಜ್ಞೆ ಇಲ್ಲ. ಆದರೂ ಯೋಜನೆ ಶುರುವಾಗಿಲ್ಲ ಎಂದು‌ ಹೇಳಿದರು.

ಮಳೆ ನೀರು ಸಂಗ್ರಹಿಸುವ ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಅನ್ಯಾಯವಾಗುವುದಿಲ್ಲ.‌ ಬೆಂಗಳೂರಿನ ಶೇ.30ರಷ್ಟು ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ. ಮುಂದಿನ ಐವತ್ತು ವರ್ಷ ನೀರಿನ ಸಮಸ್ಯೆವಿರುವುದಿಲ್ಲ, ಎರಡು ಕೋಟಿ ಜನರಿಗೆ ನೀರು ಪೂರೈಸುವ ಈ ಯೋಜನೆ ಅತ್ಯಂತ ಮಹತ್ವದ್ದು ಎಂದರು.

ರಾಜ್ಯ ಸರ್ಕಾರ ಪಾದಯಾತ್ರೆಗೆ ಅಡ್ಡಿ ಪಡಿಸುವ ಸಲುವಾಗಿ ರಾಮನಗರ ಜಿಲ್ಲೆಯಲ್ಲಿ ಮಾತ್ರ ನಿಷೇಧಾಜ್ಞೆ ಜಾರಿಗೊಳಿಸಿದೆ. ವಿಳಂಬ ಮಾಡಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಪಾದಯಾತ್ರೆಗೆ ಅಡ್ಡಿ ಪಡಿಸುತ್ತಿದ್ದೆ.‌ ನಾವು ಕಾನೂನನ್ನು ಗೌರವಿಸಿ ಪಾದಯಾತ್ರೆ ಮಾಡುತ್ತೇವೆ.‌ ಇದರ ಹಿಂದೆ ಜನಪರ ನಿಲುವು ಇದೆಯೇ ಹೊರತು ರಾಜಕಾರಣ ಇಲ್ಲ‌ ಎಂದು‌ ಸ್ಪಷ್ಟ ಪಡಿಸಿದರು.

ಶ್ರೀ @Siddaramaiah ಮತ್ತು ಹಲವು ಹಿರಿಯ ನಾಯಕರ ಹಾಜರಿಯಲ್ಲಿ, ಕನಕಪುರದ ನನ್ನ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. #NammaNeeruNammaHakku pic.twitter.com/hc42LbbIka

— DK Shivakumar (@DKShivakumar) January 8, 2022

ಬಿಜೆಪಿ ಷಡ್ಯಂತ್ರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ. ಈವರೆಗೆ ನಮಗಿರುವ ಮಾಹಿತಿ ಪ್ರಕಾರ ಪೊಲೀಸರು ನಿಯಮ ಪಾಲನೆಯ ಬಗ್ಗೆ ಮಾತ್ರ ಗಮನ‌ ಹರಿಸುತ್ತಾರೆ. ಉಲ್ಲಂಘನೆಯಾದರೆ ಕೇಸು ದಾಖಲಿಸುತ್ತಾರೆ. ಅದನ್ನು‌ ಹೊರತು ಪಡಿಸಿ ಪಾದಯಾತ್ರೆಗೆ ಅಡ್ಡಿ ಪಡಿಸಲು ಅವಕಾಶ ಇಲ್ಲ ಎಂದರು.

ಡಿ.ಕೆ.ಶಿವಕುಮಾರ್ ಮಾತನಾಡಿ, ಇಂದಿನ ಸಭೆಯಲ್ಲಿವ120 ಜನ ನಾಯಕರು‌ ಸಾಧಕ ಭಾದಕಗಳ ಚರ್ಚೆ ಮಾಡಿದ್ದೇವೆ. ಹೋರಾಟ ನಿಲ್ಲಿಸಲು ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ಖಂಡಿಸಲಾಗಿದೆ.ನಾಳೆಯಿಂದ ಪಾದಯಾತ್ರೆ ನ ನ ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತ ಪಡಿಸಿದ್ದಾರೆ‌ ಎಂದರು.

ರಾಮನಗರದಲ್ಲಿ ಒಂದು ಐಸಿಯು ರೋಗಿಯಿಲ್ಲ. ಪಾದಯಾತ್ರೆ ನಿಲ್ಲಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೋವಿಡ್ ಸಂಖ್ಯೆ ಹೆಚ್ಚು ತೋರಿಸಿದ್ದಾರೆ. ಪಾದಯಾತ್ರೆ ನಿಲ್ಲಿಸಲು ಸರ್ಕಾರ ಪ್ರಯತ್ನ ನಡೆಸಿದೆ. ಸರ್ಕಾರ ಸುಳ್ಳು ಪ್ರಚಾರ ನಡೆಸಿದೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲಾಕ್ ಡೌನ್ , ಕರ್ಫ್ಯೂ ಜಾರಿ ಮಾಡಿಸಿದ್ದಾರೆ.

ಮುಂಜಾಗೃತೆ, ಅಂತರ ಕಾಪಾಡುವುದು, ಲಕ್ಷಕ್ಕೂ‌ಹೆಚ್ಚು ಮಾಸ್ಕ್ ಪೂರೈಕೆ ಸೇರಿ‌ ಹಲವು ಕ್ರಮಗಳನ್ನು ನಾವು ತೆಗೆದುಕೊಂಡಿದ್ದೇವೆ. ನೂರು ಜನ ವೈದ್ಯರು, ಒಂದುವರೆ ಸಾವಿರ ಕಾರ್ಯಕರ್ತರು ಕೆಲಸ ಸ್ವಯಂ ಪ್ರೇರಿತವಾಗಿ ಕೆಲಸ ಮಾಡುತ್ತಿದ್ದಾರೆ.

ನಾಳೆ ಬೆಳಗ್ಗೆ 8.30 ರಿಂದ ನೀರಿಗಾಗಿ ನಡಿಗೆ ಶುರುವಾಗಲಿದೆ. ದಾರಿ ಮಧ್ಯೆ ನಿಮ್ಮನ್ನು ತಡೆಯುವ ಪ್ರಯತ್ನ ನಡೆಯುತ್ತೆ. ಕೋವಿಡ್ ನಿಯಮ ಪಾಲನೆ ಮಾಡಿ ಎಂದು‌ ಕಾರ್ಯಕರ್ತರಿಗೆ ಸಲಹೆ ನೀಡಿದರು.

ನಾಳೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಪಾದಯಾತ್ರೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪೋಟ್ಯಾಷ್ ರಸಗೊಬ್ಬರ ದುಬಾರಿ

ಪೋಟ್ಯಾಷ್ ರಸಗೊಬ್ಬರ ದುಬಾರಿ

Leave a Reply Cancel reply

Your email address will not be published. Required fields are marked *

Recommended

ksrtc ಬಸ್ಸಿನಲ್ಲಿ ಕೋಳಿಗೂ ಟಿಕೆಟ್!

ksrtc ಬಸ್ಸಿನಲ್ಲಿ ಕೋಳಿಗೂ ಟಿಕೆಟ್!

4 years ago
ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ