• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಚಿಕ್ಕಬಳ್ಳಾಪುರದಲ್ಲಿ RRR ಇವೆಂಟ್‌, ಜನರಿಗೆ ಕಾದಿದೆ ಕೋವಿಡ್‌ ಹಾರರ್!

cknewsnow desk by cknewsnow desk
March 20, 2022
in EDITORS'S PICKS, STATE
Reading Time: 3 mins read
0
ಚಿಕ್ಕಬಳ್ಳಾಪುರದಲ್ಲಿ RRR ಇವೆಂಟ್‌, ಜನರಿಗೆ ಕಾದಿದೆ ಕೋವಿಡ್‌ ಹಾರರ್!
1.9k
VIEWS
FacebookTwitterWhatsuplinkedinEmail

ಎನ್‌ಟಿಆರ್‌, ರಾಮ್‌ಚರಣ್‌, ರಾಜಮೌಳಿ ನೋಡಿ ಥ್ರಿಲ್‌ ಆದ ಜನ; ಸಿಎಂ, ಸಚಿವರ ಭರ್ಜರಿ ಭಾಷಣ

By GS Bharath Gudibande

ಚಿಕ್ಕಬಳ್ಳಾಪುರ: ಕನ್ನಡ ಸೇರಿ ಐದು ಭಾಷೆಗಳಲ್ಲಿ ಇದೇ ಮಾರ್ಚ್ 25ಕ್ಕೆ ತೆರೆ ಕಾಣುತ್ತಿರುವ ಸ್ಟಾರ್‌ ನಿರ್ದೇಶಕ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ‌ ಆರ್‌.ಆರ್‌.ಆರ್‌ ಚಿತ್ರದ ಪ್ರೀ ರೀಲಿಸ್‌ ಇವೆಂಟ್‌ಗೆ ಪ್ರೇಕ್ಷಕರು ಸಾಗರದಂತೆ ಹರಿದು ಬಂದಿದ್ದರು.

ವಿಶೇಷ ಅಂದರೆ; ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರ ಮಧ್ಯೆ ʼಅಪ್ಪುʼ ಭಾವಚಿತ್ರಗಳನ್ನು ಹಿಡಿದು ಜನರು ಅಭಿಮಾನ ತೋರಿದ್ದು ಎಲ್ಲರ ಗಮನ ಸೆಳೆಯಿತು.

ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಅಗಲಗುರ್ಕಿ ಸಮೀಪದ ಚಿಕ್ಕನಹಳ್ಳಿ ಕ್ರಾಸ್‌ನಲ್ಲಿ ಬರೋಬ್ಬರಿ 100 ಎಕರೆ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ವರ್ಣರಂಜಿತ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ʼಬಿಡುವುʼ ಮಾಡಿಕೊಂಡು ಬಂದಿದ್ದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಹೆಚ್ಚೂ ಕಡಿಮೆ ಇದು ತಮ್ಮದೇ ಸಿನಿಮಾ ಎನ್ನುವಷ್ಟರ ಮಟ್ಟಿಗೆ ಮತುವರ್ಜಿ ವಹಿಸಿದ್ದರು. ಜತೆಗೆ, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌, ಕನ್ನಡದ ಹಿರಿಯ ನಟ ಡಾ.ಶಿವರಾಜ್‌ ಕುಮಾರ್‌ ಸೇರಿದಂತೆ ಚಿತ್ರರಂಗದ ಹಲವು ದಿಗ್ಗಜರು ಪಾಲ್ಗೊಂಡು ಆರ್.ಆರ್.ಆರ್ ಚಿತ್ರ ತಂಡಕ್ಕೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಎನ್‌.ಟಿ.ಆರ್‌ ಅವರ ಕನ್ನಡ ಭಾಷಣ ವಿಶೇಷವಾಗಿತ್ತು, ಕನ್ನಡದಲ್ಲಿಯೇ ಮಾತು ಆರಂಭಿಸಿದ ಎನ್‌ಟಿಆರ್‌, ಡಾ.ರಾಜಕುಮಾರ್‌ ಅವರನ್ನು ಸ್ಮರಿಸಿಕೊಂಡರಲ್ಲದೆ, ನಮ್ಮ ತಾಯಿ ಕುಂದಾಪುರದವರು. ಕನ್ನಡದವರು. ಹೀಗಾಗಿ ಕನ್ನಡ ಹಾಗೂ ಕರ್ನಾಟಕ, ಡಾ.ರಾಜಕುಮಾರ್‌ ಎಂದರೆ ಬಹಳ ಇಷ್ಟ ಎಂದರು.

ಹಾಗೆಯೇ; ಚಿತ್ರದ ಇನ್ನೊಬ್ಬ ನಟ ರಾಮ್‌ ಚರಣ್‌ ತೇಜ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಆರ್‌.ಆರ್‌.ಆರ್‌ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ನಡೆಯುತ್ತಿರುವುದು ಖುಷಿ ತಂದಿದೆ ಎಂದರು.

ಶಿವರಾಜ್‌ ಕುಮಾರ್‌ ಮಾತನಾಡಿ, “ತುಂಬಾ ಸಂತೋಷ ಆಗುತ್ತಿದೆ. ಸ್ವಲ್ಪ ದುಃಖವೂ ಆಗುತ್ತಿದೆ. ಅಪ್ಪು ನಾವು ಕಳೆದುಕೊಂಡ ಮೇಲೆ ದುಃಖದಲ್ಲಿದ್ದೇವೆ. ಸರಕಾರ, ಇಡೀ ಚಲನಚಿತ್ರ ತಂಡ ನಮ್ಮೊಂದಿಗೆ ಇದೆ. ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತರು. ರಾಮಚರಣ್‌, ಎನ್‌ಟಿಆರ್‌ ಬಂದು ನಾವು ನಿಮಗೆ ಸಹೋದರರಂತೆ ಇದ್ದೇವೆ ಎಂದರು. ಅಪ್ಪುರನ್ನು ಇವರಲ್ಲಿ ಕಾಣುತ್ತಿದ್ದೇನೆ. ಅಪ್ಪು ಎಲ್ಲೂ ಹೋಗಿಲ್ಲ. ನಿಮ್ಮ ಮನಸ್ಸಿನಲ್ಲಿದ್ದಾರೆ. ಎಲ್ಲರ ಕಣ್ಣುಗಳಲ್ಲಿದ್ದಾರೆಂದರು” ಎಂದರು.

ನಿರ್ದೇಶಕ ರಾಜಮೌಳಿ ಮಾತನಾಡಿ; ತಮ್ಮ ತಂಡದಲ್ಲಿ ಕೆಲಸ ಮಾಡಿದ ಎಲ್ಲರನ್ನೂ ಸ್ಮರಿಸಿಕೊಂಡು ಕೃತಜ್ಞತೆ ಅರ್ಪಿಸಿದರು. ಮುಖ್ಯವಾಗಿ ಎನ್‌ಟಿಆರ್‌, ರಾಮ್‌ ಚರಣ್‌ ಅವರೂ ಅದ್ಭುತವಾಗಿ ನಟಿಸಿದ್ದಾರೆ. ಇಡೀ ಸಿನಿಮಾ ಪ್ರೇಕ್ಷರನ್ನು ಇತಿಹಾಸಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಉಳಿದಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್‌ ಮುಂತಾದವರು ಮಾತನಾಡಿದರು.

ಭಾರತದ ದೇಶಕ್ಕೆ ಅನ್ವಯವಾಗುವ ರೀತಿ 75 ವರ್ಷದ ಅಮೃತ ಮಹೋತ್ಸವ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ ಮಡಿದ ನಾಯಕರನ್ನು ಚಿತ್ರದಲ್ಲಿ ಬಿಂಬಿಸುವ ಮೂಲಕ ಆರ್‌.ಆರ್‌.ಆರ್‌ ಚಿತ್ರ ತಂಡ ಉತ್ತಮ ಸಂದೇಶ ನೀಡಲು ಹೊರಟಿದೆಯೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಚಿಕ್ಕಬಳ್ಳಾಪುರ ಸಮೀಪ ಶನಿವಾರ ಸಂಜೆ ಆರ್‌.ಆರ್‌.ಆರ್‌ ಪ್ರೀ ರೀಲಿಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಜನ ಸರೋವರ ರೀತಿಯಲ್ಲಿ ಸಾಗರ ಸೇರಿದೆ. ಶಿವೋತ್ಸವದ ದಿನ ಇಷ್ಟೊಂದು ಜನ ನೋಡಿದ್ದೆ. ನಿನ್ನೆ ಹೋಳಿ ಹಬ್ಬ ಮುಗಿದಿದೆ. ಯುಗಾದಿ ಬರುತ್ತಿದೆ. ಆದರೆ ಆರ್‌.ಆರ್‌.ಆರ್‌ ಸಿನಿಮಾ ಹಬ್ಬವಾಗಿದೆ ಎಂದರು.

ಅಭಿಮಾನಿಗಳಿಗೆ ಬೆತ್ತದ ರುಚಿ

ಆರ್‌.ಆರ್‌.ಆರ್‌ ಪ್ರೀ ರೀಲಿಸ್‌ ಇವೆಂಟ್‌ ನೋಡಲು ಬಂದ ಅಭಿಮಾನಿಗಳಿಗೆ ಪೊಲೀಸರ ಬೆತ್ತದ ರುಚಿ ಸಿಕ್ಕಿತು. ಕಾರ್ಯಕ್ರಮ ವೀಕ್ಷಣೆಗೆ ನಿರೀಕ್ಷೆಗೂ ಮೀರಿ ಆಂಧ್ರ, ತಮಿಳುನಾಡು, ಕರ್ನಾಟಕದ ವಿವಿಧ ಭಾಗಗಳಿಂದ ಲಕ್ಷಾಂತರ ಜನ ಆಗಮಿಸಿದ್ದರು. ಈ ವೇಳೆ ಪ್ರವೇಶ ಸಿಗದೇ ಅಭಿಮಾನಿಗಳು ಕೆಲಕಾಲ ಏಕಾಏಕಿ ವೇದಿಕೆ ಕಡೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ನಿಯಂತ್ರಿಸಲು ಹರಸಾಹ ಪಡಬೇಕಾಯಿತು.

ಪಾಸ್‌ ಗಳ ವಿತರಣೆಯಲ್ಲೂ ಗೊಂದಲ ಇತ್ತಾದರೂ, ಯಾವ ಪಾಸಿನವರು ಎಲ್ಲಿ ಕೂತಿದ್ದರೂ ಎಂದು ಯಾರು ತಲೆ ಕೆಡಿಸಿಕೊಳ್ಳಲಲಿಲ್ಲ. ಸಂಘಟಕರು ಸಿನಿಮಾ ತಂಡ, ವಿಐಪಿಗಳನ್ನು ಚೆನ್ನಾಗಿ ನೋಡಿಕೊಂಡು ಸಾಮಾನ್ಯ ಪ್ರೇಕ್ಷಕರನ್ನು ಗಾಳಿ ಬಿಟ್ಟಿದ್ದರು.

ಟ್ರಾಫಿಕ್‌ ಜಾಮ್‌ ಜಾಮ್‌

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಅತಿ ದೊಡ್ಡ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಆರ್‌.ಆರ್‌.ಆರ್‌ ಪ್ರೀ ರೀಲಿಸ್‌ ಇವೆಂಟ್‌ನಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದ ಕಾರಣಕ್ಕೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-7 ಬೆಂಗಳೂರು, ಹೈದ್ರಾಬಾದ್‌ ನಡುವಿನ ಹೆದ್ದಾರಿಯಲ್ಲಿ ಬೆಳಗ್ಗೆಯಿಂದ ಕಾರ್ಯಕ್ರಮ ಮುಗಿಯುವರೆಗೂ ವಾಹನಗಳ ದಟ್ಟಣೆಯಿಂದ ಕೂಡಿ ಸಾಕಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡಬೇಕಾಯಿತು.

Thank you fans for showering us with your love and support and making the event very special🙏🏻

See you all on March 25th in a theatre near you 💥#RRRMovie #RRRMovieOnMarch25th#RRRPreReleaseEvent pic.twitter.com/a0uf3JbS40

— DVV Entertainment (@DVVMovies) March 19, 2022
ಕೋವಿಡ್‌ ಇನ್ನೊಂದು ಅಲೆ ಭೀತಿ

ಕೋವಿಡ್‌ ಮಹಾಮಾರಿಯ ಇನನೊಂದು ಅಲೆ ಅಪ್ಪಿಳಿಸುವ ಸಾಧ್ಯತೆ ಇದ್ದು, ಅದಕ್ಕೆ ಪೂರಕವಾಗಿ ಮುಂಗಡಪತ್ರದಲ್ಲೇ ಹಣ ತೆಗೆದಿರಿಸಲಾಗಿದೆ. ಚೀನಾ, ದಕ್ಷಿಣ ಕೊರಿಯಾ, ಜಪಾನ್‌ ಮುಂತಾದ ದೇಶಗಳಲ್ಲಿ ಸೋಂಕು ಹೆಚ್ಚಾಗಿ ಕೆಲವೆಡೆ ಲಾಕ್‌ ಡೌನ್‌ ಆಗಿದೆ. ಈ ಬಗ್ಗೆ ರಾಜ್ಯದ ಕೋವಿಡ್‌ ಕಾರ್ಯಪಡೆಯ ಸದಸ್ಯರೇ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಇದೆಲ್ಲ ಗೊತ್ತಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ತಮ್ಮ ಸ್ವಕ್ಷೇತ್ರದಲ್ಲಿ ಸ್ಥಳೀಯರು ಮಾತ್ರವಲ್ಲದೆ ಹೊರರಾಜ್ಯಗಳಿಂದ ಬಂದಿದ್ದ ಲಕ್ಷಾಂತರ ಜನರನ್ನು ಗುಡ್ಡೆ ಹಾಕಿಕೊಂಡು ಸಿನಿಮಾ ಇವೆಂಟ್‌ʼಗೆ ಅವಕಾಶ ಕೊಡಿಸಿದ್ದು, ಅದೂ ಸಾಲದೇ ಜವಾಬ್ದಾರಿ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸಾರ್ವಜನಿಕರಿಗೆ ಬೇಸರ ಉಂಟು ಮಾಡಿದೆ. ಅಲ್ಲದೆ, ಮುಖ್ಯಮಂತ್ರಿ ಕೂಡ ಮಾಡುವ ಕೆಲಸಗಳನ್ನು ಬಿಟ್ಟು ಇಂಥ ಕಾರ್ಯಕ್ರಮಗಳಿಗೆ ಗಂಟೆಗಟ್ಟಲೆ ಸಮಯ ಮೀಸಲಿಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಒಂದು ವೇಳೆ ಚಿಕ್ಕಬಳ್ಳಾಪುರದಲ್ಲಿ ಪುನಾ ಕೋವಿಡ್‌ ಹೆಚ್ಚಾದರೆ, ಅದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಸುಧಾಕರ್‌ ಹಾಗೂ ಸಿನಿಮಾ ತಂಡವೇ ನೇರ ಹೊಣೆಯಾಗುತ್ತದೆ ಎಂದು ಜನರು ಹೇಳುತ್ತಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ

ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ

Leave a Reply Cancel reply

Your email address will not be published. Required fields are marked *

Recommended

ಫೇಕ್‌ನ್ಯೂಸ್‌ಗೆ ಮೂಗುದಾರ: ಫೇಸ್‌ಬುಕ್‌, ಟಿಟ್ಟರ್‌, ಇನ್ಸ್‌ಟಾಗ್ರಾಂ, ವಾಟ್ಸಾಪ್‌, ಟೆಲಿಗ್ರಾಂ ಮೇಲೆ ನಿಗಾ

ಫೇಕ್‌ನ್ಯೂಸ್‌ಗೆ ಮೂಗುದಾರ: ಫೇಸ್‌ಬುಕ್‌, ಟಿಟ್ಟರ್‌, ಇನ್ಸ್‌ಟಾಗ್ರಾಂ, ವಾಟ್ಸಾಪ್‌, ಟೆಲಿಗ್ರಾಂ ಮೇಲೆ ನಿಗಾ

4 years ago
ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ