• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಮಲ್‌ ಪಂಥ್‌ಗೆ ಬಿಜೆಪಿ ಅಪಮಾನ; ಸೇಡು ತೀರಿಸಿಕೊಂಡ ಪೊಲೀಸ್‌ ಇಲಾಖೆ

P K Channakrishna by P K Channakrishna
May 4, 2022
in STATE
Reading Time: 1 min read
0
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ
1.3k
VIEWS
FacebookTwitterWhatsuplinkedinEmail

ಬಿಜೆಪಿಯ ನಾಯಕ-ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ಗೂ ಲಿಂಕ್! ಸ್ಫೋಟಕ ಅಂಶ ಬಯಲು ಮಾಡಿದ ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಕಾಂಗ್ರೆಸ್‌ ನಾಯಕರ ಬಳಿ ದಾಖಲೆ ಇದೆಯಾ?

ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಬಳಿ ಸಚಿವರ ವಿರುದ್ಧ ದಾಖಲೆ ಇದೆಯಾ? ಅವರ ವಿರುದ್ಧ ಎಲ್ಲಿದೆ ದಾಖಲೆ? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿಗಳು; ಸಚಿವರ ವಿರುದ್ಧ ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬೆಂಗಳೂರಿಗೆ ಬರುತ್ತಿದ್ದಂತೆಯೇ ಅದೆಲ್ಲ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ. ಇದೆಲ್ಲ ಅಮಿತ್ ಶಾ ತಲೆಗೆ ಹೋಗಲಿ ಎಂದೇ ಸಚಿವರ ವಿರುದ್ಧ ಮಾಹಿತಿ ನೀಡಿದ್ದಾರೆ ಎಂದರು.

ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲಿಯೇ ಸಂಚು ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ, ನಾವು ಹಚ್ಚಬೇಕಿಲ್ಲ. ನಾನು ಮತ್ತೆ ಪೆಟ್ರೋಲ್ ತೆಗೆದುಕೊಂಡು ಹೋಗ್ಲಾ ಸುರಿಯೋಕೆ? ಕಾಂಗ್ರೆಸ್ ನಾಯಕರಿಗೆ ನೈಜ ವಿಷಯಗಳ ಮೇಲೆ ಹೋರಾಟ ನಡೆಸುವ ಶಕ್ತಿ ಇಲ್ಲ. ಯಾರೋ ಹೇಳಿದ್ದನ್ನು ಹೇಳ್ಕೋತಾರೆ ಅಷ್ಟೇ. ಎಂದು ಮಾಜಿ ಸಿಎಂ ತಿಳಿಸಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಲೆ ಏರಿಕೆ: ಕೊನೆಗೂ ದನಿಯೆತ್ತಿದ ಕಾಂಗ್ರೆಸ್‌ ನಾಯಕರು

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ರೂ. ವಹಿವಾಟು

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ