• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ವಿದ್ಯಾರ್ಥಿಗಳು-ಪೋಷಕರ ಪಾಲಿಗೆ ನೀಟ್ ಮರಣಶಾಸನ

cknewsnow desk by cknewsnow desk
March 2, 2022
in STATE
Reading Time: 2 mins read
0
ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ
938
VIEWS
FacebookTwitterWhatsuplinkedinEmail

ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ಬಗ್ಗೆ ಅತೃಪ್ತಿ

ಹೆಚ್‌ಡಿಕೆ ಹೇಳಿರುವುದೇನು?
  • ನೀಟ್‌ ಬಂದ ಟ್ಯೂಷನ್‌ ದಂಧೆ ಹೆಚ್ಚಾಗಿದೆ
  • ಟ್ಯೂಷನ್‌ʼಗೆ ಹೋಗುವುದು ಬಡ-ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಕಷ್ಟ
  • ಸ್ವದೇಶ-ವಿದೇಶ ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಪ್ರಹ್ಲಾದ ಜೋಶಿ ಹೇಳಿಕೆ ಬಗ್ಗೆ ಟೀಕೆ
  • ಟ್ಯೂಷನ್‌ ಅಂಗಡಿಗಳ ಹಿಂದೆ ಕೇಂದ್ರವೇ ಅವಿತಿದೆಯಾ?
  • ನವೀನ್‌ ದುರಂತ ಸಾವು ಭಾರತದ ಆತ್ಮಸಾಕ್ಷಿಗೆ ಪ್ರಶ್ನೆಯಾಗಿದೆ

ಬೆಂಗಳೂರು: ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಎಂದು ಅವರು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ

ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಸರಣಿ ಟ್ವೀಟ್‌ ಮಾಡಿದ್ದು, ಅದರ ಪೂರ್ಣಪಾಠ ಇಲ್ಲಿದೆ.

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.

ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ.

10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.

ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ʼಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ʼವಿಶ್ವಗುರುʼ ಆಗಬೇಕೆಂದು ಹಾತೊರೆಯುತ್ತಿರುವ ʼಭಾರತದ ಆತ್ಮಸಾಕ್ಷಿʼಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ?

ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ʼಟ್ಯೂಷನ್ ಅಂಗಡಿʼಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ!

ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ʼಟ್ಯೂಷನ್ ಅಂಗಡಿʼಗಳು ಮಾರುಕಟ್ಟೆ ವಿಸ್ತರಿಸಿ ನವೀನ್ʼರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ʼದಾಸೋಹʼ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. “ವಿದೇಶದಲ್ಲಿ ವೈದ್ಯಪದವಿ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ & ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ” ಎಂದಿದ್ದಾರೆ ಅವರು.

ಕೇಂದ್ರದ ಕಾನೂನು & ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, “ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ” ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ.

ʼಟ್ಯೂಷನ್ ಅಂಗಡಿʼಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್ ಸೃಷ್ಟಿಸಿದ ʼಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು?

ನವೀನ್ ಸಾವು ನೀಟ್ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ.” ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 2, 2022

ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ. 2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 2, 2022
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಾ.4ರಿಂದ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ ಅಂತಿಮ ಹೋರಾಟ

ಮಾ.4ರಿಂದ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ ಅಂತಿಮ ಹೋರಾಟ

Leave a Reply Cancel reply

Your email address will not be published. Required fields are marked *

Recommended

ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

4 years ago
ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ