• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮುಖ್ಯಮಂತ್ರಿಗೇ ಸುಳ್ಳು ಮಾಹಿತಿ ಕೊಟ್ಟ ಸಚಿವ ಮುನಿರತ್ನ!

cknewsnow desk by cknewsnow desk
August 26, 2022
in EDITORS'S PICKS, STATE
Reading Time: 3 mins read
0
ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಮುನಿರತ್ನ

1.1k
VIEWS
FacebookTwitterWhatsuplinkedinEmail

40% ಕಮಿಷನ್ ಉರುಳು: ಕೆಂಪಣ್ಣ ಆರೋಪದಿಂದ ತಪ್ಪಿಸಿಕೊಳ್ಳಲು ಕಥೆ ಕಟ್ಟಿದರಾ ಕೋಲಾರ ಜಿಲ್ಲಾ ಉಸ್ತುವಾರಿ ಮಂತ್ರಿ!!

by SK Chandrashekar Kolar

ಬೆಂಗಳೂರು/ಕೋಲಾರ: ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಕಮಿಷನ್ ಕಲೆಕ್ಷನ್ ಆರೋಪಕ್ಕೆ ಗುರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು, ಸ್ವತಃ ಮುಖ್ಯಮಂತ್ರಿಗಳಿಗೇ ಸುಳ್ಳು ಮಾಹಿತಿ ನೀಡಿ ಯಾಮಾರಿಸಿರುವುದು ಬೆಳಕಿಗೆ ಬಂದಿದೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮುನಿರತ್ನ ಅವರ ವಿರುದ್ಧ ಕಮಿಷನ್ ಕಲೆಕ್ಷನ್ ಆರೋಪ ಮಾಡಿರುವ ಬೆನ್ನಲ್ಲೇ, ಅದೇ ಸಚಿವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಳ್ಳು ಮಾಹಿತಿ ನೀಡಿರುವ ಅಂಶ ಬಯಲಿಗೆ ಬಂದಿದ್ದು, ಇದು ಎಲ್ಲರ ಹುಬ್ಬೇರಿಸಿದೆ. ಬಿಜೆಪಿ ವಲಯದಲ್ಲಿ ಕೆಲವರಿಗೆ ಈ ಮಾಹಿತಿ ಗೊತ್ತಾಗಿದೆ.

ಏನಿದು ಪತ್ರ?

ಅಗಸ್ಟ್ 26ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಮುನಿರತ್ನ ಅವರು, ಅಗಸ್ಟ್ 22 ಮತ್ತು 23ರಂದು ಕೋಲಾರಕ್ಕೆ ಭೇಟಿ ಕೊಟ್ಟಿರುವುದಾಗಿ, ಸ್ಥಳ ಪರಿಶೀಲನೆ ಮಾಡಿದಾಗ ಯಾವುದೇ ಗುಂಡಿಗಳು ಇರಬಾರದೆಂದು ಮೌಖಿಕವಾಗಿ ಸೂಚಿಸಿದ್ದೆ ಎಂದು ಬರೆಯಲಾಗಿದ್ದು, ಅಲ್ಲದೆ; ಕಾಮಗಾರಿಯ ಗುಣಮಟ್ಟ ಪರಿಶೀಲಿಸಿರುವುದಾಗಿ ಪತ್ರದಲ್ಲಿ ಬರೆದು ತಿಳಿಸಿದ್ದಾರೆ. ಆದರೆ, ಈ ಅಧಿಕೃತ ಪತ್ರದಲ್ಲಿ ಅವರು ಕೊಟ್ಟಿರುವ ಮಾಹಿತಿ ಎಲ್ಲವೂ ಸುಳ್ಳು ಎಂದು ಗೊತ್ತಾಗಿದೆ.

ಮುಖ್ಯಮಂತ್ರಿಗಳಿಗೆ ಮುನಿರತ್ನ ಅವರು ಬರೆದಿರುವ ಪತ್ರ.

ಏಕೆಂದರೆ, ಆ ಸಭೆಯನ್ನು ಸಚಿವರು ನಡೆಸಿಯೇ ಇಲ್ಲ ಹಾಗೂ ಅಂದು ಅವರು ಕೋಲಾರ ನಗರಕ್ಕೆ ಭೇಟಿಯನ್ನೇ ನೀಡಿಲ್ಲ. ಅಲ್ಲದೆ, ಅಗಸ್ಟ್ 23ರಂದಿನ ಸಚಿವರ ಕೋಲಾರದ ಭೇಟಿ ರದ್ದು ಮಾಡಿರುವುದಾಗಿ ಖುದ್ದು ಜಿಲ್ಲಾಡಳಿತವೇ ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿತ್ತು. ಅಂದರೆ, ಅಗಸ್ಟ್ 22 ಮತ್ತು 23ರಂದು ಸಚಿವ ಮುನಿರತ್ನ ಅವರು ಕೋಲಾರಕ್ಕೆ ಬಂದೇ ಇಲ್ಲ.

ಸಚಿವರ ಭೇಟಿಯ ಬಗ್ಗೆ ಕೋಲಾರ ಜಿಲ್ಲೆಯ ಇಲಾಖೆ ಕಳಿಸಿರುವ ಸಂದೇಶ.

ಹಾಗಾದರೆ ಎಲ್ಲಿ ಹೋಗಿದ್ದರು ಸಚಿವರು?

ಕೋಲಾರದ ಸಭೆಗೆ ಚಕ್ಕರ್ ಹಾಕಿ ಸಚಿವ ಮುನಿರತ್ನ ಅವರು ಅಂದು (ಅ.23) ಉನ್ನತ ಶಿಕ್ಷಣ ಸಚಿವ ಮುನಿರತ್ನ ಅವರು ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜತೆಯಲ್ಲಿ ದೆಹಲಿಗೆ ತೆರಳಿದ್ದರು. ಅದೇ ದಿನ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿಯಾಗಿದ್ದರು. ಆ ಕುರಿತು ರಾಜೀವ್‌ ಚಂದ್ರಶೇಖರ್‌ ಅವರು ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಅದನ್ನು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಮ್ಮ ಅಧಿಕೃತ ಟ್ವೀಟ್‌ನಲ್ಲಿ ರೀ ಟ್ವೀಟ್ ಮಾಡಿದ್ದಾರೆ. ಅಲ್ಲಿ ಲಭ್ಯವಾಗಿರುವ ಫೋಟೋದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಇನ್ನಿತರರು ಇದ್ದಾರೆ.

Dr. Ashwathnarayan C.N. @drashwathcn Ji, Minister for Higher Education, IT & BT, Science & Technology, Skill Development, Entrepreneurship & Livelihood, Government of #Karnataka met me at my office @GoI_MeitY today. pic.twitter.com/CHh2yAqLv1

— Rajeev Chandrasekhar 🇮🇳(Modiyude Kutumbam) (@Rajeev_GoI) August 23, 2022

ಇನ್ನು ಅಗಸ್ಟ್ 22ರಂದು ಕೂಡ ಮುನಿರತ್ನ ಅವರು ಕೋಲಾರಕ್ಕೆ ಬಂದಿಲ್ಲ. ಬದಲಿಗೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದ ಕನಕ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಶ್ರೀಗಳು ಸಾನ್ನಿಧ್ಯ ವಹಿಸಿ, ಸಚಿವರಾದ ವಿ.ಸೋಮಣ್ಣ, ಭೈರತಿ ಬಸವರಾಜು, ಸಂಸದ ತೇಜಸ್ವಿ ಸೂರ್ಯ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ್ಯ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅಡಿಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಗರಭಾವಿ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಿರುವ 'ಕನಕ ಭವನ' ಉದ್ಘಾಟನೆ ಮತ್ತು ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. pic.twitter.com/t08nquQF8G

— Munirathna (@MunirathnaMLA) August 21, 2022

ಆದರೆ, ಮುನಿರತ್ನ ಅವರು ಇಷ್ಟೆಲ್ಲಾ ಪುರಾವೆಗಳು ಇದ್ದರೂ, ತಾವು ಎರಡು ದಿನ ಕೋಲಾರಕ್ಕೆ ಹೋಗಿ ಸಭೆಗಳನ್ನು ನಡೆಸಿರುವುದಾಗಿ ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುನಿರತ್ನ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಸಿಕೆನ್ಯೂಸ್ ನೌ ಗೆ ಲಭ್ಯವಾಗಿದೆ.

ಅಲ್ಲದೆ, ಮುನಿರತ್ನ ಅವರು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟವಾಗಿದ್ದ ಚಿತ್ರಗಳು ಹಾಗೂ ಸ್ಕ್ರೀನ್ ಶಾಟ್ ಗಳು ಹಾಗೂ ಗೋವಿಂದರಾಜ ನಗರದಲ್ಲಿ ಅವರು ಪಾಲ್ಗೊಂಡಿದ್ದ, ಸ್ವತಃ ಮುನಿರತ್ನ ಅವರ ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದ್ದ ಚಿತ್ರಗಳನ್ನು ಇಲ್ಲಿ ಪ್ರಕಟಿಸಲಾಗಿದೆ.

ಕೆಂಪಣ್ಣ ಅವರು ಸಚಿವ ಮುನಿರತ್ನ ಅವರ ವಿರುದ್ಧ ಮಾಡಿರುವ ಆರೋಪಗಳಿಂದ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಹಾಗೆಯೇ, ಕ್ಯಾಬಿನೆಟ್ ಸಚಿವರೊಬ್ಬರು ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿರುವ ಮಾಹಿತಿ ರಾಜ್ಯದ ಹಿರಿಯ ಮುಖಂಡರಿಗೆ ಗೊತ್ತಾಗಿದ್ದು, ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಗೊತ್ತಾಗಿದೆ.

ಶೇ.40ರಷ್ಟು ಲಂಚದ ಆರೋಪಕ್ಕೆ ಗುರಿಯಾಗಿರುವ ಸಚಿವ ಮುನಿರತ್ನ ಅವರು ಗುತ್ತಿಗೆದಾರ ಸಂಘದ ಆರೋಪವನ್ನು ಸುಳ್ಳಾಗಿಸಲು ಕಸರತ್ತು ನಡೆಸುತ್ತಿರುವುದಕ್ಕೆ ಈ ಪ್ರಸಂಗವೊಂದು ಉದಾಹರಣೆ.

ಮತ್ತೊಂದೆಡೆ ವಲಸಿಗ ಸಚಿವರು ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಕೆಂಪಣ್ಣ ಅವರನ್ನು ವಾಚಾಮಗೋಚರವಾಗಿ ನಿಂದನೆ ಮಾಡುತ್ತಿರುವ ಬಗ್ಗೆಯೂ ಪಕ್ಷದಲ್ಲಿ ಅಪಸ್ವರ ಎದ್ದಿದೆ ಎನ್ನಲಾಗಿದೆ.

Tags: 40%40% bribe40% commissioncknewsnowkarnatakakolarKolar incharge ministerminister muniratna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಲಾಂನಬಿ ನಿರ್ಗಮನ; ಕಾಂಗ್ರೆಸ್‌ನಲ್ಲಿ ಕಂಪನ

ಗುಲಾಂನಬಿ ನಿರ್ಗಮನ; ಕಾಂಗ್ರೆಸ್‌ನಲ್ಲಿ ಕಂಪನ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ