• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

15ಕ್ಕೂ ಹೆಚ್ಚು ಸಚಿವರ ವಿರುದ್ಧ ಸಿಎಂಗೆ ದೂರು

cknewsnow desk by cknewsnow desk
January 30, 2022
in STATE
Reading Time: 1 min read
1
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ
1.1k
VIEWS
FacebookTwitterWhatsuplinkedinEmail

ಮೊಬೈಲ್‌ ಕರೆ ಮಾಡಿದರೆ ತೆಗೆಯಲ್ಲ, ಶಾಸಕರ ಕೆಲಸ ಮಾಡಿಕೊಡಲ್ಲ; ಹಿಂದೆ ಡಾ.ಸುಧಾಕರ್‌ ವಿರುದ್ಧ ಗುಡುಗಿದ್ದ ರೇಣುಕಾಚಾರ್ಯ

  • ಪ್ರತಿಯೊಂದಕ್ಕೂ ಪಿಎಸ್ ಹಾಗೂ ಪಿಎಗಳನ್ನು ಸಂಪರ್ಕಿಸಲು ಸಬೂಬು ಕೊಡುತ್ತಾರೆ.
  • ಸಚಿವರೇನೂ ದೇವಲೋಕದಿಂದ ಇಳಿದುಬಂದಿಲ್ಲ.
  • ರಾಷ್ಟ್ರೀಯ ನಾಯಕರಿಗೂ ದೂರು ನೀಡುವ ಎಚ್ಚರಿಕೆ

ಬೆಂಗಳೂರು: ಸ್ವಪಕ್ಷೀಯ ಬಿಜೆಪಿ ಶಾಸಕರ ಕೆಲಸಗಳಿಗೆ ಸ್ಪಂದಿಸದೆ ಕನಿಷ್ಠಪಕ್ಷ ದೂರವಾಣಿ ಕರೆಗಳನ್ನು ಸ್ವೀಕರಿಸದ ಸುಮಾರು 15ಕ್ಕೂ ಹೆಚ್ಚು ಸಚಿವರ ವಿರುದ್ಧ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಅಧ್ಯಕ್ಷರಿಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಅವರು; ಸಚಿವರ ಕಾರ್ಯವೈಖರಿ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ.

ಪಕ್ಷದ ಶಾಸಕರ ಮನವಿಗೆ ಸ್ಪಂದಿಸದ ಸಚಿವರ ವಿರುದ್ಧ ಈವರೆಗೆ ಮೌಖಿಕವಾಗಿ ಅಸಮಾಧಾನ ಹೊರಹಾಕುತ್ತಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ಪಕ್ಷದ ನಾಯಕರಿಗೆ ಹಲವು  ಸಚಿವರ ವಿರುದ್ದ  ಲಿಖಿತ ದೂರು ಸಲ್ಲಿಸಿದ್ದು, ಇದು ಮುಂದಿನ ದಿನಗಳಲ್ಲ ಗಂಭೀರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ 14 ತಿಂಗಳು ಬಾಕಿ ಉಳಿದಿದೆ ಇಂಥ ಸಂದರ್ಭದಲ್ಲಿ ನಮ್ಮ ಪಕ್ಷದ ಸಚಿವರು ಯಾವುದೇ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ. ಮೊಬೈಲ್ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ ಅಷ್ಟೇ ಅಲ್ಲ ಖುದ್ದಾಗಿ ಭೇಟಿಯಾಗಿ ಪತ್ರಗಳನ್ನು ಕೊಟ್ಟರೆ ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಧಿಕಾರಿಗಳಿಗೆ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಕ್ಷೇತ್ರದ ಯಾವುದೇ ಕೆಲಸಗಳು ಆಗುತ್ತಿಲ್ಲ. ನಾವು ಕ್ಷೇತ್ರಕ್ಕೆ ಸಂಬಂಧಿಸಿದ ಪತ್ರಗಳನ್ನು ನೀಡಿದರೂ ಸಚಿವರು ಪ್ರತಿಕ್ರಿಯೆಯನ್ನೂ ಕೊಡುವುದಿಲ್ಲ. ಕ್ಷೇತ್ರದಲ್ಲಿ ನಮ್ಮ ಕೆಲಸಗಳೇ ಆಗದಿದ್ದರೆ ನಾವು ಹೇಗೆ ಮುಖ ಹೊತ್ತು ತಿರಗಬೇಕೆಂದು ಪ್ರಶ್ನಿಸಿದ್ದಾರೆ.

ಕೆಲವರಿಗೆ ನಮ್ಮಿಂದಲೇ ಸರ್ಕಾರ ಬಂದಿದೆ ಎಂಬ ಅಹಂ ಇದೆ. ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳಬೇಕು. ಕನಿಷ್ಟ ಪಕ್ಷ ಪೋನ್ ಕಾಲ್ ರಿಸೀವ್ ಮಾಡಬೇಕು. ನಮ್ಮ ಕ್ಷೇತ್ರಗಳ ಕೆಲಸ ಮಾಡಿಕೊಡುವಂತೆ ಸಚಿವರಿಗೆ ಸೂಚನೆ ಕೊಡಬೇಕೆಂದು ಅವರು ಸಿಎಂ ಮತ್ತು ಪಕ್ಷದ ರಾಜ್ಯಾದ್ಯಕ್ಷರಿಗೆ ಮನವರಿಕೆ ಮಾಡಿದ್ದಾರೆ.

ಶಾಸಕರಿಗೆ ಸ್ವಂದನೆ ಸಿಗುತ್ತಿಲ್ಲ, ಕ್ಷೇತ್ರದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ಶಾಸಕರು ಕೆಲಸ ಮಾಡಿಕೊಡಿ ಎಂದು ಕೇಳಿಕೊಂಡರೂ ಸ್ಪಂದಿಸುತ್ತಿಲ್ಲ. ಶಾಸಕರ ನಿರೀಕ್ಷೆ ಈಡೇರುತ್ತಿಲ್ಲ. ಈಗಿನ ಸರ್ಕಾರದಲ್ಲೂ ಕ್ಷೇತ್ರದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂಬ ಅಸಮಾಧಾನವನ್ನು ಹೊರಹಾಕಿದ್ದಾರೆ.

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಲ್ಲ. ನಾವು  ಕೂಡ ಜನರಿಂದಲೇ ಆರಿಸಿಬಂದವರು. ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್‍ಗಳು ಪೋನ್ ರಿಸೀವ್ ಮಾಡುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಜನರು ಕೇಳುತ್ತಿದ್ದಾರೆ. ಅನೇಕ ಕೆಲಸಗಳು ಹಾಗೆಯೇ ಉಳಿದಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಪೋನ್ ಮಾಡಿದರೆ ಅವರು ರಿಸೀವ್ ಮಾಡುತ್ತಿಲ್ಲ. ನೇರವಾಗಿ ಭೇಟಿಯಾಗಿ ಕೇಳಿದರೂ ಅವರಿಗೆ ಸೌಜನ್ಯದಿಂದ ಮಾತನಾಡುವ ತಾಳ್ಮೆ ಇಲ್ಲ, ಈ ವರ್ತನೆ ಸರಿ ಹೋಗದಿದ್ದರೆ ಪರಿಸ್ಥಿತಿ ಹದಗಡೆಲಿದೆ. ಈಗಲಾದರೂ ವರ್ತನೆ ಸರಿಪಡಿಸಿಕೊಳ್ಳಲು ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನಮ್ಮ ಪತ್ರಗಳಿಗೆ ಸಚಿವರು ತಮ್ಮ ಆಪ್ತ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರೆ ಅವರು ಪತ್ರಗಳನ್ನು ಪರಿಶೀಲನೆ ಮಾಡಲಾಗುವುದು. ಕಾನೂನಿನ ಪ್ರಕಾರ  ಕ್ರಮ ಕೈಗೊಳ್ಳಲಾಗುವುದು, ಪರಿಶೀಲನೆ ಮಾಡಲಗುವುದು ಇಂತಹ ಸಬೂಬುಗಳನ್ನು ನೀಡುತ್ತಾರೆ. ಶಾಸಕರಾಗಿ ನಮಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಮುಂದೆ ಸಚಿವರ ವರ್ತನೆಯನ್ನು ಬದಲಿಸದಿದ್ದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡುವುದು ಅನಿವಾರ್ಯವಾಗುತ್ತದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಶೀಘ್ರದಲ್ಲೇ ಸಭೆ 

ಇನ್ನು ಸಚಿವರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ಹೊರಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ ನಳೀನ್‍ಕುಮಾರ್ ಕಟೀಲ್ ಅವರಿಂದ ದೂರುಗಳು ಬಂದಿವೆ. ಪದೇಪದೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಇನ್ನು ನಾಲ್ಕು ದಿನದೊಳಗೆ ಸಭೆ ಕರೆದು ಇತ್ಯರ್ಥಪಡಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.

ಸಚಿವರು ಈ ಹಿಂದೆಯೂ ಶಾಸಕಾಂಗ ಸಭೆಯಲ್ಲಿ ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕೆಂದು ಸಚಿವರಿಗೆ ಸೂಚನೆ ಕೊಡಲಾಗಿತ್ತು. ಆದರೂ ಕೆಲವರ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ. ಶೀಘ್ರದಲ್ಲೇ ಸಭೆ ಕರೆದು ಅಂತಹ ಸಚಿವರಿಗೆ ತಿಳಿ ಹೇಳುವುದಾಗಿ ತಿಳಿಸಿದ್ದಾರೆ.

ಸುಳ್ಳು ಹೇಳಿದ ಸಚಿವರು

ಇತ್ತೀಚೆಗೆ ಕ್ಷೇತ್ರಕ್ಕೆ ಸಂಬಂಧಿಸಿಂತೆ ಕೆಲಸವೊಂದಕ್ಕೆ ಸಚಿವರೊಬ್ಬರಿಗೆ ದೂರವಾಣಿ ಕರೆ ಮಾಡಿದರೆ ಅವರ ಆಪ್ತ ಕಾರ್ಯದರ್ಶಿ ಅವರಿಗೆ ಕೋವಿಡ್ ಬಂದು ಹೋಂ ಐಸೋಲೇಷನ್‍ನಲ್ಲಿದ್ದಾರೆ ಎಂದು ಹೇಳಿದ್ದರು. ಬೆಳಗ್ಗೆ 10 ಗಂಟೆಗೆ ಕರೆ ಮಾಡಿದಾಗ ಆಪ್ತ ಕಾರ್ಯದರ್ಶಿ ಸಚಿವರಿಗೆ ಕೋವಿಡ್ ಬಂದಿದೆ ಎಂದು ಹೇಳಿದ್ದರು. ಆದರೆ ಅದೇ  ಸಚಿವರು ಅಂದು ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದರು. ಎದುರಿಗೆ ಬಂದ ರೆಣುಕಾಚಾರ್ಯರನ್ನು ನೋಡಿದಾಗ ಕಕ್ಕಾಬಿಕ್ಕಿಯಾದರು. ಇದು ಸಚಿವರ ಕಾರ್ಯವೈಖರಿಗೆ ಹಿಡಿದ ಕೈಕನ್ನಡಿ ಎಂದು ಅಸಮಾಧಾನ ಹೊರಹಾಕಿದರು.

ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಫೋನ್‌ ಕಾಲ್‌ ಪಿಕ್‌ ಮಾಡದ ಸಚಿವ ಡಾ.ಸುಧಾಕರ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ಡಾ.ಕೆ.ಸುಧಾಕರ್‌ ವಿರುದ್ಧ ಗುಡುಗಿದ್ದ ರೇಣುಕಾಚಾರ್ಯ

ಈ ಹಿಂದೆ ರೇಣಿಕಾಚಾರ್ಯ ಅವರು ತಮ್ಮ ಕೆಲಸ ಮಾಡಿಕೊಡುತ್ತಿಲ್ಲ, ಕಾಲ್‌ ಮಾಡಿದರೆ ತಮ್ಮ ಕರೆ ತೆಗೆಯುವುದಿಲ್ಲ. ಆಪ್ತರ ಮೂಲಕ ಇಲ್ಲ ಎಂದು ಹೇಳಿಸುತ್ತಾರೆ ಎಂದು ಬಹಿರಂಗವಾಗಿ ಗುಡುಗಿದ್ದರು. ಈ ಬಗ್ಗೆ ಅವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ದೂರು ನೀಡಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮೊಬೈಲ್‍ʼಗಾಗಿ ಬಾವಿಗಿಳಿದು ಪ್ರಾಣವನ್ನೇ ಕಳೆದುಕೊಂಡ ನತದೃಷ್ಟ ಯುವಕ

ಮೊಬೈಲ್‍ʼಗಾಗಿ ಬಾವಿಗಿಳಿದು ಪ್ರಾಣವನ್ನೇ ಕಳೆದುಕೊಂಡ ನತದೃಷ್ಟ ಯುವಕ

Comments 1

  1. Pingback: ಕೋವಿಡ್‌ ಬಂದು ಹೋಮ್ ಕ್ವಾರಂಟೈನ್‍ ಆಗಿದ್ದೇನೆ ಎಂದು ಸುಳ್ಳು ಹೇಳಿ ಮರುದಿನವೇ ಸಂಪುಟ ಸಭೆಗೆ ಬಂದು ಸಿಕ್ಕಿಬಿದ್

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

4 years ago
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಗುಡಿಬಂಡೆ ಪಟ್ಟಣ ಪಂಚಾಯತಿಗೆ 3 ನಾಮನಿರ್ದೇಶನ ಸದಸ್ಯರು

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ