• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಜೆಪಿ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಬಾಂಬ್

cknewsnow desk by cknewsnow desk
September 12, 2022
in STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
921
VIEWS
FacebookTwitterWhatsuplinkedinEmail

ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಆಸ್ತಿ ನುಂಗಲು ಸರಕಾರದಿಂದಲೇ ಕುಮ್ಮಕ್ಕು;‌ ಸದನದಲ್ಲಿ ದಾಖಲೆ ಇಟ್ಟು ಮಾತನಾಡುತ್ತೇನೆ ಎಂದ ಮಾಜಿ ಸಿಎಂ

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರದ ಬಗ್ಗೆ ಸ್ಫೋಟಕ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಅವರು ಗುಡುಗಿದರು.

Photo: CKPhotography
ಸದನದ ಸಮಯ ಹಾಳು ಮಾಡಲಾರೆ

ನಾನು ಸುಖಾಸುಮ್ಮನೆ ಸದನ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್ ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇಂದು ಸಂತಾಪ ಚರ್ಚೆ ನಂತರ ನಾಳೆಯಿಂದ 9 ದಿನಗಳ ಕಾಲ ಅಧಿಕೃತ ವಿರೋಧ ಪಕ್ಷ ಚರ್ಚೆಗೆ ಯಾವ ರೀತಿ ಆದ್ಯತೆ ಕೊಡಲಿದೆ ಎಂಬುದನ್ನು ನೋಡುತ್ತೇವೆ. ಉತ್ತಮ ರೀತಿಯ ಕಲಾಪಕ್ಕೆ ಅವಕಾಶ ಯಾವ ರೀತಿ ಇರುತ್ತದೆ ಎಂದು ಗಮನಿಸುತ್ತೇವೆ. ಸುಮ್ಮನೆ ವಿಚಾರ ಇಲ್ಲದೆ, ದಾಖಲೆ ಇಲ್ಲದೇ ಮಾತಾಡೋದ್ರಿಂದ ಸದನದ ಕಲಾಪಕ್ಕೆ ಧಕ್ಕೆ ಆಗಲಿದೆ.

ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳ್ತಾ ಇದ್ದಾರೆ, ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಯಾರೋ ಸುಮ್ಮನೆ ನನ್ನನ್ನು ಸುಖಾಸುಮ್ಮನೆ ಅವರತ್ರ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ‌ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ರೆ ವಿಷಯ ಇದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಅವರದ್ದು ಎಂದರು.

ಕೆಸಿಆರ್ ಅವರು ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಅವರು ಹೇಳಿದರು.

ನಿಖಿಲ್ ಹೇಳಿಕೆಗೆ ಅಪಾರ್ಥ ಬೇಡ

ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ನಾನೇ ಅನೇಕ ಬಾರಿ ಹೇಳಿದ್ದೇನೆ. ಈ ಚುನಾವಣೆ ನಮಗೆ ನಿರ್ಣಾಯಕ. ಈ ಚುನಾವಣೆ ಮುಂದಿನ ದಿನಗಳಿಗೆ ಬುನಾದಿ ಇದ್ದಂಗೆ. ಮುಂದಿನ 25 ವರ್ಷಕ್ಕೆ ಏನು ಆಗಬೇಕು ಅನ್ನೋದು ಮುಖ್ಯ. ಅದಕ್ಕಾಗಿ ಈ ಚುನಾವಣೆ ತುಂಬಾ ಮುಖ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಜರಿದ್ದರು.

Tags: bjpcknewsnowhd kumaraswamyjdskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಗಳೂರು ನೆರೆಗೆ ಕಾರಣ ಬಿಚ್ಚಿಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು ನೆರೆಗೆ ಕಾರಣ ಬಿಚ್ಚಿಟ್ಟ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಅಮಾನವೀಯತೆಗೆ ಸೋತ ಭಾರತ!

ಅಮಾನವೀಯತೆಗೆ ಸೋತ ಭಾರತ!

5 years ago
ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ