• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶ್ರೀರಾಮನ ಹೆಸರು ಹೇಳಿಕೊಂಡು ರಾವಣರಾಜ್ಯ ಸೃಷ್ಟಿ ಮಾಡಬೇಡಿ ಎಂದು HDK ಕಿಡಿ

cknewsnow desk by cknewsnow desk
April 6, 2022
in STATE
Reading Time: 1 min read
0
ಶ್ರೀರಾಮನ ಹೆಸರು ಹೇಳಿಕೊಂಡು ರಾವಣರಾಜ್ಯ ಸೃಷ್ಟಿ ಮಾಡಬೇಡಿ ಎಂದು HDK ಕಿಡಿ
951
VIEWS
FacebookTwitterWhatsuplinkedinEmail

ಸಂಘಟನೆಗಳ ಮೇಲೆ ವಾಗ್ದಾಳಿ; ಧೈರ್ಯವಿದ್ದರೆ ಕಾಯಕವೇ ಕೈಲಾಸ ಎಂದು ಹೇಳಿ ಮತ ಕೇಳಿ ಎಂದು ಬಿಜೆಪಿಗೆ ಸವಾಲು

ಕೋವಿಡ್‌ ಹಣ ಲೂಟಿಯ ಪಾಪದ ಊಟ ತಿನ್ನಬೇಡಿ ಎಂದಿದ್ದರು ಬಿಜೆಪಿ ಶಾಸಕರು!!

ಮೈಸೂರು: ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ನಗರದ ಕಲಾಮಂದಿರದಲ್ಲಿ ಇಂದು ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದು ಅವರು ಹೇಳಿದರು.

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು; ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದರು.

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದಬುದನ್ನು ನೆನಪಿಟ್ಟುಕೊಳ್ಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮೌನಿ ಮುಖ್ಯಮಂತ್ರಿ

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ಸರಕಾರಕ್ಕೆ ತಿಂಗಳ ಗಡುವು

ರಾಜ್ಯವು ಕುವೆಂಪು ಅವರ ಸರ್ವ ಜನಾಂಗದ ಶಾಂತಿ ತೋಟವಾಗಿತ್ತು. ಅದನ್ನು ಇವರೆಲ್ಲ ಸೇರಿ ಹಾಳು ಮಾಡಿದ್ದಾರೆ. ಒಂದು ತಿಂಗಳಲ್ಲಿ ಮತ್ತೆ ರಾಜ್ಯದಲ್ಲಿ ಶಾಂತಿ ವಾತಾವರಣ ಮರುಸ್ಥಾಪನೆ ಮಾಡದಿದ್ದರೆ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಸರಕಾರಕ್ಕೆ ಎಚ್ಚರಿಕೆ ಕೊಟ್ಟರು.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದು ಟೀಕಿಸಿದರು.

ಕೋವಿಡ್‌ ಹಣ ಲೂಟಿಯ ಪಾಪದ ಊಟ ತಿನ್ನಬೇಡಿ ಎಂದಿದ್ದರು ಬಿಜೆಪಿ ಶಾಸಕರು!!

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು; “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಆಶೀರ್ವಚನ ನೀಡಿದರು.

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ʼಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ʼನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಅವರುಗಳು ಮಾತನಾಡಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ