• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

28 ಹಳ್ಳಿಗಳಿಗೆ ನೀರು; ಶಾಸಕರ ಯೋಜನೆಗೆ ಗುಡಿಬಂಡೆ ಜನರ ವಿರೋಧ

cknewsnow desk by cknewsnow desk
February 11, 2022
in CHIKKABALLAPUR, STATE
Reading Time: 1 min read
0
ಅಪಾಯದಲ್ಲಿದೆ ಗುಡಿಬಂಡೆ ಅಮಾನಿಭೈರ ಸಾಗರ ಕೆರೆ ಏರಿ
1.4k
VIEWS
FacebookTwitterWhatsuplinkedinEmail

ಬರಡಾಗುವತ್ತ ಗುಡಿಬಂಡೆ ಅಮಾನಿ ಭೈರಸಾಗರ ಕೆರೆ

by GS Bharath Gudibande

ಗುಡಿಬಂಡೆ: ಪಟ್ಟಣದ ಜನರ ಜಲದಾಹ ನೀಗಿಸುವ ಅಮಾನಿ ಭೈರಸಾಗರ ಕೆರೆಯಿಂದ ತಾಲ್ಲೂಕಿನ 28 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಶಾಸಕ ಎಸ್.ಎನ್.ಸುಬ್ಬರೆಡ್ಡಿ ಮುಂದಾಗಿರುವುದಕ್ಕೆ ಪಟ್ಟಣದ ಜನರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ʼಜಲಜೀವನ್ ಮಿಷನ್ʼ ಯೋಜನೆ ಅಡಿಯಲ್ಲಿ ಅಮಾನಿ ಭೈರಸಾಗರ ಕೆರೆಯಿಂದ ತಾಲೂಕಿನ 28 ಹಳ್ಳಿಗಳ 2,578 ಮನೆಗಳಿಗೆ ನೇರವಾಗಿ ನಲ್ಲಿ ಮೂಲಕ ನೀರು ಒದಗಿಸುವ ಯೋಜನೆಗೆ ಹಣ ಮಂಜೂರಾಗಿದ್ದು, ಸಚಿವ ಸಂಪುಟದ ಅನುಮೋದನೆಯೂ ಸಿಕ್ಕಿರುವುದು ಪಟ್ಟಣದ ಜನರ ನಿದ್ದೆ ಕೆಡಿಸಿದೆ.

ಪಟ್ಟಣದಲ್ಲಿ 2,500 ಮನೆಗಳಿಗೆ 1,700 ನಲ್ಲಿ

28 ಹಳ್ಳಿಗಳ ಮನೆಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಹೋಗಿ ಗುಡಿಬಂಡೆ ಜನರಿಗೆ ಕುಡಿಯಲು ನೀರು ಇಲ್ಲದಂತೆ ಮಾಡಿ ಜನರು ಮತ್ತೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ, ಇನ್ನೂ ಅದೆಷ್ಟೋ ಮನೆಗಳಿಗೆ ಪಟ್ಟಣದಲ್ಲಿ ನಲ್ಲಿ ವ್ಯವಸ್ಥೆಯೇ ಇಲ್ಲ. ಅಂತಹ ಮನೆಗಳನ್ನು ಗುರುತಿಸಿ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡದೇ ಈಗ ಶಾಸಕರು ಪಟ್ಟಣದ ಜನರಿಗೆ ನೀರು ತಪ್ಪಿಸುವ ಕೆಲಸ ಮಾಡಲು ಹೊರಟಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡರು ಟೀಕಿಸಿದ್ದಾರೆ.

ಗಂಗೆ ಯೋಜನೆಯಿಂದ ಬೋಟಿಂಗ್ ಗೆ ಅಡ್ಡಿ

ಎಸ್.ಎನ್.ಸುಬ್ಬಾರೆಡ್ಡಿ ಅವರು ಶಾಸಕರಾಗಿ ಬಂದ ದಿನದಿಂದ ಗುಡಿಬಂಡೆಯಲ್ಲಿನ ಪ್ರವಾಸೋದ್ಯಮ ಮಾಡುವೆ, ಅಮಾನಿ ಭೈರಸಾಗರ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿ ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಅದಾವುದನ್ನೂ ಮಾಡಿಲ್ಲ. ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಯಾವ ಯೋಜನೆಯನ್ನೂ ಕಾರ್ಯಗತ ಮಾಡಿಲ್ಲ. ಈಗ ಇರುವ ನೀರನ್ನು ಹಳ್ಳಿಗಳಿಗೆ ಕೊಟ್ಟರೆ ಗುಡಿಬಂಡೆ ಪಟ್ಟಣದ ಜನರಿಗೆ ಕುಡಿಯಲು ನೀರು ಇರುವುದಿಲ್ಲ, ಹಾಗಾಗಿ ಶಾಸಕರು ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎನ್ನುವುದು ಪಟ್ಟಣದ ಪ್ರಮುಖರೊಬ್ಬರು ಹೇಳುವ ಮಾತು.

ಪಕ್ಷಬೇಧ ಬಹುತೇಕ ಮುಖಂಡರು ಈ ಯೋಜನೆಯನ್ನು ವಿರೋಧ ಮಾಡುತ್ತಿದ್ದಾರೆ. ಹಳ್ಳಿಗಳಿಗೆ ನೀರು ಕೊಡುವುದು ತಪ್ಪಲ್ಲ, ಆದರೆ ಅಮಾನಿ ಭೈರಸಾಗರದಲ್ಲಿ ಎಷ್ಟು ನೀರು ಸಂಗ್ರಹವಾಘುತ್ತದೆ? ಗುಡಿಬಂಡೆ ಪಟ್ಟಣದಲ್ಲಿ ಎಷ್ಟು ಜನಸಂಖ್ಯೆ ಇದೆ? ಕೆರೆಯಲ್ಲಿ ಎಷ್ಟು ಹೂಳು ತುಂಬಿದೆ? ಎನ್ನುವುದನ್ನು ವೈಜ್ಞಾನಿಕವಾಗಿ ಪರಿಶೀಲನೆ ಮಾಡಬೇಕು. ಕೆರೆಯಲ್ಲಿ ಹಿಂದೆ ಹೂಳು ತೆಗೆಯುವ ಕೆಲಸವನ್ನು ನಾಮಕಾವಸ್ತೆಗೆ ಮಾಡಿ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ಕೆರೆಯ ಹೂಳು ಕೆರೆಯಲ್ಲೇ ಬಿದ್ದಿದೆ ಎನ್ನುವುದು ಹೆಸರು ಹೇಳಲಿಚ್ಛಿಸದ ಇನ್ನೊಬ್ಬ ಮುಖಂಡರ ಅಳಲು.

ಪ್ರತಿ ಹಳ್ಳಿಗೂ ಕೆರೆ ಇದೆ. ಆ ಕೆರೆಗಳಲ್ಲಿ ಹೂಳು ತುಂಬಿದೆ ಹಾಗೂ ಒತ್ತುವರಿ ಆಗಿದೆ. ತೂಬುಗಳು ಹಾಳಾಗಿರುವ ಹಿನ್ನೆಲೆಯಲ್ಲಿ ಕೆರೆಗಳಿಗೆ ಹರಿದು ಬರುವ ನೀರು ನಿಲ್ಲುತ್ತಿಲ್ಲ. ಕೆಲ ತಿಂಗಳ ಹಿಂದೆ ತಾಲೂಕಿನಲ್ಲಿ ಭಾರೀ ಮಳೆ ಸುರಿದಿದೆ. ಆದರೆ ಅನೇಕ ಕೆರೆಗಳಲ್ಲಿ ಈಗ ನೀರಿಲ್ಲ. ಇದಕ್ಕೆ ಕಾರಣರು ಯಾರು? ಸಣ್ಣ ನೀರಾವರಿ ಇಲಾಖೆ ಕೇವಲ ದೊಡ್ಡ ಕೆರೆಗಳತಚ್ತ ಗಮನ ಕೊಟ್ಟು ಹಳ್ಳಿ ಕೆರೆಗಳನ್ನು ನಿರ್ಲಕ್ಷ್ಯ ಮಾಡಿದೆ. ಶಾಸಕರು ಅಂಥ ಕೆರೆಗಳನ್ನು ಅಭಿವೃದ್ಧಿಪಡಿಸಿ ಆಯಾ ಗ್ರಾಮಗಳಿಗೆ ನೀರು ಒದಗಿಸಬೇಕು, ಆ ಮೂಲಕ ಅಂತರ್ಜಲ ಮಟ್ಟವೂ ಹೆಚ್ಚಾಗುತ್ತದೆ. ಆರ್ಥಿಕವಾಗಿಯೂ ಇದು ಉತ್ತಮ ಪರಿಕಲ್ಪನೆ ಎನ್ನುತ್ತಾರೆ ಅವರು.


ಮನೆ ಮನೆಗೆ ಗಂಗೆ ಯೋಜನೆ ಬಹಳ ಒಳ್ಳೆಯ ಕೆಲಸ. ಆದರೆ ಒಬ್ಬರ ನೀರು ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವುದು ಯಾವ ನ್ಯಾಯ? ಶಾಸಕರು ಈಗ ನೀರಿನ ಸೌಲಭ್ಯ ಕಲ್ಪಿಸುತ್ತಿರುವ 28 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇಲ್ಲ. ಹೀಗಿರುವಾಗ ಪಟ್ಟಣದಲದಲಿ 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಇವರು ನೀರಿಲ್ಲದೆ ಸಮಸ್ಯೆ ಎದುರಿಸುವ ಸ್ಥಿತಿ ನಿರ್ಮಾಣವಾಗಲಿದೆ. ಕೃಷಿ ಚಟುವಟಿಕೆಗಳಿಗೆ ಬಳಸದೆ ಕುಡಿಯಲು ಮಾತ್ರ ಉಪಯೋಗ ಮಾಡುತ್ತಿದ್ದಾಗ ಅದಕ್ಕೆ ಸಮಸ್ಯೆ ಮಾಡಬಾರದು.

ಬುಲೆಟ್ ಶ್ರೀನಿವಾಸ್, ಅಧ್ಯಕ್ಷ, ಜಯಕರ್ನಾಟಕ, ಗುಡಿಬಂಡೆ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರ ಸಮಸ್ಯೆ ಶೀಘ್ರ ಇತ್ಯರ್ಥ: ತಿಂಗಳಲ್ಲಿ ಸಮಿತಿ ವರದಿ, ಬಳಿಕ ಪರಿಹಾರ

3 years ago
ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ