• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮೇಕೆದಾಟು ಯೋಜನೆಗೆ ಸಾಕಾರಕ್ಕೆ ಜೆಡಿಎಸ್ ಹೋರಾಟ

cknewsnow desk by cknewsnow desk
May 15, 2022
in STATE
Reading Time: 1 min read
0
ಮೇಕೆದಾಟು ಯೋಜನೆಗೆ ಸಾಕಾರಕ್ಕೆ ಜೆಡಿಎಸ್ ಹೋರಾಟ
926
VIEWS
FacebookTwitterWhatsuplinkedinEmail

ಜನತಾ ಜಲಧಾರೆ ಮಹಾ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಸ್ವತಂತ್ರವಾಗಿ ಮೇಕೆದಾಟು ಯೋಜನೆಗಾಗಿ ಜೆಡಿಎಸ್‍ ಹೋರಾಟ ನಡೆಸಲಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ನೆಲಮಂಗಲ ಸಮೀಪ ಇಂದು ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಮಂಡಿ ನೋವು ಇರಬಹುದು. ಆದರೆ, ಮಾತನಾಡುವ ಎದೆಗಾರಿಕೆ ಇದೆ. ರಾಜಕೀಯ ಜೀವನದಲ್ಲಿ ತುಂಬಾ ನೋವನ್ನು ಅನುಭವಿಸಿದ್ದೇನೆ. ಜಲಧಾರೆ ಕಾರ್ಯಕ್ರಮವು ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು ಎಂದರು.

ರಾಜ್ಯಕ್ಕೆ ಮೇಕೆದಾಟು ಯೋಜನೆ ಮುಖ್ಯವಾಗಿದ್ದು, ಕುಡಿಯುವ ನೀರಿಗೆ ಮುಂದೆ ಸಮಸ್ಯೆಯಾಗುವುದಿಲ್ಲ. ಕಾಂಗ್ರೆಸ್ ಹೋರಾಟ ನಡೆಸಿದರೂ ನಮದು ಅದು ಅನುಕರಣೆಯಲ್ಲ. ನಾನು ಸಹ ಎಲ್ಲಾ ಸಮುದಾಯಕ್ಕೆ ರಾಜಕೀಯ ಶಕ್ತಿಯನ್ನು ನೀಡಿದ್ದೇನೆ. ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಹತ್ತು ತಿಂಗಳ ಕಾಲ ರೈತರ ಹೆಚ್ಚಿನ ಒತ್ತು ನೀಡಿ ಕಾರ್ಯಕ್ರಮ ರೂಪಿಸಲಾಯಿತು. ಪಕ್ಷದ ಕಾರ್ಯಕರ್ತರನ್ನು ಮುಂದಿನ ದಿನದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಬಗ್ಗೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ನನ್ನ ರಾಜಕೀಯ ಇತಿಹಾಸದಲ್ಲಲಿ ಇಂತಹ ಸಭೆ ನೋಡಿಲ್ಲ. ಮುಂದೆ ಯಾರಾದರೂ ಮಾಡುತ್ತಾರೋ ಗೊತ್ತಿಲ್ಲ. ರೈತರ, ಬಡವರ ಪರವಾಗಿ ಕೆಲಸ ಮಾಡಲು ಪಕ್ಷವು ಸದಾ ಮುಂದಿರುತ್ತದೆ. ಪ್ರಾದೇಶಿಕ ಪಕ್ಷವೆಂದು ನಮ್ಮನ್ನು ಕುಗ್ಗಿಸುತ್ತಾ ಹೋಗುತ್ತಿದ್ದಾರೆ. ಆದರೂ, ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ. ಪ್ರಾದೇಶಿಕ ಪಕ್ಷಗಳಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ ಎಂದರು.
ಕೇಂದ್ರ ಸರ್ಕಾರ ಪೆನ್ನಾರ್, ಕಾವೇರಿ, ಗುಂಡಾರ್ ನದಿಗಳನ್ನು ಜೋಡಿಸುವ ಯೋಜನೆಗೆ ಅನುಮತಿ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರು ಪೆನ್ನಾರ್, ಕಾವೇರಿ, ಗುಂಡಾರ್ ನದಿಗಳನ್ನು ಕೂಡಿಸುವುದಕ್ಕೆ ಅನುಮತಿ ನೀಡಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಜೆಡಿಎಸ್‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಹನುಮಜಯಂತಿ ದಿನದಿಂದ ಕಾರ್ಯಕ್ರಮ ಆರಂಭವಾಗಿದೆ. ಐತಿಹಾಸಿಕ ಕಾರ್ಯಕ್ರಮ ಇದು. ಊಟದ ವ್ಯವಸ್ಥೆ ಅದ್ಭುತವಾಗಿ ಆಗಿದೆ. ಬಂದವರಿಗೆ ಊಟದ ವ್ಯವಸ್ಥೆ ಸರಿಯಾಗಿ ಇರಬೇಕು ಅನ್ನೋದು ದೊಡ್ಡವರ ಆಸೆ. ಹಾಗೆಯೇ ಚೆನ್ನಾಗಿ ನಡೆದಿದೆ ಎಂದು ಹೇಳಿದರು.

ಶ್ರಿ ನಂಜಾವಧೂತ ಸ್ವಾಮೀಜಿ ಅವರ ಆಶೀರ್ವಚನ

ಸಮಾವೇಶದಲ್ಲಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಮಾತನಾಡಿ, ತಬ್ಬಲಿತನ ನಾಡಿಗೆ ಕಾಡುತ್ತಿದೆ. ಕಾವೇರಿ, ಕಳಸಾ ಬಂಡೂರಿ ಯಾವುದೇ ಆಗಿರಬಹುದು. ಪಕ್ಕದ ತಮಿಳುನಾಡು ನೆಲ, ಜಲದ ವಿಚಾರವಾಗಿ ಒಂದೇ ಪಕ್ಷವಾಗಿ ಹೋರಾಟ ಮಾಡುತ್ತಾರೆ. ಆದರೆ, ಕರ್ನಾಟಕದಲ್ಲಿ ಆ ರೀತಿ ಇಲ್ಲ. ರಾಜಕೀಯ ಮೇಲಾಟವೇ ನಡೆಯುತ್ತಿದೆ. ಇದು ನಿಜಕ್ಕೂ ನೋವು ಮೂಡಿಸುವಂತಹದ್ದು ಎಂದು ಹೇಳಿದರು.

ನಾಡಿಗೆ ಪರಿಹಾರ ತರುವ ಶಕ್ತಿ ತರುವಂತಹದ್ದು ದೇವೇಗೌಡರಿಗೆ ಮಾತ್ರ. ಮತ್ತೊಬ್ಬ ದೇವೇಗೌಡ, ಕುಮಾರಸ್ವಾಮಿಯನ್ನ ಹುಟ್ಡಿ ಹಾಕಲು ಸಾಧ್ಯವಿಲ್ಲ ಎಂದರು.
ಕೆಲವೇ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಲಿದೆ. ಇಡೀ ನಾಡು ಒಂದು ಪಕ್ಷವಾಗಬೇಕು. ಅದರ ನೇತೃತ್ವವನ್ನ ದೇವೇಗೌಡರು ವಹಿಸಬೇಕು. ಪ್ರಧಾನಿ ಮೋದಿ ಮನವೊಲಿಸುವ ಸಾಮರ್ಥ್ಯ ಇದೆ ಎಂದು ಹೇಳಿದರು.

ಮುಂದೊಂದು ದಿನ ಫೀನಿಕ್ಸ್ ನಂತೆ ಕುಮಾರಸ್ವಾಮಿ ಎದ್ದು ಬರುತ್ತಾರೆ. ದೇವೇಗೌಡರು ರಾಷ್ಟ್ರದ ಚಕ್ರವರ್ತಿ ಸ್ಥಾನವನ್ನು ತ್ಯಜಿಸಿ ಬಂದವರು. ಕುಮಾರಸ್ವಾಮಿ ಅವಕಾಶವಾದಿಯಲ್ಲ, ಮಹಾಸ್ವಾಭಿಮಾನಿ. ನನಗೆ ಅಧಿಕಾರ ಮುಖ್ಯವಲ್ಲ, ಜನರ ಹಿತ ಮುಖ್ಯವೆಂದು ಹೊರಗೆ ಬಂದವರು. ಇದು ನಿಜಕ್ಕೂ ಸ್ವಾಭಿಮಾನಿ ಕುಟುಂಬ ಎಂದು ಹೇಳಿದರು.

ನೀರಾವರಿ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ನಮ್ಮ ಹಕ್ಕನ್ನು ಪಡೆಯಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಕೆ ಮಾಡಲು ದೇವೇಗೌಡ ಅವರಿಂದ ಮಾತ್ರ ಸಾಧ್ಯ. ಹೀಗಾಗಿ ಒಂದು ಪಕ್ಷವಾಗಿ ಹೋರಾಟ ಮಾಡಿ ದೇವೇಗೌಡ ಅವರು ಅದರ ನೇತೃತ್ವ ವಹಿಸಬೇಕು. ದೇವೇಗೌಡ ಅವರು ರಾಜ್ಯಸಭೆಯಲ್ಲಿ ತಬ್ಬಲಿ ಮಕ್ಕಳು ನಾವು ಎಂದಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಮಗೆ ತಬ್ಬಲಿತನ ಕಾಡುತ್ತಿದೆ ಎಂದು ಹೇಳಿದರು.

ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಿನ್ನಮತ ಮರೆತು ಒಂದು ಪಕ್ಷವಾಗಿ ನೀರಿನ ವಿಚಾರಕ್ಕೆ ಹೋರಾಟ ಮಾಡುತ್ತಾರೆ. ಆದರೆ, ನಮ್ಮಲ್ಲಿ ರಾಜಕೀಯ ಮೇಲಾಟ ನೋಡಿದರೆ ನೋವಾಗುತ್ತದೆ. ರಾಜಕೀಯೇತರವಾಗಿ ಯೋಚನೆ ಮಾಡಬೇಕು ಎಂದು ಹೇಳಿದ ಅವರು, ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಜೋಡೆತ್ತುಗಳಂತೆ ಕೆಲಸ ಮಾಡಲು ಸಲಹೆ ನೀಡಿದರು.

ಜೆಡಿಎಸ್ ಅಶ್ವಮೇಧ ಯಾಗ: ಇಬ್ರಾಹಿಂ

ಜನತಾ ಜಲಧಾರೆ ಸಮಾವೇಶದ ಮೂಲಕ ಅಶ್ವಮೇಧಯಾಗ ಶುರು ಮಾಡಿದ್ದೇವೆ. ಕುದುರೆ ಬಿಟ್ಟಿದ್ದೇವೆ. ಅರ್ಜುನನ ಹಾಗೆ ಕುಮಾರಸ್ವಾಮಿ, ಕೃಷ್ಣನಾಗೆ ದೇವೇಗೌಡರು ಇದ್ದಾರೆ. ರಥ ಓಡಿಸಲು ನಾನು ಇದ್ದೇನೆ ಎಂದು ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಮ್ಮದೇ ಮಾತಿನ ಶೈಲಿಯಲ್ಲಿ ಹೇಳಿದ್ದಾರೆ.

ದೇವೇಗೌಡರ ಮನೆಯಲ್ಲಿ ನಾನು ದೊಡ್ಡಮಗ. ಕುಟುಂಬ ರಾಜಕಾರಣ ಅಂತಾರೆ. ಪ್ರಜ್ವಲ್, ನಿಖಿಲ್, ಸೂರಜ್ ಮೂವರು ಇದ್ದಾರೆ. ದೇವೇಗೌಡರ ಕುಟುಂಬದ ಬಗ್ಗೆ ವಿರೋಧ ಮಾಡುತ್ತಾರೆ. ಇದು ಬಿತ್ತನೆ ಬೀಜ ಮಾರುವ ಬೀಜವಲ್ಲ. ನಾವು ರೈತರ ಮಕ್ಕಳು, ನಮ್ಮ ಬಳಿ ದುಡ್ಡಿಲ್ಲ ಎಂದರು.

ಕೇಂದ್ರ ಸರ್ಕಾರ ಎಲ್ಐಸಿ ಎಲ್ಲವನ್ನೂ ಮಾರುತ್ತಿದೆ. ದೇವೇಗೌಡರು ಪ್ರಧಾನಿಯಾಗಿದ್ದಾಗ ಏನೂ ಮಾರಲಿಲ್ಲ. ದೇವೇಗೌಡರು ಬಂದಾಗ ಮೋದಿ ಕೂಡ ಎದ್ದು ನಿಂತು ಗೌರವ ಕೊಡುತ್ತಾರೆ. ಇಡಿ, ಸಿಡಿ ಏನಾದರೂ ಆರೋಪ ಗೌಡರ ಮೇಲಿದೆಯಾ ? ದೇವೇಗೌಡರು ಶೂದ್ರ ಜಾತಿಯಲ್ಲಿ ಹುಟ್ಟದೇ ತಪ್ಪಾಯ್ತು. ರೈತರ ಮನೆತನದಲ್ಲಿ ಹುಟ್ಟಿದ್ದೆ ತಪ್ಪಾಗಿ ಹೋಯ್ತು. ಪಂಜಾಬ್ ನಲ್ಲಿ ಭತ್ತದ ತಳಿಗೆ ದೇವೇಗೌಡರ ಹೆಸರು ಇಡಲಾಗಿದೆ ಎಂದು ಹೇಳಿದರು.

ದೇವೇಗೌಡರನ್ನು ಅಧಿಕಾರದಿಂದ ಇಳಿಸಿದ್ದೆ ಕಾಂಗ್ರೆಸ್ ಗೆ ದರಿದ್ರ ಬಂದಿದೆ. ಅಂದಿನಿಂದ ಇವತ್ತಿನವರೆಗೂ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಬರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಗುಜರಾತ್ ಮಾಡೆಲ್ ನಮಗೆ ಬೇಡ. ಗುಜರಾತ್ ನವರು ಪಾನಿಪೂರಿ ಮಾರುತ್ತಾರೆ. ಕನ್ನಡಿಗರ್ಯಾರು ಪಾನಿಪುರಿ ಮಾರುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದ ಬಸವನಬಾಗೇವಾಡಿ, ಬಸವನಕಲ್ಯಾಣ ಮತ್ತು ಕಲಬುರಗಿಯ ಬಂಡೇನವಾಜ್ ಸನ್ನಿಧಿಗೆ ಭೇಟಿ ನೀಡಿದ ಬಳಿಕ ರಾಜ್ಯದಲ್ಲಿ ಪಕ್ಷವನ್ನು ಬಲಗೊಳಿಸಲು ಪ್ರವಾಸ ಕೈಗೊಳ್ಳುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಮತಗಟ್ಟೆ ಸಮಿತಿಗಳನ್ನು ರಚಿಸಬೇಕು. ಪಕ್ಷವನ್ನು ಸಧೃಢಗೊಳಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದರು.

ಹಿಂದೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ವೇಳೆ ಒಂದೇ ಒಂದು ಸ್ವತ್ತು ಮಾರಾಟ ಮಾಡಲಿಲ್ಲ. ಏರ್ ಇಂಡಿಯಾ 50 ಕೋಟಿ ರೂ. ಲಾಭ ಮಾಡುತ್ತಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ 30 ಸಾವಿರ ಕೋಟಿ ರೂ. ನಷ್ಟ ಹೊಂದಿದೆ. ಅಲ್ಲದೇ, ರೈಲ್ವೆ, ಎಲ್‌ಐಸಿಯನ್ನು ಮಾರುತ್ತಿದ್ದಾರೆ. ರೈತ ಕುಟುಂಬದಲ್ಲಿ ಹುಟ್ಟಿರದಿದ್ದರೆ ದೇವೇಗೌಡ ಅವರು ಪ್ರತಿ ಮನೆಯಲ್ಲಿಯೂ ಶಿಲೆಯಾಗುತ್ತಿದ್ದರು. ಪಂಜಾಬ್‌ನ ಭತ್ತದ ತಳಿಗೆ ದೇವೇಗೌಡ ಹೆಸರನ್ನು ಇಡಲಾಗಿದೆ. ಅವರ ಋಣವನ್ನು ನಾವೆಲ್ಲಾ ತೀರಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಸೋನಿಯಾ ಮನೆಗೆಹೋಗಿ ಉದೋ ಉದೋ ಎಂದು ಸಿದ್ದರಾಮಯ್ಯ ತಿರುಗುತ್ತಿದ್ದಾರೆ. ಜೆಡಿಎಸ್‌ನಲ್ಲಿ ಅಂತಹ ಸ್ಥಿತಿ ಇಲ್ಲ ಎಂದರು.

Tags: cknewsnowhd devegowdahd kumaraswamyjaladharejds
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಿಥುನ್ ರೆಡ್ಡಿಗೆ ತಿರುಗೇಟು ಕೊಟ್ಟ ಗುಡಿಬಂಡೆ ಕಾಂಗ್ರೆಸ್ಸಿಗರು

ಮಿಥುನ್ ರೆಡ್ಡಿಗೆ ತಿರುಗೇಟು ಕೊಟ್ಟ ಗುಡಿಬಂಡೆ ಕಾಂಗ್ರೆಸ್ಸಿಗರು

Leave a Reply Cancel reply

Your email address will not be published. Required fields are marked *

Recommended

ಬೆಳಗಾವಿಯಲ್ಲಿ ಕನ್ನಡ ನಾಮ ಫಲಕಕ್ಕೆ ಮಸಿ;  ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು

ಬೆಳಗಾವಿಯಲ್ಲಿ ಕನ್ನಡ ನಾಮ ಫಲಕಕ್ಕೆ ಮಸಿ; ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು

3 years ago
ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ