• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಸರ್.ಎಂವಿ: ವಿಕಾಸದ ಪ್ರಾತಃಸ್ಮರಣೀಯರು

cknewsnow desk by cknewsnow desk
September 15, 2022
in EDITORS'S PICKS, GUEST COLUMN
Reading Time: 2 mins read
0
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ
945
VIEWS
FacebookTwitterWhatsuplinkedinEmail

ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 162ನೇ ಜನ್ಮದಿನ

ಸರ್.ಎಂ.ವಿಶ್ವೇಶ್ವರಯ್ಯ ಅವರಿಗೆ ಇಂದಿಎ 162 ವರ್ಷ ತುಂಬುತ್ತಿದೆ. ಸಾರ್ಥಕ 101 ವರ್ಷ ಬಾಳಿ ಬದುಕಿದ ಈ ಅದಮ್ಯ ಚೇತನ ಭಾರತ ಮಾತ್ರವಲ್ಲ ಜಗತ್ತಿನ ಕುಶಲತೆ, ನೈಪುಣ್ಯತೆಯ ವಿಕಾಸಕ್ಕೆ ಮಹಾನ್‌ ಕಾಣಿಕೆ ಕೊಟ್ಟವರು. ಅವರು ಕನ್ನಡಿಗರು. ಇದು ನಮ್ಮ ಹೆಮ್ಮೆ ಮತ್ತು ಪುಣ್ಯ. ಜನ್ಮದಿನದಂದು ಸರ್‌ ಎಂವಿ ಅವರಿಗೆ ಇಲ್ಲಿದೆ ಅಕ್ಷರ ನಮನ.

by Dr. Guruprasad Hawaldar

ಹೊಸ ಹೊಸತನ್ನು ಆವಿಷ್ಕರಿಸುವ ಮೂಲಕ, ಸದೃಢ ಕಟ್ಟಡಗಳನ್ನು ನಿರ್ಮಿಸುವ ಮೂಲಕ, ನವನವೀನ ಯಂತ್ರಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಮ್ಮ ಎಂಜಿನಿಯರ್­ಗಳು ದೇಶ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ. ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶ ಇಂದು ದಾಪುಗಾಲಿಡುತ್ತಿದೆ ಎಂದರೆ ಅದಕ್ಕೆ ಕಾರಣ ಎಂಜಿನಿಯರ್­ಗಳು ಮತ್ತು ಅವರ ಅವಿರತ ಶ್ರಮ. ಅವರು ಮಾಡುತ್ತಿರುವ ಕಾರ್ಯ ಮತ್ತು ಭಾರತದ ಅಭಿವೃದ್ಧಿಗೆ ಅವರು ನೀಡುತ್ತಿರುವ ಅತ್ಯಮೂಲ್ಯ ಸೇವೆಯನ್ನು ನಾವು ಸ್ಮರಿಸಬೇಕಿದೆ.

ನಮ್ಮ ಹೆಮ್ಮೆಯ ಎಂಜಿನಿಯರ್‌ಗಳನ್ನು, ಅವರ ಕೊಡುಗೆಗಳನ್ನು ಸ್ಮರಿಸಲೆಂದೇ ವಿಶ್ವಕಂಡ ಆ ಮಹಾನ್ ಎಂಜಿನಿಯರ್, ಕೃಷ್ಣರಾಜಸಾಗರ ಅಣೆಕಟ್ಟಿನ ಶಿಲ್ಪಿ ಮೋಕ್ಷಗೊಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವಾದ ಸೆಪ್ಟೆಂಬರ್‌ 15ರ ದಿನವನ್ನು ನಿಗದಿ ಮಾಡಲಾಗಿದೆ. ಭಾರತದಲ್ಲಿ ಎಂಜಿನಿಯರ್‌ಗಳ ದಿನವವನ್ನು ಈ ದಿನದಂದು ಆಚರಿಸಲಾಗುತ್ತದೆ. 1860 ಸೆಪ್ಟೆಂಬರ್‌ 15ರಂದು ಜನಿಸಿದ ಸರ್‌ ಎಂವಿ ಅವರು ತಮ್ಮ ತಾಯ್ನಲಕ್ಕೆ ಸಲ್ಲಿಸಿದ ಅನುಪಮ ಸೇವೆ, ಕೊಟ್ಟ ಕಾಣಿಕೆ ಶತಮಾನಗಳ ನಂತರವೂ ಅವಿಚ್ಛಿನ್ನವಾಗಿ ಇರುತ್ತದೆ.

ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಜನಪ್ರಿಯವಾಗಿ ಸರ್ ಎಂ.ವಿ ಎಂಬ ಹೆಸರಿನಿಂದ ಪ್ರಖ್ಯಾತರು. ಕನ್ನಡ ನಾಡಿನ ಕೀರ್ತಿಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ. ಸೆಪ್ಟೆಂಬರ್ 15, 1860ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ಚಿಕ್ಕಬಳ್ಳಾಪುರ ಬಳಿಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನಿಸಿದ್ದರು.

ತೆಲುಗು ಬ್ರಾಹ್ಮಣರ ಮನೆತನದ ಆಯುರ್ವೇದಿಕ್ ಪಂಡಿತರು ಆಗಿದ್ದ ಮೋಕ್ಷಗುಂಡಂ ಶ್ರೀನಿವಾಸ ಶಾಸ್ತ್ರಿ ಮತ್ತು ಶ್ರೀಮತಿ ವೆಂಕಟಲಕ್ಷ್ಮಮ್ಮ ಸರ್‌ ಎಂವಿ ಅವರ ತಂದೆ-ತಾಯಿ. ಮೋಕ್ಷಗುಂಡಂ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಒಂದು ಹಳ್ಳಿ.

ಚಿಕ್ಕಬಳ್ಳಾಪುರದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪ್ರಾರಂಭಿಸಿ, ನಂತರದ ಪ್ರೌಢಶಾಲಾ ವ್ಯಾಸಂಗವನ್ನು ಬೆಂಗಳೂರಿನಲ್ಲಿ ಪೂರೈಸಿದರು. ಬಿ.ಎ. ಪದವಿಯನ್ನು ಮದ್ರಾಸ್ ವಿಶ್ವವಿದ್ಯಾಲಯದಲ್ಲಿ 1881ರಲ್ಲಿ ಪಡೆದರು. ಉನ್ನತ ವ್ಯಾಸಂಗ ಸಿವಿಲ್ ಎಂಜಿನಿಯರ್ ಪದವಿಯನ್ನು 1883ರಲ್ಲಿ ಪುಣೆಯ ಕಾಲೇಜ್ ಆಫ್ ಎಂಜಿನಿಯರಿಂಗ್‌ʼನಲ್ಲಿ ಪಡೆಯುವುದರ ಮೂಲಕ ಸಾಧನೆಯ ಹೆಜ್ಜೆಗಳತ್ತ ಸಾಗಿದರು.

ಮೊದಲಿಗೆ ಬಾಂಬೆ ಸರ್ಕಾರದ (ಇಂದಿನ ಮಹಾರಾಷ್ಟ್ರ), ಲೋಕೊಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ವೃತ್ತಿ ಜೀವನಕ್ಕೆ ಕಾಲಿಟ್ಟರು. ಬಾಂಬೆ ಸರ್ಕಾರದ ನಿಯಂತ್ರಣದಲ್ಲಿದ್ದ ಸಿಂಧ್ ಪ್ರಾಂತ್ಯದ, ಸಿಂಧು-ಸುಕ್ಕೂರಿಗೆ ನೀರು ಹರಿಸುವ ಯೋಜನೆಯ ಜವಾಬ್ದಾರಿ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ದೊರೆಯಿತು. ಅವರ ಕಾರ್ಯನಿಷ್ಠೆ, ಚಮತ್ಕಾರಿಕೆಯ ಕಾರ್ಯವೈಖರಿ ಆಡಳಿತವು ಸರ್ಕಾರದ ಗಮನ ಸೆಳೆಯುವಂತೆ ಮಾಡಿತ್ತು. ನಂತರ ಗುಜರಾತಿನ ಸೂರತ್ʼನಲ್ಲಿಯೂ ನೀರು ಸರಬರಾಜು ವ್ಯವಸ್ಥೆಯನ್ನು ಸಹ ಅತ್ಯುತ್ತಮ ರೀತಿಯಲ್ಲಿ ಯೋಜನೆ ತಯಾರಿಸಿ ಸಂಪೂರ್ಣಗೊಳಿಸಿದರು. ಈಗಲೂ ಸಹ ಬಹಳಷ್ಟು ಭೂಕಂಪಗಳು ಸಂಭವಿಸಿದ ನಂತರವೂ ಸರ್ ಎಂವಿ ಅವರ ಕಾಮಗಾರಿ ಸುರಕ್ಷಿತವಾಗಿದೆ.

1903ರಲ್ಲಿ ಪುಣೆಯ ಬಳಿ ‘ಖಡಕ್ ವಾಸ್ಲಾ ಜಲಾಶಯ’ ದಲ್ಲಿ, ತಮ್ಮ ವಿಶಿಷ್ಟವಾದ ತಂತ್ರಜ್ಞಾನದಿಂದ ಮಾಡಿದ್ದ ಸ್ವಯಂ ಚಾಲಿತ ಕಣಿವೆ ಮಾರ್ಗಗಳನ್ನು ಉಪಯೋಗಿಸಿ, ಜಲಾಶಯದ ಈ ತಂತ್ರಜ್ಞಾನ ವಿಶ್ವದಲ್ಲೇ ಪ್ರಥಮ ಬಾರಿಗೆ ತೋರಿಸಿಕೊಟ್ಟ ಏಕೈಕ ತಂತ್ರಜ್ಞಾನಿಯಾಗಿ ಐತಿಹಾಸಿಕ ಸಾಕ್ಷಿಯಾಗಿದ್ದಾರೆ ಸರ್ ಎಂ.ವಿ. 1909ರಲ್ಲಿ ಹೈದರಾಬಾದ್, ವಿಶಾಖಪಟ್ಟಣದಲ್ಲಿ ಪ್ರವಾಹದಿಂದ ರಕ್ಷಿಸಲು ಯೋಜನೆ ರೂಪಿಸಿ ಪೂರ್ಣಗೊಳಿಸಿದರು. ಜನ ಸಾಗರವನ್ನು ಆಕರ್ಷಿಸುತ್ತಿರುವ ವಿಶ್ವವಿಖ್ಯಾತ ಕೃಷ್ಣರಾಜ ಸಾಗರ ಆಣೆಕಟ್ಟೆಯನ್ನು ಜಗತ್ತೇ ಆಶ್ಚರ್ಯದಿಂದ ನೋಡುವಂಥದ್ದು.  ಅಂದಿನ ಕಾಲಘಟ್ಟದಲ್ಲಿ ಭಾರತದಲ್ಲೇ ಅತ್ಯಂತ ದೊಡ್ದ ಆಣೆಕಟ್ಟು ಎಂಬ ಹೆಗ್ಗಳಿಕೆ ಅದರದ್ದು.

ಕೃಷ್ಣರಾಜ ಸಾಗರ (ಕನ್ನಂಬಾಡಿ) ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾದ ಆಣೆಕಟ್ಟು. ನಿರ್ಮಾಣ ಪ್ರಾರಂಭಿಸಿ ನಾಲ್ಕು ವರ್ಷಗಳಲ್ಲೇ ಮುಗಿಸಿ ಸ್ವಯಂ ಚಾಲಿತ ಗೇಟುಗಳನ್ನು ಅಳವಡಿಸಿ ಜಗತ್ತಿನಲ್ಲಿ ಯಾರೊಬ್ಬರೂ ಮಾಡಿರದಂಥ  ಸಾಧನೆ ಮಾಡಿದರು ಅವರು. ಬೇರೆ ಆಣೆಕಟ್ಟುಗಳು ಸಿಮೆಂಟ್, ಕಾಂಕ್ರಿಟ್ʼನಿಂದ ನಿರ್ಮಾಣವಾಗಿದ್ದರೆ, ಕೆ.ಆರ್.ಎಸ್. ಆಣೆಕಟ್ಟು ಸರ್ ಎಂವಿ ಅವರ ಜಾಣ್ಮೆಯ ತಂತ್ರಜ್ಞಾನದಿಂದ ಸುಣ್ಣ ಮತ್ತು ಬೆಲ್ಲದ ಮಿಶ್ರಣದಿಂದ ಕಟ್ಟಿದ ಗಟ್ಟಿ ಮಾನವ ನಿರ್ಮಿತವಾಗಿದ್ದು, ದಾಖಲೆಯೊಂದಿಗೆ ಶತಮಾನದಿಂದ ಮೈಸೂರು, ಮಂಡ್ಯ, ಬೆಂಗಳೂರು, ತಮಿಳುನಾಡಿಗೆ ಜೀವಜಲವನ್ನು ನೀಡುತ್ತಿರುವ ಮಹಾನ್‌ ವಾಸ್ತುಶಿಲ್ಪವಾಗಿದೆ.

ಎಲ್ಲಿಯಾದರೂ ದುರಂತ ಸಂಭವಿಸಿದರೆ ಸ್ವಯಂ ಚಾಲಿತ ಗೇಟುಗಳು ತನ್ನಷ್ಟಕ್ಕೆ ತಾನೆ ತೆರೆದುಕೊಂಡು ಮುನ್ನುಗ್ಗುವ ಅಪಾರ ಪ್ರಮಾಣದ ನೀರು ಯಾರಿಗೂ ತೊಂದರೆಯಾಗದಂತೆ ಹರಿದು ಮುಂದೆ ಸಾಗಲು ಮುಂದಾಲೋಚನೆಯಿಂದ ಆಣೆಕಟ್ಟು ನಿರ್ಮಿಸುವಾಗಲೇ ವ್ಯವಸ್ಥೆ ಮಾಡಲಾಗಿದೆ. ಜಗತ್ತಿನ ಅದ್ಭುತಗಳ ಸಾಲಲ್ಲಿ ಒಂದಾದ ಕೃಷ್ಣರಾಜ ಸಾಗರ ಅಣೆಕಟ್ಟು ಒಂದು ಲಕ್ಷ ಇಪ್ಪತ್ತು ಸಾವಿರ ಏಕರೆ ಕೃಷಿ ಭೂಮಿಗೆ ನೀರುಣಿಸಿ, ದಕ್ಷಿಣ ಭಾರತದ ಕೋಟ್ಯಂತರ ಜೀವಿಗಳಿಗೆ ಜೀವ ಜಲವನ್ನು ನೀಡಿದ ಭಾರತದ ಭಾಗ್ಯವಿಧಾತ ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ದಕ್ಷಿಣ ಭಾರತದ ಜನತೆ ಮರೆಯುವಂತಿಲ್ಲ.

ಬೃಂದಾವನ ಉದ್ಯಾನವನದಲ್ಲಿ ವೈವಿಧ್ಯಮಯ ನರ್ತಿಸುವ ಕುಣಿದು ಕುಪ್ಪಳಿಸುವ ನೀರಿನ ಕಾರಂಜಿಗಳು, ಪುಷ್ಪಕಾಶಿ ಯೊಂದಿಗೆ ಜಗತ್ತಿನ ನಾನಾ ದೇಶದ ಪ್ರವಾಸಿಗರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ.

ಸರ್ ಎಂ.ವಿ ಎಂದೊಡನೆ, ಅಸಾಧಾರಣ ಎಂಜಿನಿಯರ್, ಅನನ್ಯ ರಾಷ್ಟ್ರಪ್ರೇಮ, ಕರ್ತವ್ಯನಿಷ್ಠ ಅಧಿಕಾರಿ, ದಕ್ಷ ಆಡಳಿತಗಾರ, ಭವ್ಯ ಭಾರತ ನಿರ್ಮಾಣದ ಕನಸುಗಾರ. ‘ಕೈಗಾರಿಕೆ ಇಲ್ಲವೇ ಸರ್ವನಾಶ’ ಎಂದು ಎಚ್ಚರಿಸಿದ ರಾಷ್ಟ್ರಚಿಂತಕ. ನಿಸ್ಸ್ವಾರ್ಥಿ, ಛಲವಾದಿ, ಎಂಬ ವಿಚಾರಗಳು ನಮ್ಮ ಮನಸ್ಸಿನಲ್ಲಿ ಮೂಡಿ ಬರುತ್ತವೆ. ಇಷ್ಟೇ ಅಲ್ಲದೇ ಸರ್ ಎಂವಿ ಅವರು ಮಾನವೀಯತೆಯುಳ್ಳ ದಯಾಳು ಹೃದಯದ ವ್ಯಕ್ತಿ ಆಗಿದ್ದರು.

ಅವರು ಚಿಕ್ಕಂದಿನಿಂದಲೂ ನಮ್ಮ ಸಂಸ್ಕೃತಿ ಸಂಪ್ರದಾಯಗಳಿಗೆ ಗೌರವ ಕೊಡುತ್ತಿದರು. ಸರ್ ಎಂವಿ ಅವರು ಮೈಸೂರು ಸಂಸ್ಥಾನದ ದಿವಾನರು ಆಗಿದ್ದ ಕಾಲದಲ್ಲಿ, ಅವರ ಸಂಭಂಧಿಕರು ಒಬ್ಬರು ಇವರ ಬಳಿ ಬಂದು ಮೈಸೂರು ಮಹಾರಾಜರ ಬಳಿ ಹೇಳಿ ಒಂದು ಒಳ್ಳೆಯ ಸಂಬಳದ ಕೆಲಸ ಧಕ್ಕಿಸಿಕೊಡುವುದಾಗಿ ಕೇಳಿದ್ದರಂತೆ. ಸರ್ ಎಂವಿ ಅವರು ಒಂದೇ ಮಾತಿನಲ್ಲಿ “ಆಗೋದಿಲ್ಲ” ಅಂತ ಹೇಳಿ ಜತೆಗೆ ಪ್ರತಿ ತಿಂಗಳು ಅವರ ಸ್ವಂತ ದುಡ್ಡಿನಲ್ಲಿ ಅವರ ಸಂಬಂಧಿಕನಿಗೆ 100 ರೂಪಾಯಿ ಕಳುಹಿಸುತ್ತಿದ್ದ ಸಹೃದಯರು.

ಅಧಿಕಾರವನ್ನು ಅವರೆಂದೂ ದುರುಪಯೋಗ ಮಾಡಿಕೊಳ್ಳುತ್ತಿರಲಿಲ್ಲ. ದಿವಾನರಾಗಿದ್ದ ಅವಧಿಯಲ್ಲಿ, ನಮ್ಮ ಸರ್ಕಾರ ಅವರಿಗೇ ಅಂತ ಒಂದು ಕಾರು ಕೊಟ್ಟಿತ್ತು. ಅವರು ಕೇವಲ ಕಚೇರಿಯ ಉಪಯೋಗಕ್ಕೆ ಮಾತ್ರ ಆ ಕಾರನ್ನು ಬಳಸುತ್ತಿದ್ದರು. ಅವರ ವೈಯಕ್ತಿಕ ಕೆಲಸಗಳಿಗೆ ಸ್ವಂತ ಕಾರನ್ನು ಉಪಯೋಗಿಸುತ್ತಿದ್ದರು. ಜತೆಗೆ ಸರ್ಕಾರದ ಕಾಗದ-ಪೆನ್ನನ್ನು ಸಹ ವೈಯಕ್ತಿಕ ವಿಷಯಗಳಿಗೆ ಉಪಯೋಗಿಸುತ್ತಿರಲಿಲ್ಲ.

ಸರ್ ಎಂವಿ ಅವರು ಶಿಸ್ತಿನ ಸಿಪಾಯಿ ಸಹ ಆಗಿದ್ದರು. ಪ್ರತಿನಿತ್ಯ ರಾತ್ರಿ 10 ಗಂಟೆಗೆ ಮಲಗಿ, ಬೆಳಗ್ಗೆ 6 ಗಂಟೆಗೆ ಎದ್ದು, 7 ಗಂಟೆಗೆಲ್ಲಾ ಕೆಲಸಕ್ಕೆ ಹೊರಡುತ್ತಿದ್ದರು.

ಸರ್ ಎಂವಿ ಸಾದನೆಗಳು ಅಪಾರ, ಅನಿಯಮಿತ ಹಾಗೂ ಅಸಂಖ್ಯಾತ. ಅವರ ಹೆಸರಿನಲ್ಲಿ ಹಲವಾರು ಕಾರ್ಖಾನೆಗಳು, ಶಾಲಾ-ಕಾಲೇಜುಗಳು ಬಂದವು. ಬ್ರಿಟೀಷರು 1915ರಲ್ಲಿ ಸರ್ ಪ್ರಶಸ್ತಿ ನೀಡಿದರೆ, 1955ರಲ್ಲಿ ಭಾರತ ಸರಕಾರ ಭಾರತರತ್ನ ನೀಡಿ ಗೌರವಿಸಿತು. ಅವರವನ್ನು ಅರಸಿ ಬಂದ ಡಾಕ್ಟರೇಟ್ ಮತ್ತಿತರೆ ಪ್ರಶಸ್ತಿಗಳಿಗೆ ಲೆಕ್ಕವಿಲ್ಲ. ಏಪ್ರಿಲ್ 14, 1962ರಂದು ಅವರು ನಮ್ಮನ್ನು ಅಗಲಿದರು.

ಕೆಲಸದ ಮೇಲಿನ ಶ್ರದ್ಧೆ, ಪ್ರಾಮಾಣಿಕತೆ ಮತ್ತು ಶಿಸ್ತು ಇವು ವಿಶ್ವೇಶ್ವರಯ್ಯರವರ ಟ್ರೇಡ್‌ಮಾರ್ಕ್ ಆಗಿತ್ತು. ಒಬ್ಬ ಎಂಜಿನಿಯರ್ ಆಗಿ ದೇಶದ ಅಭಿವೃದ್ಧಿಯಲ್ಲಿ ಅವರು ವಹಿಸಿರುವ ಪಾತ್ರ ಅನನ್ಯ. ಇಂದು ಕೆಲವರು ಅವರ ಈ ಸಾಧನೆಯ ಬಗ್ಗೆ ಅವರ ನಿರ್ಮಿಸಿದ ಕೌಶಲ್ಯ ಯುತ ನಿರ್ಮಾಣದ ಬಗ್ಗೆ ಜನೋಪಯೋಗಿ ಯೋಜನೆಗಳ ಬಗ್ಗೆ ಕೊಂಕು, ಶಂಕೆ, ಅಸಹನೆ, ಕೆಸರಾಟದಲ್ಲಿ ತೊಡಗಿದ್ದಾರೆ. ಅವರ ಸಾಧನೆಗೆ ವಿಶ್ವವೇ ತಲೆಬಾಗಿದೆ. ಅದರೂ ಜನರಿಗೆ ಅರ್ಥವಾಗದೇ ಇದ್ದದ್ದು ವಿಪರ್ಯಾಸವೇ ಸರಿ.

***

ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: birth anniversarycknewsnowengineeringguest columnkarnatakasir m visvesvarayasir MVstatesmen
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಶ್ರೀರಾಮ ನವಮಿ ಶುಭಾಶಯಗಳು

ಶ್ರೀರಾಮ ನವಮಿ ಶುಭಾಶಯಗಳು

by cknewsnow desk
April 17, 2024
0

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೇ | ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ || ಶ್ರೀ ರಾಮ ಜಾನಕೀನಾಥ ತಾಟಕಾಸುರ ಮರ್ದನ | ಇಕ್ಷ್ವಾಕುಕುಲಸಂಭೂತ ರಣಪಂಡಿತ ರಾಘವಃ...

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

Next Post
ಯೋಗಿ‌ ಸರಕಾರದ ವಿರುದ್ಧ ಪ್ರಿಯಾಂಕಾ ಕಿಡಿ

ಯೋಗಿ‌ ಸರಕಾರದ ವಿರುದ್ಧ ಪ್ರಿಯಾಂಕಾ ಕಿಡಿ

Leave a Reply Cancel reply

Your email address will not be published. Required fields are marked *

Recommended

ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

3 years ago
ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

4 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ