• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ; 800 ಕೋಟಿ ಲೂಟಿ

P K Channakrishna by P K Channakrishna
September 5, 2022
in EDITORS'S PICKS, NATION, STATE
Reading Time: 2 mins read
0
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ; 800 ಕೋಟಿ ಲೂಟಿ
923
VIEWS
FacebookTwitterWhatsuplinkedinEmail

ಸಂಸದ ಪ್ರತಾಪ್‌ ಸಿಂಹ ವಿರುದ್ಧ ನೇರ ಆರೋಪ; ಸಿಬಿಐ ತನಿಖೆಗೆ ಮಾಗಡಿ ಶಾಸಕ ಎ.ಮಂಜುನಾಥ್ ಆಗ್ರಹ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್‍ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು.

ಭೂ ಪರಿಹಾರ ಹಾಗೂ ಹೆದ್ದಾರಿ ಅವ್ಯವಹಾರದ ಬಗ್ಗೆ ಇಡಿ ಹಾಗೂ ಸಿಬಿಐ ತನಿಖೆಯಾಗಬೇಕು. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಶಾಸಕರ ನಿಯೋಗ ಸೆಪ್ಟೆಂಬರ್ 7 ರಂದು ದೆಹಲಿಗೆ ತೆರಳಿ ಕೇಂದ್ರದ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದೂರು ನೀಡಿ ಚರ್ಚಿಸಲಾಗುವುದು. ಅದಕ್ಕಾಗಿ ಗಡ್ಕರಿ ಅವರ ಸಮಯವಕಾಶ ಕೇಳಲಾಗಿದೆ ಎಂದು ಹೇಳಿದರು.

ಮಳೆಯಿಂದಾಗಿ ಹೆದ್ದಾರಿ ಹಾನಿಯಾಗಿದೆ. ಇಡೀ‌ ರಸ್ತೆಯುದ್ಧಕ್ಕೂ ಮಳೆಯಿಂದ ನೀರು ತುಂಬಿದೆ. ಆ ಭಾಗದ ರೈತರು, ಜನರಿಗೆ ಅನಾನುಕೂಲವಾಗಿದೆ. ನಾನು ಆ ಭಾಗದ ಜನಪ್ರತಿನಿಧಿಯಾಗಿದ್ದೇನೆ. ನಾವು ಕಳೆದ ನಾಲ್ಕು ವರ್ಷಗಳ ಹಿಂದೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಸಿದ್ದೆವು. ಅವರ ದುರ್ನಡತೆಯಿಂದಾಗಿ ಈ ಸ್ಥಿತಿ ತಲುಪಿದೆ ಎಂದು ಹೆದ್ದಾರಿ ಕಾಮಗಾರಿ ಬಗ್ಗೆ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಾಪ್ ಸಿಂಹ
ಭೂ ಸ್ವಾಧೀನ ಪರಿಹಾರದಲ್ಲೂ ಲೋಪ

ಭೂ ಸ್ವಾಧೀನ ವೇಳೆ ರೈತರ ಮನವೊಲಿಸಿದ್ದೆವು. ಭೂ ಪರಿಹಾರ ಕೊಡಿಸುತ್ತೇವೆಂದು ಮನವಿ ಮಾಡಿದ್ದೆವು. ಎಲ್ಲರ ಸಹಕಾರವನ್ನು ಪಡೆದಿದ್ದೆವು. ಭೂ ಸ್ವಾಧೀನ ಪರಿಹಾರದಲ್ಲೂ ಲೋಪವಾಗಿದೆ. ಹೆದ್ದಾರಿ ಪ್ರಾಧಿಕಾರಕ್ಕೆ ಗಮನಕ್ಕೆ ತಂದರೂ ಪರಿಹಾರ ಆಗಲಿಲ್ಲ. ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಎಂಬ ವ್ಯಕ್ತಿಯಿಂದ ಹೀಗಾಗಿದೆ. ಆ ವ್ಯಕ್ತಿಯಿಂದ ಭೂಮಿ ಕಳೆದುಕೊಂಡ ರೈತರಿಗೆ ಭಾರೀ ಅನ್ಯಾಯ ಆಗಿದೆ ಎಂದು ಆರೋಪಿಸಿದರು.

ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ

ರಸ್ತೆಯಾದರೆ ಒಳ್ಳೆಯದು ಎಂಬ ಕಾರಣಕ್ಕೆ ಸುಮ್ಮನಿದ್ದೆವು. ಸಂಸದ ಪ್ರತಾಪ್ ಸಿಂಹ ಬಂದು ಫೋಸ್ ಕೊಡ್ತಿದ್ರು. ರಸ್ತೆ ನಾವೇ ಮಾಡಿರೋದು ಅಂತ ತಮ್ಮನ್ನು ತಾವೇ ಹೊಗಳಿಕೊಂಡ್ರು. ನಾನು ಪ್ರತಾಪ್ ಸಿಂಹ ಅವರನ್ನು ಕೇಳಲು ಬಯಸುತ್ತೇನೆ, ನೀವು ಯಾರಿಗೆ ಬ್ರಾಂಡ್ ಅಂಬಾಸಿಡರ್ ಹೇಳಿ, ಹೆದ್ದಾರಿ ಮಾಡುವ ಸಂಸ್ಥೆಯವರಿಗಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

10-lane Bengaluru-Mysuru Economic Corridor is being constructed at record speed. Rs 8172 Cr economic corridor is likely to be completed by October 2022. It will reduce the travel time between the two cities by half from current 3 hours to only 90 minutes. #PragatiKaHighway pic.twitter.com/6RW4zv1LnY

— Nitin Gadkari (मोदी का परिवार) (@nitin_gadkari) August 11, 2021

ಅವೈಜ್ಞಾನಿಕವಾಗಿ ಹೆದ್ದಾರಿ ರಸ್ತೆ ನಿರ್ಮಾಣ ಮಾಡಲಾಗಿದೆ. ರಸ್ತೆಯಲ್ಲಿ ಪ್ರಯಾಣಿಕರು ಓಡಾಡುವುದಕ್ಕೂ ಆಗುತ್ತಿಲ್ಲ.ಬಿಡದಿಗೆ ರಸ್ತೆ ಓಪನ್ ಬಿಟ್ಟಿಲ್ಲ. 119 ಕಿ.ಮೀ ರಸ್ತೆಯಲ್ಲಿ ಇಂಟರ್ ಜಂಕ್ಷನ್ ಇಲ್ಲ. ಪ್ರಯಾಣಿಕರಿಗೆ ಟೀ ಕುಡಿಯಲು ವ್ಯವಸ್ಥೆ ಇಲ್ಲ. ಪೆಟ್ರೋಲ್ ಹಾಕಿಸಿಕೊಳ್ಳುವ ವ್ಯವಸ್ಥೆಯೂ ಇಲ್ಲ. ಬೇರೆ ಎಕ್ಸ್ ಪ್ರೆಸ್ ಹೈವೇಗಳನ್ನು ಇದೇ ರೀತಿ ಮಾಡಿದ್ದಾರಾ? ಅಪಘಾತವಾದರೆ ಟ್ರಾಮಾ ಸೆಂಟರ್ ಮಾಡಿಲ್ಲ. ಸಾರ್ವಜನಿಕರಿಗೆ ಇದರಿಂದ ಏನು ಲಾಭ? ನಾವೆಲ್ಲ ಶಾಸಕರು ಬರುತ್ತೇವೆ. ಬನ್ನಿ ರಸ್ತೆ ನೋಡಿ ಎಂದು ಪ್ರತಾಪ್ ಸಿಂಹ ಅವರನ್ನು ಆಹ್ವಾನಿಸಿದರು ಮಂಜುನಾಥ್.

ರಾಮದೇವರ ಬೆಟ್ಟದಿಂದ ನೀರು ಬಂದಿದೆ ಅಂತೀರ, ರಾಮದೇವರ ಬೆಟ್ಟ ಇವತ್ತು ಆಗಿರೋದಾ? ಎಷ್ಟು ಮೆಟ್ರಿಕ್ ಟನ್ ಕಲ್ಲು ಹೊಡೆದಿದ್ದೀರ. ಇದು ನಿಮ್ಮ ನಮ್ಮ‌ ಮನೆ ಹಣ ಅಲ್ಲ. ಸಾರ್ವಜನಿಕರ ತೆರಿಗೆ ಹಣ ಅನ್ನೋದು ನೆನಪಿರಲಿ. 1300 ಕೋಟಿ ರೂ. ತಂದಿದ್ದೇವೆ ಅಂತೀರಲ್ಲ, ಇದು ಆನ್ ಗೋಯಿಂಗ್ ಪ್ರಾಜೆಕ್ಟ್. ನಿಮಗೆ ನಾಚಿಕೆ ಆಗಲ್ವೇ? ದುಡ್ಡು ನೀವು ತಂದು ಮಾಡಿರುವ ರೀತಿ ಹೇಳುತ್ತಿರಾ, ಹತ್ತು ತಿಂಗಳಲ್ಲಿ ರಸ್ತೆ ಬಿಡುಗಡೆ ಮಾಡುತ್ತೇವೆಂದು ಹೇಳಿದಿರಿ, ಎಲ್ಲಿ ಇನ್ನೂ ರಸ್ತೆ ಅಭಿವೃದ್ಧಿಯೇ ಆಗಿಲ್ಲ. ಈ ಹೆದ್ದಾರಿ ಯೋಜನೆಗೆ ನೀವ್ಯಾರು, ಇದರಿಂದ ಲಾಭವೇನು? ಇದರ ಬಗ್ಗೆ ನೀವು ತಿಳಿಸಬೇಕು. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರವಾಗಿದೆ ಎಂದು ಪ್ರಶ್ನಿಸಿದರು.

ರಸ್ತೆಯಲ್ಲಿ ಕೂರುತ್ತೇವೆ

ಹೆದ್ದಾರಿಯಲ್ಲಿ ಕ್ರಾಸಿಂಗ್ ಕೊಟ್ಟಿಲ್ಲ. ನಮ್ಮ‌ಜನ ಎತ್ತಿನ ಗಾಡಿ ಎಲ್ಲಿಂದ ಓಡಿಸಬೇಕು. ಟ್ರ್ಯಾಕ್ಟರ್ ಗಳನ್ನ ಎಲ್ಲಿ ಕ್ರಾಸ್ ಮಾಡಬೇಕು. 50 ಕಡೆ ಕ್ರಾಸಿಂಗ್ ಇವೆ, ಅಲ್ಲಿ ನೀರು ತುಂಬಿವೆ. ಬನ್ನಿ ಎಲ್ಲಿ ಮಿಸ್ಟೇಕ್ ಇದೆ ತೋರಿಸ್ತೇವೆ. ರೈತರಿಗೆ ಬರಬೇಕಾದ ಭೂಪರಿಹಾರ ಕೊಡಿಸಿ. ಭೂ ಪರಿಹಾರ ಕೊಡದೆ ಇದ್ದರೆ ರಸ್ತೆಯಲ್ಲೇ ಕೂರುತ್ತೇವೆ. ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ ಎಂದು ಎಚ್ಚರಿಸಿದರು.

ಒಂದು ಕಿ.ಮೀ ಗೆ 80 ಕೋಟಿ ರೂ. ಖರ್ಚು ಮಾಡಲಾಗಿದೆ. ಇದಲ್ಲದೆ ಇನ್ನೂ ಹೆಚ್ಚಿನ ಹಣ ಖರ್ಚು ಮಾಡಬೇಕು. ಇದು ಡಾಂಬರ್ ರಸ್ತೆಯಾ,ಚಿನ್ನ ಬೆಳ್ಳಿ ಮಾಡಿರೋದಾ? ನಿನ್ನಂತೆ ಫೋಸ್ ಕೊಡೋಕೆ ನಾವು ಬಂದಿಲ್ಲ. ನಮ್ಮ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆ ಇರಲಿ ಎಂದು ಪ್ರತಾಪ್ ಸಿಂಹ ಅವರಿಗೆ ತಿರುಗೇಟು ನೀಡಿದರು.

ಯಾರದ್ದೋ ಭೂಮಿ, ಯಾರಿಗೋ ಪರಿಹಾರ

ಯಾರದ್ದೋ ಭೂಮಿ,ಇನ್ಯಾರಿಗೋ‌ ಪರಿಹಾರ ನೀಡಲಾಗಿದೆ. ಯಾರಿಗೆ ಪರಿಹಾರ ಕೊಟ್ಟಿದ್ದಾರೆ. ಭೂ ಪರಿಹಾರ ಕೇಳಿದರೆ ಜೈಲಿಗೆ ಹಾಕಿಸ್ತಾರಂತೆ. ಮೈಸೂರಿನಿಂದ ಬೆಂಗಳೂರಿಗೆ ಬರುವಾಗ ಪ್ರತಾಪ್ ಸಿಂಹ ಬಿಡದಿಗೆ ಬರಬೇಕು. ಬಿಡದಿಗೆ ಬನ್ನಿ ನಾವು‌ ನೋಡಿಕೊಳ್ತೇವೆ ಎಂದು ಗುಡುಗಿದರು ಮಂಜುನಾಥ್.

ಹೆದ್ದಾರಿ ಯೋಜನೆಯಲ್ಲಿ ಸುಮಾರು 800 ಕೋಟಿ ರೂ. ಲೂಟಿಯಾಗಿದೆ. ಯೋಜನಾ ನಿರ್ದೇಶಕ ಶ್ರೀಧರ್ ಹೊಡೆದ ಹಣವನ್ನು ಪ್ರತಾಪ್ ಸಿಂಹ ಅವರಿಗೆ ತುಂಬಿರಬಹುದು. ಅದಕ್ಕೆ ಅವರ ಪರವಾಗಿ ಸಂಸದರು ನಿಂತಿದ್ದಾರೆ ಎಂದು ಶಾಸಕ ಮಂಜುನಾಥ್ ನೇರ ಆರೋಪ ಮಾಡಿದರು.

ಸ್ಪೀಕರ್ ಕಚೇರಿಯನ್ನು ಮ್ಯಾನೇಜ್ ಮಾಡಲಾಗಿದೆ

ದಶಪಥದ ರಾಷ್ಟ್ರೀಯ ಹೆದ್ದಾರಿ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಎರಡು ಬಾರಿ ಪ್ರಶ್ನೆ ಕೇಳಲು ಪ್ರಯತ್ನಪಟ್ಟಿದ್ದರೂ ಪ್ರಶ್ನೋತ್ತರ ವೇಳೆಗೆ ಬಾರದಂತೆ ಸಭಾ ಸಭಾಧ್ಯಕ್ಷರ ಕಚೇರಿಯನ್ನು ಮ್ಯಾನೇಜ್ ಮಾಡಲಾಗಿದೆ ಎಂದು ಶಾಸಕರು ಆರೋಪಿಸಿದರು.

ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಬಹಳ ಪ್ರಭಾವ ಇರುವ ವ್ಯಕ್ತಿ. ಅವರು ಏನು ಬೇಕಾದರೂ ಮಾಡಬಲ್ಲರು. ಅದಕ್ಕಾಗಿಯೇ ಮೈಸೂರು ಸಂಸದರು ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ಶಾಸಕರು ದೂರಿದರು.

Tags: 10 lane roadcknewsnowjdskarnatakamla ManjunathMysuru Bangalore economic corridorpratap simha
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೆಚ್.ಡಿ.ಕುಮಾರಸ್ವಾಮಿ-ನಿತೀಶ್ ಕುಮಾರ್ ಭೇಟಿ

ಹೆಚ್.ಡಿ.ಕುಮಾರಸ್ವಾಮಿ-ನಿತೀಶ್ ಕುಮಾರ್ ಭೇಟಿ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ