• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಯಾರ ಹಂಗಿಲ್ಲದ ಪೂರ್ಣ ಸರಕಾರ ನೀಡಿದರೆ ಸಮಗ್ರ ನೀರಾವರಿ

cknewsnow desk by cknewsnow desk
May 15, 2022
in STATE
Reading Time: 1 min read
0
ಯಾರ ಹಂಗಿಲ್ಲದ ಪೂರ್ಣ ಸರಕಾರ ನೀಡಿದರೆ ಸಮಗ್ರ ನೀರಾವರಿ
917
VIEWS
FacebookTwitterWhatsuplinkedinEmail

ಜನತಾ ಜಲಧಾರೆ ಮಹಾ ಸಂಕಲ್ಪ ಸಮಾವೇಶ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮೈತ್ರಿ ಸರ್ಕಾರದ ಸಹವಾಸ ಬೇಡ ಬದಲಾಗಿ ಸ್ವತಂತ್ರ ಸರ್ಕಾರ ತರಲು ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ನೆಲಮಂಗಲ ಸಮೀಪ ಇಂದು ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೂನ್, ಜುಲೈ ತಿಂಗಳಲ್ಲಿ ಮತ್ತೊಂದು ಸುತ್ತಿನ ರಥಯಾತ್ರೆ ನಡೆಸುತ್ತೇನೆ ಎಂದು ಘೋಷಿಸಿದರು.
ಹಳ್ಳಿ, ಹಳ್ಳಿಗಳಲ್ಲಿ ರಥಯಾತ್ರೆ ನಡೆಸುತ್ತೇವೆ. ನಾನೇ ಜನರ ಮುಂದೆ ಬರುತ್ತೇನೆ ಎಂದರು.

ನಮ್ಮ ಪಕ್ಷದಿಂದಲೇ ಬೆಳೆದು ಹೋದವರು ಜೆಡಿಎಸ್ ಮುಗಿದೇ ಹೋಯಿತು ಎಂದಿದ್ದರು. ಆದರೆ ಜನತಾ ಜಲಧಾರೆ ಸಮಾವೇಶ ಅವರಿಗೆ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

90 ವರ್ಷ ವಯಸ್ಸಿನಲ್ಲೂ ನಾಡಿನ ಜನರಿಗಾಗಿ ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ. ರಾಜಕೀಯದ ಬೆಳವಣಿಗೆಗಳ ಪರಿಣಾಮವಾಗಿ ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದೆ. ಆದರೆ ಯಾವುದೇ ಕಾರ್ಯಕ್ರಮ ಕೊಡಲು ಸ್ವತಂತ್ರ ಅಧಿಕಾರ ಇರಲಿಲ್ಲ. ರೈತರ ಸಾಲ ಮನ್ನಾ ಮಾಡಲು ಮುಂದಾದಾಗ ನೋವು ಅನುಭವಿದ್ದು ನನಗೆ ಮಾತ್ರ ಗೊತ್ತು ಎಂದರು.

ಯಾವ ಟೀಕೆಗಳಿಗೂ ಹೆದರಬೇಕಿಲ್ಲ. ಹೃದಯದಿಂದ ಜನರ ಕೆಲಸ ಮಾಡಿ ಎಂದು ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಹಾಗೂ ಸೂರಜ್ ರೇವಣ್ಣಗೆ ಸಲಹೆ ನೀಡಿದರು‌ ಎಂದರು.

ಜೆಡಿಎಸ್ ನಲ್ಲಿ ಟಿಕೆಟ್ ಸಿಗಬೇಕಾದರೆ ಹಣ ಕೊಡಬೇಕು ಎಂದು ಒಬ್ಬರು ಆರೋಪ ಮಾಡಿದರು. ಆದರೆ ಅನ್ನದಾನಿ ಬಡವರಾದರೂ ಟಿಕೆಟ್ ಕೊಟ್ಟು ಚುನಾವಣಾ ಖರ್ಚನ್ನು ಪಕ್ಷ ಭರಿಸಿದೆ. ದೇವರು ನೋಡ್ತಾನೆ ಎಂಬ ಕನಿಷ್ಠ ತಿಳುವಳಿಕೆ ಬೇಕು ಎಂದರು.

ಕೊರೊನಾದಿಂದ ಜೆಡಿಎಸ್ ನಾಯಕರು ಹೊರ ಬಂದಿಲ್ಲ ಅಂತಾ ಇದ್ರು. ಅದಕ್ಕೆ ಕಾರಣ ಕೊರೊನಾದಿಂದ ಆದಂತಹ ಸಾವಿರಾರು ಜನರ ಸಾವು. ನಿಮಗೆ ತೊಂದರೆ ಆಗಬಾರದು ಅಂತ ಕಾರ್ಯಕ್ರಮ ಹಾಕಿಕೊಂಡಿರಲಿಲ್ಲ. ಬಿಜೆಪಿ, ಕಾಂಗ್ರೆಸ್ ನಾಯಕರಷ್ಟು ಅವಸರ ನಮಗೆ ಇರಲಿಲ್ಲ. ಕಳೆದ ತಿಂಗಳಿಂದ ಜಲಧಾರೆ ಕಾರ್ಯಕ್ರಮ ಆರಂಭ ಆಯ್ತು. ಅಂದಿನಿಂದ ಇಂದಿನವರೆಗೆ ನಮಗೆ ಸಾಥ್ ಕೊಟ್ಟಿದ್ದೀರಾ. ಮೈಸೂರಿನಲ್ಲಿ ಒಂದು ಸ್ಥಾನ ಬರಲ್ಲ ಎಂದು ಇಲ್ಲೇ ಬೆಳೆದು ಹೋದವರೇ ಹೇಳಿದರು. ಆದರೆ ಇವತ್ತು ನೀವು ಜಲಧಾರೆ ಸಮಾವೇಶದ ಮೂಲಕ ತೋರಿಸಿದ್ದಿರಾ ಎಂದರು.

ನನ್ನ ಕೊನೆಯ ಉಸಿರು ಇರುವವರೆಗೂ ನಿಮಗಾಗಿ ಜೀವನ ಇಟ್ಟಿರುತ್ತೇನೆ. ನಾನು ಈ ಮಣ್ಣಿಗೆ ಹೋಗೋದ್ರೊಳಗೆ ನಿಮ್ಮ ಹೃದಯದಲ್ಲಿ ನನಗೆ ಕೊಡುವ ಸ್ಥಾನ ಒಂದೇ ಎಂದು ಹೇಳಿದರು.

ಕುಡಿಯುವ ನೀರಿನ ವಿಚಾರವಾಗಿ ದೇವೇಗೌಡರು ಸಂಸತ್ ನಲ್ಲಿ ಮಾತನಾಡಿದರೆ ಯಾರು ಬರೋದಿಲ್ಲ ಮಾತಾಡೋಕೆ ಎಂದ ಹೆಚ್ ಡಿಕೆ, ನಾನು ಎರಡು ಬಾರಿ ಸಿಎಂ ಆಗಿದ್ದೇನೆ.
ರಾಜಕೀಯದ ಬೆಳವಣಿಗೆಯಲ್ಲಿ ಸಿಎಂ ಆದೆ. ಅನೇಕ ಒತ್ತಡಗಳ ನಡುವೆ ಅಧಿಕಾರ ಮಾಡಿದೆ. ರೈತರ ಸಾಲ ಮನ್ನಾ ಮಾಡುವಾಗಲು ಎಷ್ಟು ಕಷ್ಟ ಪಟ್ಟಿದ್ದೇನೆ ನಮಗೆ ಗೊತ್ತು ಎಂದರು.

ಐದು ಲಕ್ಷ ಕೊರೊನಾದಿಂದ ಸಾವನ್ನಪ್ಪಿದ ಕುಟುಂಬಕ್ಕೆ ಐದು ಲಕ್ಷ ರೂ. ಕೊಡುತ್ತೇವೆ ಅಂದರು. ಆದರೆ, ಇನ್ನೂ ಈ ಸರ್ಕಾರ ಕೊಟ್ಟಿಲ್ಲ. ನಿತ್ಯ ಎಷ್ಟು ಕಷ್ಟ ಪಡ್ತಾ ಇದ್ದೀರಾ ಶಾಲೆ ಫೀಸ್ ಕಟ್ಟಲು, ಆಸ್ಪತ್ರೆಗಳಿಗೆ ಅಂತ ಗೊತ್ತಿದೆ. ನಿತ್ಯ ಸಾಕಷ್ಟು ಜನರನ್ನು ನೋಡ್ತಾ ಇದ್ದೀನಿ. ಪಂಚರತ್ನ ಯೋಜನೆ ಹುಡುಗಾಟಿಕೆಗೆ ಮಾಡಿದ್ದಲ್ಲ. ನಿಮ್ಮಗಳ ಕಷ್ಟಗಳನ್ನು ನೋಡಿಯೇ ಮಾಡಿರೋದು ಎಂದು ಹೇಳಿದರು.

ಆಗಲೇ ಅಧಿಕಾರ ಬಿಟ್ಟು ದೇವೇಗೌಡರು ಬಂದ್ರು. ಫಿನೀಕ್ಸ್ ನಂತೆ ಎದ್ದು ಬರ್ತೀನಿ ಅಂತ ದೇವೇಗೌಡರು ಹೇಳಿದ್ದರು ಅಂತ ಪೂಜ್ಯರು ಹೇಳಿದ್ರು. ಆ ಫಿನಿಕ್ಸ್ ಕುಮಾರಸ್ವಾಮಿ ಅಂದಿದ್ದರು. ಹೌದು ಧೂಳಿನ ಫಿನಿಕ್ಸ್ ನಂತೆ ಎದ್ದು ಬರ್ತೀವಿ. 2023 ಕ್ಕೆ ಜನರ ಸಂಕಷ್ಟಕ್ಕೆ ಪರಿಹಾರ ಜನತಾ ದಳ ಎಂದರು.

ಯಾರೂ ನಾಯಕರನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ನಿಮ್ಮ‌ ದುಡಿಮೆಯೇ ನಾಯಕತ್ವ ರೂಪಿಸುತ್ತದೆ. ನಾನು ಈಗಾಗಲೇ ಎರಡು ಭಾರಿ ಸಿಎಂ ಆಗಿದ್ದೇನೆ. ರಾಜಕೀಯದ ಕೆಲ ಬೆಳವಣಿಗೆಯಿಂದ ಎರಡು ಭಾರಿ ಸಿಎಂ ಆದೆ. ಆದರೆ, ಸ್ವತಂತ್ರವಾದ‌ ಸರ್ಕಾರ ಇರಲಿಲ್ಲ. ಅನುಕಂಪ ಗಿಟ್ಟಿಸಿ ಅಧಿಕಾರ ಪಡೆಯಬೇಕೆಂಬ ಉದ್ದೇಶ ಇಲ್ಲ. ಪಂಚರತ್ನ ಕಾರ್ಯಕ್ರಮದ ಬಗ್ಗೆ ಹುಡುಗಾಟಿಕೆಯಿಂದ ಹೇಳುತ್ತಿಲ್ಲ. ನಾಡಿನ ಪರ ಹೋರಾಟ ಮಾಡುವ ಯಾರಾದರೂ ಇದ್ದರೆ ಅದು ದೇವೇಗೌಡರು ಮಾತ್ರ ಎಂದು ಹೇಳಿದರು.

2023 ಕ್ಕೆ ನಾಡಿನ ಜನತೆಗೆ ಜೆಡಿಎಸ್ ಪರಿಹಾರವಾಗಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಕುರುಬ ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳ ಬೆನ್ನಿಗೆ ನಿಲ್ಲುತ್ತೇನೆ. ಐದು ವರ್ಷಗಳಲ್ಲಿ ಕಾರ್ಯಕ್ರಮಗಳನ್ನ ಅನುಷ್ಠಾನಗೊಳಿಸದೆ ಇದ್ದರೆ ನಿಮ್ಮ ಮುಂದೆ ಬರುವುದಿಲ್ಲ ಎಂದು ನುಡಿದರು.

ಸಾಮಾನ್ಯ ಕಡು ಬಡವರ ಜೀವನ ಕ್ಕೆ ಮುಡಿಪಾಗಿಡುತ್ತೇನೆ. ನನಗೆ ನೀವು ಸಹಕಾರ ಕೊಡಿ. 123 ಗುರಿ ಏನಿದೆ ಅದು ಮುಟ್ಟುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟ ಶಾಶ್ವತವಾಗಿ ಬದುಕುವ ನಿಟ್ಟಿನಲ್ಲಿ ಈ ಸರ್ಕಾರ ಬರಲೇ ಬೇಕು. ಐದು ವರ್ಷದಲ್ಲಿ ಈ ಕಾರ್ಯಕ್ರಮ ಕೊಡದೇ ಹೋದರೆ, ನಾನು ಎಂದೂ ನಿಮ್ಮ ಮುಂದೆ ಮತ ಕೇಳಲು ಬರಲ್ಲ ಎಂದು ಹೇಳಿದರು.

Tags: cknewsnowhd kumaraswamyjanata jaladharejdskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮೇಕೆದಾಟು ಯೋಜನೆಗೆ ಸಾಕಾರಕ್ಕೆ ಜೆಡಿಎಸ್ ಹೋರಾಟ

ಮೇಕೆದಾಟು ಯೋಜನೆಗೆ ಸಾಕಾರಕ್ಕೆ ಜೆಡಿಎಸ್ ಹೋರಾಟ

Leave a Reply Cancel reply

Your email address will not be published. Required fields are marked *

Recommended

ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

4 years ago
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ-ಭಾನುವಾರ ಶ್ರೀ ಮಂಜುನಾಥ ಸ್ವಾಮಿ ದರ್ಶನ ಇಲ್ಲ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ-ಭಾನುವಾರ ಶ್ರೀ ಮಂಜುನಾಥ ಸ್ವಾಮಿ ದರ್ಶನ ಇಲ್ಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ