• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಗುಲಾಂನಬಿ ನಿರ್ಗಮನ; ಕಾಂಗ್ರೆಸ್‌ನಲ್ಲಿ ಕಂಪನ

P K Channakrishna by P K Channakrishna
August 26, 2022
in NATION, POLITICS, STATE
Reading Time: 1 min read
0
ಗುಲಾಂನಬಿ ನಿರ್ಗಮನ; ಕಾಂಗ್ರೆಸ್‌ನಲ್ಲಿ ಕಂಪನ

Photo: Wikipedia

921
VIEWS
FacebookTwitterWhatsuplinkedinEmail

ಆಜಾದ್‌ ಅಡ್ಜಸ್ಟ್‌ಮೆಂಟ್‌ ರಾಜಕಾರಣ ಗೊತ್ತಿತ್ತು ಎನ್ನುತ್ತಿದೆ ಕಾಂಗ್ರೆಸ್

ರಾಹುಲ್‌ ಗಾಂಧಿ

ನವದೆಹಲಿ: ಬರೋಬ್ಬರಿ 49 ವರ್ಷಗಳ ಕಾಂಗ್ರೆಸ್‌ ಸಖ್ಯವನ್ನು ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ತೊರೆಯುವುದರೊಂದಿಗೆ ಆ ಪಕ್ಷಕ್ಕೆ ದೊಡ್ಡ ಆಘಾತ ಉಂಟಾಗಿದೆ.

1973ರಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿ ಆಗಿ ಕಾಂಗ್ರೆಸ್‌ ಪಕ್ಷದಲ್ಲಿ ರಾಜಕಾರಣ ಆರಂಭಿಸಿದ್ದ ಆಜಾದ್‌ ಈಗ ರಾಹುಲ್‌ ಗಾಂದಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮುನಿಸಿಕೊಂಡು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ದುರ್ಬಲವಾಗಿರುವ ಕಾಂಗ್ರೆಸ್‌ ಪಕ್ಷಕ್ಕೆ ಈ ಹೊಸ ಶಾಕ್‌ ಭಾರೀ ಪೆಟ್ಟು ನೀಡಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಬಂಡೆದ್ದಿರುವ ಆಜಾದ್ ಅವರು ಇಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ ಶಾಶ್ವತವಾಗಿ ಪಕ್ಷವನ್ನು ತೊರೆದಿದ್ದಾರೆ. ತಮ್ಮ ರಾಜೀನಾಮೆ ನಂತರ ಮಾತನಾಡಿದ ಆಜಾದ್‌, ಮುಖ್ಯವಾಗಿ ರಾಹುಲ್‌ ಗಾಂಧಿ ವಿರುದ್ಧ ಭಾರೀ ಪ್ರಮಾಣದಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

“ಕಳೆದ 8 ವರ್ಷಗಳಿಂದ ತೀರಾ ಗಂಭೀರವಲ್ಲದ ವ್ಯಕ್ತಿಯೊಬ್ಬರ ಕೈಗೆ ಪಕ್ಷದ ನಾಯಕತ್ವದ ಚುಕ್ಕಾಣಿ ನೀಡಲು ಇನ್ನಿಲ್ಲದ ಪ್ರಯತ್ನಗಳು ನಡೆದವು” ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಯನ್ನು ಉಲ್ಲೇಖಿಸಿ ರಾಜಿನಾಮೆಗೆ ಕಾರಣವನ್ನು ಗುಲಾಂನಬಿ ಅಜಾದ್ ತಿಳಿಸಿದ್ದಾರೆ. ಐದು ಪುಟಗಳ ರಾಜಿನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ದುಷ್ಟರ ಕೂಟವಿದೆ. ರಿಮೋಟ್ ಕಂಟ್ರೋಲ್ ವ್ಯವಸ್ಥೆಯಿಂದ ಪಕ್ಷದ ನಾಯಕತ್ವದಲ್ಲಿದ್ದ ಯುಪಿಎ ಒಕ್ಕೂಟ ನಾಮಾವಶೇಷವಾಗಿದೆ ಎಂದು ಗುಲಾಂ ನಬಿ ಆಜಾದ್ ಅವರು ಕಿಡಿಕಾರಿದ್ದಾರೆ.

ಆಜಾದ್ ಅವರ ರಾಜೀನಾಮೆ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಮಾಜಿ ಶಾಸಕರಾದ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ, ಜಿ.ಎಂ.ಸರೂರಿ, ಹಾಜಿ ಅಬ್ದುಲ್ ರಶೀದ್, ಚೌಧರಿ ಮೊಹಮ್ಮದ್ ಅಕ್ರಂ ಹಾಗೂ ಮೊಹಮ್ಮದ್ ಅಮೀನ್ ಭಟ್ ಕೂಡ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಕಣಿವೆ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಇದು ದೊಡ್ಡ ನಷ್ಟ ಎಂದು ಹೇಳಲಾಗುತ್ತಿದೆ. ಇವರ ಜತೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆರ್.ಎಸ್.ಚಿಬ್ ಅವರೂ ರಾಜಿನಾಮೆ ನೀಡಿದ್ದಾರೆ.

ಹೊಸ ಪಕ್ಷ ಸ್ಥಾಪನೆ

ಪ್ರಧಾನಿ ಮೋದಿ ಅವರಿಗೆ ಆಪ್ತರಾದ ಆಜಾದ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಈ ಸುದ್ದಿಗಳಿಗೆ ತೆರೆ ಎಳೆದು; “ಬಿಜೆಪಿ ಸೇರುವುದಿಲ್ಲ. ಹೊಸ ಪಕ್ಷ ಕಟ್ಟುತ್ತೇನೆ” ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಆಜಾದ್‌ ಪಕ್ಷದ ತೊರೆದ ಬಗ್ಗೆ ಕಾಂಗ್ರೆಸ್‌ʼನಲ್ಲಿ ಅಂಥ ಅಚ್ಚರಿಯೇನೂ ಆಗಿಲ್ಲ ಎಂದು ಆಂತರಿಕ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ.

“ಗುಲಾಂನಬಿ ಆಜಾದ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯ ಎಂಥದ್ದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆಜಾದ್‌ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಮುಕ್ತಾಯವಾದಾಗ ಸ್ವತಃ ಮೋದಿ ಅವರು ಆಜಾದ್‌ ಗುಣಗಾನ ಮಾಡಿ ಸದನದಲ್ಲೇ ಕಣ್ಣೀರಧಾರೆ ಹರಿಸಿದ್ದರು. ಆ ಬೆಳವಣಿಗೆ ಅಂದು ಪಕ್ಷದಲ್ಲಿ ಎಲ್ಲರ ಅಚ್ಚರಿಗೂ ಕಾರಣವಾಗಿತ್ತು. ಆಮೇಲೆ ಆಜಾದ್‌ ನಡವಳಿಕೆಗಳು ಬದಲಾದವು. 2022ರಲ್ಲಿ ಅವರಿಗೆ ʼಪದ್ಮಭೂಷಣʼಪುರಸ್ಕಾರವನ್ನು ಘೋಷಣೆ ಮಾಡಿದಾಗ ಇನ್ನಷ್ಟು ಗೊಂದಲಗಳಿಗೆ ಕಾರಣವಾಯಿತು. ಬಿಜೆಪಿ, ನರೇಂದ್ರ ಮೋದಿ ಹಾಗೂ ಆಜಾದ್‌ ನಡುವಿನ ಸಂಬಂಧಗಳು ಏನು ಎಂಬ ಬಗ್ಗೆ ಅವರ ನಿರ್ಗಮನ ಉತ್ತರ ಕೊಟ್ಟಿದೆ” ಎಂದು ಮೂಲವೊಂದು ತಿಳಿಸಿದೆ.

ಅಷ್ಟು ಮಾತ್ರವಲ್ಲ; ಸಂಸತ್ತಿನ ಒಳಗೆ ಮತ್ತು ಹೊರಗೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹೋರಾಟ ನಡೆಸುತ್ತಿದ್ದರೆ ಆಜಾದ್‌ ಅವರು ನರೇಂದ್ರ ಮೋದಿ ಅವರ ಜತೆ ಅಡ್ಜಸ್ಟ್‌ʼಮೆಂಟ್‌ ರಾಜಕಾರಣ ಮಾಡುತ್ತಿದ್ದರು ಎಂದು ಆ ಮೂಲಗಳು ಹೇಳಿವೆ.

ಇನ್ನೊಂದೆಡೆ ಪಕ್ಷದ ಕೆಲ ನಾಯಕರು ಆಜಾದ್‌ ವಿರುದ್ಧ ಮುಗಿಬಿದ್ದಿದ್ದಾರೆ. “ರಾಜ್ಯಸಭಾ ಅಧಿಕಾರಾವಧಿಯ ಅಂತ್ಯಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿ ದ್ರೋಹ ಬಗೆದಿರುವುದು ಅವರ ನಿಜವಾದ ವ್ಯಕ್ತಿತ್ವವನ್ನು ತೋರಿಸುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿ ಟೀಕಿಸಿದ್ದಾರೆ.

“ಕಾಂಗ್ರೆಸ್ ನಾಯಕತ್ವದಿಂದ ಅತ್ಯಂತ ಗೌರವದಿಂದ ನಡೆಸಿಕೊಳ್ಳಲ್ಪಟ್ಟ ವ್ಯಕ್ತಿಯೊಬ್ಬರು ತಮ್ಮ ಕೆಟ್ಟ ವೈಯಕ್ತಿಕ ದಾಳಿಯಿಂದ ದ್ರೋಹ ಬಗೆದಿದ್ದಾರೆ. ಇದು ಅವರ ನೈಜ ಸ್ವರೂಪವನ್ನು ಬಹಿರಂಗಪಡಿಸುತ್ತದೆ. ಗುಲಾಂ ನಬಿ ಆಜಾದ್ ಡಿಎನ್ಎ ಮೋದಿ-ಫೈಡ್ ಆಗಿದೆ” ಎಂದು ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ.

Tags: CongressGhulam Nabi AzadRahul Gandhiresignationsonia gondhi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಬಿಜೆಪಿ ಸರಕಾರ ಕಡು ಭ್ರಷ್ಟ ಸರಕಾರ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಪ್ರಥಮ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ?

ಪ್ರಥಮ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ?

3 years ago
ಮೈಸೂರಿನ ಪಾಲಿಕೆ ಆಯುಕ್ತೆ, ಐಎಎಸ್‌ ಅಧಿಕಾರಿ ಶಿಲ್ಪಾ ನಾ‌ಗ್ ಅವರಿಗೆ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟ ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ

ಮೈಸೂರಿನ ಪಾಲಿಕೆ ಆಯುಕ್ತೆ, ಐಎಎಸ್‌ ಅಧಿಕಾರಿ ಶಿಲ್ಪಾ ನಾ‌ಗ್ ಅವರಿಗೆ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟ ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ