• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ

cknewsnow desk by cknewsnow desk
March 20, 2022
in STATE
Reading Time: 2 mins read
0
ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ
1.3k
VIEWS
FacebookTwitterWhatsuplinkedinEmail

RRR ಪ್ರೀ ರಿಲೀಸ್‌ ಇವೆಂಟ್‌ʼಗೆ ಹೋಗಿದ್ದ ಸಿಎಂಗೆ HDK ಚಾಟಿ

ಬಸ್‌ ದುರಂತದಲ್ಲಿ ಗಾಯಗೊಂಡವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ; ಆಸ್ಪತ್ರೆಗೆ ಭೇಟಿ, ನೊಂದ ಕುಟುಂಬಗಳಿಗೆ ನೆರವು: ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತ ಬಸ್ʼಗಳನ್ನು ನೀಡಬೇಕು

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಾಂತ್ವನ ಹೇಳದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ RRR ಸಿನಿಮಾ ಪ್ರೀ ರಿಲೀಸ್‌ ಇವೆಂಟ್‌ʼನಲ್ಲಿ ನಾಲ್ಕು ಗಂಟೆಗಳ ಕಾಲ ಕೂತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ. ಮುಖ್ಯಮಂತ್ರಿಗಳು ನೋಡಿದರೆ ನಾಲ್ಕು ಗಂಟೆಗಳ ಕಾಲ ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಪಘಾತವಾಗಿ ಜನ ಸತ್ತರೂ, ಆಸ್ಪತ್ರೆಗಳಲ್ಲಿ ಅವರ ಆರ್ತನಾದ ಮುಗಿಲುಮುಟ್ಟಿದ್ದರೂ ಮುಖ್ಯಮಂತ್ರಿಗಳಿಗೆ ಸಿನಿಮಾ ಕಾರ್ಯಕ್ರಮವೇ ಮುಖ್ಯವಾಗಿದೆ. ನೊಂದ ಜನರಿಗೆ ಸಾಂತ್ವನ ಹೇಳುವುದಕ್ಕಿಂತ ಅವರಿಗೆ ಸಿನಿಮಾ ಕಾರ್ಯಕ್ರಮವೇ ಹೆಚ್ಚಾಗಿದೆ ಎಂದು ಕುಮಾರಸ್ವಾಮಿ ಅವರು ಬೊಮ್ಮಾಯಿ ಅವರ ಟೀಕಾಪ್ರಹಾರ ನಡೆಸಿದರು.

ಇಂದು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಲಾಗಿದ್ದ #RRR ಚಲನಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕನ್ನಡದ ಹಿರಿಯ ನಟ ಶಿವರಾಜಕುಮಾರ, #RRR ಚಿತ್ರದ ನಾಯಕ ನಟ ಜೂ. ಎನ್ ಟಿ ಆರ್, ರಾಮ್ ಚರಣ ತೇಜಾ, ನಿರ್ದೇಶಕ ರಾಜಮೌಳಿ ಹಾಗೂ ಉಪಸ್ಥಿತರಿದ್ದರು. pic.twitter.com/BrBhJZzTLN

— Basavaraj S Bommai (Modi Ka Parivar) (@BSBommai) March 19, 2022

ನೈಜವಾಗಿ ಹೋರಾಟ ಮಾಡಿದ ವ್ಯಕ್ತಿಗಳೇ ಬೇರೆ, ಸಿನಿಮಾದಲ್ಲಿ ತೋರಿಸಿರುವುದೇ ಬೇರೆ. ಭಾವನಾತ್ಮಕ ವಿಚಾರಗಳು, ಹೆಸರುಗಳ ಮೇಲೆ ಮತ ಪಡೆಯುವುದು ಈಗೀಗ ಹೆಚ್ಚಾಗಿದೆ. ಜನರು ಬುದ್ಧಿವಂತರಾಗಬೇಕು. ಸರಕಾರದ ವೈಫಲ್ಯದಿಂದಲೇ ಈ ಅಪಘಾತವಾಗಿದೆ. ಇದರ ಹೊಣೆಯನ್ನು ಸರಕಾರವೇ ಹೊರಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮಾಜಿ ಸಿಎಂ ನೆರವು

ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಲು ಧಾವಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನೊಂದ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದರು.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ಗಾಯಾಳುಗಳಿಗೆ ತಲಾ 10,000 ರೂ. ಹಾಗೂ ದುರಂತದಲ್ಲಿ ಜೀವ ಕಳೆದುಕೊಂಡು ಆರು ಕುಟುಂಬಗಳಿಗೆ ತಲಾ 50,000 ರೂ.ಗಳ ನಗದು ಮೊತ್ತವನ್ನು ಹಸ್ತಾಂತರ ಮಾಡಿದರು.

ಅಲ್ಲದೆ, ಸರಕಾರದಿಂದ ಇನ್ನೂ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿ ಹೇಳಿದರು.

ವೈದ್ಯರ ಜತೆ ಪ್ರತಿ ಗಾಯಾಳುವಿನ ಬಳಿಗೂ ತೆರಳಿದ ಕುಮಾರಸ್ವಾಮಿ ಅವರು, ಅವರ ಕ್ಷೇಮ ವಿಚಾರಿಸಿದರಲ್ಲದೆ, ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದಲ್ಲದೆ, ಅವರ ಕುಟುಂಬದ ಪರಿಸ್ಥಿತಿಗಳನ್ನು ಕೇಳಿ ತಿಳಿದುಕೊಂಡರು. ನಂತರ ವೈದ್ಯರಿಂದಲೂ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ಅವರ ಸಂಕಟ ಕಂಡು ಮನಸ್ಸಿಗೆ ಬಹಳ ನೋವಾಯಿತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 1/3 pic.twitter.com/Js88jxQk21

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2022

ಮತ್ತೆ ಇಂಥ ದುರ್ಘಟನೆಗಳು ಸಂಭವಿಸದಂತೆ ರಾಜ್ಯ ಸರಕಾರ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ಸಾರ್ವಜನಿಕ ಬಸ್‌ ಸೌಲಭ್ಯವನ್ನು ಉತ್ತಮಪಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. 3/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2022

ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಸಂಪೂರ್ಣವಾಗಿ ಭರಿಸಬೇಕು. ಸುರಕ್ಷತಾ ಕ್ರಮಗಳಿಗೆ ಹೆಚ್ಚು ಒತ್ತು ನೀಡಿ ಅಪಘಾತಗಳನ್ನು ತಡೆಯಬೇಕು. ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತಿಯಲ್ಲಿರುವ ಬಸ್ʼಗಳನ್ನೇ ನೀಡಬೇಕು. ಕ್ರಮ ಜರುಗಿಸಿ ಎಂದರೆ ಖಾಸಗಿ ಬಸ್ʼಗಳ ಪರ್ಮಿಟ್ ರದ್ದು ಮಾಡುವುದು ಪರಿಹಾರವಲ್ಲ. ಇರುವ ನಿಯಮಗಳನ್ನು ಬಿಗಿಯಾಗಿ ಜಾರಿ ಮಾಡಬೇಕು. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡದೇ ಅವುಗಳ ಪರ್ಮಿಟ್ ರದ್ದುಗೊಳಿಸುವುದರಿಂದ ಏನು ಪ್ರಯೋಜನ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಎಲ್ಲೆಡೆ ಕೆಎಸ್ಆರ್ಟಿಸಿ ಬಸ್ʼಗಳ ಸಂಖ್ಯೆಯನ್ನೇ ಕಡಿಮೆ ಮಾಡಲಾಗಿದೆ. ಸಾರಿಗೆ ನೌಕರರು ಮುಷ್ಕರ ನಡೆಸಿದಾಗ ಅನೇಕ ಸಿಬ್ಬಂದಿಯನ್ನು ಮನೆಗೆ ಕಳಿಸಲಾಗಿದೆ. ಕೋವಿಡ್ ಅನಾಹುತದಿಂದಲೂ ಇಲಾಖೆ ವೆಚ್ಚ ಕಡಿತ ಮಾಡಿದೆ. ಹೀಗಾಗಿ ಕಡಿಮೆ ಬಸ್ಸುಗಳು ಓಡಾಡುತ್ತಿವೆ. ಲಾಭ-ನಷ್ಟದ ಯೋಚನೆ ಮಾಡದೆ ಪ್ರತಿ ಹಳ್ಳಿಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪಾವಗಡ ತಾಲೂಕಿನಲ್ಲಿ ಅತ್ಯಂತ ಕಡಿಮೆ ಬಸ್ಸುಗಳು ಸಂಚರಿಸುತ್ತಿವೆ ಎಂಬ ಮಾಹಿತಿ ಇದೆ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸಂಪರ್ಕವಿಲ್ಲದಂತಾಗಿದ್ದು, ತಕ್ಷಣವೇ ಕೆಎಸ್ಆರ್ಟಿಸಿ ಈ ನ್ಯೂನ್ಯತೆಗಳನ್ನು ಸರಿಪಡಿಸಬೇಕು.

ಬಸ್ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಸರಕಾರ ತಕ್ಷಣವೇ ಇತ್ತ ಗಮನ ಹರಿಸಬೇಕು. ಸಾರಿಗೆ ಇಲಾಖೆ ಮತ್ತು ಸರಕಾರದ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಇದರಿಂದ ಪರೀಕ್ಷೆ ಬರೆಯಬೇಕಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಪುನಾ ವಿಶೇಷ ವ್ಯವಸ್ಥೆ ಕಲ್ಪಿಸಿ ಪರೀಕ್ಷೆ ಬರೆಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಖಾಸಗಿ ಬಸ್ಸುಗಳ ಮೇಲೆ ನಿಗಾ ಇಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಜನರ ಹಿತದೃಷ್ಟಿಯಿಂದ ಚೆನ್ನಾಗಿ ಕೆಲಸ ಮಾಡಬೇಕು. ಬಸ್ʼಗಳು ಓವರ್ ಲೋಡ್ ಮಾಡುವುದಕ್ಕೆ ಅವಕಾಶ ನೀಡಬಾರದು. ಸಾರ್ವಜನಿಕರ ಅನುಕೂಲಕ್ಕೆ ಇರುವ ಕೆಎಸ್ಆರ್ಟಿಸಿಯಿಂದ ಲಾಭ ನಿರೀಕ್ಷೆ ಸರಿಯಲ್ಲ. ಆದರೆ, ಅಸಮರ್ಪಕ ನಿರ್ವಹಣೆಯಿಂದ ಹಣ ದುರುಪಯೋಗವಾಗುತ್ತಿದೆ ಎಂದು ಅವರು ಹೇಳಿದರು.

ಕೆಳಗಿನ ಸುದ್ದಿ ಓದ್ದಿ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ..
ಚಿಕ್ಕಬಳ್ಳಾಪುರದಲ್ಲಿ RRR ಇವೆಂಟ್‌, ಜನರಿಗೆ ಕಾದಿದೆ ಕೋವಿಡ್‌ ಹಾರರ್!

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

Leave a Reply Cancel reply

Your email address will not be published. Required fields are marked *

Recommended

ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

5 years ago
ಕಂಟೈನರ್’ನಲ್ಲಿ ಕೋವಿಡ್ ಐಸಿಯು! ಇದು ಮೊಬೈಲ್ ಕ್ಯಾಂಟೀನ್ ಥರ !!

ಕಂಟೈನರ್’ನಲ್ಲಿ ಕೋವಿಡ್ ಐಸಿಯು! ಇದು ಮೊಬೈಲ್ ಕ್ಯಾಂಟೀನ್ ಥರ !!

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ