• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಕಷ್ಟಗಳನ್ನೇ ಮೆಟ್ಟಿಲು ಮಾಡಿಕೊಂಡ ಅಕ್ಕ-ತಂಗಿ

cknewsnow desk by cknewsnow desk
May 2, 2022
in EDITORS'S PICKS, STATE
Reading Time: 2 mins read
0
ಕಷ್ಟಗಳನ್ನೇ ಮೆಟ್ಟಿಲು ಮಾಡಿಕೊಂಡ ಅಕ್ಕ-ತಂಗಿ
1.8k
VIEWS
FacebookTwitterWhatsuplinkedinEmail

ಗುಡಿಬಂಡೆ ಚಿನ್ನದ ಸಹೋದರಿಯರ ಸಾಧನೆ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯೇ ಫಿದಾ

by GS Bharath Gudibande

ಗುಡಿಬಂಡೆ: ಹೆಣ್ಣು ಮಕ್ಕಳು ಸಬಲರಾಗಿ ನಿಲ್ಲಬೇಕೆಂದರೆ ಶಿಕ್ಷಣವೊಂದೇ ದಾರಿ. ಏನೇ ಕಷ್ಟ-ಸವಾಲು ಇದ್ದರೂ ಸಾಧಿಸಿ ತೋರಿಸುತ್ತೇವೆ ಎನ್ನುವ ಛಲ ಹೆಣ್ಣುಮಕ್ಕಳಿಗಲ್ಲದೆ ಇನ್ನಾರಿಗಿರಲು ಸಾಧ್ಯ? ತಾಲೂಕಿನ ಇಬ್ಬರು ಸಹೋದರಿಯರು ತಮ್ಮ ಸಾಧನೆಯಿಂದಲೇ ಇಂದು ಇಡೀ ರಾಜ್ಯದ ಗಮನ ಸೆಳೆದಿದ್ದಾರೆ.

ತಂದೆ-ತಾಯಿ ಕಂಡ ಕನಸುಗಳನ್ನು ತಮ್ಮ ಹೃದಯದಲ್ಲಿ ತುಂಬಿಕೊಂಡು ಚಿನ್ನದ ಪದಕಗಳನ್ನು ಗೆದ್ದ ಅಕ್ಕ-ತಂಗಿ ಮಾಡಿರುವ ಸಾಧನೆ ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯ ಜನ ಬೆರಗು ಕಂಗಳಿಂದ ನೋಡುತ್ತಿದ್ದಾರೆ.

ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿಕುಂಟಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ ಮತ್ತು ನಾಗಮಣಿ ದಂಪತಿಯ ಮಕ್ಕಳಾದ ಆರತಿ ಮತ್ತು ಗಾಯತ್ರಿ ಕಡುಬಡತನದಲ್ಲಿ ಹುಟ್ಟಿ ಬೆಳೆದವರು. ಪ್ರಾಥಮಿಕ ಶಿಕ್ಷಣವನ್ನುಗುಡಿಬಂಡೆ ಸರಕಾರಿ ಶಾಲೆಯಲ್ಲಿ ಮಾಡಿದ್ದಾರೆ. ನಂತರ, ಪದವಿ ವಿದ್ಯಾಭ್ಯಾಸವನ್ನು ಬಾಗೇಪಲ್ಲಿಯ ನ್ಯಾಷನಲ್ ಪದವಿ ಕಾಲೇಜ್‌ನಲ್ಲಿ ಮುಗಿಸಿ ನಂತರ ಉನ್ನತ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪೂರೈಸಿದ್ದಾರೆ.

ತಂದೆಯೊಂದಿಗೆ ಚಿನ್ನದ ಸಹೋದರಿಯರು.

ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಇವರಿಬ್ಬರಿಗೂ ಚಿನ್ನದ ಪದಕ-ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಿದರು.

ಎಸ್.ಆರತಿ ಅವರು ಎಂಎಸ್ಸಿ ಭೌತಿಕ ರಸಾಯನಶಾಸ್ತ್ರ ವಿಷಯದಲ್ಲಿ ಪ್ರಥಮ Rank ಪಡೆದು ಚಿನ್ನದ ಪದಕ ಪಡೆದರೆ, ತಂಗಿ ಗಾಯತ್ರಿ ಬಿ.ಎಸ್ಸಿ ರಸಾಯನಶಾಸ್ತ್ರ ವಿಷಯದಲ್ಲಿ ಪ್ರಥಮ Rank ಗಳಿಸಿ ಚಿನ್ನ ಗೆದ್ದಿದ್ದಾರೆ.

ತಂದೆ-ತಾಯಿಯೊಂದಿಗೆ ಚಿನ್ನದ ಸಹೋದರಿಯರು.
ಕೂಲಿ ಮಾಡಿ ಓದಿಸಿದ ತಂದೆ, ತಾಯಿ

ಆರತಿ ಮತ್ತು ಗಾಯತ್ರಿ ಚಿನ್ನದ ಪದಕ ಗೆದ್ದ ಕಥೆಯ ಹಿಂದೆ ತಂದೆ-ತಾಯಿಯ ಮತ್ತು ಬೆಂಗಳೂರಿನಲ್ಲಿರುವ ಅವರ ದೊಡ್ಡಮ್ಮ ಅವರ ಪರಿಶ್ರಮವಿದೆ. ಕಡು ಬಡತನದಲ್ಲಿ ಹೆಣ್ಣುಮಕ್ಕಳಿಬ್ಬರಿಗೂ ಶಿಕ್ಷಣ ಕೊಡಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕಳಿಸಬೇಕು ಎಂಬ ತಂದೆ ತಾಯಿ ಕನಸನ್ನು ಇವರಿಬ್ಬರೂ ಈಡೇರಿಸಿದ್ದಾರೆ. ಇವರ ತಂದೆ ಅಡುಗೆ ಕೆಲಸ ಮಾಡುತಿದ್ದರು, ಒಂದು ವೇಳೆ ಅಡುಗೆ ಕೆಲಸ ಸಿಗಲಿಲ್ಲ ಅಂದರೆ, ದಿನಕೂಲಿ ಮಾಡುತ್ತಾ ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದರು. ತಮಗೆ ಒಂದು ಹೊತ್ತು ಊಟ ಇಲ್ಲದಿದ್ದರೂ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ತಂದೆ ಶ್ರೀರಾಮರೆಡ್ಡಿ ಹಾಗೂ ತಾಯಿ ನಾಗಮಣಿ ನೋಡಿಕೊಂಡಿದ್ದಾರೆ.

ತಮ್ಮ ಇಡೀ ಶಿಕ್ಷಣವನ್ನು ತಂದೆ-ತಾಯಿ ಕನಸನ್ನು ನನಸು ಮಾಡಲೇಬೇಕು ಎಂಬ ಛಲದಿಂದ ಶಿಕ್ಷಣವನ್ನು ಪೂರೈಸಿದ ಅಕ್ಕ-ತಂಗಿ ಉನ್ನತ ವ್ಯಾಸಂಗವನ್ನು ಉನ್ನತ ದರ್ಜೆಯಲ್ಲಿಯೇ ತೇರ್ಗಡೆ ಆಗಬೇಕು ಎಂಬ ಸಂಕಲ್ಪದೊಂದಿಗೆ ಓದಿದ್ದರು. ಕಷ್ಟಗಳು ಬೆನ್ನ ಹಿಂದೆಯೇ ಇದ್ದರೂ, ಅಪ್ಪ ಅಮ್ಮನ ಬವಣೆಯ ನಡುವೆಯೂ ಅವರು ಕಂಡ ಕನಸುಗಳ ಬಗ್ಗೆ ಕೈಚೆಲ್ಲದೆ ಇಂದು ಗೆದ್ದು ಬೀಗಿದ್ದಾರೆ.

ಪತಿ ಮಂಜುನಾಥ್‌ ಅವರೊಂದಿಗೆ ಆರತಿ.

ನಮ್ಮ ತಂದೆ-ತಾಯಿ ಬಹಳ ಕಷ್ಟದಿಂದ ನಮ್ಮನ್ನು ಬೆಳೆಸಿ ವಿದ್ಯಾಭ್ಯಾಸ ಮಾಡಿಸಿದ್ದಾರೆ. ನಮ್ಮ ಕಷ್ಟಗಳೇ ನಮಗೆ ಮುಂದಿನ ಮೆಟ್ಟಿಲುಗಳಾಗಿದ್ದವು. ಈ ಕಷ್ಟಗಳು ಶಾಶ್ವತವಲ್ಲ, ನಾವು ಏನೂ ಸಾಧಿಸಲಿಕ್ಕೆ ಆಗಲಿಲ್ಲ, ನಮ್ಮ ಮಕ್ಕಳಾಗಿ ನೀವು ಏನಾದರೂ ಸಾಧಿಸಿ ತೋರಿಸಿ ಎಂಬ ನಮ್ಮ ತಂದೆಯ ಮಾತುಗಳು ನಮಗೆ ಸ್ಪೂರ್ತಿ ತುಂಬಿತು. ನಾನು ಮತ್ತು ನನ್ನ ತಂಗಿ ಒಂದೇ ದಾರಿಯಲ್ಲಿ ವಿದ್ಯಾಭ್ಯಾಸ ಮಾಡಿ ಚಿನ್ನದ ಪದಕ ಪಡೆದಿರುವುದು ಸಂತೋಷವಾಗಿದೆ. ನನಗೆ ಮದುವೆಯಾಗಿ 8 ತಿಂಗಳಾಗಿದೆ, ತಂದೆಯಂತೆ ನನಗೆ, ನನ್ನ ಪತಿ ಮಂಜುನಾಥ್, ನಮ್ಮ ಅತ್ತೆ, ಮಾವ ಸಹಕಾರ ನೀಡಿದ್ದಾರೆ. ನನ್ನ ಶಿಕ್ಷಣಕ್ಕೆ ಸಹಕಾರ ನೀಡಿದ ಎಲ್ಲಾ ನನ್ನ ಶಿಕ್ಷಕರು, ಉಪನ್ಯಾಸಕರಿಗೆ ಧನ್ಯಾವಾದಗಳನ್ನು ತಿಳಿಸುತ್ತೇನೆ.

ಎಸ್.ಆರತಿ, ಭೌತಿಕ ರಸಾಯನಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ ಪಡೆದ ಸ್ನಾತಕೋತ್ತರ ವಿದ್ಯಾರ್ಥಿ

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗವಿಗುಂಟಹಳ್ಳಿ ಗ್ರಾಮದ ಶ್ರೀರಾಮರೆಡ್ಡಿ-ನಾಗಮಣಿ ದಂಪತಿ ಮಕ್ಕಳಾದ ಎಸ್.ಆರತಿ-ಎಸ್.ಗಾಯಿತ್ರಿ (ಅಕ್ಕ-ತಂಗಿ) ಇಬ್ಬರೂ ಬೆಂಗಳೂರಿನಲ್ಲಿ ನಡೆದ 56 ನೇ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. 2/3

— cknewsnow.com (@cknewsnow) May 1, 2022

ಎಸ್.ಆರತಿ ಅವರು ಎಂಎಸ್ಸಿ ರಸಾಯನಶಾಸ್ತ್ರ, ಎಸ್.ಗಾಯಿತ್ರಿ ಅವರು ಬಿ.ಎಸ್ಸಿ ರಸಾಯನಶಾಸ್ತ್ರ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ RANK ಗಳಿಸಿದ್ದಾರೆ. 3/3

— cknewsnow.com (@cknewsnow) May 1, 2022
ಚಿನ್ನದ ಸಹೋದರಿಯರ ಬಗ್ಗೆ ಭಾರೀ ಮೆಚ್ಚುಗೆ

ಅಕ್ಕ-ತಂಗಿಯರಿಬ್ಬರೂ ರಾಜ್ಯಪಾಲರಿಂದ ಚಿನ್ನದ ಪದಕ ಪಡೆಯುತ್ತಿದ್ದಂತೆ ಅವರಿಬ್ಬರ ಬಗ್ಗೆ ಭಾರೀ ಮೆಚ್ಚುಗೆ, ಶ್ಲಾಘನೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಚಿನ್ನದ ಸಹೋದರಿಯರ ಸಾಧನೆಗೆ ಜಿಲ್ಲೆಯ ಜನರು ಉಘೇ ಉಘೇ ಎಂದಿದ್ದಾರೆ.

ಗುಡಿಬಂಡೆ ತಾಲೂಕಿನ ಹಳ್ಳಿ ವಿದ್ಯಾರ್ಥಿನಿಯರು ಮಾಡಿರುವ ಈ ಸಾಧನೆ ನಿಜಕ್ಕೂ ಮೆಚ್ಚುವಂತದ್ದು. ವಿಷಯ ತಿಳಿದ ತಕ್ಷಣ ವಿದ್ಯಾರ್ಥಿ ಆರತಿಗೆ ಕರೆಮಾಡಿ ಶುಭಾಶಯ ತಿಳಿಸಿದ್ದೇನೆ. ಈ ರೀತಿಯ ಪ್ರತಿಭೆಗಳು ಇನ್ನಷ್ಟು ಬೆಳಕಿಗೆ ಬರಬೇಕು. ನಮ್ಮ ಸರಕಾರಿ ಶಾಲೆ-ಕಾಲೇಜುಗಳಲ್ಲಿ ಓದಿ ಉನ್ನತ ಸ್ನಾತಕೋತ್ತರ ಪದವಿಯಲ್ಲಿ ಪದಕ ಗೆದ್ದಿರುವುದು ಶ್ಲಾಘನೀಯ.

ಗುರಪ್ಪ, ಇಸ್ರೋ ವಿಜ್ಞಾನಿ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಷ್ಟಗಳನ್ನೇ ಮೆಟ್ಟಿಲು ಮಾಡಿಕೊಂಡ ಅಕ್ಕ-ತಂಗಿ

ಚಿನ್ನದ ಸಹೋದರಿಯರ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ

Leave a Reply Cancel reply

Your email address will not be published. Required fields are marked *

Recommended

ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು

ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ