• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಕೇಂದ್ರದ ಕೈಗೆ IAS, IPSಗಳ ಜುಟ್ಟು

cknewsnow desk by cknewsnow desk
January 21, 2022
in EDITORS'S PICKS, NATION, STATE
Reading Time: 1 min read
1
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
989
VIEWS
FacebookTwitterWhatsuplinkedinEmail

ರಾಜ್ಯ ಸರಕಾರಗಳ ಅಧಿಕಾರಕ್ಕೆ ಕೇಂದ್ರದ ಗುನ್ನ ಎಂದ ಸಿದ್ದರಾಮಯ್ಯ

ಬೆಂಗಳೂರು: ‘ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954’ ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಧಿಸಲು ಹೊರಟಿದೆ ಎಂದು ವಿಧಾನಸಭೆ ‌ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಯವರಿಗೆ ಸಿದ್ದರಾಮಯ್ಯ ಅವರು ಬರೆದಿರುವ ಪತ್ರದ ಮುಖ್ಯಾಂಶಗಳು ಹೀಗಿದೆ :

ಮೋದಿಯವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ‘ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ-6, 1954’ ಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಇದೇ 12 ರಂದು ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಸದರಿ ಪತ್ರದಲ್ಲಿ 3 ಮುಖ್ಯ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯಗಳು ತಮ್ಮ ಅಭಿಪ್ರಾಯವನ್ನು ದಿನಾಂಕ 25/1/2022 ರ ಒಳಗೆ ತಿಳಿಸಬೇಕೆಂದೂ ಸಹ ಸೂಚಿಸಲಾಗಿದೆ. ಉದ್ದೇಶಿತ ತಿದ್ದುಪಡಿಯ ಪ್ರಕಾರ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಬೇಕೆಂದಾಗ ಕೇಂದ್ರಕ್ಕೆ ಕರೆಸಿಕೊಳ್ಳುವ, ಬೇಡವೆಂದಾಗ ರಾಜ್ಯಗಳಿಗೆ ವಾಪಸ್ಸು ಕಳಿಸುವ ಪ್ರಸ್ತಾಪ ಇದರಲ್ಲಿದೆ.

ಕೇಂದ್ರ ಸರ್ಕಾರವು ಐಎಎಸ್-ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಸೂಚಿಸಿದರೆ ರಾಜ್ಯ ಸರ್ಕಾರ ನಿರ್ಧಿಷ್ಟ ಸಮಯದೊಳಗೆ ಈ ಕೆಲಸವನ್ನು ಅನುಷ್ಠಾನ ಮಾಡಬೇಕು. ಅದಕ್ಕೂ ಮೊದಲು ರಾಜ್ಯಗಳು ಕೇಂದ್ರ ಸೇವೆಗೆ ಅರ್ಹರಾದವರನ್ನು ಪಟ್ಟಿ ಸಿದ್ದಪಡಿಸಬೇಕು. ಕೇಂದ್ರ ಸರ್ಕಾರವು ಎಷ್ಟು ಮಂದಿ ಅಧಿಕಾರಿಗಳು ಬೇಕು ಎಂದು ತಿಳಿಸುತ್ತದೋ ಅಷ್ಟು ಜನರನ್ನು ಕೇಂದ್ರವು ಔಪಚಾರಿಕವಾಗಿ ರಾಜ್ಯಗಳನ್ನು ಸಂಪರ್ಕಿಸಿ ತನ್ನ ಸೇವೆಗೆ ನಿಯೋಜಿಸಿಕೊಳ್ಳಬಹುದು.

ರಾಜ್ಯ ಸರ್ಕಾರ ಕೇಂದ್ರದ ಸೂಚನೆಯಂತೆ ನಡೆದುಕೊಳ್ಳದಿದ್ದರೆ ಕೇಂದ್ರ ಬಯಸಿದ ಅಧಿಕಾರಿಯನ್ನು ಆ ನಿರ್ಧಿಷ್ಟ ದಿನಾಂಕದ ಬಳಿಕ ಏಕಮುಖವಾಗಿ ಕೇಂದ್ರದ ಸೇವೆಗೆ ನಿಯೋಜಿಸಿಕೊಳ್ಳಬಹುದು. (ಸದ್ಯ ರಾಜ್ಯ ಸೇವೆಯಲ್ಲಿರುವ ಯಾವುದೇ ಐಎಎಸ್-ಐಪಿಎಸ್ ಅಧಿಕಾರಿಯನ್ನು ಕೇಂದ್ರ ಸರ್ಕಾರ ಕೇಂದ್ರದ ಸೇವೆಗೆ ಕರೆಸಿಕೊಳ್ಳಬೇಕಿದ್ದರೆ ಅದಕ್ಕೆ ರಾಜ್ಯಗಳು ಅನುಮತಿ ನೀಡಬೇಕಿತ್ತು). ರಾಜ್ಯಗಳ ಈ ಅಧಿಕಾರವನ್ನು ಮುಲಾಜಿಲ್ಲದೆ ಕಿತ್ತು ಹಾಕಲು ಒಕ್ಕೂಟ ಸರ್ಕಾರ ಮುಂದಾಗಿದೆ.

ತಮಗೆ ಬೇಕಾದಂತೆ ಐಎಎಸ್-ಐಪಿಎಸ್ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಒಮ್ಮತ ಮೂಡದಿದ್ದರೆ, ರಾಜ್ಯಗಳಿಗೆ ಕೇಂದ್ರ ಸರ್ಕಾರದ ತೀರ್ಮಾನಗಳ ಬಗ್ಗೆ ತಕರಾರು ಇದ್ದರೂ ಕೂಡ ರಾಜ್ಯಗಳು ಕೇಂದ್ರದ ತೀರ್ಮಾನವನ್ನು ನಿರ್ಧಿಷ್ಟ ಅವಧಿಯ ಒಳಗೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಳ್ಳಬೇಕು. ಈ ಕುರಿತಂತೆ ಕೇಂದ್ರದ ತೀರ್ಮಾನಗಳೇ ಅಂತಿಮವಾಗಿರುತ್ತವೆ.

ನಿರ್ಧಿಷ್ಟ ಸಂದರ್ಭದಲ್ಲಿ ನಿರ್ಧಿಷ್ಟ ಅಧಿಕಾರಿ/ಅಧಿಕಾರಿಗಳ ಸೇವೆ ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕೆ ಕೇಂದ್ರ ಸೇವೆಗೆ ಅಗತ್ಯವಿದೆ ಎಂದು ಕೇಂದ್ರ ತಿಳಿಸಿದರೆ ರಾಜ್ಯಗಳು ಕೇಂದ್ರದ ಸೂಚನೆಗೆ ನಿರ್ಧಿಷ್ಟ ಅವಧಿಯ ಒಳಗೆ ಕೇಂದ್ರದ ಸೂಚನೆಯನ್ನು ಅನುಷ್ಠಾನಗೊಳಿಸಬೇಕು [ಸದ್ಯಕ್ಕೆ ಕೇಂದ್ರದ ಆದೇಶವೆಂಬ ಪದವನ್ನು ಬಳಸುವ ಧಾಷ್ಟ್ಯವನ್ನು ತೋರಿಸಿಲ್ಲ,
(ಆದರೆ ಪತ್ರದ ಆಶಯ ಹಾಗೆ ಇದೆ).

ರಾಜ್ಯಗಳ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ನಿಯೋಜನೆ, ವರ್ಗಾವಣೆಗಳ ಮೇಲಿನ ಅಧಿಕಾರವನ್ನು ಕೇಂದ್ರವು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿ ಸಂವಿಧಾನ ವಿರೋಧಿ, ಒಕ್ಕೂಟ ತತ್ವ ವಿರೋಧಿಯಾದ ಕೃತ್ಯವಾಗುತ್ತದೆ. ರಾಜ್ಯಗಳು ಕೇಂದ್ರದ ಬಿಜೆಪಿ ಸರ್ಕಾರದ ಸಾಮ್ರಾಜ್ಯಶಾಹಿ, ಪಾಳೇಗಾರಿಕೆ ಧೋರಣೆಯಾಗುತ್ತದೆ. ಕೇಂದ್ರದ ಈ ನಿಯಮದಿಂದ ರಾಜ್ಯಗಳು ತಮ್ಮ ಎಲ್ಲ ಅಧಿಕಾರಗಳನ್ನು ಕಳೆದುಕೊಂಡು ಕೇಂದ್ರದ ಸಾಮಂತರಂತೆ ಬದುಕಬೇಕಾದ ಪರಿಸ್ಥಿತಿ ಬರುತ್ತದೆ.

ಅಧಿಕಾರಿಗಳ ಮೇಲಿನ ನಿಯಂತ್ರಣವೆಂದರೆ, ಆಡಳಿತದ ಮೇಲಿನ ನಿಯಂತ್ರಣವೆಂದು ಅರ್ಥ. ರಾಜ್ಯ ಸರ್ಕಾರಗಳಿಗೆ ತನ್ನ ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲದಿದ್ದರೆ ಜನರ ಕೆಲಸಗಳನ್ನು ಹೇಗೆ ಮಾಡಿಸುವುದು? ರಾಜ್ಯಗಳ ಚುನಾಯಿತ ಸರ್ಕಾರಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರವು ಈ ದುಷ್ಟ ತಿದ್ದುಪಡಿಯನ್ನು ತರಲು ಹೊರಟಿದೆ. ಇದರಿಂದ ಕೇಂದ್ರ, ರಾಜ್ಯಗಳ ನಡುವೆ ನೇರವಾದ ಹಿತಾಸಕ್ತಿ ಸಂಘರ್ಷ ಪ್ರಾರಂಭವಾಗುತ್ತದೆ.
 
ರಾಜ್ಯಗಳನ್ನು ಕೇಂದ್ರಾಡಳಿತ ಪ್ರದೇಶಗಳ ಮುಂದುವರಿದ ರೂಪ ಎಂದು ಪರಿಗಣಿಸಿದಂತೆ ಮೋದಿಯವರ ಸರ್ಕಾರ ಭಾವಿಸಿದಂತೆ ಕಾಣುತ್ತಿದೆ. ಸೌಹಾರ್ದ ಸಂಬಂಧದ ಆಡಳಿತದ ನಡೆಸಿ, ಜನರ ಕೆಲಸ ಮಾಡಬೇಕಾದ ಕಡೆ ತನಗೆ ವಿರೋಧಿಯಾದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಗಳನ್ನು ಹೇಗೆ ನಿಯಂತ್ರಿಸುವುದು ಎನ್ನುವ ಕೆಟ್ಟ ಉದ್ದೇಶ ಮಾತ್ರ ಈ ತಿದ್ದುಪಡಿಯ ಹಿಂದೆ ಇದೆ.

ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆದ ಬಳಿಕ ಅವರ ಸರ್ಕಾರದ ಆಡಳಿತ ವೈಖರಿ ರಾಜ್ಯಗಳ ಸಂವಿಧಾನಬದ್ದ ಹಕ್ಕುಗಳಿಗೆ ಗಂಡಾಂತರಗಳು ಬಂದೆರಗುತ್ತಲೆ ಇವೆ.

ಮೋದಿಯವರ ಸರ್ಕಾರದ ಈ ಸರ್ವಾಧಿಕಾರಿ, ಒಕ್ಕೂಟ ತತ್ವ ವಿರೋಧಿ ಧೋರಣೆಯನ್ನು ಈಗಾಗಲೇ ಆರು ರಾಜ್ಯಗಳು ಖಂಡಿಸಿರುವುದು ಮಾತ್ರವಲ್ಲದೆ ಯಾವುದೇ ಹಂತದಲ್ಲೂ ದಾಳಿಯನ್ನು ರಾಜ್ಯಗಳು ಸಹಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ತಿಳಿಸಿವೆಯೆಂಬ ಮಾಹಿತಿ ಇದೆ.
 
ಉಳಿದ ರಾಜ್ಯಗಳ ಜನರಲ್ಲೂ ಬಿಜೆಪಿಯ ವಿರುದ್ಧ ಆಕ್ರೋಶ ಮಡುಗಟ್ಟುತ್ತಿದೆ. ಈ ಆಕ್ರೋಶವು ಮುಂದೊಂದು ದಿನ ಅನಾಹುತಕಾರಿ ದಿಕ್ಕಿನ ಕಡೆಗೆ ತಿರುಗಿಬಿಡಬಹುದೆಂಬ ಆತಂಕ ನನ್ನನ್ನು ಕಾಡುತ್ತಿದೆ.

ಅದಾಗದಂತೆ ನೋಡಿಕೊಳ್ಳಬೇಕೆಂದರೆ ನಮ್ಮ ಸಂವಿಧಾನ ಪಿತೃಗಳ ಆಶಯವೇನಿದ್ದವು ಅವುಗಳಂತೆ ನಡೆದುಕೊಳ್ಳಿ ಎಂದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಿಳಿಸಿ ಹೇಳಬೇಕು. ಆದ್ದರಿಂದ ತುರ್ತಾಗಿ ವಿರೋಧ ಪಕ್ಷಗಳ ಜೊತೆ ಚರ್ಚಿಸಿ ರಾಜ್ಯದ ವಿರೋಧವನ್ನು ಒಕ್ಕೂಟ ಸರ್ಕಾರಕ್ಕೆ ತಿಳಿಸಬೇಕು ಎಂದು ಒತ್ತಾಯಿಸುತ್ತೇನೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ

Comments 1

  1. Afreentaj says:
    3 years ago

    Super

    Reply

Leave a Reply Cancel reply

Your email address will not be published. Required fields are marked *

Recommended

ಟೌಕ್ಟೇ ಚಂಡಮಾರತ ಅಬ್ಬರ: ಮರವಂತೆ ಮೀನುಗಾರರ ಬದುಕು ದುಸ್ಥರ, ಸ್ಥಳಕ್ಕೆ ತೆರಳುವಂತೆ ಸಚಿವರಿಗೆ ಸೂಚಿಸಿದ ಸಿಎಂ, ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ಆದೇಶ

ಟೌಕ್ಟೇ ಚಂಡಮಾರತ ಅಬ್ಬರ: ಮರವಂತೆ ಮೀನುಗಾರರ ಬದುಕು ದುಸ್ಥರ, ಸ್ಥಳಕ್ಕೆ ತೆರಳುವಂತೆ ಸಚಿವರಿಗೆ ಸೂಚಿಸಿದ ಸಿಎಂ, ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ಆದೇಶ

4 years ago
ಮೊಯಿಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಮೊಯಿಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ