• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ

cknewsnow desk by cknewsnow desk
February 19, 2022
in EDITORS'S PICKS, STATE
Reading Time: 2 mins read
0
ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ
1.3k
VIEWS
FacebookTwitterWhatsuplinkedinEmail

ನಿಸರ್ಗದತ್ತ ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಕ್ತಜಾತ್ರೆ

by GS Bharath Gudibande

ಗುಡಿಬಂಡೆ: ತಾಲೂಕಿನ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದ ಪ್ರಕೃತಿಯ ಚೆಲುವಿನ, ವನಸಿರಿಯ ವೈಭವದಲ್ಲಿ, ನಿಸರ್ಗದತ್ತ ಹಸಿರುಮಲೆಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮೀ ಆದಿನಾರಾಯಣ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆಗಳು ಭರದಿಂದ ನಡೆದಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಎಲ್ಲೋಡುನಲ್ಲಿ ಭಾನುವಾರ ಫೆಬ್ರುವರಿ 20ರಂದು ಬ್ರಹ್ಮ ರಥೋತ್ಸವಕ್ಕೆ ನಡೆಯಲಿದ್ದು, ಪ್ರತಿವರ್ಷ ಮಾಘ ಮಾಸದಲ್ಲಿ ಹತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವರಿಗೆ ಪೂಜೆ, ಹರಕೆ ಸಲ್ಲಿಸುತ್ತಾರೆ.

ಕಳೆದ ವರ್ಷ ಕೋವಿಡ್ ಕಾರಣದಿಂದ ಜಾತ್ರೆ ನಡೆಸಲು ಅನುಮತಿ ಸಿಕ್ಕಿರಲಿಲ್ಲ ಆದರೆ ಈ ವರ್ಷ ಫೆಬ್ರುವರಿ 19ರಿಂದ 21ರವರೆಗೆ ಜಾತ್ರೆ ನಡೆಯಲಿದೆ. 20ರಂದು ಬ್ರಹ್ಮರಥೋತ್ಸವ, 21ರಂದು ರಾತ್ರಿ ಹೂವಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ರಥೋತ್ಸವದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ

ಎಲ್ಲೋಡು ಗುಡಿಬಂಡೆ ತಾಲೂಕಿನಲ್ಲಿರುವ ರಾಜ್ಯದ ಒಂದು ಪ್ರಮುಖ ಯಾತ್ರಾಸ್ಥಳ. ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದೆನಿಸಿರುವ ಲಕ್ಷ್ಮೀ ಆದಿನಾರಾಯಣಸ್ವಾಮಿಯ ಉಗಮ ಸ್ಥಾನವೇ ಕೂರ್ಮಗಿರಿ. ಎಲ್ಲೋಡು ಬೆಟ್ಟ ಸಂಪೂರ್ಣವಾಗಿ ಆಮೆಯಾಕಾರದಲ್ಲಿ ಇರುವುದರಿಂದ ಇದಕ್ಕೆ ʼಕೂರ್ಮಗಿರಿʼ ಎಂದು ಹೆಸರು ಬಂದಿದೆ. ಪಂಚನಾರಾಯಣ ಕ್ಷೇತ್ರಗಳ ಉಗಮ ಸ್ಥಾನ ಎಂದು ಪುರಾಣ ಪ್ರಸಿದ್ಧವಾಗಿದೆ. ಉತ್ತರ ಭಾರತದ ಬದರಿ ಕ್ಷೇತ್ರದ ಬದರಿನಾರಾಯಣ, ಗದುಗಿನ ವೀರನಾರಾಯಣ, ಕೈವಾರ ಕ್ಷೇತ್ರದ ಅಮರನಾರಾಯಣ, ಮೇಲುಕೋಟೆ, ಚೆಲುವನಾರಾಯಣ ಹಾಗೂ ಎಲ್ಲೋಡಿನ ಆದಿನಾರಾಯಣ ಶ್ರೀವಿಷ್ಣು ಅವತಾರದ ಪಂಚನಾರಾಯಣ ಕ್ಷೇತ್ರಗಳೆಂದು ಕರೆಯಲಾಗುತ್ತದೆ. ಈ ಕ್ಷೇತ್ರ ರಾಜ್ಯ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಒರಿಸ್ಸಾ ಮುಂತಾದ ಹೊರ ರಾಜ್ಯಗಳಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಿದೆ.

ಬೆಟ್ಟದ ಇತಿಹಾಸ

ಕೂರ್ಮಗಿರಿ ಪುರಾಣ ರೀತ್ಯಾ ಹಿಂದೆ ಕೂರ್ಮಮಹರ್ಷಿ ಎಂಬ ಮುನಿ ಈ ಪ್ರದೇಶದಲ್ಲಿದ್ದ ದಟ್ಟ ಅರಣ್ಯದಲ್ಲಿ ಮಹಾವಿಷ್ಣುವನ್ನು ಕುರಿತು ತಪಸ್ಸು ಮಾಡಿದಾಗ ಆತನ ಇಷ್ಟ ದೇವರು ಬೆಟ್ಟದ ಮೇಲಿನ ಗುಹೆಯಲ್ಲಿ ಆತನಿಗೆ ದರ್ಶನವಿತ್ತ ಬಗ್ಗೆ ಉಲ್ಲೇಖವಿದೆ. 150 ವರ್ಷಗಳ ಹಿಂದೆ ಆಂಧ್ರಪ್ರದೇಶದ ಕಂಚಿಸಮುದ್ರಂ ಗ್ರಾಮದ ದಾಸರನರಸಯ್ಯಶೆಟ್ಟಿ ಎಂಬ ಭಕ್ತರು ದೇವರಿಗೆ ಗುಡಿಗೋಪುರಗಳನ್ನು ನಿರ್ಮಿಸಿಕೊಡಲು ಮುಂದಾದಾಗ ಕನಸಿನಲ್ಲಿ ಕಾಣಿಸಿಕೊಂಡ ಆದಿನಾಯಣ ನನಗೆ ಗುಡಿಗೋಪುರಗಳು ಬೇಡ, ಜನತೆಗೆ ಉಪಯೋಗವಾಗುವ ಕೆಲಸಮಾಡು ಎಂದು ತಿಳಿಸಿದ್ದು, ಅದರಂತೆ ಆತ ಅಂದು ನಿರ್ಮಿಸಿದ ದೇವರ ಕೆರೆ ಇಂದಿಗೂ ಜನರಿಗೆ ನೀರಿನ ಆಸರೆಯಾಗಿದೆ.
ಪ್ರವಾಸಿಗರ ಮನತಣಿಸಲೆಂದೇ ಸೃಷ್ಟಿಯಾಗಿರುವ ಎಲ್ಲೋಡಿನ ಕೂರ್ಮಗಿರಿ ಬೆಟ್ಟ ಹತ್ತು ಹಲವು ವೈಶಿಷ್ಟಗಳಿಂದ ಕೂಡಿದೆ. ಇತ್ತೀಚೆಗೆ ಗೋಪುರ, ಬೆಟ್ಟಕ್ಕೆ ಹೋಗುವ ಮೆಟ್ಟಲು, ಚಾವಣಿ ವ್ಯವಸ್ಥೆ, ಬೆಟ್ಟದಲ್ಲಿರುವ ವಿಶ್ರಾಂತಿ ಮಂಟಪ ಹಾಗೂ ದೇವಾಲಯಕ್ಕೆ ಹೊಸ ರೂಪ ನೀಡಿರುವುದು ಕ್ಷೇತ್ರಕ್ಕೆ ಮೆರುಗು ತಂದಿದೆ.

ಮೂಲ ಸೌಲಭ್ಯಗಳ ಕೊರತೆ

ತಾಲೂಕು ಕೇಂದ್ರದಿಂದ 7 ಕಿ.ಮೀ ದೂರದಲ್ಲಿದ್ದು, ರಾಜಧಾನಿ ಬೆಂಗಳೂರಿನಿಂದ 105 ಕಿ.ಮೀ. ದೂರದಲ್ಲಿರುವ ಕ್ಷೇತ್ರದಲ್ಲಿ ಮುಖ್ಯವಾಗಿ ನಾಗರಿಕ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಬೆಟ್ಟದ ಮೇಲೆ ಮುಡಿ ಕೊಡುವ ಪದ್ಧತಿ ರೂಢಿಯಲ್ಲಿದೆ ಆದರೆ ಸ್ನಾನದ ಕೊಠಡಿಗಳು ಹಾಗೂ ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ಬಹುದೊಡ್ಡ ಸಮಸ್ಯೆಯಾಗಿದೆ. ಎಲ್ಲೆಡೆಯಿಂದ ಆಗಮಿಸುವ ಭಕ್ತರು ಸರಿಯಾದ ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗುತ್ತದೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದು, ಆದಾಯದ ಮೇಲೆ ಮಾತ್ರ ಕಣ್ಣಿಟ್ಟಿರುವ ಆ ಇಲಾಖೆಯವರು ಈವರೆಗೆ ಅಭಿವೃದ್ಧಿ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿಲ್ಲ ಎಂಬುದು ಭಕ್ತರ ಆರೋಪವಾಗಿದೆ.

ಕೋವಿಡ್ ನಿಂದ ಜಾತ್ರೆಗಳನ್ನು ಅದ್ದೂರಿಯಾಗಿ ಎಲ್ಲರೂ ಸೇರಿ ಮಾಡಿರಲಿಲ್ಲ, ಈ ವರ್ವ ಸ್ವಲ್ಪ ನೆಮ್ಮದಿ ನೀಡಿದೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಹಕಾರದಲ್ಲಿ ನಡೆಯುತ್ತಿರುವುದು ಸಂತಸದ ವಿಷಯ,

ಜಿ.ಎನ್.ನವೀನ್, ಜಿಲ್ಲಾ ಯುವ ಅಧ್ಯಕ್ಷ, ಜಯಕರ್ನಾಟಕ, ಗುಡಿಬಂಡೆ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಜೆಡಿಎಸ್‌ ಶಾಸಕರ ಬ್ರೈನ್‌ ವಾಶ್‌ ಮಾಡುತ್ತಿರುವ ಕಾಂಗ್ರೆಸ್‌ ನಾಯಕರು!!

Leave a Reply Cancel reply

Your email address will not be published. Required fields are marked *

Recommended

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

4 years ago
ಲೋಕಸಭೆ ಚುನಾವಣೆ: ಚಿಕ್ಕಬಳ್ಳಾಪುರ ಕ್ಷೇತ್ರದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ

ಲೋಕಸಭೆ ಚುನಾವಣೆ: ಚಿಕ್ಕಬಳ್ಳಾಪುರ ಕ್ಷೇತ್ರದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ