• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ

P K Channakrishna by P K Channakrishna
February 13, 2022
in POLITICS, STATE
Reading Time: 1 min read
0
ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ
950
VIEWS
FacebookTwitterWhatsuplinkedinEmail

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುಳಿವು; ಕನ್ನಡ ಸಂಘಟನೆಗಳು, ರೈತ-ದಲಿತ-ನೀರಾವರಿ ಸಂಘಟನೆಗಳ ನಾಯಕರ ಕೂಟ

  • ಹೆಚ್‌ಡಿಕೆ ಹೇಳಿದ್ದೇನು?
  • ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆ ನಡೆಸುತ್ತೇನೆ, ಸ್ಪರ್ಧಿಸಲ್ಲʼ
  • ನಿಖಿಲ್‌ ಸ್ಪರ್ಧೆ ವಿಚಾರವನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸುತ್ತಾರೆ
  • ನಮ್ಮ ಗುರಿ 123 ಕ್ಷೇತ್ರಗಳಲ್ಲಿ ಗೆಲ್ಲುವುದು
  • ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆ ನಾನೇ ನಡೆಸುವೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ವರ್ಷ ಇರುವಾಗಲೇ ಸದ್ದಿಲ್ಲದೆ ಸಿದ್ಧತೆಗಳನ್ನು ಆರಂಭಿಸಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಕನ್ನಡ ಸಂಘಟನೆಗಳು, ರೈತ ಮುಖಂಡರು, ನೀರಾವರಿ ಹೋರಾಟಗಾರರು, ದಲಿತ ನಾಯಕರು ಒಳಗೊಂಡ ʼಕನ್ನಡಿಗರ ಮಹಾಮೈತ್ರಿಕೂಟʼ ರಚನೆ ಮಾಡುವ ಸುಳಿವು ನೀಡಿದ್ದಾರೆ.

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಕನ್ನಡಿಗರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ನೋಡುತ್ತಿರುವುದಕ್ಕೆ ಸಡ್ಡು ಹೊಡೆಯಲು ನಿರ್ಧರಿಸಿರುವ ಅವರು; ನಾಡು, ನುಡಿ, ನೆಲ, ಜಲ ಸೇರಿದಂತೆ ಕರ್ನಾಟಕ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ʼಕನ್ನಡಿಗರ ಪ್ರಾದೇಶಿಕ ಸರಕಾರʼ ತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ವರ್ಷಕ್ಕೆ ಮುನ್ನವೇ ಹೊಸ ಹೆಜ್ಜೆ ಇರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಚುನಾವಣೆಗೆ ಇನ್ನೂ ೧೪ ತಿಂಗಳ ಸಮಯವಿದೆ. ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ. ಈಗಾಗಲೇ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಮಾಡಿದ್ದೇನೆ. ಅದೇ ರೀತಿ ರೈತರು, ದಲಿತ ಮುಖಂಡರು, ನೀರಾವರಿ ಹೋರಾಟಗಾರರನ್ನು ಕೂಡ ಸದ್ಯದಲ್ಲೇ ಭೇಟಿ ಮಾಡಲಿದ್ದೇನೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರಬೇಕು. ಕನ್ನಡಿಗರದ್ದೇ ಸರಕಾರ ತರಲು ʼಕನ್ನಡಿಗರ ಮಹಾಮೈತ್ರಿಕೂಟʼವನ್ನು ಚುನಾವಣೆಗೆ ಮುನ್ನವೇ ರಚನೆ ಮಾಡಲು ಸಿದ್ಧತೆ ನಡೆಸಿದ್ದೇನೆ. ಇನ್ನೆರಡು ತಿಂಗಳಲ್ಲಿ ಅದರ ರೂಪುರೇಷೆಯ ಜನತೆಗೆ ತಿಳಿಯಲಿದೆ” ಎಂದರು.

ರಾಜ್ಯವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡಿದ್ದು ಸಾಕು. ಕನ್ನಡಿಗರ ಹಿತಾಸಕ್ತಿಗಳನ್ನು ಅವರು ಕಡೆಗಣಿಸಿ ರಾಜ್ಯವನ್ನು ದುಃಸ್ಥಿತಿಗೆ ದೂಡಿದ್ದೂ ಸಾಕು. ಈಗಲಾದರೂ ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಅವರು ಹೇಳಿದರು.

ನಮ್ಮ ಗುರಿ 123 ಕ್ಷೇತ್ರ

ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರಕಾರ ಬರುತ್ತದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕಚ್ರಿಯಿಸಿದ ಅವರು; “ಈಗಿನ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೆ ಹೇಳಿದ್ದಾರೆ. ನಾನು ಸಹ ಮೊನ್ನೆ ಒಂದು ಕಡೆ ಹೇಳಿದ್ದೆ. ಜೆಡಿಎಸ್ ಬಿಟ್ಟು ಯಾರೂ ಸರಕಾರ ಮಾಡಲಿಕ್ಕೆ ಆಗಲ್ಲ ಎಂದಿದ್ದೆ. ಹಾಗೆಂದ ಮಾತ್ರಕ್ಕೆ 123 ಸ್ಥಾನಕ್ಕಿಂತ ಕೆಳಗೆ ಬರುತ್ತೇವೆ ಎಂದಲ್ಲ. ನಮ್ಮ ಗುರಿ 123 ಸ್ಥಾನ ಗೆಲ್ಲುವುದು. ಮುಂದಿನ ಚುನಾವಣೆಗೆ ಈ ಗುರಿ ಇಟ್ಟುಕೊಂಡೇ ಹೊರಟಿದ್ದೇವೆ” ಎಂದರು ಅವರು.

123 ಸ್ಥಾನ ಗೆಲ್ಲಲೇಬೇಕೆಂಬ ಛಲ ನಮ್ಮ ಪಕ್ಷದ್ದು. ಅದು ದೊಡ್ಡ ಸವಾಲು ಎನ್ನುವ ಅರಿವೂ ನನಗಿದೆ. ದೇವೇಗೌಡರ ಹೇಳಿಕೆ ಇವತ್ತಿನ ಪರಿಸ್ಥಿತಿಯನ್ನು ಬಿಂಬಿಸುವಂತಿದೆ. ಇಂದಿನ ಸ್ಥಿತಿಯಲ್ಲಿ ಯಾರಿಗೂ ಬಹುಮತ ಬರವುದಿಲ್ಲ. ಇದು ರಾಜಕೀಯ ಪಂಡಿತರ ಲೆಕ್ಕಾಚಾರ, ಈ ಹಿನ್ನೆಲೆಯಲ್ಲಿ ಅವರು ಹೇಳಿದ್ದಾರೆ. ಇನ್ನೂ ಒಂದು ವರ್ಷ ಸಮಯವಿದ್ದು, ಏನು ಬೇಕಾದರೂ ಆಗಬಹುದು. ಈಗ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುತ್ತಿದೆ. ಅದೇ ರೀತಿ‌ ಕರ್ನಾಟಕದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷವನ್ನು ಜನ ಬೆಂಬಲಿಸಿ, ಪ್ರಾದೇಶಿಕ ಹಿನ್ನೆಲೆಯುಳ್ಳ ಕನ್ನಡಿಗರ ಸರಕಾರ ತರುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಸಂಘಟನೆಗಳನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೇಳಿದರು.

ಹಿಜಾಬ್‌, ಕೇಸರಿ ಶಾಲು; ಸರಕಾರಕ್ಕೆ ಸಲಹೆ

ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಬಂದ್‌ ಆಗಿರುವ ಶಾಲೆ ಕಾಲೇಜುಗಳನ್ನು ತೆರೆಯುವ ಮುನ್ನ ಸರಕಾರ ಮಕ್ಕಳ ಹಿತೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿಗಳು ಸಲಹೆ ಮಾಡಿದರು.

ಯಾವುದೇ ಕಾರಣಕ್ಕೂ ಶಾಲೆ-ಕಾಲೇಜುಗಳಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದಂತೆ ಸರಕಾರ ಸೂಕ್ತ, ಬಿಗಿ ಕ್ರಮಗಳನ್ನು ವಹಿಸಲಿ. ಈ ಹಿಂದಿನಂತೆ ಗಲಾಟೆ ನಡೆಯದಂತೆ ನೋಡಿಕೊಳ್ಳಬೇಕು. ಹಿಂದಿನ ವಾರ ರಾಜ್ಯದ ವಿವಿಧೆಡೆ ಆಗಿದ್ದಂತೆ ಅಶಾಂತಿ ಉಂಟಾಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸರಕಾರ ಉಪೇಕ್ಷೆ ಮಾಡಬಾರದು. ರಾಜ್ಯ ಸರಕಾರದ ಜತೆಗೆ ಶಾಲಾ ಕಾಲೇಜುಗಳ ಆಡಳಿತ ಮಂಡಗಳು ಕೂಡ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆ ನಾನೇ ನಡೆಸುವೆ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಚುನಾವಣೆ ಅಭ್ಯರ್ಥಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ:

ಈಚೆಗೆ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಕಾರ್ಯಕರ್ತರು ಈ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ ಯಾರು? ಎಂದು ಕೇಳಿದರು. ಅದಕ್ಕೆ ನಾನೇ ಬರ್ತೀನಿ, ನಡೆಯಿರಿ ಎಂದು ಹೇಳಿದ್ದೆ. ನಾನೇ ಬರುತ್ತೇನೆ ಅಂದರೆ ಚುನಾವಣೆಗೆ ನಾನೇ ನಿಲ್ಲುತ್ತೇನೆ ಎಂದಲ್ಲ. ಹಿಂದೆ ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ನಡೆಸಿದಂತೆ ಮುಂದಿನ ಬಾರಿ ಚುನಾವಣೆ ನಡೆಸಲು ಬರುತ್ತೇನೆ ಎಂದರ್ಥ. ಈ ಬಗ್ಗೆ ಗೊಂದಲ ಏನೂ ಇಲ್ಲ ಎಂದರು ಕುಮಾರಸ್ವಾಮಿ ಅವರು.

ಹಿಂದೆ ಹತ್ತು ದಿನಗಳ ಕಾಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಳ್ಳಿಹಳ್ಳಿಗೂ ಭೇಟಿ ನೀಡಿ ಚುನಾವಣೆ ಕೆಲಸ ಮಾಡಿದ್ದೇನೆ. ನಮ್ಮ ಅಭ್ಯರ್ಥಿಗಾಗಿ ಹಗಲಿರುಳೂ ದುಡಿದಿದ್ದೇನೆ. ಅದೇ ರೀತಿ ಮುಂದೆ ನಿಂತು ನಾಯಕತ್ವ ವಹಿಸಿಕೊಂಡು ಕೆಲಸ ಮಾಡುತ್ತೇನೆ ಎಂದಿದ್ದೇನೆ. ಅದರ ಹೊರತಾಗಿ ನಾನೇ ಬಂದು ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದೆನಾ? ಇಲ್ಲ. ಅದನ್ನೇ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್‌ ರಾಮನಗರದಲ್ಲಿ ಬೆಳೆಯಲು ಅಸಾಧ್ಯ

ಏನೇ ಸರ್ಕಸ್‌ ಮಾಡಿದರೂ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವೂ ಬೆಳೆಯುವುದು ಕಷ್ಟ. ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಬೇರೂರಲು ಸಾಧ್ಯವೇ ಇಲ್ಲ. ಇನ್ನು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಶೀಘ್ರವೇ ತೀರ್ಮಾನ ಮಾಡುತ್ತೇನೆ. ರಾಮನಗರ ನನ್ನ ಕರ್ಮಭೂಮಿ. ರಾಜಕೀಯವಾಗಿ ನನಗೆ ಜನ್ಮ ನೀಡಿದ ಕ್ಷೇತ್ರವಿದು. ಯಾವುದೇ ಕಾರಣಕ್ಕೂ ಈ ಕ್ಷೇತವನ್ನು ಬಿಟ್ಟು ಕೊಡಲ್ಲ. ಬೇರೆ ಪಕ್ಷಗಳ ಪಾಲಾಗಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಅವರು ಸ್ಪರ್ಧೆ ಮಾಡುವ ಬಗ್ಗೆ ಜೆಡಿಎಸ್ ಕಾರ್ಯಕರ್ತರು ತೀರ್ಮಾನ ಮಾಡುತ್ತಾರೆ. ನನ್ನ ಕಾರ್ಯಕರ್ತರು ಬಲಾಢ್ಯರಿದ್ದಾರೆ. ಚುನಾವಣೆಗೆ ಇನ್ನೂ ಸಮಯವಿದ್ದು, ಸಮಯ ಬಂದಾಗ ಕಾರ್ಯಕರ್ತರೇ ನಿರ್ಧಾರ ಮಾಡುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ರಾಮನಗರ ಕ್ಷೇತ್ರದ ಕೆಲಸ ಮಾಡಿದ್ದೇನೆ

ನನ್ನ ಕೆಲಸದ ಬಗ್ಗೆ ಯಾರೂ ಚರ್ಚೆ ಮಾಡಲು ಸಾಧ್ಯವಿಲ್ಲ. ರಾಮನಗರದ ಶಾಸಕನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಯಾವುದೇ ರೀತಿಯಲ್ಲಿ ಶಾಸಕ ಸ್ಥಾನವನ್ನು ದುರುಪಯೋಗ ಮಾಡಿಕೊಂಡಿಲ್ಲ. ಯಾವುದೇ ಸುಳ್ಳು ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ಮಾಡಿಲ್ಲ. ರಾಮನಗರದಲ್ಲಿ ಶಾಸಕನಾಗಿ ಯಾವ ರೀತಿ ಬದುಕು ನಡೆಸಿದ್ದೇನೋ ಹಾಗೆ ಇವತ್ತೂ ಹಾಗೆಯೇ ಬದುಕುತ್ತಿದ್ದೇನೆ. ಯಾರಿಂದಲೂ ಸರ್ಟಿಫಿಕೇಟ್ ಪಡೆಯುವ ಅವಶ್ಯಕತೆ ನನಗೆ ಇಲ್ಲ ಎಂದು ಮಾಜಿ ಸಿಎಂ ಅವರು ತಮ್ಮ ಟೀಕಾಕಾರರಿಗೆ ತಿರುಗೇಟು ಕೊಟ್ಟರು.

ಮಾಕಳಿ ಏತ ನೀರಾವರಿ ವಿಚಾರದಲ್ಲಿ ಸಿ.ಪಿ.ಯೋಗೇಶ್ವರ ಅವರ ಬೆಂಬಲಿಗರ ಹೇಳಿಕೆ ಗಮನಿಸಿದ್ದೇನೆ. 15 ಕೋಟಿ ರೂ. ವೆಚ್ಚದ ಕಾರ್ಯಕ್ರಮವಂತೆ ಅದು. ಟೆಂಡರ್ ಆಗಿದೆ ಎಂದಿದ್ದಾರೆ ಅವರು. ನಾವೇ ಯೋಜನೆ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಲ್ಲೇ ಜನರಿಗೆ ಅರ್ಥವಾಗಬೇಕಿತ್ತು. ಸತ್ಯ ಸಂಗತಿ ಏನೆಂದರೆ; ಮಾಕಳಿ ಏತ ನೀರಾವರಿ ಯೋಜನೆ 28 ಕೋಟಿ ರೂ. ವೆಚ್ಚದ ಯೋಜನೆ. ಸಣ್ಣ ನೀರಾವರಿ ಇಲಾಖೆ ಜಾರಿ ಮಾಡುತ್ತಿರುವ ಯೋಜನೆ ಅದು. ನಾನು ಮುಖ್ಯಮಂತ್ರಿ ಆಗಿದ್ದಾಗ ನಿರ್ಧಾರ ತೆಗೆದುಕೊಂಡಿದ್ದೆ. ಈಗಿನ ಸರಕಾರದಲ್ಲಿ ನಾನೇ ಒಪ್ಪಿಗೆ ಕೊಡಿದ್ದೇನೆ. ಭೂಮಿ ಪೂಜೆ ಮಾಡಿದಾಗ ಸೋಲ್ಲೆತ್ತಲಿಲ್ಲ. ಈಗ ಕೆರೆಗೆ ನೀರು ತುಂಬುವ ವೇಳೆ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರು ಟಾಂಗ್‌ ನೀಡಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಾಡೋಜ ಕಣವಿ ಅವರ ಆರೋಗ್ಯ ವಿಚಾರಿಸಿದ ಸಿಎಂ

ನಾಡೋಜ ಕಣವಿ ಅವರ ಆರೋಗ್ಯ ವಿಚಾರಿಸಿದ ಸಿಎಂ

Leave a Reply Cancel reply

Your email address will not be published. Required fields are marked *

Recommended

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ ಎಂದ ಹೆಚ್.ಡಿ.ಕುಮಾರಸ್ವಾಮಿ

2 years ago
ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂಪೂರ್ಣ ರದ್ದು; ಭಾನುವಾರದಿಂದ ಎಲ್ಲ ಎಂದಿನಂತೆ!

ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂಪೂರ್ಣ ರದ್ದು; ಭಾನುವಾರದಿಂದ ಎಲ್ಲ ಎಂದಿನಂತೆ!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ