• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ ಯಾರು?

cknewsnow desk by cknewsnow desk
April 19, 2022
in STATE
Reading Time: 1 min read
1
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
1.1k
VIEWS
FacebookTwitterWhatsuplinkedinEmail

ಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿ; ಸಿದ್ದರಾಮಯ್ಯಗೆ ನಾಲ್ಕು ನೇರ ಪ್ರಶ್ನೆ ಕೇಳಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ.

ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಟ್ವಿಟರ್‌ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಅವರ ಟ್ವೀಟ್‌ ನ ಪೂರ್ಣಪಾಠ ಇಲ್ಲಿದೆ.  

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ?

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ.

ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ?

ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ.

ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲೀಯೆತ್ತು ನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?

ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯ್ಯಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡೋರ ಮೇಲೆ ಸಿಡಿಸುವ ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ.

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ?
ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ.
ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? 1/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ. 2/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ!! ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!!

ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ?

ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು?

ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು!

ಕೊನೆಗೆ 4 ಪ್ರಶ್ನೆ! ; 1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು? 2.ಆ ಪಾಪದ ಹಣವನ್ನು ಏನು ಮಾಡಿದಿರಿ? 3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು? 4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ? ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದಿರುವ ಮಾಜಿ ಮುಖ್ಯಮಂತ್ರಿಗಳು #ವಿನಾಶಕಾಲೇ ವಿಪರೀತ ಸುಳ್ಳು #ಸತ್ಯಭಕ್ಷನಾಯಕಸುಳ್ಳಿನ_ಪ್ರಚಾರಕ ಎಂದು ಕುಟುಕಿದ್ದಾರೆ.

Tags: bjphd kumaraswamyoperation kamalasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

4 ಪ್ರಶ್ನೆಗೆ ಉತ್ತರಿಸಿ ಎಂದರೆ ಅಪ್ಪನ ಮೇಲೆ ಆಣೆ ಮಾಡಿ ಎಂದ ಸಿದ್ದರಾಮಯ್ಯ

Comments 1

  1. Pingback: 4 ಪ್ರಶ್ನೆಗೆ ಉತ್ತರಿಸಿ ಎಂದರೆ ಅಪ್ಪನ ಮೇಲೆ ಆಣೆ ಮಾಡಿ ಎಂದ ಸಿದ್ದರಾಮಯ್ಯ - cknewsnow

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

3 years ago
ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ