• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್

P K Channakrishna by P K Channakrishna
September 30, 2022
in STATE
Reading Time: 2 mins read
0
ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್
1.1k
VIEWS
FacebookTwitterWhatsuplinkedinEmail

ಬಂಗಾರಪೇಟೆ, ಕೆಜಿಎಫ್‌ ಭಾಗದಲ್ಲಿ ಕೆರೆಗಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವೆ

ಕೆಜಿಎಫ್/ಬಂಗಾರಪೇಟೆ: ಕೇಂದ್ರ ಸರಕಾರದ ಅಮೃತ ಯೋಜನಾ ಅಡಿಯಲ್ಲಿ ನೀಡಲಾಗಿದ್ದ ಅನುದಾನದಲ್ಲಿ ಕೈಗೊಂಡಿರುವ ಜಿಲ್ಲೆಯ ಕೆರೆಗಳ ಕಾಮಗಾರಿಯನ್ನು ಇಂದು ವೀಕ್ಷಣೆ ಮಾಡಿದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಕಳಪೆ ಕಾಮಗಾರಿ ಕಾರಣಕ್ಕೆ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಬಂಗಾರಪೇಟೆ ತಾಲೂಕಿನ ಚಿಕ್ಕಅಂಕಡಹಳ್ಳಿ ಕೆರೆ, ಕೆಜಿಎಫ್‌ ಬಳಿಯ ಪೆದ್ದಪಲ್ಲಿ ಕೆರೆ ಹಾಗೂ ಕೋಲಾರದ ಶೆಟ್ಟಿಕೊತ್ತನೂರು ಕೆರೆಯ ಕಾಮಗಾರಿಯನ್ನು ಕೇಂದ್ರ ಸಚಿವರು ವೀಕ್ಷಿಸಿದರು.

ಇಷ್ಟೂ ಕೆರೆಗಳ ಕಾಮಗಾರಿಯನ್ನು ಸೂಕ್ಷ್ಮವಾಗಿ ಅವಲೀಕನ ಮಾಡಿದ ಅವರು, ಕಳಪೆ ಕಾಮಗಾರಿ ಮಾಡಿರುವ ಬಗ್ಗೆ ಸಿಟ್ಟಾದರು. ಮೊದಲೇ ಖಡಕ್‌ ಸಚಿವೆ ಎಂದೇ ಹೆಸರಾಗಿರುವ ಅವರು ಅಧಿಕಾರಿಗಳ ಮೇಲೆ ಪ್ರಶ್ನೆಗಳ ಸುರಿಮಳೆಗರೆದರು. ಈ ಸಂದರ್ಭದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ ಅವರ ಎದುರಿನಲ್ಲಿಯೇ ಸಚಿವರು ಗರಂ ಆದರು.

During her visit to the lake, Smt @nsitharaman also interacts with local residents, Sarpanch and Panchayat officials. pic.twitter.com/K9tSQdtmc2

— Nirmala Sitharaman Office (@nsitharamanoffc) September 30, 2022

“ಕೆರೆಗಳ ಕಾಮಗಾರಿಯನ್ನು ನಿಯಮಬದ್ಧವಾಗಿ ಮಾಡಿಲ್ಲ. ಕೆರೆಗಳಿಗೆ ಬೇಲಿ ನಿರ್ಮಾಣ ಮಾಡಲಾಗಿಲ್ಲ. ಕೆರೆಗಳ ಅಕ್ಕಪಕ್ಕದಲ್ಲಿ ಖಾಸಗಿ ಜಮೀನುಗಳಿವೆ. ಆ ಜಮೀನುಗಳು-ಕೆರೆಗಳು ಸೇರಿಕೊಂಡಿವೆ. ಯಾವುದು ಕೆರೆ, ಯಾವುದು ಖಾಸಗಿ ಭೂಮಿ ಎನ್ನುವುದು ಗೊತ್ತಾಗುವುದೇ ಇಲ್ಲ. ಕಾಮಗಾರಿಯನ್ನು ಅತ್ಯಂತ ಬೇಜವಾಬ್ದಾರಿಯಿಂದ ಕೈಗೊಳ್ಳಲಾಗೊದೆ” ಎಂದು ಅಧಿಕಾರಿಗಳ ಮೇಲೆ ಕಿಡಿಕಾರಿದರು.

ಸಚಿವರ ಪ್ರಶ್ನಾವಳಿಗೆ ಉತ್ತರಿಸಲು ಅಧಿಕಾರಿಗಳು ತಿಣುಕಾಡಿದರು. ಇದರಿಂದ ಮತ್ತೂ ಸಿಟ್ಟಾದ ನಿರ್ಮಲಾ ಸೀತಾರಾಮನ್‌ ಅವರು, ಎಲ್ಲವೂ ಕರಾರುವಕ್ಕಾಗಿ, ನಿಯಮಬದ್ಧವಾಗಿ ಮಾಡಬೇಕು. ಈ ಬಗ್ಗೆ ಸ್ಪಷ್ಟವಾದ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಈ ಮೂರೂ ಕೆರೆಗಳ ಅಭಿವೃದ್ಧಿಗೆ ತಮ್ಮ ಸಂಸತ್‌ ಸದಸ್ಯ ನಿಧಿಯಿಂದ 1.83 ಕೋಟಿ ರೂ., ಮಹಾತ್ಮಾ ಗಾಂಧಿ ನರೇಗಾ ಯೋಜನೆಯಿಂದ 15.56 ಕೋಟಿ ರೂ., ಖಾಸಗಿ ಕೈಗಾರಿಕಾ ವಲಯದ ಸಿಎಸ್‌ ಆರ್‌ ನಿಧಿಯಿಂದ 6.14 ಕೋಟಿ ರೂ.ಗಳಷ್ಟು ಅನುದಾನವನ್ನು ನೀಡಲಾಗಿತ್ತು. ಕೊಟ್ಟ ಅನುದಾನಕ್ಕೆ ತಕ್ಕಂತೆ ಕಾಮಗಾರಿ ನಡೆಯದೇ ಇರುವುದು ಕೇಂದ್ರ ಸಚಿವರ ಸಿಟ್ಟಿಗೆ ಕಾರಣವಾಗಿತ್ತು.

ಹೋದ ಕಡೆ ಎಲ್ಲ ಕೇಂದ್ರ ಸಚಿವರು ಸ್ಥಳೀಯ ಜನರಿಂದ ಮಾಹಿತಿ ಪಡೆದುಕೊಂಡರು.

Sh M Srinivasalu, a resident of Peddapalli, says redevelopment work at the lake has given employment to many people of village. He says its all due to the blessings of Sri Gangamma & thanks PM @narendramodi for the Amrit Sarovar which has improved the surroundings of the village. https://t.co/YlSSgZUajp pic.twitter.com/SdAOvP756y

— Nirmala Sitharaman Office (@nsitharamanoffc) September 30, 2022

ಕರ್ನಾಟಕದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿಕ್ಕ ಅಂಕಂಡಹಳ್ಳಿ ಕೆರೆಯಲ್ಲಿ ನಡೆದ ಕಾಮಗಾರಿಯ ಪರಿಶೀಲನೆಯ ಸಂದರ್ಭದಲ್ಲಿ ಶ್ರೀಮತಿ @nsitharaman ಸ್ಥಳೀಯ ನಿವಾಸಿಗಳು ಮತ್ತು #MGNREGA. ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಅಮೃತ ಸರೋವರ ಪುನರುಜ್ಜೀವನ ಕೆಲಸವನ್ನು #MGNREGA ಅಡಿಯ ಕಾಮಗಾರಿಗಳೊಂದಿಗೆ ಸಮನ್ವಯಗೊಳಿಸಲಾಗಿದೆ https://t.co/Z0PVUOPWUf

— PIB in Karnataka (@PIBBengaluru) September 30, 2022

ಕೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಶ್ರೀಮತಿ @nsitharaman ಅವರು ಕೆರೆಯ ಸುತ್ತಲೂ ವಾಸಿಸುವ ಮತ್ತು MGNREGA ಅಡಿಯಲ್ಲಿ ಅದರ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸುವ ಮಹಿಳೆಯರೊಂದಿಗೆ ಸಂವಾದ ನಡೆಸಿದರು. @nsitharamanoffc @PIB_India @MIB_India pic.twitter.com/LYj8zr7iwR

— PIB in Karnataka (@PIBBengaluru) September 30, 2022

Tags: cknewsnowfinance ministerkarnatakakgfkolarkolar gold fieldslakesnirmala sitharaman
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
BRS-JDS ಚುನಾವಣೆ ಮೈತ್ರಿ

BRS-JDS ಚುನಾವಣೆ ಮೈತ್ರಿ

Leave a Reply Cancel reply

Your email address will not be published. Required fields are marked *

Recommended

ಡಿ.ಬಿ.ಚಂದ್ರೇಗೌಡ ಇನ್ನಿಲ್ಲ; ಕಳಚಿದ ಶ್ರೇಷ್ಠ ಸಂಸದೀಯ ಪರಂಪರೆಯ ಕೊಂಡಿ

ಡಿ.ಬಿ.ಚಂದ್ರೇಗೌಡ ಇನ್ನಿಲ್ಲ; ಕಳಚಿದ ಶ್ರೇಷ್ಠ ಸಂಸದೀಯ ಪರಂಪರೆಯ ಕೊಂಡಿ

2 years ago
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ