• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ

cknewsnow desk by cknewsnow desk
April 18, 2022
in STATE
Reading Time: 2 mins read
1
ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ
1.2k
VIEWS
FacebookTwitterWhatsuplinkedinEmail

ಸಚಿವ ಡಾ.ಕೆ.ಸುಧಾಕರ್‌ ತವರುಗ್ರಾಮ ಪೆರೇಸಂದ್ರದಲ್ಲಿ ಹೆಚ್.ಡಿ.ದೇವೇಗೌಡರು; ಎತ್ತಿನಹೊಳೆ ಗುತ್ತಿಗೆದಾರರ ಜೇಬು ತುಂಬಿಸುತ್ತಿದೆ ಎಂದು ಕಿಡಿಕಾರಿದ ಮಾಜಿ ಪ್ರಧಾನಿ

by M Krishnappa Chikkaballapura

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ-ಕೋಲಾರಕ್ಕೆ ನೀರು ಹರಿಸುವ ಕಾಯಕಲ್ಪಕ್ಕೆ ಇನ್ನು ಎಷ್ಟು ವರ್ಷ ಬೇಕು? ಗುತ್ತಿಗೆದಾರರ ಕಣ್ಣಿಗೆ ಬೆಣ್ಣೆ, ರೈತರ ಕಣ್ಣಿಗೆ ಸುಣ್ಣ ಎಂಬ ನಿಲುವು ತಾಳಿದೆ ಬಿಜೆಪಿ ಸರಕಾರ. ಇಂಥ ಕೆಟ್ಟ ಸರಕಾರದ ಮೂಲಕ ಈ ಭಾಗಕ್ಕೆ ಎತ್ತಿನಹೊಳೆ ಯೋಜನೆಯ ನೀರು ಬಂದರೆ, ಅದು ನಿಮ್ಮ ಪುಣ್ಯವೇ ಸರಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.

ಆರೋಗ್ಯ ಸಚಿವ ಡಾಕೆ.ಸುಧಾಕರ್ ಅವರ ತವರುಗ್ರಾಮ ಪೆರೇಸಂದ್ರದಲ್ಲಿ ಸೋಮವಾರ ಜೆಡಿಎಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದಲ್ಲಿ ಗಂಗಾ ರಥಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಸಾವಿರಾರು ಕೋಟಿ ರೂ.ಗಳ ವೆಚ್ಚದ ಎತ್ತಿನಹೊಳೆ ಯೋಜನೆ ತೆವಳುತ್ತಿದ್ದು, ಕಾಮಗಾರಿ ಮುಗಿದು ಬರಪೀಡಿತ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕಾಗುತ್ತದೆ? 2014ರಲ್ಲಿ ಆರಂಭವಾದ ಯೋಜನೆಯನ್ನು ಮೂರೇ ವರ್ಷದಲ್ಲಿ ಮುಗಿಸಿ ಎರಡೂ ಜಿಲ್ಲೆಗಳಿಗೆ ನೀರು ಹರಿಸುವುದಾಗಿ ಹೇಳಿದ್ದ ಸರಕಾರಗಳ ನೀತಿ ನಿಯತ್ತು ಎಲ್ಲಿ? ಎಂದು ಅವರು ಪ್ರಶ್ನಿಶಿಸಿದರು.

ಯಥೇಚ್ಛವಾಗಿ ಹಣ ಖರ್ಚು

‘ಭೂಸ್ವಾಧೀನ ಪ್ರಕಿಯೆ ವಿವಾದದಲ್ಲಿದೆ. ಈಗಾಗಲೇ ಭೂಮಿ ಕಳೆದುಕೊಂಡ ರೈತರಿಗೆ ವರ್ಷಗಳೇ ಉರುಳಿದರೂ ಪರಿಹಾರ ನೀಡಿಲ್ಲ. ಗುತ್ತಿಗೆದಾರರಿಗೆ ಹಣ ನೀಡಲು ಇರುವ ಆತುರ ರೈತರಿಗೆ ನೀಡಲು ಇಲ್ಲ. ಅದಕ್ಕೆ ದುಡ್ಡಿಲ್ಲ ಅನ್ನುತ್ತಿದೆ ಸರಕಾರ ಎಂದು ಸರಕಾರಗಳ ವಿರುದ್ದ ಛೇಡಿಸಿದ ಅವರು ಎತ್ತಿನಹೊಳೆ ಯೋಜನೆಯೆನ್ನುವುದು ರಾಜ್ಯದ ಖಜಾನೆ ಖಾಲಿ ಮಾಡುವ ಯೋಜನೆಯಾಗಿದೆಯೇ ವಿನಾ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಹರಿಸುವ ಯೋಜನೆಯಾಗಿಲ್ಲ.ಈ ಯೋಜನೆಯಿಂದ ಜಿಲ್ಲೆಗೆ ನೀರು ಬಂದರೆ ನಿಮ್ಮ ಪುಣ್ಯ. ಈ ಬಗ್ಗೆ ನಾನು ಹೆಚ್ಚಿಗೆ ಏನೂ ಹೇಳಲಾರೆ ಎಂದು ಮಾಜಿ ಪ್ರಧಾನಿಗಳು ಕಳವಳ ವ್ಯಕ್ತಪಡಿಸಿದರು.

ನಾವು ಇಂತಹ ದಿನಗಳನ್ನು ಮುಂದೆ ಕಾಣುತ್ತೇವೋ ಇಲ್ಲವೋ ಗೊತ್ತಿಲ್ಲ. ಒಂದೆಡೆ ಹವಾಮಾನ ವೈಪರಿತ್ಯ, ಅತಿಯಾದ ಉಷ್ಣಾಂಶ, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ ಹಾಹಾಕಾರ ಸೃಷ್ಟಿಯಾಗಿದೆ. ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಹಾಲು ಮತ್ತು ಹೈನೋದ್ಯಮವನ್ನು ನಂಬಿ ಬದುಕು ಕಟ್ಟಿಕೊಂಡವರು. ಬಾವಿಯಲ್ಲಿ ಬೇಕಾದಷ್ಟು ನೀರು ಬರುವ ಕಾಲವಿತ್ತು. ಅಂತಹ ಸಂಪದ್ಭರಿತ ಕಾಲ ಮುಂದೆ ಬರುವುದೋ ಇಲ್ಲವೋ ನಾ ಕಾಣೆ. ಈಗ ಅಂತರ್ಜಲವನ್ನು ನಂಬಿ ಜನ ಬದುಕುತ್ತಿದ್ದಾರೆ. ನೀರಿದ್ದವರ ಬದುಕಿನ ಮುಂದೆ ನೀರಿಲ್ಲದವರ ಬದುಕು ದುಸ್ತರವಾಗಿ ಕಾಣುತ್ತಿದೆ. ಇದನ್ನು ಹೋಗಲಾಡಿಸಲು ನದಿ ನೀರಿನ ಆಸರೆ ಬೇಕಾಗಿದೆ. ರಾಜ್ಯದಲ್ಲಿ ಹುಟ್ಟಿ ಹರಿಯುವ ನದಿಗಳಲ್ಲಿ ಬೇಕಾದಷ್ಟು ಜಲಮೂಲವಿದೆ. ಆದರೆ ಅದನ್ನು ಬಳಸಿಕೊಳ್ಳುವ ಇಚ್ಚಾಶಕ್ತಿ ನಮ್ಮ ರಾಜ್ಯ ಸರಕಾರಗಳಿಗೆ ಇಲ್ಲವಾಗಿದೆ ಎಂದು ಅವರು ನೋವು ವ್ಯಕ್ತಪಡಿಸಿದರು.

ಕಾವೇರಿ, ಕೃಷ್ಣ, ಮಹದಾಯಿ ನೀರು ಅಂತಾರಾಜ್ಯ ವ್ಯಾಜ್ಯವಾಗಿ ಪರಿವರ್ತನೆ ಆಗಿದೆ. ಇದನ್ನು ಬಳಸಿಕೊಳ್ಳಲು ಪ್ರತಿ ರಾಜ್ಯದಲ್ಲೂ ವಿರೋಧ ಕಾಣುತ್ತಿದ್ದೇವೆ ಎಂದು ಅವರು ಹೇಳಿದರು.

ನಾನು 50 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ತಪ್ಪು ತಿಳಿಯಬೇಡಿ, ಈಗ್ಗೆ 62 ವರ್ಷದ ಹಿಂದೆ ಕಾವೇರಿ ವಿಚಾರದಲ್ಲಿ ನಮಗೆ ತೊಂದರೆ ಆಗಿದೆ. ನಮ್ಮ ರಾಜ್ಯದ ತೆರಿಗೆ ಹಣದಿಂದಲೇ ಡ್ಯಾಂ ಕಟ್ಟಲೇಬೇಕು ಎಂದು ವಿಧಾನಸಭೆಯಲ್ಲಿ ವಿಚಾರ ಮಂಡನೆ ಮಾಡಿದ್ದೆ. ಹೋರಾಟ ಮಾಡಿದ್ದರ ಫಲವಾಗಿ ಕೆಲಸ ಪ್ರಾರಂಭವಾಗಿತ್ತು‌ ಎಂದು ಗೌಡರು ನೆನೆಪು ಮಾಡಿಕೊಂಡರು.

ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಹಣ ಮೀಸಲಾಗಿಟ್ಟಿದ್ದರೂ ಕೇಂದ್ರ ಸರಕಾರ ಈವರೆಗೆ ಅನುಮತಿ ನೀಡಿಲ್ಲ. ಇನ್ನು ಎತ್ತಿನಹೊಳೆ 2008ರಲ್ಲಿ ಅಡಿಗಲ್ಲು ಹಾಕಿದಲ್ಲೇ ಇದೆ ಯೋಜನಾ ವೆಚ್ಚ ಮಾತ್ರ 25 ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇಂತಹ ವಿಚಾರಗಳ ಬಗ್ಗೆ ಸಾಕಷ್ಟು ಭಾಷಣ ಮಾಡಬಹುದು. ಅಷ್ಟಾದರೆ ಸಾಕಾಗಲ್ಲ, ಬದಲಿಗೆ ನಮ್ಮ ಜನರಿಗೆ ಅದನ್ನು ಎದುರಿಸುವ ಸಾಮರ್ಥ್ಯ ಬರಬೇಕಾಗಿದೆ. ಎದುರಿಸುದೆಂದರೆ ಹೇಗೆ? ಕತ್ತಿ ಗುರಾಣಿ ಹಿಡಿದು ಹೊಡೆದಾಡುವುದಲ್ಲ. ರಾಜಕೀಯ ಶಕ್ತಿಯ ಮೂಲಕವೇ ಇದನ್ನು ಬಗೆಹರಿಸಲು ಸಾಧ್ಯ. ಲೋಕಸಭೆಯಲ್ಲಿ ತಮಿಳುನಾಡಿನ 40 ಮಂದಿ ಸಂಸದರಿದ್ದಾರೆ, ಪ್ರತಿ ಸಲವೂ ಪ್ರಧಾನಿ ಬಳಿ ಅವರು ಹೋಗಿ ತಮಗೆ ಬೇಕಾದ ಹಾಗೆ ಕಾವೇರಿ ನದಿ ನೀರನ್ನು ಬಳಸಿಕೊಳ್ಳುತ್ತಾರೆ ಎಂದು ಗೌಡರು ತಿಳಿಸಿದರು.

ಜೆಡಿಎಸ್ ಅನಿವಾರ್ಯ

ರಾಜ್ಯದ ನೀರಾವರಿ ಯೋಜನೆಗಳ ವಿಚಾರದಲ್ಲಿ ತಮಿಳುನಾಡಿನಂತೆ ಜೆಡಿಎಸ್‌ಗೆ ಶಕ್ತಿ ತುಂಬಬೇಕಿದೆ. ಎಲ್ಲಾ ಸಂಸದರ ಆಗ್ರಹ ಒಂದೇ ಆಗಿರಬೇಕಾದರೆ ಪೂರ್ಣಬಹುಮತ ಶಕ್ತಿ ನೀಡಬೇಕು.ನಿಮ್ಮಲ್ಲಿ ಕೈಮುಗಿದು ಮನವಿ ಮಾಡುವೆ, ಒಮ್ಮೆ ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಅಧಿಕಾರ ನೀಡಿದರೆ ಇವೆಲ್ಲವನ್ನೂ ಬಗೆಹರಿಸಲಾಗುವುದು. ಕಾವೇರಿ ವಿಚಾರದಲ್ಲಿ ಡಾ.ಮನಮೋಹನ್‌ ಸಿಂಗ್ ಅವರ ಸರಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ರಾಜ್ಯದ ಎಸ್.ಎಂ ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಕೆ.ಹೆಚ್.ಮುನಿಯಪ್ಪ, ವೀರಪ್ಪಮೊಯ್ಲಿ.. ಇವರೆಲ್ಲರನ್ನು ನನ್ನ ಬೆಂಬಲಕ್ಕೆ ನಿಲ್ಲಬೇಕೆಂದು ಕೇಳಿಕೊಂಡಾಗ ಯಾರೊಬ್ಬರೂ ಪಕ್ಷದ ಆದೇಶ ಮೀರಿ ನನಗೆ ಬೆಂಬಲಿಸಲಿಲ್ಲ. ಈಗಿರುವ ಬಿಜೆಪಿಯ 27 ಸಂಸದರಲ್ಲಿ ಯಾರೊಬ್ಬರೂ ಈ ವಿಚಾರದಲ್ಲಿ ಜನತೆಯ ಹಿತ ಕಾಯುತ್ತಿಲ್ಲ. ರಾಜ್ಯದ ಹಿತ ಕಾಯುವುದೆಂದರೆ ಅದು ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ. ನಾನು ಪ್ರಧಾನಿ ಆಗಿದ್ದಾಗ ನೀರಾವರಿ ವಿಚಾರದಲ್ಲಿ ಏನೇನು ಮಾಡಿದೆ ಎಂಬುದನ್ನು ನೀವೇ ಅರಿಯಿರಿ ಎಂದು ಅವರು ದೇವೇಗೌಡರು ವಿವರಿಸಿದರು.

ಮಾಜಿ ಪ್ರಧಾನಮಂತ್ರಿ @H_D_Devegowda ಅವರು ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.#ಜನತಾ_ಜಲಧಾರೆ pic.twitter.com/6EUTBgiOY9

— cknewsnow.com (@cknewsnow) April 18, 2022

pic.twitter.com/akgsUKh2Qz

— cknewsnow.com (@cknewsnow) April 18, 2022

pic.twitter.com/ml8q2U2qnV

— cknewsnow.com (@cknewsnow) April 18, 2022
ನೀರಿನ ಭದ್ರತೆಯೇ ಕೊನೆ ಆಸೆ

ಈ ಇಳಿವಯಸ್ಸಿನಲ್ಲಿ ನಾನು ಅಧಿಕಾರದ ಸವಿಯನ್ನು ಸವಿಯಬೇಕು ಎನ್ನುವ ಆಸೆಯಿಂದ ಇಲ್ಲಿಗೆ ಬಂದಿಲ್ಲ. ಬದಲಿಗೆ ಸಾಯುವ ಮುನ್ನ ಜೆಡಿಎಸ್ ಪಕ್ಷವನ್ನು ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ತರಬೇಕು. ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಿ ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪೂರ್ಣ ವಿರಾಮ ನೀಡಬೇಕು. ರೈತರಿಗೆ ಬೇಸಾಯಕ್ಕೆ, 7 ಕೋಟಿ ಜನತೆಗೆ ಕುಡಿಯುವ ನೀರಿನ ಭದ್ರತೆ ಕಲ್ಪಿಸುವುದನ್ನು ನೋಡಬೇಕು ಎನ್ನುವುದೇ ಆಗಿದೆ. ಇದಕ್ಕಾಗಿ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ ಕುಮಾರಸ್ವಾಮಿಗೆ ಒಮ್ಮೆ ಅಧಿಕಾರ ನೀಡಿ. ಈ ಜಿಲ್ಲೆಯ ಕಾರಣವಾಗಿ ನಾನು ರೈತನ ಮಗನಾಗಿ ಉಳಿಸಿದ್ದೇನೆ. ನಿಮ್ಮ ಋಣ ತೀರಿಸಲು ರಾಜಕೀಯದ ಶಕ್ತಿ ನೀಡಿ ಎಂದು ಮನವಿ ಮಾಜಿ ಪ್ರಧಾನಿಗಳು ಮಾಡಿದರು.

ಈ ಸಂದರ್ಭದಲ್ಲಿ ಚಿಂತಾಮಣಿ ಶಾಸಕ ಕೆ.ಎಂ.ಕೃಷ್ಣಾರೆಡ್ಡಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲಕುಂಟಹಳ್ಳಿ ಮುನಿಯಪ್ಪ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಮಾಜಿ ಎಂಎಲ್ಸಿಗಳಾದ ತೂಪಲ್ಲಿ ಚೌಡರೆಡ್ಡಿ, ಟಿ.ಎ.ಶರವಣ, ಶಿಡ್ಲಘಟ್ಟದ ಜೆಡಿಎಸ್ ಮುಖಂಡ ರವಿಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ, ಜಿ.ಪಂ.ಮಾಜಿ ಅದ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಸಾಧಿಕ್, ಕಿಸಾನ್ ಕೃಷ್ಣಪ್ಪ ಸೇರಿದಂತೆ ಇನ್ನಿತರ ಜೆಡಿಎಸ್ ಕಾರ್ಯಕರ್ತರು ಮುಖಂಡರು ಇದ್ದರು.

Tags: chikkaballapuradr k sudhakarformer prime ministerhd devegowdajanata jaladharejdsperesandrarepulic of chikkaballapurayettinahole
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ ಯಾರು?

Comments 1

  1. mutharayappa D B says:
    3 years ago

    ನಿಮ್ಮ ಮಗ ಅಧಿಕಾರದಲ್ಲಿ ಇದ್ದಾಗ ಎರಡು ಸಲ ಸಿಎಂ ಆಗಿದ್ದಾಗ ಜೇಬು ತುಂಬಿಸಿಕೊಂಡು ಇಲ್ವಾ

    Reply

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಉಳಿಸಿದ ಕಣ್ಣೀರು; ಗುಡಿಬಂಡೆಯಲ್ಲಿದ್ದಾರೆ ಪೋಷಕರನ್ನು ಕಳೆದುಕೊಂಡ 40 ಚಿಣ್ಣರು

ಕೋವಿಡ್ ಉಳಿಸಿದ ಕಣ್ಣೀರು; ಗುಡಿಬಂಡೆಯಲ್ಲಿದ್ದಾರೆ ಪೋಷಕರನ್ನು ಕಳೆದುಕೊಂಡ 40 ಚಿಣ್ಣರು

4 years ago
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ