• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ

cknewsnow desk by cknewsnow desk
August 17, 2022
in CHIKKABALLAPUR, STATE
Reading Time: 1 min read
0
ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ
1.5k
VIEWS
FacebookTwitterWhatsuplinkedinEmail

ಹೆತ್ತವರನ್ನೇ ಗೋಳೊಯ್ದುಕೊಂಡ ಪುತ್ರಿಯರಿಗೆ ಪಾಠ ಕಲಿಸಿದ ಎಸಿ!

by Guna Chikkaballapura

ಚಿಕ್ಕಬಳ್ಳಾಪುರ: ಅಧಿಕಾರಶಾಹಿಯ ಅಬ್ಬರಕ್ಕೆ ಸದಾ ನಲುಗುವ ಜನರಿಗೆ ಮರುಭೂಮಿಯ ಓಯೆಸಿಸ್‌ʼನಂತೆ ಇಲ್ಲೊಬ್ಬರು ಅಧಿಕಾರಿ ಇದ್ದಾರೆ! ಇದು ಅಚ್ಚರಿಯಾದರೂ ಹೌದು!!

ಅಂದಹಾಗೆ; ಅವರ ಹೆಸರು ಡಾ.ಜಿ ಸಂತೋಷ್ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲೆಯ ಉಪ ವಿಭಾಗಾಧಿಕಾರಿ.

ಏನಿದು ಸ್ಟೋರಿ? ಮುಂದೆ ಓದಿ..

ಮಕ್ಕಳಿಗೆ ಆಸ್ತಿ ದಾನ ಮಾಡಿ ಬೀದಿಗೆ ಬಿದ್ದಿದ್ದ ವೆಂಕಟೇಶಾಚಾರಿ, ಪದ್ಮಾವತಮ್ಮ ಎಂಬ ವೃದ್ದ ದಂಪತಿಯ ಪರ ಆದೇಶ ನೀಡಿ ಆಸರೆಯಾದ ಉಪ ವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಅವರ ಕಾರ್ಯವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬದುಕಿನ ಸಂಧ್ಯಾಕಾಲದಲ್ಲಿ ನೊಂದು, ಬೆಂದವರ ಬಾಳಿಗೆ “ಸಂತೋಷ”ದ ಹೊನಲು ನೀಡಿದ ಡಾ.ಜಿ.ಸಂತೋಷ್ ಕುಮಾರ್ ಅವರ ಕಾಳಜಿ ಬಗ್ಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ತಮಗೆ ಹೆಣ್ಣು ಮಕ್ಕಳಾದರೂ ಅವರನ್ನು ಅಕ್ಕರೆಯಿಂದ ಸಾಕಿ, ಸಲುಹಿ ಉತ್ತಮ ಬದುಕು ರೂಪಿಸಿಕೊಟ್ಟಿದ್ದರು. ಇಳಿ ವಯಸ್ಸಿನಲ್ಲಿ ಆಸ್ತಿ ನಮಗ್ಯಾಕೆ ಎಂದು ಇದ್ದ ಕೋಟಿ ಬೆಲೆಯ ಆಸ್ತಿಯನ್ನು ಮಕ್ಕಳಿಗೆ ಹಂಚಿದ್ದರು. ಆದರೆ ಹೆತ್ತವರು ಎನ್ನುವುದನ್ನೇ ಮರೆತ ಪುತ್ರಿಯರು ಅವರನ್ನು ಮೂಲೆಗೆ ತಳ್ಳಿ, ಅವರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಟ್ಟಿದ್ದರು. ಇದನ್ನು ಗಂಭೀರವಾಗಿ ಪರಿಣಿಸಿದ ಡಾ.ಸಂತೋಷ್ ಕುಮಾರ್ ಅವರು ವೃದ್ದರ ಪರವಾಗಿ ಆದೇಶ ನೀಡುವುದರ ಮೂಲಕ ಆದೇಶ ಪ್ರತಿಯೊಂದಿಗೆ ಸ್ವಾತಂತ್ರ್ಯ ದಿನದಂದೇ ಆ ವೃದ್ದರ ಮನೆಗೆ ಭೇಟಿ ನೀಡಿ ಆಸ್ತಿಯನ್ನು ಮರಳಿಕೊಡುವ ಆದೇಶ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಅಜಾದ್ ಚೌಕ್ʼನ 87 ವರ್ಷದ ವೆಂಕಟೇಶಾಚಾರ್, 67 ವರ್ಷದ ಪದ್ಮಾವತಮ್ಮ ಅವರು ತಮ್ಮ ಮೂವರು ಪುತ್ರಿಯರಿಗೆ ಸರಿ ಸುಮಾರು ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನು ದಾನವಾಗಿ ನೀಡಿದ್ದರು. ಆದರೆ ಮಕ್ಕಳು ಬದುಕಿಗೆ ಮುಳ್ಳಾಗಿದ್ದರಿಂದ ನೊಂದ ದಂಪತಿಗಳು ನ್ಯಾಯಕ್ಕಾಗಿ ಕಂದಾಯ ಅಧಿಕಾರಿಗಳ ಮೊರೆ ಹೋಗಿದ್ದರು. ಪರಿಣಾಮ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಚಿಕ್ಕಬಳ್ಳಾಪುರದ ಎಸಿ ಡಾ.ಜಿ.ಸಂತೋಷ್ ಕುಮಾರ್ ಅವರು ಹಿರಿಯ ನಾಗರೀಕ ಪೋಷಣೆ ಮತ್ತು ಶ್ರೇಯೋಭಿವೃದ್ದಿ ಹಾಗೂ ಸಂರಕ್ಷಣೆ ಕಾಯ್ದೆ-2007ರ ಅಡಿ ಜೀವನ ನಿರ್ವಹಣೆ ಕಲಂ 23ರ ಪ್ರಕಾರ ಮಕ್ಕಳಿಗೆ ಮಾಡಿದ್ದ ದಾನಪತ್ರವನ್ನ ರದ್ದುಪಡಿಸಿ, ಪೋಷಕರಿಗೆ ಮಕ್ಕಳು ಮಾಸಿಕ ತಲಾ 7 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಕಟ್ಟಪ್ಪಣೆ ಮಾಡಿದ್ದಾರೆ. ಜತೆಗೆ ಪೋಷಕರಿಗೆ ಕಿರುಕುಳ ನೀಡದೇ ನೆಮ್ಮದಿಯ ಬದುಕು ರೂಪಿಸುವಂತೆ ಆದೇಶಿಸಿದ್ದಾರೆ.

ಸ್ವಾತಂತ್ರ್ಯ ದಿನದಂದೇ ಆದೇಶ

ಸ್ವಾತಂತ್ರ್ಯದ ದಿನಾಚರಣೆಯಂದು ಖುದ್ದು ವೃದ್ದ ದಂಪತಿಗಳ ಮನೆಗೆ ತೆರಳಿದ ಎಸಿ ಸಂತೋಷ್ ಕುಮಾರ್ ಹಾಗೂ ಪತ್ನಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯೂ ಆಗಿರುವ ಡಾ.ಬಿ.ಎಸ್.ಹೇಮಲತಾ ಅವರು ಫಲ ತಾಂಬೂಲದೊಂದಿಗೆ ಆದೇಶ ಪತ್ರವನ್ನು ವೃದ್ದ ದಂಪತಿಗಳಿಗೆ ನೀಡಿದರು. ಹೆತ್ತ ಮಕ್ಕಳು, ರಕ್ತ ಸಂಬಂಧಿಕರೇ ಮನೆಯಿಂದ ಹೊರ ಹಾಕಿದ್ದರೂ, ಯಾವುದೇ ಸಂಬಂದವಿಲ್ಲದ ಕಂದಾಯ ಅಧಿಕಾರಿಗಳ ಕಾಳಜಿ ಹಾಗೂ ಕಾರ್ಯಕ್ಷಮತೆಯನ್ನು ಕಂಡು ವೃದ್ಧ ದಂಪತಿ ಕಣ್ಣೀರಾಗಿದ್ದಾರೆ. ಅವರಲ್ಲಿ ಕಂಡ ಆನಂದ ಬಾಷ್ಪ ಅಧಿಕಾರಿಗಳ ಹೃದಯವನ್ನು ಕರಗಿಸಿದೆ.

ಮಕ್ಕಳಿಗೆ ಮಾಡಿದ್ದ ದಾನಪತ್ರವನ್ನು ರದ್ದು ಮಾಡಿಕೊಡುವಂತೆ ವೃದ್ದ ದಂಪತಿಗಳು ಕಳೆದ ವರ್ಷ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಮಕ್ಕಳಿಂದ ತಾವು ಅನುಭವಿಸುತ್ತಿರುವ ನೋವನ್ನು ಪತ್ರಿಕಾ ಹೇಳಿಕೆಯ ಮೂಲಕ ತೋಡಿಕೊಂಡಿದ್ದರು. ಇದನ್ನೆಲ್ಲಾ ಗಮನಿಸಿ ದಾಖಲೆಗಳ ಅನುಸಾರ ಕಾನೂನುಬದ್ಧವಾಗಿ ನೊಂದ ವೃದ್ದ ದಂಪತಿಗಳ ಪರವಾಗಿ ಆದೇಶ ಮಾಡಿದ್ದೇನೆ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದಂದು ಅವರ ಮನೆಗೆ ತೆರಳಿ ಆದೇಶ ಪತ್ರ ನೀಡಿ ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿರ್ವಹಿಸಿದ್ದೇನೆ.

-ಡಾ.ಜಿ.ಸಂತೋಷ್ ಕುಮಾರ್, ಉಪ ವಿಭಾಗಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ
Tags: accknewsnowkarnatakarevenue department
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಾಮಾಜಿಕ ಅಭಿವೃದ್ದಿಗೆ ಕಾರ್ಪೊರೇಟ್ ಸಹಕಾರ ಅಗತ್ಯ

ಸಾಮಾಜಿಕ ಅಭಿವೃದ್ದಿಗೆ ಕಾರ್ಪೊರೇಟ್ ಸಹಕಾರ ಅಗತ್ಯ

Leave a Reply Cancel reply

Your email address will not be published. Required fields are marked *

Recommended

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

1 year ago
ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ