• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಾಹುಲ್ ಗಾಂಧಿ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

P K Channakrishna by P K Channakrishna
June 24, 2022
in NATION, STATE
Reading Time: 1 min read
0
ರಾಹುಲ್ ಗಾಂಧಿ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
917
VIEWS
FacebookTwitterWhatsuplinkedinEmail

ನನ್ನ ಸರಕಾರ ತೆಗೆದಂತೆ ಮಹಾರಾಷ್ಟ್ರ ಸರಕಾರವನ್ನು ತೆಗೆಯಲು ಹೊರಟಿದ್ದಾರೆ ಎಂದ ಮಾಜಿ ಸಿಎಂ

ರಾಮನಗರ: ಕಾಂಗ್ರೆಸ್ ಬಗ್ಗೆ ಆಗಲಿ ಅಥವಾ ರಾಹುಲ್ ಗಾಂಧಿ ಅವರ ಬಗ್ಗೆ ಆಗಲಿ ನನಗೆ ಸಾಫ್ಟ್ ಕಾರ್ನರ್ ಇಲ್ಲ. ನಾನು ಇದ್ದ ವಿಷಯವನ್ನೇ ಹೇಳಿದ್ದೇನೆ. ಕಾಂಗ್ರೆಸ್ ನಾಯಕರ ರೀತಿ ನಾನು ಬೀದಿಯಲ್ಲಿ ಬ್ಯಾರಿಕೇಡ್ ಹತ್ತಿ ಡಾನ್ಸ್ ಮಾಡುವುದಕ್ಕೆ ಹೋಗಬೇಕೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ಇ‌ಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇರುವಂತಹ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜತೆ ರಾಜಿಯಾಗಲಿ ಅಥವಾ ಅನುಕಂಪದ ಪ್ರಶ್ನೆ ಇಲ್ಲ ಎಂದರು.

ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ವಾಯುತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡ್ತಿವೆ ಎಂಬುದನ್ನು ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಒಲೈಸಿಕೊಳ್ಳಲು ಹೇಳಿಲ್ಲ ಎಂದು ಅವರು ಹೇಳಿದರು.

ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೇ ನನಗೆ ಪೋನ್ ಮಾಡಿ ಶಹಬ್ಬಾಸ್ ಗಿರಿ ಹೇಳಿದರು. ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದರು. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್ ನವರು. ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೇಯೆ ಇಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇನೆ. ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ ಎಂದು ಅವರು ಹೇಳಿದರು.

ಇದು ಬಿಜೆಪಿಯದ್ದೇ ಆಟ

ಮಹಾರಾಷ್ಟ್ರದಲ್ಲಿ ಸರ್ಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ನಮ್ಮ ಶಾಸಕರನ್ನು ಮುಂಬೈಗೆ ಕರೆದೊಯ್ದಿದ್ದರು. ಇದು ಕರ್ನಾಟಕದಲ್ಲಿ ನನ್ನ ಸರ್ಕಾರವನ್ನು ತೆಗೆದಂತೆ ಅಲ್ಲಿನ ಸರ್ಕಾರವನ್ನು ಕೊಡ ತೆಗೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಶಾಸಕರು ಒಂದು ಪಕ್ಷ ಬಿಟ್ಟು ಇನ್ನೊಂದು ಪಕ್ಷಕ್ಕೆ ಹೋಗಬೇಕಾದರೆ ಯಾವ ಆಮಿಷಗಳು ಇರುತ್ತವೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ ಕಾರಣಗಳು ಬೇರೆ ಬೇರೆ ಕೊಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಯಾರ ಸರ್ಕಾರ ಇರಬಾರದೆಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಒಳಗೊಂಡಂತೆ ಎಲ್ಲಾ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ. ಮುಂದಿನ ದಿನಗಳಲ್ಲಿ ಅವರಿಗೆ ಇದೇ ಬೂಮ್ ರಂಗ್ ಆಗಲಿದೆ ಎಂದು ಮಹಾರಾಷ್ಟ್ರ ಬೆಳವಣಿಗೆಗಳ ಬಗ್ಗೆ ಹೆಚ್‌ಡಿಕೆ ಅವರು ಅಭಿಪ್ರಾಯಪಟ್ಟರು.

ಶಿವಸೇನೆಯ ನಾಯಕ ಏಕನಾಥ್ ಶಿವಸಿಂಧೆ ಏನೇ ಹೇಳಲಿ, ಏಕನಾಥ್ ಶಿಂಧೆ ಶಿವಸೇನೆ ನಮ್ಮದೆಂದು ಕ್ಲೈಮ್ ಮಾಡಬಹುದು. ಸಂಖ್ಯಾಬಲದ ಆಧಾರದ ಮೇಲೆ ಅವರು ಕ್ಲೈಮ್ ಮಾಡಬಹುದು. ಚುನಾವಣೆಗೆ ಹೋದಾಗ ಬೇರೆಯದ್ದೇ ನಡೆಯುತ್ತದೆ. ಶಿವಸೇನೆಯ ಸಂಸ್ಥಾಪಕರು ಮತ್ತು ಯಾರು ಯಾರು ಪಕ್ಷಕ್ಕೆ ದುಡಿದಿದ್ದಾರೆ? ಯಾರು ಪಕ್ಷವನ್ನು ಕಟ್ಟಿದ್ದಾರೆ. ಕಾರ್ಯಕರ್ತರು ಯಾರ ಜೊತೆಗೆ ನಿಲ್ಲುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಇವೆಲ್ಲದರ ಮೇಲೆ ಮುಂದಿನ ಬೆಳವಣಿಗೆ ತೀರ್ಮಾನವಾಗುತ್ತದೆಂಬುದು ನನ್ನ ಅಭಿಪ್ರಾಯ ಎಂದರು ಅವರು.

Tags: cknewsnowCongresshd kumaraswamyindiajdsRahul Gandhi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಾಲನೆ ವೇಳೆಯೇ ಹೊತ್ತಿ ಉರಿದ ದ್ವಿಚಕ್ರ ವಾಹನ; ಇಬ್ಬರಿಗೆ ತೀವ್ರ ಗಾಯ

ಚಾಲನೆ ವೇಳೆಯೇ ಹೊತ್ತಿ ಉರಿದ ದ್ವಿಚಕ್ರ ವಾಹನ; ಇಬ್ಬರಿಗೆ ತೀವ್ರ ಗಾಯ

Leave a Reply Cancel reply

Your email address will not be published. Required fields are marked *

Recommended

#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

ಎರಡು ಬಾರಿ ಸ್ಪೀಕರ್‌ ಆಗಿದ್ದವರ ಅಸಭ್ಯ ಹೇಳಿಕೆ; ವಿಕೃತಿಯ ಪರಮಾವಧಿ

4 years ago
ಮರೆಯಬೇಡಿ ಮಕ್ಕಳ ಲಸಿಕೆ

ಹನಿ ರಕ್ತವೂ ಅಮೃತಸ್ವರೂಪ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ