• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಒಂದು ಹುದ್ದೆಗೆ 25ರಿಂದ 50 ಲಕ್ಷ ರೂ. ರೇಟು!!

cknewsnow desk by cknewsnow desk
April 23, 2022
in STATE
Reading Time: 1 min read
0
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ
996
VIEWS
FacebookTwitterWhatsuplinkedinEmail

ಸಹಕಾರ ಇಲಾಖೆಯಲ್ಲಿ ಲಂಚಾವತಾರ!! ಬೆಚ್ಚಿಬೀಳುವ ಮಾಹಿತಿ ಹೊರಗೆಡವಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಶ್ಯಾಂಭಟ್ ಕೆಪಿಎಸ್ಸಿಗೆ ಹೋದ ಮೇಲೆ ಅಲ್ಲಿನ ರೇಟೂ ಹೆಚ್ಚಾಗಿದೆ; ಅಸಿಸ್ಟಂಟ್ ಕಮೀಷನರ್ ಹುದ್ದೆ ರೇಟು 1ರಿಂದ 1.5 ಕೋಟಿಗೆ ಹೋಗಿದೆ


ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆಯ ನೇಮಕ 25ರಿಂದ 50 ಲಕ್ಷ ರೂಪಾಯಿವರೆಗೆ ಲಂಚವನ್ನು ನಿಗದಿ ಮಾಡಲಾಗಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಈವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದರು.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಅವರು ಒತ್ತಾಯಿಸಿದರು.

ಕೆಪಿಎಸ್ಸಿಯನ್ನು ಶುದ್ಧ ಮಾಡಿದರಾ?

ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಕೆಪಿಎಸ್ಸಿಯನ್ನು (ಕರ್ನಾಟಕ ಲೋಕಸೇವಾ ಆಯೋಗ) ಶುದ್ಧ ಮಾಡುತ್ತೇವೆ ಎಂದು ಶ್ಯಾಂಭಟ್ ಎನ್ನುವ ಅಧಿಕಾರಿಯನ್ನು ಅಲ್ಲಿಗೆ ತಂದು ಕೂರಿಸಿದರು. ಆಮೇಲೆ ಅಲ್ಲಿದ ರೇಟು ಎಲ್ಲಿಗೆ ಹೋಯಿತು? ಒಂದೊಂದು ಅಸಿಸ್ಟಂಟ್ ಕಮೀಷನರ್ ಹುದ್ದೆಗೆ 1ರಿಂದ 1.5 ಕೋಟಿ ರೂಪಾಯಿವರೆಗೂ ಆ ರೇಟು ಹೋಗಿದೆ. ನೇಮಕಾತಿ ಮಾಡುವುದಕ್ಕೆ ಎಲ್ಲರ ಬಳಿಯೂ ಹಣ ಪಡೆದಿದ್ದಾರೆ. ಅದರಲ್ಲಿ ಹಣ ಕೊಟ್ಟವರಿಗೆ ಇನ್ನೂ ಕೆಲಸ ಸಿಗದೆ, ಅತ್ತ ಹಣವೂ ವಾಪಸ್ ಸಿಗದೇ ಅಲೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ನೇರ ಮಾತುಗಳಲ್ಲಿ ಹೇಳಿದರು.

ಬಡಮಕ್ಕಳು ಇಂಥವರಿಗೆ ಟ್ರ್ಯಾಪ್ ಆಗುತ್ತಿದ್ದಾರೆ. ಅತ್ತ ಕೆಲಸವೂ ಸಿದಗದೇ ಇತ್ತ ಕೊಟ್ಟ ಹಣವೂ ವಾಪಸ್ ಬರದೇ ಒದ್ದಾಡುತ್ತಿದ್ದಾರೆ. ಸರಕಾರಕ್ಕೆ ಪ್ರಾಮಾಣಿಕತೆ ಮತ್ತು ಇಚ್ಛಾಶಕ್ತಿ ಎನ್ನುವುದು ಇದ್ದರೆ ಮೊದಲು ಇಂಥ ಕೆಟ್ಟ ವ್ಯವಸ್ಥೆಯನ್ನು ಸರಿ ಮಾಡಬೇಕು. ಅಂಥ ಯಾವುದಾದರೂ ಕ್ರಮವನ್ನು ಸರಕಾರ ಕೈಗೊಂಡಿದೆಯಾ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ರಾಜ್ಯದ ಜನರಿಗೆ ಈಗ ನಡೆಯುತ್ತಿರುವ ಪಿಎಸ್ʼಐ ನೇಮಕಾತಿ ಅಕ್ರಮ ಒಂದು ಚಿಕ್ಕ ಉದಾಹಣೆ ಅಷ್ಟೆ. ಆದರೆ, ಸಹಕಾರ ಕ್ಷೇತ್ರದಲ್ಲಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಲು ಮಂತ್ರಿಗಳಿಗೇ ಅಡ್ವಾನ್ಸ್ ನೀಡಬೇಕು. ಇನ್ನು ಸರಕಾರಿ ಉದ್ಯೋಗ ಸಿಕ್ಕಿದರೆ ಸಾಕು ಜೀವನ ಚೆನ್ನಾಗಿರುತ್ತದೆ ಎಂದು ಮನೆ, ಮಠ ಮಾರಿ 25ರಿಂದ 50 ಲಕ್ಷ ರೂಪಾಯಿ ಕೊಟ್ಟು ಕೆಲಸಕ್ಕೆ ಸೇರುತ್ತಾರೆ. ಈಗ ಪಿ.ಎಸ್ʼಐ ಪ್ರಕರಣ ಹೊರಗೆ ಬಂದಿದೆ. ಅದರಂತೆ ಸಾಕಷ್ಟು ಪಕ್ರರಣಗಳು ಸರಕಾರದ ಮಟ್ಟದಲ್ಲಿ ನಡೆಯುತ್ತಿವೆ. ಇದಕ್ಕೆ ಸರಕಾರ ಅಂತಿಮ ತೆರೆ ಎಳೆದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯಿಸಿದರು.

ಪಿಎಸ್ʼಐ ಹಗರಣದಲ್ಲಿ ದೊಡ್ಡ ರಾಜಕಾರಣಿಗಳ ಪಾತ್ರ ಇದೆ ಅಂತ ನಾನು ಹೇಳುವುದಿಲ್ಲ. ಇದರಲ್ಲಿ ಕೆಳಹಂತದಲ್ಲಿ ಕೆಲ ಟೀಮ್ʼಗಳಿವೆ. ಸಿದ್ದರಾಮಯ್ಯ ಕಾಲದಲ್ಲಿ ಶಿವಕುಮಾರ್ ಎಂಬ ಕಿಂಗ ಪಿನ್ ಒಬ್ಬನನ್ನು ಬಂಧಿಸಿದರು. ಆದರೆ, ಏನೂ ಕ್ರಮವನ್ನೂ ಕೈಗೊಳ್ಳಲಿಲ್ಲ. ಹಾಗಾಗಿ ಇಂದಿನ ಪಿಎಸ್ʼಐ ಪರೀಕ್ಷೆಯಲ್ಲಿ ಪ್ರಾಮಾಣಿಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿಗಳು ಪಾರದರ್ಶಕ ತನಿಖೆ ನಡೆಸಿ ನಿಜವಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ಮಾಡಿರುವುದಕ್ಕೆ ನನ್ನ ಸಹಮತವಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದಲ್ಲಿ ಯಾರಿಗೂ ಯಾರ ಮೇಲೆಯೂ ಹಿಡಿತವಿಲ್ಲ. ಬಿಜೆಪಿ ಹೈಕಮಾಂಡ್ ಚುನಾವಣೆಗಷ್ಟೇ ಸೀಮಿತವಾಗಿದೆ. ಬಿಜೆಪಿ ಜನರ ಬದುಕಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದೂ ಇಲ್ಲ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ರಾಜ್ಯ ಸರಕಾರದಲ್ಲಿ 40% ಕಮೀಷನ್ ದಂಧೆ ಬಗ್ಗೆ ಮೌನವಾಗಿದ್ದಾರೆ. ದೇಶದಲ್ಲಿ ಜನಸಾಮಾನ್ಯನ ಜೀವನ ದುಬಾರಿಯಾಗಿದೆ. ಪಕ್ಕದ ಶ್ರೀಲಂಕಾದಲ್ಲಿರುವ ಪರಿಸ್ಥಿತಿ ಭಾರತದಲ್ಲಿ ಬಂದರೂ ನಾವು ಆಶ್ಚರ್ಯಪಡಬೇಕಾಗಿಲ್ಲ ಎಂದು ಸರಕಾರದ ವಿರುದ್ಧ ಅವರು ಹರಿಹಾಯ್ದರು.

ಲೋಕಾಯುಕ್ತವನ್ನು ಮುಗಿಸಿದ ಕಾಂಗ್ರೆಸ್

ಕಾಂಗ್ರೆಸ್ ಸರಕಾರವಿದ್ದಾಗ ಅವರ ಹಗರಣಗಳನ್ನು ಮುಚ್ಚಿಹಾಕಿಕೊಳ್ಳಲು ಲೋಕಾಯುಕ್ತಕ್ಕಿದ್ದ ಅಧಿಕಾರಕ್ಕೆ ಕತ್ತರಿ ಹಾಕಿದರು. ಇವತ್ತು ನೋಡಿದರೆ ಅದೇ ಪಕ್ಷದ ನಾಯಕರು ಹಾದಿಬೀದಿಯಲ್ಲಿ ನಿಂತು ಭ್ರಷ್ಟರನ್ನು ಬಂಧಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. 2006ರಲ್ಲಿ ನಾನು ಅಧಿಕಾರದಲ್ಲಿದಾಗ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೆ ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ದೇಶದ ಪ್ರಜೆಗಳು ಚೆನ್ನಾಗಿರಬೇಕು ಎಂಬ ಪ್ರಜ್ಞೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ. ರಾಜ್ಯವನ್ನು ಲೂಟಿ ಹೊಡೆಯುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದರೆ ಜನರ ಕೆಲಸಗಳನ್ನು ಯಾವ ರೀತಿ ಮಾಡಬೇಕು ಎಂಬುದನ್ನುಇವರಿಗೆಲ್ಲ ತೋರಿಸಿ ಕೊಡುತ್ತೇನೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಜಲಧಾರೆ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಯಾರು ಏನೇ ಮಾತನಾಡಿದರು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಬಾದಾಮಿ ಕ್ಷೇತ್ರದಲ್ಲಿ ನಡೆಯುತ್ತಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ್ದು ನಾನು. ಎರಡೂ ರಾಷ್ಟ್ರಿಯ ಪಕ್ಷಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ನಾನು ಕಡಿಮೆ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಇನ್ನ ನನಗೆ ಪೂರ್ಣ ಪ್ರಮಾಣದ ಸರಕಾರ ನೀಡಿದರೆ ಇನಷ್ಟು ಜನ ಪರ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಸೇರಿದಂತೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪುಸ್ತಕಗಳಿರಲವ್ವ ಮನೆ ತುಂಬಾ..

ಪುಸ್ತಕಗಳಿರಲವ್ವ ಮನೆ ತುಂಬಾ..

Leave a Reply Cancel reply

Your email address will not be published. Required fields are marked *

Recommended

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಕೋವಿಡ್ ಎರಡನೇ ಅಲೆ ತಡೆಯಲು ಮದುವೆ ಸಮಾರಂಭಗಳಿಗೆ ಮಾರ್ಷಲ್‌ಗಳ ನಿಯೋಜನೆ ಮಾಡಲು ಸರಕಾರ ನಿರ್ಧಾರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಮೇ 10-24: 14 ದಿನ ಕರ್ನಾಟಕ ಕಂಪ್ಲೀಟ್‌ ಲಾಕ್‌;‌ ಅಂತಾರಾಜ್ಯ & ಅಂತರ್‌ ಜಿಲ್ಲಾ ಗಡಿಗಳು ಸಂಪೂರ್ಣ ಬಂದ್‌, ಹಾಲು-ತರಕಾರಿ ತರಲಿಕ್ಕೂ ಬೈಕ್ ಬಳಸುವಂತಿಲ್ಲ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ