• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬೊಮ್ಮಾಯಿ ಲೆಕ್ಕ; ಇನ್ನು ಸ್ವಲ್ಪ ಹೊತ್ತಿನಲ್ಲೇ ಬಜೆಟ್

cknewsnow desk by cknewsnow desk
March 4, 2022
in STATE
Reading Time: 2 mins read
0
ವಿಧಾನಮಂಡಲ ಅಧಿವೇಶನ
938
VIEWS
FacebookTwitterWhatsuplinkedinEmail

ಇದೇ ಕೊನೆ ಮುಂಗಡಪತ್ರವಾ? ಅಥವಾ ಇನ್ನೊಂದೂ ಮಂಡಿಸುತ್ತಾರಾ?

by Guruprasad hawaladar

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ಹಣಕಾಸು ಖಾತೆಯನ್ನೂ ತಾವೇ ಇಟ್ಟುಕೊಂಡು   2022-23ರ ಆಯವ್ಯಯ ಮಂಡಿಸುತ್ತಿದ್ದಾರೆ. ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಅವರಿಗೆ, ಬಹುತೇಕ ಇದೇ ಅವರ ಕೊನೆಯ ಬಜೆಟ್‌ ಕೂಡ ಆಗಬಹುದು. ಪುನಾ ಬಿಜೆಪಿ ಗೆದ್ದು, ಅವರೇ ಮುಖ್ಯಮಂತ್ರಿಯಾಗಿ ವಿತ್ತ ಖಾತೆಯನ್ನೂ ಇಟ್ಟುಕೊಂಡರೆ ಅವರೇ ಮುಂಗಡಪತ್ರ ಮಂಡಿಸಬಹುದು ಅಥವಾ ಹಣಕಾಸು ವರ್ಷಕ್ಕೆ ಮುನ್ನವೇ ಐಡಿಯಾ ಮಾಡಿದರೆ ಇನ್ನೊಂದು ಬಜೆಟ್‌ ಮಂಡಿಸಲು ಅವಕಾಶವಿದೆ.

2023ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಯ ದೃಷ್ಟಿಯಲ್ಲಿ ಇಟ್ಟುಕೊಂಡು ಜನಪ್ರಿಯ ಬಜೆಟ್ ಮಂಡಿಸುವವರೋ ಅಥವಾ ಇತ್ತೀಚಿಗೆ ಕೇಂದ್ರ ಸರಕಾರ ಮಂಡಿಸಿದ ಹಾಗೆ ಜನಪರ ಬಜೆಟ್ ಮಂಡಿಸುವರೋ ಎಂಬ ಕಾತುರವಿದೆ. ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ  ಯಾವ ಯಾವ ಜಿಲ್ಲೆಗಳಿಗೆ ಎಷ್ಟೆಷ್ಟು ಅನುದಾನ ಸಿಗಲಿದೆ, ಶಾಸಕರ ಕ್ಷೇತ್ರವಾರು ಅನುದಾನ, ಹೊಸ ಯೋಜನೆ, ಬೊಮ್ಮಾಯಿ ಅವರು ಎಷ್ಟು ಅನುದಾನ ನೀಡಲಿದ್ದಾರೆ ಎಂಬ ನಿರೀಕ್ಷೆಯೂ ಎಲ್ಲರಿಗೂ ಇದೆ.

ಹಣಕಾಸು ಇಲಾಖೆ ಮೂಲಗಳ ಪ್ರಕಾರ ರಾಜ್ಯ ಸರಕಾರದ ಖಜಾನೆ ಭರ್ತಿ ಇಲ್ಲ. ಕಳೆದ ವರ್ಷ ಮೂವತ್ತು ಸಾವಿರ ಕೋಟಿ ರೂ. ಸಾಲವನ್ನು ಕೇಂದ್ರ ಸರಕಾರದಿಂದ ಪಡೆಯಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರಾಜಸ್ವ ಸಂಗ್ರಹ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಕಳೆದ ವರ್ಷವೇ ರಾಜಸ್ವ ಕೊರತೆ ನೀಗಿಸುವುದಕ್ಕೆ ಮಾಡಿದ ಪ್ರಯತ್ನ ಯಶಸ್ವಿಯಾಗಿಲ್ಲ.

“ಕೋವಿಡ್ ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಹೀಗಾಗಿ ಬೊಮ್ಮಾಯಿ ಹಗ್ಗದ ಮೇಲೆ ನಡಿಗೆಯನ್ನು ಹೇಗೆ ನಿಭಾಯಿಸುವರು ಎಂಬ ಪ್ರಶ್ನೆ ಎಲ್ಲರಿಗೂ ಇದೆ.

ಕಳೆದ ವರ್ಷ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸಂಕಷ್ಟದ ನಡುವೆಯೂ ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಮಹಿಳೆಯರು ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ 2,43,734 ಕೋಟಿ ರೂಪಾಯಿ ಮೊತ್ತದ 2.43 ಲಕ್ಷ ಕೋಟಿ ರೂ. ರಾಜ್ಯ  ಬಜೆಟ್ ಅನ್ನು ಮಂಡಿಸಿದ್ದರು. ಅವರು ಮಂಡಿಸಿದ 8ನೇ ಬಜೆಟ್ ಅದಾಗಿತ್ತು. ಇದರಲ್ಲಿ 1 ಲಕ್ಷ 22 ಸಾವಿರದ 271 ಕೋಟಿ ರೂಪಾಯಿ ರಾಜಸ್ವ ಜಮೆ ಹಾಗೂ 71 ಸಾವಿರದ 332 ಕೋಟಿ ರೂಪಾಯಿ ಸಾಲ ಒಳಗೊಂಡಂತೆ 71 ಸಾವಿರದ 463 ಕೋಟಿ ರೂಪಾಯಿಗಳ ಬಂಡವಾಳ ಜಮೆಯೂ ಸೇರಿತ್ತು.

  • ಶಿಕ್ಷಣ ವಲಯ: ರೂ.29,688 ಕೋಟಿ ರೂ.
  • ನಗರಾಭಿವೃದ್ಧಿ ಕ್ಷೇತ್ರ: ರೂ.27,386 ಕೋಟಿ ರೂ.
  • ಜಲ ಸಂಪನ್ಮೂಲ ಕ್ಷೇತ್ರ: ರೂ.21,181 ಕೋಟಿ ರೂ.
  • ಇಂಧನ ಇಲಾಖೆ: ರೂ.16,515 ಕೋಟಿ ರೂ.
  • ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ರೂ.16,036 ಕೋಟಿ ರೂ.
  • ಕಂದಾಯ ಇಲಾಖೆ ವ್ಯಾಪ್ತಿ: ರೂ.12,384 ಕೋಟಿ ರೂ.
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ರೂ.11,908 ಕೋಟಿ ರೂ.
  • ಒಳಾಡಳಿತ ಮತ್ತು ಸಾರಿಗೆ ಕ್ಷೇತ್ರ: ರೂ.10,330 ಕೋಟಿ ರೂ.
  • ಲೋಕೋಪಯೋಗಿ ಇಲಾಖೆ: ರೂ.10,256 ಕೋಟಿ ರೂ.
  • ಸಮಾಜ ಕಲ್ಯಾಣ ಇಲಾಖೆ: ರೂ.8,864 ಕೋಟಿ ರೂ.
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ: ರೂ.7,297 ಕೋಟಿ ರೂ.
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ: ರೂ.4,531 ಕೋಟಿ ರೂ.
  • ವಸತಿ ಇಲಾಖೆ ಯೋಜನೆ: ರೂ.2,990 ಕೋಟಿ ರೂ.
  • ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ: ರೂ.2,374 ಕೋಟಿ ರೂ.

ಇತರೆ ಇಲಾಖೆಗಳ ಯೋಜನೆ: ರೂ.94,416 ಕೋಟಿ ಹಣವನ್ನು ನೀಡಿದ್ದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಮಾಹಾಮಾರಿ ರಾಜ್ಯವನ್ನು ಇನ್ನಿಲ್ಲದಂತೆ ಕಾಡಿದ್ದು, ಬಡ ಹಾಗೂ ಮಧ್ಯಮ ವರ್ಗಗಳು ಸಂಕಷ್ಟದಲ್ಲಿವೆ. ರಾಜ್ಯ ಬಜೆಟ್ಟಿನಲ್ಲಿ ಏನಾದರೂ ಸಹಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

ಒಂದು ಕಡೆ ಕಾಡಿದ ಕೊರೊನಾ ಮಹಾಮಾರಿಯಿಂದ ಆರ್ಥಿಕ ವ್ಯವಸ್ಥೆ ಸುಗಮವಾಗಿಲ್ಲ. ಜತೆಗೆ 2023ರ ಚುನಾವಣೆಯೂ ಇರುವುದರಿಂದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಪ್ರದೇಶಗಳು  ಮತ್ತು  ಎಲ್ಲಾ ಸಮುದಾಯದ ಕಡೆಗೂ ಗಮನಹರಿಸಬೇಕಾಗಿರುವುದು ಅನಿವಾರ್ಯತೆ ಒಂದು ವೇಳೆ ಕೇಂದ್ರದ ಬಜೆಟ್ ನಂತೆ ಚುನಾವಣೆಯನ್ನು ಬದಿಗಿಟ್ಟು ಬಜೆಟ್ ಮಂಡಿಸಿದರೂ ಮಂಡಿಸಬಹುದು.

ಆದರೆ ಈಗಿನ ಪರಿಸ್ಥಿತಿಯಲ್ಲಿ ರಾಜ್ಯದ ಖಜಾನೆಯನ್ನು ನೋಡಿಕೊಂಡು ಬಜೆಟ್ ಮಂಡನೆ ರಾಜ್ಯದ ಮುಖ್ಯಮಂತ್ರಿಗಳಿಗೆ ಒಂದು ಬಹುದೊಡ್ಡ ಸವಾಲು ಎಂದರೆ ತಪ್ಪಾಗಲಾರದು. ಚುನಾವಣೆಗಳಿರುವುದರಿಂದ ಪ್ರತಿಪಕ್ಷಗಳು ಯಾವುದೇ ರೀತಿಯ ಬಜೆಟ್ ಮಂಡಿಸಿದರೂ ಅದನ್ನು ವಿರೋಧಿಸುವುದಂತು ಖಚಿತ. ಕೃಷಿಗೆ ಹೆಚ್ಚು ಒತ್ತು ನೀಡಲಿದೆಯೇ ರಾಜ್ಯ ಬಜೆಟ್ ಎನ್ನುವ ಆಸೆಯೂ ಜನರಿಗಿದೆ.

ಈ ಬಾರಿಯ ಬಜೆಟ್​ನಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಮಾರುಕಟ್ಟೆ, ಬೆಳೆಗೆ ನಿರ್ದಿಷ್ಟ ಬೆಲೆ, ಕನಿಷ್ಟ ಬೆಂಬಲ ಬೆಲೆ ಹೆಚ್ಚಳ, ಮಣ್ಣಿನ ಫಲವತ್ತತೆ ಹೆಚ್ಚಿಸಲು, ರಾಸಾಯನಿಕ ಗೊಬ್ಬರ, ಹಸಿರೆಲೆ ಗೊಬ್ಬರ, ಬಿತ್ತನೆ ಬೀಜ ಸಮರ್ಪಕ ವಿತರಣೆ, ಪ್ರತಿ ಗ್ರಾಮಕ್ಕೂ ಸಬ್ಸಿಡಿ ದರದಲ್ಲಿ ಒಕ್ಕಣೆ ಯಂತ್ರ ಹಾಗೂ ಎರೆಹುಳ ಗೊಬ್ಬರ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಲು ರೈತರು ಆಗ್ರಹಿಸಿದ್ದಾರೆ.ಇನ್ನು, ಕಾರ್ಮಿಕರು, ಉದ್ಯಮಿಗಳು, ಉದ್ಯೋಗಿಗಳು, ಖಾಸಗಿ ವಲಯಗಳನ್ನು ಸಂತೃಪ್ತಿಗೊಳಿಸುವ ಹೊಣೆಗಾರಿಕೆ.

ಬೆಂಗಳೂರಿನ ಸಂಚಾರ ದಟ್ಟಣೆಗೆ ಪರ್ಯಾಯ ಮಾರ್ಗಗಳು,ಮೇಲ್ಸೇತುವೆ ನಿರ್ಮಾಣ. ಹೊಸ ಕೈಗಾರಿಕೆಗಳ ಸ್ಥಾಪನೆ, ಎಲೆಕ್ಟ್ರಿಕ್  ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಹಾಗೂ ನಗರಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ, ಅದೇ ರೀತಿ  ಈಇದೇ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ NEP ಯನ್ನು  ಜಾರಿಗೆ ಗೊಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದರು, ಶಾಲೆಗಳ ಮೂಲಭೂತ ಸೌಕರ್ಯಗಳಿಗೆ, NEP ಯನ್ನು ಅಳವಡಿಸಲು ಅನುದಾನ ಎಷ್ಟು ನೀಡಬಹುದೆಂಬ ಕುತೂಹಲವಿದೆ.

ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ, ತಾಲ್ಲೂಕು ಜಿಲ್ಲಾ ಆಸ್ಪತ್ರೆಗಳ ಅಭಿವೃದ್ಧಿ ಮತ್ತು ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.  ಪ್ರವಾಸಿಗರನ್ನು ನಂಬಿ ಜೀವನ ಮಾಡುತ್ತಿದ್ದ ಹಲವರು ಬೀದಿಗೆ ಬಂದಿದ್ದಾರೆ. ಅವರು ಮತ್ತೆ ಬದುಕು ಕಟ್ಟಿಕೊಳ್ಳಬೇಕಾದರೆ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಾಗಿದೆ. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಸೆಳೆಯುವುದು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶ,ಹಲವು ಕ್ಷೇತ್ರಗಳಿಂದ ರಾಜ್ಯ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಾವ ಕ್ಷೇತ್ರಗಳ ಕೈ ಹಿಡಿಯಲಿದ್ದಾರೆ ಮತ್ತು ಯಾವ ಜಿಲ್ಲೆಗಳಿಗೆ ಎಷ್ಟು ಅನುದಾನ ನೀಡಲಿದ್ದಾರೆ ಎಂಬುದಕ್ಕೆ ಮಾ.4ರ ಬಜೆಟ್ ದಿನವೇ ಉತ್ತರ ಸಿಗಲಿದೆ.

ಹಿಜಾಬ್ ಸಂಘರ್ಷ, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಹೋರಾಟ, ಶಿವಮೊಗ್ಗದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ,ರಷ್ಯಾ- ಯುಕ್ರೇನ್ ಯುದ್ಧ,  ಹೀಗೆ ನೂರೆಂಟು ಸಮಸ್ಯೆಗಳು ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಕಳೆದ ಬಜೆಟ್ ಗಿಂತ ಈ ಬಾರಿಯ ಬಜೆಟ್ ವಿಭಿನ್ನ ಮತ್ತು ಸವಾಲಿನದ್ದಾಗಿರುವುದಂತು ನಿಜ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾವ ರೀತಿಯಾಗಿ ಮಂಡಿಸಲಿದ್ದಾರೆ ರಾಜ್ಯದ ಜನರಲ್ಲಿ ಕಾತುರತೆಯಿದೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
75,000 ಕೋಟಿ ರೂ. ಸಾಲಕ್ಕೆ ಸರಕಾರ ಐಡಿಯಾ

ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಾಲ ಮಾಡಲು ಬಜೆಟ್‌ ಗಾತ್ರ ಹೆಚ್ಚಿಸಿಕೊಂಡ ಸಿಎಂ

ಸಾಲ ಮಾಡಲು ಬಜೆಟ್‌ ಗಾತ್ರ ಹೆಚ್ಚಿಸಿಕೊಂಡ ಸಿಎಂ

Leave a Reply Cancel reply

Your email address will not be published. Required fields are marked *

Recommended

ಮುಂಗಾರಿಗೆ ಮುನ್ನವೇ ಉತ್ತಮ ಮಳೆ; ಗರಿಗೆದರಿದ ಕೃಷಿ ಚಟುವಟಿಕೆ, ಬಿತ್ತನೆ ಬೀಜ-ರಸಗೊಬ್ಬರಕ್ಕಿಲ್ಲ ಕೊರತೆ

ಮುಂಗಾರಿಗೆ ಮುನ್ನವೇ ಉತ್ತಮ ಮಳೆ; ಗರಿಗೆದರಿದ ಕೃಷಿ ಚಟುವಟಿಕೆ, ಬಿತ್ತನೆ ಬೀಜ-ರಸಗೊಬ್ಬರಕ್ಕಿಲ್ಲ ಕೊರತೆ

4 years ago
ಜಪಾನ್ ಮಾಜಿ ಪ್ರಧಾನಿ, ಪದ್ಮವಿಭೂಷಣ ಶಿಂಜೋ ಅಬೆ ಗೌರವಾರ್ಥ ಶನಿವಾರ ಕರ್ನಾಟಕದಲ್ಲೂ ಶೋಕಾಚರಣೆ

ಜಪಾನ್ ಮಾಜಿ ಪ್ರಧಾನಿ, ಪದ್ಮವಿಭೂಷಣ ಶಿಂಜೋ ಅಬೆ ಗೌರವಾರ್ಥ ಶನಿವಾರ ಕರ್ನಾಟಕದಲ್ಲೂ ಶೋಕಾಚರಣೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ