• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ರಾಜ್ಯದಲ್ಲಿ ಅವಧಿಗೆ ಮುನ್ನವೇ ಚುನಾವಣೆ

P K Channakrishna by P K Channakrishna
March 6, 2022
in POLITICS, STATE
Reading Time: 1 min read
0
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!
1k
VIEWS
FacebookTwitterWhatsuplinkedinEmail

ಯಾರ ಜತೆಯೂ ಚುನಾವಣೆ ಮೈತ್ರಿ ಇಲ್ಲ ಎಂದ ಹೆಚ್‌ಡಿ ಕುಮಾರಸ್ವಾಮಿ

  • ಜೆಡಿಎಸ್‌ ರೈಟೂ ಅಲ್ಲ, ಲೆಫ್ಟೂ ಅಲ್ಲ, ಸ್ಟ್ರೈಟ್‌ ಆಗಿ ಹೋಗುತ್ತೇವೆ
  • ಬಜೆಟ್‌ ಅಧಿವೇಶನದ ನಂತರ ಜನತಾ ಜಲಧಾರೆ ಆರಂಭ
  • ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಮೂರುನಾಮ ಇಟ್ಟ ರಾಷ್ಟ್ರೀಯ ಪಕ್ಷಗಳು

ಕಲಬುರಗಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.

ಅವಧಿ ಮುಗಿಯುವ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾದರೂ ಅದನ್ನು ಎದುರಿಸಲು ಜೆಡಿಎಸ್‌ ಸಿದ್ಧವಾಗಿದೆ ಎಂದರು ಅವರು.

ಕಲಬುರಗಿಯಲ್ಲಿಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಮೈತ್ರಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ನೇರ ಉತ್ತರ ನೀಡಿದ ಅವರು; “ನಾವು ಯಾರ ಜತೆಯೂ ಇಲ್ಲ. ನಮಗೆ ರೈಟೂ ಬೇಡ, ಲೆಫ್ಟೂ ಬೇಡ. ಸ್ಟ್ರೈಟ್‌ ಆಗಿ ಹೋಗೋಣ ಎಂಬ ತೀರ್ಮಾನ ಮಾಡಿದ್ದೇವೆ” ಎನ್ನುವ ಮೂಲಕ ಅವರು ಮೈತ್ರಿ ಮಾತಿಗೆ ತೆರೆ ಎಳೆದರು.

ಅವಧಿಗೆ ಮೊದಲೇ ಚುನಾವಣೆ ಬರಬಹುದು ಎನ್ನುವ ಕಾರಣಕ್ಕೇ ನಾವು ಪಕ್ಷ ಸಂಘಟನೆಯಲ್ಲಿ ಬಿಡುವಿಲ್ಲದೇ ತೊಡಗಿಸಿಕೊಂಡಿದ್ದೇವೆ. ಕೋವಿಡ್‌ ಕಾರಣದಿಂದ ಎರಡು ವರ್ಷ ಸಂಘಟನೆ ಕೆಲಸ ಮಂದಗತಿಯಲ್ಲಿತ್ತು. ಈಗ ಎಲ್ಲವೂ ವೇಗವಾಗಿದೆ. ಸೋಂಕು, ಮತ್ತಿತರೆ ಸಮಸ್ಯೆಗಳು ಇಲ್ಲದಿರುವುದರಿಂದ ಪಕ್ಷದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಿಜೆಪಿ ಬಗ್ಗೆ ನಿಮಗೆ ಸಾಫ್ಟ್‌ ಕಾರ್ನರ್‌ ಇದೆ ನಿಮಗೆ ಎಂದು ಆರೋಪವಿದೆಯಲ್ಲ? ಎನ್ನುವ ಪ್ರಶ್ನೆಗೆ; “ಬಿಜೆಪಿ ಬಗ್ಗೆ ಸಾಫ್ಟ್‌ ಕಾರ್ನರ್‌ ಇದೆಯೋ ಇಲ್ಲವೋ ಎಂಬುದಕ್ಕೆ ನನ್ನ ಹೇಳಿಕೆಗಳೇ ಉತ್ತರ” ಎನ್ನುವ ಮೂಲಕ ಬಿಜೆಪಿ ಬಗ್ಗೆ ಒಲವಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿದರು.

ಅಧಿವೇಶನ ನಂತರ ಜನತಾ ಜಲಧಾರೆ

ವಿಧಾನಮಂಡಲ ಬಜೆಟ್‌ ಅಧಿವೇಶನ ಮುಗಿದ ಕೂಡಲೇ ರಾಜ್ಯ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಮ್ಮಿಕೊಳ್ಳಲಾಗಿರುವ ʼಜನತಾ ಜಲಧಾರೆʼ ಗಂಗಾ ರಥಯಾತ್ರೆಯನ್ನು ಆರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಅವರು ಹೇಳಿದರು.

ರಾಜ್ಯಾದ್ಯಂತ ನಡೆಯಲಿರುವ ʼಜನತಾ ಜಲಧಾರೆʼ ಗಂಗಾ ರಥಯಾತ್ರೆಯಲ್ಲಿ ವಿವಿಧ ಜೀವನದಿಗಳು ಉಗಮವಾಗುವ, ಸಂಗಮಗಳು, ಪುಣ್ಯಕ್ಷೇತ್ರಗಳು ಸೇರಿದಂತೆ 53 ಕಡೆಗಳಲ್ಲಿ ಜಲ ಸಂಗ್ರಹ ಮಾಡಲಾಗುವುದು. ಆ ಸಂದರ್ಭದಲ್ಲಿ ಕಳೆದ 75 ವರ್ಷಗಳಲ್ಲಿ ನಮ್ಮ ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯಗಳನ್ನು ತಿಳಿಸುವ ಹಾಗೂ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು ಎಂದರು ಮಾಜಿ ಮುಖ್ಯಮಂತ್ರಿಗಳು.

ರಾಜ್ಯಕ್ಕೆ ಐದು ವರ್ಷ ಜಲ ಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಮುಂಗಡ ಪತ್ರದಲ್ಲೂ ನೀರಾವರಿ ಕ್ಷೇತ್ರವನ್ನು ಕಡೆಗಣಿಸಿ ದೊಡ್ಡಮಟ್ಟದ ದ್ರೋಹ ಎಸಗಲಾಗಿದೆ.

ಮೇಕೆದಾಟು: ಬಿಜೆಪಿ-ಕಾಂಗ್ರೆಸ್‌ʼಗೆ ತರಾಟೆ

ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು, ಕರ್ನಾಟಕ ಮತ್ತು ತಮಿಳುನಾಡು ಸಿದ್ಧವಾದರೆ ಮಧ್ಯಸ್ಥಿಕೆ ವಹಿಸುವುದಾಗಿ ತಿಳಿಸಿದ್ದಾರೆ. ಆದರೆ, ಅದಕ್ಕೆ ಕಾಲಮಿತಿ ಹಾಕಿಕೊಳ್ಳಲು ಸಾಧ್ಯವಿಲ್ಲ. ಎರಡೂ ರಾಜ್ಯಗಳು ಒಮ್ಮತಕ್ಕೆ ಬನ್ನಿ ಆಂತಾರೆ ಅವರು. ಮುಖ್ಯಮಂತ್ರಿ ಮಾತ್ರ ಮೇಕೆದಾಟು ಯೋಜನೆಗೆ 1,000 ಕೋಟಿ ಇಟ್ಟಿರುವುಗಾಗಿ ಹೇಳುತ್ತಾರೆ. ಇನ್ನು ಕಾಂಗ್ರೆಸ್‌ ನಾಯಕರು ನಮ್ಮ ಪಾದಯಾತ್ರೆಯನ್ನು ನೋಡಿ ಹೆದರಿಕೊಂಡು ಇಷ್ಟು ಹಣ ಘೋಷಣೆ ಮಾಡಿದರು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾವೇನು ಕಾಂಗ್ರೆಸ್‌ʼನವರಿಗೆ ಹೆದರಿ ಹಣ ಘೋಷಣೆ ಮಾಡಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಆರಂಭ ಮಾಡುವ ಯೋಗ್ಯತೆ ಇವರಿಗಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ನಾಡಿನ ಜನರಿಗೆ ದ್ರೋಹ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದರು.

ಕಾಳಿ ಹೆಸರಿನಲ್ಲಿ ನಾಟಕ

ಈ ನಾಟಕ ಸಾಲದು ಎಂಬಂತೆ, 5 ಜಿಲ್ಲೆಗಳಿಗೆ ಕಾಳಿ ನದಿ ನೀರು ಕೊಡುತ್ತೇವೆ ಎಂದು ಇನ್ನೊಂದು ಯೋಜನೆಯನ್ನು ಸರಕಾರ ಘೋಷಣೆ ಮಾಡಿಕೊಂಡಿದೆ. ಸತ್ಯ ಸಂಗತಿ ಎಂದರೆ, ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೂಫಾ ಅಣೆಕಟ್ಟು ನೀರಿನ ಕೊರತೆ ಎದುರಿಸುತ್ತಿದೆ. ಒಂದು ಕಡೆ ಮಹದಾಯಿಯ 5 ಟಿಎಂಸಿ ನೀರನ್ನು ಸೂಫಾದಲ್ಲಿ ತುಂಬಿಡಲು ಅವಕಾಶ ಕೊಡಿ ಎಂದು ನ್ಯಾಯಾಧಿಕರಣಕ್ಕೆ ಮನವಿ ಮಾಡಲಾಗಿತ್ತು. ಆ ಬೇಡಿಕೆಯನ್ನು ನ್ಯಾಯಾಧಿಕರಣ ತಿರಸ್ಕರಿಸಿದೆ. ಹಾಗಾದರೆ, ನೀರಿನ ಕೊರತೆ ಇರುವ ಸೂಫಾ ಜಲಾಶಯದಿಂದ ಸರಕಾರ 5 ಜಿಲ್ಲೆಗಳಿಗೆ ನೀರನ್ನು ಎಲ್ಲಿಂದ ತರುತ್ತದೆ? ಎಂದು ಅವರು ಪ್ರಶ್ನೆ ಮಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ʼನಲ್ಲಿ 5,000 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಈ ಮಟ್ಟದಲ್ಲಿ ಹೋದರೆ ಆ ಯೋಜನೆಯನ್ನು ಪೂರ್ಣ ಮಾಡಲು ಇನ್ನೂ ಎಷ್ಟು ವರ್ಷ ಬೇಕು? ಇನ್ನು, ನವಿಲೆ ಯೋಜೆನೆಗೆ 1,000 ಕೋಟಿ ರೂ. ಎನ್ನುತ್ತೀರಿ. ಅದಕ್ಕೆ ಕೇಂದ್ರದ ಒಪ್ಪಿಗೆಯೇ ಸಿಕ್ಕಿಲ್ಲ. ದುಡ್ಡನ್ನು ಹೇಗೆ ಖರ್ಚು ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ನೇರವಾಗಿ ಕೇಳಿದರು.

ನೀರಾವರಿ ವಿಷಯದಲ್ಲಿ ಮೂರು ನಾಮ

ಎಲ್ಲಿ ಯಾವ ಅಣೆಕಟ್ಟು ಕಟ್ಟಬೇಕು ಎಂದು ಡಿಪಿಆರ್‌’ಗಳು ಆಗಿಲ್ಲ. ತುಂಗಭದ್ರಾ ನದಿ ಪ್ರಾಧಿಕಾರ ತೀರ್ಮಾನ ಕೈಗೊಂಡಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಸೂಚನೆ ಹೊರಬಿದ್ದ ಮೇಲೆ ಇನ್ನೂ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಹಾಗಿದ್ದರೂ ನಮ್ಮ ಮುಖ್ಯಮಂತ್ರಿಗಳು ನಾನೇ ದೊಡ್ಡ ನೀರಾವರಿ ತಜ್ಞ ಎಂದು ಹೇಳಿಕೊಳ್ಳುತ್ತಾರೆ. ಬಿಜೆಪಿಯವರು ನೀರಾವರಿ ವಿಷಯದಲ್ಲಿ ರಾಜ್ಯದ ಜನರಿಗೆ ಮೂರು ನಾಮ ಹಾಕಲು ಹೊರಟಿದ್ದಾರೆ. ಯುವಜನರಿಗೆ ಉದ್ಯೋಗದ ವಿಷಯದಲ್ಲಿ ಈ ಬಜೆಟ್‌ʼನಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿದೆ. ಇವೆಲ್ಲ ವಿಷಯಗಳನ್ನು ಜನತಾ ಜಲಧಾರೆಯಲ್ಲಿ ಜನರ ಮುಂದೆ ಇಡುತ್ತೇನೆ ಎಂದರು ಅವರು.

ಈ ಸಂದರ್ಭದಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್‌ ಹಾಗೂ ಕಲಬುರಗಿ ಜಿಲ್ಲೆಯ ಪಕ್ಷದ ಮುಖಂಡರು ಹಾಜರಿದ್ದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
‌‌ಮಾರ್ಚ್‌ 19ಕ್ಕೆ ಚಿಕ್ಕಬಳ್ಳಾಪುರದಲ್ಲಿ RRR ಸಿನಿಮಾ ಪ್ರೀ ರಿಲೀಸ್ ಇವೆಂಟ್

‌‌ಮಾರ್ಚ್‌ 19ಕ್ಕೆ ಚಿಕ್ಕಬಳ್ಳಾಪುರದಲ್ಲಿ RRR ಸಿನಿಮಾ ಪ್ರೀ ರಿಲೀಸ್ ಇವೆಂಟ್

Leave a Reply Cancel reply

Your email address will not be published. Required fields are marked *

Recommended

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ